ವಿಷಯಕ್ಕೆ ಹೋಗಿ

ಇನ್ನೊಂದು ತಿಂಗಳೊಳಗಾಗಿ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಭರವಸೆ : ಧರಣಿ ಕೈಬಿಟ್ಟ ರೈತ ಸಂಘ

ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ ಹಾಗೂ ಕನಿಷ್ಠ ಮೂಲ ಸೌಕರ್ಯಗಳಿಲ್ಲದೆ ನಿತ್ಯ ಸಾರ್ವಜನಿಕರು ಪರದಾಡುತ್ತಿರುವುದು ಗಮನಕ್ಕೆ ಬಂದಿದ್ದು, ಆಸ್ಪತ್ರೆಗೆ ಬೇಕಾದ ಅಗತ್ಯ ಸೌಕರ್ಯಗಳನ್ನು ಶೀಘ್ರದಲ್ಲೇ ಕಲ್ಪಿಸಿಕೊಡುವುದಾಗಿಯೂ , ಇನ್ನೊಂದು ತಿಂಗಳೊಳಗಾಗಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದಾಗಿಯೂ ಜಿಲ್ಲಾ ಆರೋಗ್ಯಾಧಿಕಾರಿ ಶಶಿಕಲಾ ಅವರು ಭರವಸೆ ನೀಡುವ ಮೂಲಕ ರೈತ ಸಂಘದವರು ಬುಧವಾರ ಪ್ರಾರಂಭಿಸಿದ ಧರಣಿಯನ್ನು ಹಿಂಪಡೆಯುವಂತೆ ಮಾಡಿದರು.
ಹುಳಿಯಾರು ಆಸ್ಪತ್ರೆ ಸಮಸ್ಯೆ ಬಗ್ಗೆ ಪ್ರತಿಭಟನಾಕಾರರೊಂದಿಗೆ ಚರ್ಚಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಶಶಿಕಲಾ.
ಹುಳಿಯಾರು ಆಸ್ಪತ್ರೆಗೆ ಕಾಯಂ ವೈದ್ಯರ ನೇಮಕಾತಿ ಹಾಗೂ ಮೇಲ್ದರ್ಜೆಗೆ ಏರಿಸುವ ಕುರಿತಂತೆ ಬುಧವಾರದಿಂದ ರೈತ ಸಂಘಟನೆ ಪ್ರಾರಂಭಿಸಿದ್ದ ಅನಿರ್ದಿಷ್ಟಾವಧಿಯ ಧರಣಿಯ ಸ್ಥಳಕ್ಕೆ ಆಗಮಿಸಿದ ಅವರು ರೈತ ಸಂಘದ ಪದಾಧಿಕಾರಿಗಳ ಸಮಸ್ಯೆ ಆಲಿಸಿ ಆನಂತರ ಮೇಲಿನಂತೆ ಭರವಸೆ ನೀಡಿದರು.
ತಾವಿನ್ನು ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿಯಾಗಿ ನೇಮಕವಾಗಿ ನಾಲ್ಕುದಿನಗಳಷ್ಟೆ ಕಳೆದಿದ್ದು ಹುಳಿಯಾರು ಸೇರಿದಂತೆ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿನ ಸಮಸ್ಯೆಗಳ ಬಗ್ಗೆ ತಾಲ್ಲೂಕ್ ವೈದ್ಯಾಧಿಕಾರಿಗಳ ಸಭೆ ಕರೆದು ಚರ್ಚಿಸಿದ್ದು, ಅಗತ್ಯ ಸೌಕರ್ಯ ಕಲ್ಪಿಸುವ ಬಗ್ಗೆ ಪಟ್ಟಿ ಸಿದ್ದಪಡಿಸಲಾಗುತ್ತಿದ್ದು ಶೀಘ್ರವೇ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಲಾಖೆಯೊಂದಿಗೆ ಪ್ರಸ್ಥಾವನೆ ಸಲ್ಲಿಸುವುದಾಗಿ ತಿಳಿಸಿದರು.
ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಹಾಗೂ ನರ್ಸ್ ಗಳ ನೇಮಕಾತಿಗೆ ಜಿಲ್ಲಾಧಿಕಾರಿಗಳ ಕಛೆರಿಗೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ ಅವರು ಹುಳಿಯಾರು ಆಸ್ಪತ್ರೆಗೆ ಬೇಕಾದ ಅಗತ್ಯ ಔಷಧಗಳನ್ನು ಶೀಘ್ರವೇ ವ್ಯವಸ್ಥೆ ಮಾಡುವುದಾಗಿ ಹೇಳಿದರು.
ಸದ್ಯ ದಿನದ ೨೪ ಗಂಟೆಯೂ ವೈದ್ಯರು ಲಭ್ಯವಾಗುವ ಹಾಗೆ ಬೇರೆ ಆಸ್ಪತ್ರೆಗಳಿಂದ ತಾತ್ಕಾಲಿಕವಾಗಿ ವೈದ್ಯರನ್ನು ನಿಯೋಜನೆ ಮಾಡುವುದಾಗಿ ತಿಳಿಸುವ ಮುಖಾಂತರ ಧರಣಿ ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು.
ಧರಣಿ ಹಿಂಪಡೆದ ರೈತ ಸಂಘ: ಹುಳಿಯಾರು ಆಸ್ಪತ್ರೆ ಸಮಸ್ಯೆ ಸಾಕಷ್ಟು ವರ್ಷದಿಂದ ಬಗೆಹರಿಯದಿದ್ದು ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ವಿವಿಧ ಸಂಘ ಸಂಸ್ಥೆಗಳೊಂದಿಗೆ ಅನಿರ್ದಿಷ್ಟಾವಧಿಯ ಧರಣಿ ಕೈಗೊಂಡ ರೈತ ಸಂಘ ಕಾಯಂ ವೈದ್ಯರ ನೇಮಕಾತಿ ಆಗುವವರೆಗೂ ಹಾಗೂ ಆರೋಗ್ಯ ಸಚಿವರು ಸ್ಥಳಕ್ಕಾಗಮಿಸುವ ವರೆಗೂ ಕದಲುವುದಿಲ್ಲವೆಂದು ಆಸ್ಪತ್ರೆಗೆ ಬೀಗ ಜಡಿದು ಪಟ್ಟುಹಿಡಿದು ಕೂತಿದ್ದರು. ಸದ್ಯ ಜಿಲ್ಲಾವೈದ್ಯಾಧಿಕಾರಿಗಳ ಭರವಸೆಗೆ ಸ್ಪಂದಿಸಿದ ಸಂಘಟನಾಕಾರರು ಡಿಸೆಂಬರ್ ಅಂತ್ಯದವರೆಗೆ ಗಡುವು ನೀಡಿದ್ದು, ಭರವಸೆ ಈಡೇರದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿ ಧರಣಿ ಹಿಂಪಡೆದಿದ್ದಾರೆ.

ತಾ.ಪಂ.ಸದಸ್ಯೆ ಬೀಬೀ ಫಾತೀಮಾ,ಗ್ರಾ.ಪಂ.ಸದಸ್ಯರಾದ ಅಶೋಕ್ ಬಾಬು,ಹೇಮಂತ್, ರಾಘವೇಂದ್ರ, ರೈತ ಸಂಘದ ಕೆಂಕೆರೆಸತೀಶ್, ಮಲ್ಲಿಕಣ್ಣ, ಕೆ.ಪಿ.ಮಲ್ಲೇಶ್, ಪಾತ್ರೆಸತೀಶ್, ರಘು, ತಿಮ್ಮನಹಳ್ಳಿ ಲೋಕಣ್ಣ,ಶಿವಕುಮಾರ್, ಕರವೇ ಅಧ್ಯಕ್ಷ ಸಿದ್ದೇಶ್,ಕೋಳಿ ಶ್ರೀನಿವಾಸ್, ಮುಸ್ಲಿಂಯುವಕ ಸಂಘದ ಇಮ್ರಾಜ್ ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.