ವಿಷಯಕ್ಕೆ ಹೋಗಿ

ಆಹಾರ ಸರಬರಾಜು ನಿಗಮದ ನಿರ್ಲಕ್ಷ : ರಾಗಿ ಖರೀದಿ ಕೇಂದ್ರ ತೆರೆಯುವಲ್ಲಿ ವಿಳಂಬ ಜಾರಿಯಾಗದ : ಜಿಲ್ಲಾಧಿಕಾರಿ ಅದೇಶ

ವರದಿ: ಡಿ.ಆರ್.ನರೇಂದ್ರಬಾಬು
-----------
ಹುಳಿಯಾರು: ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕನಿಷ್ಠ ಬೆಂಬಲಬೆಲೆ ಯೋಜನೆಯಡಿಯಲ್ಲಿ ಕ್ವಿಂಟಾಲ್ ಗೆ ೨೦೦೦ದಂತೆ ಖರೀದಿ ಮಾಡಬೇಕಿದ್ದ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಅಧಿಕಾರಿಗಳ ನಿರ್ಲಕ್ಷತನದಿಂದ ರಾಗಿ ಖರೀದಿ ಕೇಂದ್ರ ಸ್ಥಾಪನೆ ಮರೀಚಿಕೆಯಾಗಿದ್ದು ಖರೀದಿ ಕೇಂದ್ರ ಪ್ರಾರಂಭವಾಗುತ್ತದೋ ಇಲ್ಲವೋ ಎಂಬಂತಾಗಿದೆ.
ಹುಳಿಯಾರಿನ ಎಪಿಎಂಸಿ ಕಛೇರಿಯಲ್ಲಿ ರಾಗಿ ಖರೀದಿ ಕೇಂದ್ರ ತೆರೆದಿದೆ ಎಂದು ತಿಳಿಸುವ ಬ್ಯಾನರ್ .
ರಾಗಿ ಬೆಲೆ ಕುಸಿತದ ಹಿನ್ನಲೆಯಲ್ಲಿ ಮಧ್ಯ ಪ್ರವೇಶಿಸಿದ ಸರ್ಕಾರ ಉತ್ತಮ ಗುಣಮಟ್ಟದ ರಾಗಿಗೆ ಪ್ರತಿಕ್ವಿಂಟಾಲ್ ಗೆ ೧೫೫೦ ಹಾಗೂ ಪ್ರೋತ್ಸಾಹ ಧನ ೪೫೦ರೂ ಸೇರಿ ಪ್ರತಿಕ್ವಿಂಟಾಲ್ ಗೆ ಒಟ್ಟು ೨೦೦೦ ದರದಂತೆ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಮೂಲಕ ಖರೀದಿ ಮಾಡುವುದಾಗಿ ತಿಳಿಸಿತ್ತು. ಇದೇ ಡಿಸೆಂಬರ್ ೧೫ ರಿಂದ ಜಿಲ್ಲೆಯ ತುಮಕೂರು , ಗುಬ್ಬಿ,ಕುಣಿಗಲ್, ತುರುವೇಕೆರೆ,ತಿಪಟೂರು,ಚಿಕ್ಕನಾಯಕನಹಳ್ಳಿ ಮತ್ತು ಹುಳಿಯಾರು ಎಪಿಎಂಸಿಗಳಲ್ಲಿ ಖರೀದಿ ಕೇಂದ್ರ ಸ್ಥಾಪಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದರು.
ಅಂದಿನಿಂದ ಇದುವರೆಗೂ ಖರೀದಿ ಕೇಂದ್ರದ ಸ್ಥಾಪನೆಗೆ ಜಿಲ್ಲಾಧಿಕಾರಿಗಳಾಗಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಾಗಲಿ ಈ ಬಗ್ಗೆ ಮೌನವಹಿಸಿರುವುದು ರೈತರ ಅಸಹನೆಗೆ ಕಾರಣವಾಗಿದೆ.
ಯಾರಿಗೂ ಮಾಹಿತಿ ಇಲ್ಲ: ಖರೀದಿ ಕೇಂದ್ರ ಸ್ಥಾಪನೆಯಾಗಿರುವುದಾಗಿ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಮುಂದೆ ಬ್ಯಾನರ್ ಹಾಕಿರುವುದು ಬಿಟ್ಟರೆ ಒಳಹೊಕ್ಕು ನೋಡಿದರೆ ಖರೀದಿ ಕೇಂದ್ರ ಎಲ್ಲಿದೆ ಎಂದೆ ಯಾರೊಬ್ಬರಿಗೂ ತಿಳಿದಿಲ್ಲ.ಕಾರ್ಯದರ್ಶಿಗಳು ತಾವೀಗಾಗಲೇ ಎಪಿಎಂಸಿ ವತಿಯಿಂದ ಗೋಡನ್ ಹಾಗೂ ತೂಕದ ಆಳತೆ ಮಾಪನ ವ್ಯವಸ್ಥೆ ಮಾಡಿಕೊಟ್ಟಿದ್ದು ಖರೀದಿ ಕೇಂದ್ರ ತಡವಾಗುವುದಕ್ಕೆ ಕ.ಆ.ನ.ಸ.ನಿ.ನಿಯಮಿತದೆಡೆ ಬೆಟ್ಟು ಮಾಡುತ್ತಾರೆ.
ಟೆಂಡರ್ ನಲ್ಲಿ ಸಾಗಣೆದಾರರು ಯಾರು ಎಂದು ಅಂತಿಮ ಗೊಳಿಸುವ ಮುಂಚೆಯೇ ಖರೀದಿ ಕೇಂದ್ರದ ದಿನಾಂಕ ನಿಗದಿ ಮಾಡಿದ್ದು ಸಮಸ್ಯೆಗೆ ಕಾರಣಾವಾಗಿದ್ದು, ಶೀಘ್ರವೇ ಸಮಸ್ಯೆ ಪರಿಹರಿಸುತ್ತೇವೆ ಎಂದು ೧೦ದಿನಗಳ ಹಿಂದೆಯೇ ತಿಳಿಸಿದ್ದ ನಿಗಮದ ಜಿಲ್ಲಾ ನಿರ್ವಾಹಕರು ಇನ್ನೂ ಈ ಬಗ್ಗೆ ಗಮನಹರಿಸದಿರುವುದು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಹಿಡಿದ ಕನ್ನಡಿಯಾಗಿದೆ.
ತೊಂದರೆ : ಹೀಗಾಗಲೇ ರೈತರು ರಾಗಿ ಕಟಾವು ಮಾಡಿ ಒಕ್ಕಣೆ ಸಹ ಮಾಡುತ್ತಿದ್ದಾರೆ, ತಾಲ್ಲೋಕಿನೆಲ್ಲೆಡೆ ಸಕಾಲದಲ್ಲಿ ಉತ್ತಮ ಮಳೆಯಾದ್ದರಿಂದ ರಾಗಿ ಹುಲುಸಾಗಿ ಬೆಳೆದು ಬಂಪರ್ ಬೆಳೆ ಬಂದಿದೆ ಆದರೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತಕಂಡು ರೈತರನ್ನು ಆತಂಕಕ್ಕೀಡು ಮಾಡಿತ್ತು. ಆದರೆ ರಾಗಿ ಖರೀದಿ ಕೇಂದ್ರ ಪ್ರಾರಂಭವಾಗುತ್ತದೆ ಎಂಬುದು ರೈತರಲ್ಲಿ ಹರ್ಷವನ್ನುಂಟು ಮಾಡಿತ್ತಾದರೂ ಸಹ ಇದುವರೆಗೂ ಕೇಂದ್ರ ತೆರಯದಿರುವುದು ಮತ್ತೆ ಆತಂಕಕ್ಕೀಡುಮಾಡಿದೆ. ರಾಗಿ ಖರೀದಿ ಕೇಂದ್ರ ಪ್ರಾರಂಭವಾಗುವ ಮುನ್ಸೂಚನೆ ಅರಿತ ವ್ಯಾಪಾರಸ್ಥರು ರಾಗಿ ಬೆಲೆಯನ್ನು ೧೨೦೦ರಿಂದ ೧೪೦೦ರ ವರೆಗೆ ಏರಿಸಿ ರೈತರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದಾರೆ.
ಸರ್ಕಾರ ರೈತರಿಗೆ ನೆರವಾಗಲಿ ಎಂದು ರಾಗಿ ಖರೀದಿ ಕೇಂದ್ರ ತೆರಯಲು ಮುಂದಾದರೆ ಅಧಿಕಾರಿಗಳ ನಿರ್ಲಕ್ಷತನದಿಂದ ಇದುವರೆಗೂ ಕೇಂದ್ರ ತೆರೆಯದೆ ರೈತರೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ, ಶೀಘ್ರದಲ್ಲೇ ರಾಗಿ ಖರೀದಿ ಕೇಂದ್ರ ತೆರೆಯದೇ ಹೋದರೆ ಪ್ರತಿಭಟಿಸುತ್ತೇವೆ ;
ರಾಜ್ಯರೈತಸಂಘದ ಕೆಂಕೆರೆ ಸತೀಶ್,

