ವಿಷಯಕ್ಕೆ ಹೋಗಿ

ಸೈನ್ಯಕ್ಕೆ ಸೇರುವವರ ಸಂಖ್ಯೆ ಬೆರಳೆಣಿಕೆಯಷ್ಟು : ಗೋಪಿ

ದೇಶದ ಗಡಿಕಾಯುವುದರ ಮುಖಾಂತರ ದೇಶಸೇವೆಯಲ್ಲಿ ತೊಡಗಿಕೊಂಡಿರುವುದು ನನ್ನ ಜೀವನದ ಅತ್ಯಂತ ಹೆಮ್ಮೆಯ ವಿಚಾರವಾಗಿದೆ. ಆದರೆ ಪ್ರಸುತದಲ್ಲಿ ಸೈನ್ಯಕ್ಕೆ ಸೇರಲು ಯುವಪೀಳಿಗೆ ಮುಂದಾಗದಿರುವುದು ಹಾಗೂ ಕೋಟ್ಯಾಂತರ ಜನಸಂಖ್ಯೆಯಲ್ಲಿ ಬೆರಳೆಣಿಕೆಯಷ್ಟು ಮಾತ್ರ ಸೈನ್ಯಕ್ಕೆ ಸೇರ್ಪಡೆಯಾಗುತ್ತಿರುವುದು ಖೇದದ ಸಂಗತಿಯೆಂದು ಇಂಡಿಯನ್ ಆರ್ಮಿಯಲ್ಲಿ ಕಳೆದ ೧೫ ವರ್ಷದಿಂದ ಯೋಧರಾಗಿ ಸೇವೆಯಲ್ಲಿರುವ ಹುಳಿಯಾರಿನ ಬಿ.ಆರ್.ಗೋಪಿನಾಯಕ್ ವಿಷಾದಿಸಿದರು.
ಹುಳಿಯಾರಿನ ಕೆಪಿಟಿಸಿಎಲ್ ಕಛೇರಿಯಲ್ಲಿ ಅಯೋಜಿಸಿದ್ದ ಸಮಾರಂಭದಲ್ಲಿ ಇಂಡಿಯನ್ ಆರ್ಮಿಯ ಯೋಧ ಹುಳಿಯಾರಿನ ಗೋಪಿಅವರು ಮಾತನಾಡಿದರು.


ಹುಳಿಯಾರಿನ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ವತಿಯಿಂದ ಬುಧವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಹುಳಿಯಾರಿನ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ವತಿಯಿಂದ ಇಂಡಿಯನ್ ಆರ್ಮಿಯ ಯೋಧ ಹುಳಿಯಾರಿನ ಎಂ.ಆರ್.ಗೋಪಿ ಅವರನ್ನು ಸನ್ಮಾನಿಸಲಾಯಿತು. ಎಇಇ ರಾಜಶೇಖರ್, ಎಸ್.ಒ ಉಮೇಶ್ ನಾಯಕ್ ಹಾಗೂ ಮೂರ್ತಿ, ಸಹಾಯಕ ಇಂಜಿನಿಯರ್ ವಿಶ್ವನಾಥ್ ಹಾಗೂ ಇತರರಿದ್ದಾರೆ.
ಸೈನ್ಯವೆಂದರೆ ಯಾರು ಭಯಪಡುವ ಅಗತ್ಯವಿಲ್ಲ ನಗರಪ್ರದೇಶದಲ್ಲಿ ಪೊಲೀಸರು ಯಾವರೀತಿ ಜನರನ್ನು ಕಾಯುತ್ತಾರೋ ಅದೇರೀತಿ ನಾವು ದೇಶದ ಗಡಿಯಲ್ಲಿ ದೇಶದೊಳಗೆ ಯಾರೊಬ್ಬರು ನುಸುಳದಂತೆ ಕಾಯುತ್ತಿರುತ್ತೇವೆ . ಪಿಯುಸಿ ತೇರ್ಗಡೆಯಾಗಿ ೨೨ ವಯಸ್ಸಿನ ಒಳಪಟ್ಟವರು, ಉತ್ತಮ ಆರೋಗ್ಯವಂತರು ಸೇನೆಯವರು ನಡೆಸುವ ಕ್ಯಾಂಪ್ ನಲ್ಲಿ ಪಾಲ್ಗೊಳ್ಳುವ ಮುಖಾಂತರ ಸೈನ್ಯಕ್ಕೆ ಸೇರಬಹುದಾಗಿದೆ ಎಂದರು. ನಮ್ಮನ್ನು ಸನ್ಮಾನ ಮಾಡುತ್ತಿರುವುದು ಸಂತಸತಂದಿದ್ದು ಇದರ ಕೀರ್ತಿ ನನ್ನ ಪೋಷಕರಿಗೆ ಸಲ್ಲಬೇಕು ಎಂದರು.
ಸಹಾಯಕ ಇಂಜಿನಿಯರ್ ಕೆಂಕೆರೆ ವಿಶ್ವನಾಥ್ ಮಾತನಾಡಿ, ಪ್ರಸುತದಲ್ಲಿ ವಿವಿಧ ಕ್ಷೇತ್ರಗಳ ಅನೇಕ ಜನರನ್ನು ಸನ್ಮಾನಿಸುತ್ತಾರೆ ಆದರೆ ದೇಶದ ರಕ್ಷಣೆಗೆನಿಂತು, ದೇಶದೊಳಗೆ ಯಾರು ನುಸುಳದಂತೆ ಸದಾ ಎಚ್ಚರದಿಂದಿದ್ದು, ದೇಶದೊಳಗಿನ ಜನರನ್ನು ಕಾಯುವ ಯೋಧರನ್ನು ಪುರಸ್ಕರಿಸುತ್ತಿಲ್ಲ ಎಂದು ವಿಷಾದಿಸಿದರು. ತಮ್ಮ ಸುತ್ತಮುತ್ತಲ್ಲಿ ಯಾರಾದರೂ ಸೈನ್ಯದಲ್ಲಿದ್ದರೆ ಅವರನ್ನು ಸನ್ಮಾನಿಸಿ ಗೌರವಿಸುವುದರಿಂದ ಅವರನ್ನು ಉತ್ತೇಜಿಸಿದಂತಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಎಇಇ ರಾಜಶೇಖರ್, ನೊಡೆಲ್ ಅಧಿಕಾರಿ ಸೀತಾರಾಮಶೆಟ್ಟಿ, ಬೆಸ್ಕಾಂನ ಸೆಕ್ಷನ್ ಅಫಿಸರ್ ಗಳಾದ ಉಮೇಶ್ ನಾಯಕ್ ಹಾಗೂ ಮೂರ್ತಿ, ಅಮೀರ್ ಜಾನ್, ಸಿಬ್ಬಂದಿವರ್ಗದ ಸಂಗಮೇಶ್,ರಮೇಶ್,ಶಿವರಾಜ್,ತಮ್ಮಡಿಹಳ್ಳಿಶಿವಣ್ಣ,ಸಿದ್ದು ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...