ವಿಷಯಕ್ಕೆ ಹೋಗಿ

ಕಾಂಗ್ರಸ್ ಕಾರ್ಯಕರ್ತರಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಾಂಗ್ರೆಸ್ ಕಾರ್ಯಕರ್ತರಿಂದ ಹೋಬಳಿ ವ್ಯಾಪ್ತಿಯಲ್ಲಿ ಮುಖಂಡ ಸಾಸಲು ಸತೀಶ್ ನೇತೃತ್ವದಲ್ಲಿ ಬುಧವಾರದಂದು ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.
ಹುಳಿಯಾರು ಪಟ್ಟಣ ಪರಿವೀಕ್ಷಣ ಮಂದಿರದಲ್ಲಿ ಕಾಂಗ್ರೆಸ್ ಸೇರ್ಪಡೆಯಾದವರಿಗೆ ಸಾಸಲು ಸತೀಶ್ ಕಾಂಗ್ರೆಸ್ ನ ಶಾಲು ಹಾಕಿ ಸೇರ್ಪಡೆ ಮಾಡಿಕೊಂಡರು.
ಪಟ್ಟಣದ ಪರಿವೀಕ್ಷಣ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ನಂತರ ಪಟಣ್ಣದ ಕೆಲ ಮನೆಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿಕಾರ್ಯಗಳ ಬಗ್ಗೆ ತಿಳಿಸುತ್ತಾ ಕಾಂಗ್ರೆಸ್ ಪಕ್ಷಕ್ಕೆ ಸದಸ್ಯರಾಗುವಂತೆ ಕಾರ್ಯಕರ್ತರು ತಿಳಿಸುತ್ತಿದ್ದರು.
ಸಾಸಲು ಸತೀಶ್ ಮಾತನಾಡಿ, ಸದಸ್ಯತ್ವ ಅಭಿಯಾನಕ್ಕೆ ಸೋನಿಯಾಗಾಂಧಿ ಅವರು ಈಗಾಗಲೇ ಚಾಲನೆ ನೀಡಿದ್ದು ಅದರಂತೆ ನಾವೂ ಸಹ ತಾಲ್ಲೂಕಿನಾದ್ಯಂತ ಅಭಿಯಾನ ಹಮ್ಮಿಕೊಂಡಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯ ಜನರಿಗಾಗಿ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ ಸೇರಿದಂತೆ ಹತ್ತಾರೂ ಜನಪರ ಯೋಜನೆಗಳನ್ನು ರೂಪಿಸಿ ಸಾರ್ವಜನಿಕರಿಗೆ ನೆರವಾಗಿದ್ದು ಕಾಂಗ್ರೆಸ್ ಬಗ್ಗೆ ಸಾಮಾನ್ಯ ಜನರಲ್ಲಿ ನಂಬಿಕೆ ಹೆಚ್ಚಾಗಿದೆ.
ಅಲ್ಲದೆ ಈ ಕ್ಷೇತ್ರದ ಸಂಸದರಾಗಿರುವ ಮುದ್ದುಹನುಮೇಗೌಡರು ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ತೆರಳಿ ಸಭೆ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿ ಅವುಗಳನ್ನು ಬಗೆಹರಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷ ಜನಪರ ಕಾರ್ಯಗಳು ಹೆಚ್ಚೆಚ್ಚು ಮಾಡುತ್ತಿದ್ದು ಈ ನಿಟ್ಟಿನಲ್ಲಿ ಮತದಾರರು ಹೆಚ್ಚು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸದಸ್ಯರಾಗುವಂತೆ ತಿಳಿಸಿದರು.

ಈ ವೇಳೆ ಹುಳಿಯಾರು ಗ್ರಾ.ಪಂ.ಸದಸ್ಯ ಸಯದ್ ಮಹಬೂಬ್ , ನಾಸೀರ್ ಬೇಗ್, ತಮ್ಮಡಿಹಳ್ಳಿಯ ಕದಿರೇಗೌಡ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಅಭಿಯಾನದಲ್ಲಿ ಎಪಿಎಂಸಿ ಸದಸ್ಯ ಸಿದ್ದರಾಮಣ್ಣ, ತಾಲ್ಲೂಕು ಯುವಕಾಂಗ್ರೆಸ್ ಅಧ್ಯಕ್ಷ ಹೊಸಳ್ಳಿ ಅಶೋಕ್, ಜಿಲ್ಲಾಫ್ರಧಾನ ಕಾರ್ಯದರ್ಶಿ ಶೇಷಾನಾಯ್ಕ,ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು,ಕೆಂಕೆರೆ ಶಿವಕುಮಾರ್, ವೆಂಕಟೇಶ್,ಪ್ರಸನ್ನ, ಮೋಹನ್ ಕುಮಾರ್ ರೈ ಸೇರಿದಂತೆ ಇತರ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.