ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಮೈಸೂರ್ ಬ್ಯಾಂಕಿನ ನೂತನ ಶಾಖೆ ಗ್ರಾಹಕರಿಗೆ ಉತ್ತಮ ಸೇವೆ ಕೊಡುವುದೇ ನಮ್ಮ ಗುರಿ :ಲಕ್ಷ್ಮೀಶ್

ಮೈಸೂರು ಅರಸರ ಕಾಲದಲ್ಲಿ ಸ್ಥಾಪನೆಯಾದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್ ಅಂದಿನಿಂದ ಇಂದಿನವರೆಗೂ ತನ್ನ ಗ್ರಾಹಕರಿಗೆ ಉತ್ತಮ ಸೇವೆ ಕೊಡುತ್ತಾ ಬಂದಿದ್ದು ಅದರಂತೆ ಹುಳಿಯಾರಿನಲ್ಲಿ ನೂತನವಾಗಿ ಪ್ರಾರಂಭವಾಗಿರುವ ನೂತನ ಶಾಖೆಯೂ ಸಹ ಗ್ರಾಹಕ ಸ್ನೇಹಿಯಾಗಿದ್ದು ಸಾರ್ವಜನಿಕರಿಗೆ ಉತ್ತಮ ಸೇವೆ ಕೊಡಲಿದೆ ಎಂದು ಜನರಲ್ ಮ್ಯಾನೇಜರ್ ಡಾ|| ಕೆ.ಲಕ್ಷ್ಮೀಶ್ ತಿಳಿಸಿದರು.
ಹುಳಿಯಾರಿನ ಮೈಸೂರ್ ಬ್ಯಾಂಕಿನ ನೂತನ ಶಾಖೆಗೆ ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ ಚಾಲನೆ ನೀಡಿದರು.

ಹುಳಿಯಾರಿನ ಮೈಸೂರ್ ಬ್ಯಾಂಕಿನ ನೂತನ ಶಾಖೆಯನ್ನು ಜನರಲ್ ಮ್ಯಾನೇಜರ್ ಡಾ|| ಕೆ.ಲಕ್ಷ್ಮೀಶ್ ಉದ್ಘಾಟಿಸಿದರು.

