ವಿಷಯಕ್ಕೆ ಹೋಗಿ

ಸೈನ್ಯಕ್ಕೆ ಸೇರುವವರ ಸಂಖ್ಯೆ ಬೆರಳೆಣಿಕೆಯಷ್ಟು : ಗೋಪಿ

ದೇಶದ ಗಡಿಕಾಯುವುದರ ಮುಖಾಂತರ ದೇಶಸೇವೆಯಲ್ಲಿ ತೊಡಗಿಕೊಂಡಿರುವುದು ನನ್ನ ಜೀವನದ ಅತ್ಯಂತ ಹೆಮ್ಮೆಯ ವಿಚಾರವಾಗಿದೆ. ಆದರೆ ಪ್ರಸುತದಲ್ಲಿ ಸೈನ್ಯಕ್ಕೆ ಸೇರಲು ಯುವಪೀಳಿಗೆ ಮುಂದಾಗದಿರುವುದು ಹಾಗೂ ಕೋಟ್ಯಾಂತರ ಜನಸಂಖ್ಯೆಯಲ್ಲಿ ಬೆರಳೆಣಿಕೆಯಷ್ಟು ಮಾತ್ರ ಸೈನ್ಯಕ್ಕೆ ಸೇರ್ಪಡೆಯಾಗುತ್ತಿರುವುದು ಖೇದದ ಸಂಗತಿಯೆಂದು ಇಂಡಿಯನ್ ಆರ್ಮಿಯಲ್ಲಿ ಕಳೆದ ೧೫ ವರ್ಷದಿಂದ ಯೋಧರಾಗಿ ಸೇವೆಯಲ್ಲಿರುವ ಹುಳಿಯಾರಿನ ಬಿ.ಆರ್.ಗೋಪಿನಾಯಕ್ ವಿಷಾದಿಸಿದರು.
ಹುಳಿಯಾರಿನ ಕೆಪಿಟಿಸಿಎಲ್ ಕಛೇರಿಯಲ್ಲಿ ಅಯೋಜಿಸಿದ್ದ ಸಮಾರಂಭದಲ್ಲಿ ಇಂಡಿಯನ್ ಆರ್ಮಿಯ ಯೋಧ ಹುಳಿಯಾರಿನ ಗೋಪಿಅವರು ಮಾತನಾಡಿದರು.


ಹುಳಿಯಾರಿನ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ವತಿಯಿಂದ ಬುಧವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಹುಳಿಯಾರಿನ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ವತಿಯಿಂದ ಇಂಡಿಯನ್ ಆರ್ಮಿಯ ಯೋಧ ಹುಳಿಯಾರಿನ ಎಂ.ಆರ್.ಗೋಪಿ ಅವರನ್ನು ಸನ್ಮಾನಿಸಲಾಯಿತು. ಎಇಇ ರಾಜಶೇಖರ್, ಎಸ್.ಒ ಉಮೇಶ್ ನಾಯಕ್ ಹಾಗೂ ಮೂರ್ತಿ, ಸಹಾಯಕ ಇಂಜಿನಿಯರ್ ವಿಶ್ವನಾಥ್ ಹಾಗೂ ಇತರರಿದ್ದಾರೆ.
ಸೈನ್ಯವೆಂದರೆ ಯಾರು ಭಯಪಡುವ ಅಗತ್ಯವಿಲ್ಲ ನಗರಪ್ರದೇಶದಲ್ಲಿ ಪೊಲೀಸರು ಯಾವರೀತಿ ಜನರನ್ನು ಕಾಯುತ್ತಾರೋ ಅದೇರೀತಿ ನಾವು ದೇಶದ ಗಡಿಯಲ್ಲಿ ದೇಶದೊಳಗೆ ಯಾರೊಬ್ಬರು ನುಸುಳದಂತೆ ಕಾಯುತ್ತಿರುತ್ತೇವೆ . ಪಿಯುಸಿ ತೇರ್ಗಡೆಯಾಗಿ ೨೨ ವಯಸ್ಸಿನ ಒಳಪಟ್ಟವರು, ಉತ್ತಮ ಆರೋಗ್ಯವಂತರು ಸೇನೆಯವರು ನಡೆಸುವ ಕ್ಯಾಂಪ್ ನಲ್ಲಿ ಪಾಲ್ಗೊಳ್ಳುವ ಮುಖಾಂತರ ಸೈನ್ಯಕ್ಕೆ ಸೇರಬಹುದಾಗಿದೆ ಎಂದರು. ನಮ್ಮನ್ನು ಸನ್ಮಾನ ಮಾಡುತ್ತಿರುವುದು ಸಂತಸತಂದಿದ್ದು ಇದರ ಕೀರ್ತಿ ನನ್ನ ಪೋಷಕರಿಗೆ ಸಲ್ಲಬೇಕು ಎಂದರು.
ಸಹಾಯಕ ಇಂಜಿನಿಯರ್ ಕೆಂಕೆರೆ ವಿಶ್ವನಾಥ್ ಮಾತನಾಡಿ, ಪ್ರಸುತದಲ್ಲಿ ವಿವಿಧ ಕ್ಷೇತ್ರಗಳ ಅನೇಕ ಜನರನ್ನು ಸನ್ಮಾನಿಸುತ್ತಾರೆ ಆದರೆ ದೇಶದ ರಕ್ಷಣೆಗೆನಿಂತು, ದೇಶದೊಳಗೆ ಯಾರು ನುಸುಳದಂತೆ ಸದಾ ಎಚ್ಚರದಿಂದಿದ್ದು, ದೇಶದೊಳಗಿನ ಜನರನ್ನು ಕಾಯುವ ಯೋಧರನ್ನು ಪುರಸ್ಕರಿಸುತ್ತಿಲ್ಲ ಎಂದು ವಿಷಾದಿಸಿದರು. ತಮ್ಮ ಸುತ್ತಮುತ್ತಲ್ಲಿ ಯಾರಾದರೂ ಸೈನ್ಯದಲ್ಲಿದ್ದರೆ ಅವರನ್ನು ಸನ್ಮಾನಿಸಿ ಗೌರವಿಸುವುದರಿಂದ ಅವರನ್ನು ಉತ್ತೇಜಿಸಿದಂತಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಎಇಇ ರಾಜಶೇಖರ್, ನೊಡೆಲ್ ಅಧಿಕಾರಿ ಸೀತಾರಾಮಶೆಟ್ಟಿ, ಬೆಸ್ಕಾಂನ ಸೆಕ್ಷನ್ ಅಫಿಸರ್ ಗಳಾದ ಉಮೇಶ್ ನಾಯಕ್ ಹಾಗೂ ಮೂರ್ತಿ, ಅಮೀರ್ ಜಾನ್, ಸಿಬ್ಬಂದಿವರ್ಗದ ಸಂಗಮೇಶ್,ರಮೇಶ್,ಶಿವರಾಜ್,ತಮ್ಮಡಿಹಳ್ಳಿಶಿವಣ್ಣ,ಸಿದ್ದು ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...