ವಿಷಯಕ್ಕೆ ಹೋಗಿ

ಇನ್ನೊಂದು ತಿಂಗಳೊಳಗಾಗಿ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಭರವಸೆ : ಧರಣಿ ಕೈಬಿಟ್ಟ ರೈತ ಸಂಘ

ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ ಹಾಗೂ ಕನಿಷ್ಠ ಮೂಲ ಸೌಕರ್ಯಗಳಿಲ್ಲದೆ ನಿತ್ಯ ಸಾರ್ವಜನಿಕರು ಪರದಾಡುತ್ತಿರುವುದು ಗಮನಕ್ಕೆ ಬಂದಿದ್ದು, ಆಸ್ಪತ್ರೆಗೆ ಬೇಕಾದ ಅಗತ್ಯ ಸೌಕರ್ಯಗಳನ್ನು ಶೀಘ್ರದಲ್ಲೇ ಕಲ್ಪಿಸಿಕೊಡುವುದಾಗಿಯೂ , ಇನ್ನೊಂದು ತಿಂಗಳೊಳಗಾಗಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದಾಗಿಯೂ ಜಿಲ್ಲಾ ಆರೋಗ್ಯಾಧಿಕಾರಿ ಶಶಿಕಲಾ ಅವರು ಭರವಸೆ ನೀಡುವ ಮೂಲಕ ರೈತ ಸಂಘದವರು ಬುಧವಾರ ಪ್ರಾರಂಭಿಸಿದ ಧರಣಿಯನ್ನು ಹಿಂಪಡೆಯುವಂತೆ ಮಾಡಿದರು.
ಹುಳಿಯಾರು ಆಸ್ಪತ್ರೆ ಸಮಸ್ಯೆ ಬಗ್ಗೆ ಪ್ರತಿಭಟನಾಕಾರರೊಂದಿಗೆ ಚರ್ಚಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಶಶಿಕಲಾ.
ಹುಳಿಯಾರು ಆಸ್ಪತ್ರೆಗೆ ಕಾಯಂ ವೈದ್ಯರ ನೇಮಕಾತಿ ಹಾಗೂ ಮೇಲ್ದರ್ಜೆಗೆ ಏರಿಸುವ ಕುರಿತಂತೆ ಬುಧವಾರದಿಂದ ರೈತ ಸಂಘಟನೆ ಪ್ರಾರಂಭಿಸಿದ್ದ ಅನಿರ್ದಿಷ್ಟಾವಧಿಯ ಧರಣಿಯ ಸ್ಥಳಕ್ಕೆ ಆಗಮಿಸಿದ ಅವರು ರೈತ ಸಂಘದ ಪದಾಧಿಕಾರಿಗಳ ಸಮಸ್ಯೆ ಆಲಿಸಿ ಆನಂತರ ಮೇಲಿನಂತೆ ಭರವಸೆ ನೀಡಿದರು.
ತಾವಿನ್ನು ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿಯಾಗಿ ನೇಮಕವಾಗಿ ನಾಲ್ಕುದಿನಗಳಷ್ಟೆ ಕಳೆದಿದ್ದು ಹುಳಿಯಾರು ಸೇರಿದಂತೆ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿನ ಸಮಸ್ಯೆಗಳ ಬಗ್ಗೆ ತಾಲ್ಲೂಕ್ ವೈದ್ಯಾಧಿಕಾರಿಗಳ ಸಭೆ ಕರೆದು ಚರ್ಚಿಸಿದ್ದು, ಅಗತ್ಯ ಸೌಕರ್ಯ ಕಲ್ಪಿಸುವ ಬಗ್ಗೆ ಪಟ್ಟಿ ಸಿದ್ದಪಡಿಸಲಾಗುತ್ತಿದ್ದು ಶೀಘ್ರವೇ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಲಾಖೆಯೊಂದಿಗೆ ಪ್ರಸ್ಥಾವನೆ ಸಲ್ಲಿಸುವುದಾಗಿ ತಿಳಿಸಿದರು.
ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಹಾಗೂ ನರ್ಸ್ ಗಳ ನೇಮಕಾತಿಗೆ ಜಿಲ್ಲಾಧಿಕಾರಿಗಳ ಕಛೆರಿಗೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ ಅವರು ಹುಳಿಯಾರು ಆಸ್ಪತ್ರೆಗೆ ಬೇಕಾದ ಅಗತ್ಯ ಔಷಧಗಳನ್ನು ಶೀಘ್ರವೇ ವ್ಯವಸ್ಥೆ ಮಾಡುವುದಾಗಿ ಹೇಳಿದರು.
ಸದ್ಯ ದಿನದ ೨೪ ಗಂಟೆಯೂ ವೈದ್ಯರು ಲಭ್ಯವಾಗುವ ಹಾಗೆ ಬೇರೆ ಆಸ್ಪತ್ರೆಗಳಿಂದ ತಾತ್ಕಾಲಿಕವಾಗಿ ವೈದ್ಯರನ್ನು ನಿಯೋಜನೆ ಮಾಡುವುದಾಗಿ ತಿಳಿಸುವ ಮುಖಾಂತರ ಧರಣಿ ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು.
ಧರಣಿ ಹಿಂಪಡೆದ ರೈತ ಸಂಘ: ಹುಳಿಯಾರು ಆಸ್ಪತ್ರೆ ಸಮಸ್ಯೆ ಸಾಕಷ್ಟು ವರ್ಷದಿಂದ ಬಗೆಹರಿಯದಿದ್ದು ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ವಿವಿಧ ಸಂಘ ಸಂಸ್ಥೆಗಳೊಂದಿಗೆ ಅನಿರ್ದಿಷ್ಟಾವಧಿಯ ಧರಣಿ ಕೈಗೊಂಡ ರೈತ ಸಂಘ ಕಾಯಂ ವೈದ್ಯರ ನೇಮಕಾತಿ ಆಗುವವರೆಗೂ ಹಾಗೂ ಆರೋಗ್ಯ ಸಚಿವರು ಸ್ಥಳಕ್ಕಾಗಮಿಸುವ ವರೆಗೂ ಕದಲುವುದಿಲ್ಲವೆಂದು ಆಸ್ಪತ್ರೆಗೆ ಬೀಗ ಜಡಿದು ಪಟ್ಟುಹಿಡಿದು ಕೂತಿದ್ದರು. ಸದ್ಯ ಜಿಲ್ಲಾವೈದ್ಯಾಧಿಕಾರಿಗಳ ಭರವಸೆಗೆ ಸ್ಪಂದಿಸಿದ ಸಂಘಟನಾಕಾರರು ಡಿಸೆಂಬರ್ ಅಂತ್ಯದವರೆಗೆ ಗಡುವು ನೀಡಿದ್ದು, ಭರವಸೆ ಈಡೇರದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿ ಧರಣಿ ಹಿಂಪಡೆದಿದ್ದಾರೆ.

ತಾ.ಪಂ.ಸದಸ್ಯೆ ಬೀಬೀ ಫಾತೀಮಾ,ಗ್ರಾ.ಪಂ.ಸದಸ್ಯರಾದ ಅಶೋಕ್ ಬಾಬು,ಹೇಮಂತ್, ರಾಘವೇಂದ್ರ, ರೈತ ಸಂಘದ ಕೆಂಕೆರೆಸತೀಶ್, ಮಲ್ಲಿಕಣ್ಣ, ಕೆ.ಪಿ.ಮಲ್ಲೇಶ್, ಪಾತ್ರೆಸತೀಶ್, ರಘು, ತಿಮ್ಮನಹಳ್ಳಿ ಲೋಕಣ್ಣ,ಶಿವಕುಮಾರ್, ಕರವೇ ಅಧ್ಯಕ್ಷ ಸಿದ್ದೇಶ್,ಕೋಳಿ ಶ್ರೀನಿವಾಸ್, ಮುಸ್ಲಿಂಯುವಕ ಸಂಘದ ಇಮ್ರಾಜ್ ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...