ಖರೀದಿಕೇಂದ್ರ ಪ್ರಾರಂಭವಾಗಿದೆ ಎಂದು ರಾಗಿ ಮಾರಲು ಎಪಿಎಂಸಿಗೆ ಬರುವ ರೈತರು ಖರೀದಿ ಕೇಂದ್ರವಿಲ್ಲದ ಕಾರಣ ಎಪಿಎಂಸಿಯ ಅಂಗಡಿಯವರಿಗೆ ಮಾರುವಂತಾಗಿದೆ ಇದರಿಂದ ರೈತರಿಗೆ ೬೦೦ ರೂ ಲುಕ್ಸಾನಾಗುತ್ತಿದೆ ಇದಕ್ಕೆ ನಿಗಮ ಮಂಡಳಿಯವರ ವಿಳಂಬ ನೀತಿಯೇ ಕಾರಣವಾಗಿದೆ. ಅಲ್ಲದೆ ರಾಗಿ ಖರೀದಿ ಕೇಂದ್ರ ಲೇಟಾಗಿ ತೆರೆಯುವುದರಿಂದ ವ್ಯಾಪಾರಸ್ಥರು ರೈತರಿಂದ ರಾಗಿ ಖರೀದಿಸಿ ದಾಸ್ತಾನು ಮಾಡಿಕೊಳ್ಳಲು ಅನುಕೂಲಮಾಡಿಕೊಟ್ಟಂತಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.