ಪಟ್ಟಣದ ರಾಮ್ ಗೋಪಾಲ್ ಸರ್ಕಲ್ ನಲ್ಲಿ ಶುಕ್ರವಾರ ಪ್ರಾರಂಭವಾದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್-ಹುಳಿಯಾರು ಶಾಖೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಎಸ್.ಬಿ.ಎಂ ತನ್ನ ಗ್ರಾಹಕರಿಗಾಗಿ ಅನೇಕ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಾ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಹಾಗೂ ಇನ್ನಿತರ ವ್ಯವಹಾರಗಳಿಗೆ,ಕೈಗಾರಿಕೆಗಳಿಗೆ ಇತರೆ ಬ್ಯಾಂಕ್ ಗಳು ವಿಧಿಸುವ ಬಡ್ಡಿಗಿಂತ ಕಡಿಮೆಬಡ್ಡಿ ಹಾಗೂ ಸುಲಭ ರೀತಿಯಲ್ಲಿ ಸಾಲ ನೀಡುತ್ತಾ ಬಂದಿದೆ ಎಂದರು. ಚಿನ್ನಾಭರಣಗಳ ಮೇಲೆ ಶೇ.೪ ರಿಂದ ೧೦.೫ರವರೆಗೆ ವಾರ್ಷಿಕ ಬಡ್ಡಿದರವಿದೆ ಹಾಗೂ ವಾರದ ಎಲ್ಲಾ ದಿನವೂ ಲಭ್ಯವಿರುವುದಾಗಿ ತಿಳಿಸಿದರು.
ಹುಳಿಯಾರು ಪಟ್ಟಣದಲ್ಲಿ ನಡೆಯುವ ವ್ಯವಹಾರ ಹಾಗೂ ಇಲ್ಲಿನ ಪರಿಸರ ಹಾಗೂ ಇಲ್ಲಿನ ಅಭಿವೃದ್ದಿಯನ್ನು ನೋಡಿದರೆ ಇದು ಯಾವುದೇ ತಾಲ್ಲೂಕು ಕೇಂದ್ರಕ್ಕಿಂತ ಕಡಿಮೆಯಿಲ್ಲ ಇಂತಹ ಸ್ಥಳದಲ್ಲಿ ಎಸ್.ಬಿ.ಎಂ. ಶಾಖೆ ಕಳೆದ ಕೆಲ ವರ್ಷದ ಹಿಂದೆಯೇ ಸ್ಥಾಪನೆಯಾಗಬೇಕಿತ್ತು ತಡವಾಗಿಯಾದರೂ ಇದೀಗ ಪ್ರಾರಂಭವಾಗಿದ್ದು ಇದನ್ನು ನಿಮ್ಮೂರಿನ ಬ್ಯಾಂಕ್ ಎಂದೇ ತಿಳಿದು ಶಾಖೆಯಲ್ಲಿ ವ್ಯವಹರಿಸುವಂತೆ ತಿಳಿಸಿದರು.
ಬೆಂಗಳೂರು ನೆಟ್ ವರ್ಕ್ -೧ ಜನರಲ್ ಮ್ಯಾನೇಜರ್ ನಾಗೇಶ್ವರ ರಾವ್ ಮಾತನಾಡಿ , ಈ ಶಾಖೆ ಇದೀಗ ಜನಿಸಿದ ಮಗುವಿದ್ದಂತೆ ಇದನ್ನು ಬೆಳೆಸಿ ಉಳಿಸುವುದು ಗ್ರಾಹಕರಾದ ತಮ್ಮ ಕೈಲಿದೆ ಎಂದರು. ತಮ್ಮ ಬ್ಯಾಂಕ್ ವತಿಯಿಂದ ಗ್ರಾಹಕರಿಗೆ ಪಾಸ್ ಕಾರ್ಡ್ ಸೌಲಭ್ಯ, ಎಟಿಎಂ, ನೆಟ್ ಬ್ಯಾಂಕಿಂಕ್,ಮೊಬೈಲ್ ಬ್ಯಾಂಕಿಗೆ ಸೇರಿದಂತೆ ಇನ್ನಿತರ ಹೆಚ್ಚು ಸೌಲಭ್ಯಗಳನ್ನು ನೀಡುತ್ತಿದ್ದೇವೆ. ಅದನ್ನು ಬಳಸಿಕೊಳ್ಳಿ ಹಾಗೂ ಯಾವುದೇ ರೀತಿಯ ಸಹಾಯಕ್ಕಾಗಿ ತಮ್ಮ ದೂರವಾಣಿ ಸಂಖ್ಯೆಗಳನ್ನು ಶಾಖೆಯ ಸೂಚನಫಲಕದಲ್ಲಿ ಹಾಕಲಾಗುತ್ತಿದ್ದು ಕರೆ ಮಾಡುವ ಮೂಲಕ ತಮ್ಮ ಸಮಸ್ಯೆ ತಿಳಿಸಿದಲ್ಲಿ , ಆ ಬಗ್ಗೆ ನಾವು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಗ್ರಾಹಕರ ಪರವಾಗಿ ಎಲ್.ಆರ್.ಚಂದ್ರಶೇಖರ್ ಮಾತನಾಡಿ, ಹುಳಿಯಾರು ಭಾಗದಲ್ಲಿ ಹೆಚ್ಚು ರೈತರಿದ್ದಾರೆ ಹಾಗೂ ಹೆಚ್ಚು ಮಹಿಳಾ ಸ್ವಹಾಯ ಸಂಘಗಳಿವೆ ಅವುಗಳಿಗೆ ಸಾಲ ಸೌಲಭ್ಯ ನೀಡಿ ಸಹಕರಿಸುವಂತೆ ಕೇಳಿಕೊಂಡರು.ಅಲ್ಲದೆ ಬ್ಯಾಂಕ್ ಸಿಬ್ಬಂದಿ ಗ್ರಾಹಕರೊಂದಿಗೆ ಉತ್ತಮವಾಗಿ ವರ್ತಿಸಿದಲ್ಲಿ ಮಾತ್ರವೇ ಬ್ಯಾಂಕ್ ಅಭಿವೃದ್ಧಿ ಸಾಧ್ಯ ಎಂದರು.

ಈ ವೇಳೆ ಎಪಿಎಂಸಿ ಅಧ್ಯಕ್ಷ ಸಣ್ಣಯ್ಯ, ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ,, ಸಹಾಯಕ ಪ್ರಧಾನ ವ್ಯವಸ್ಥಾಪಕ ಪಿ.ಶಂಕರ್ ರಾವ್ , ಹುಳಿಯಾರು ಶಾಖೆಯ ಮ್ಯಾನೇಜರ್ ಸಯ್ಯದ್ ಅಹಮದ್, ಕ್ಯಾಷಿಯರ್ ಮಾರುತಿ, ಹಂದನಕೆರೆ ಶಾಖೆಯ ಉಡುಪಿಕೃಷ್ಣ ಸೇರಿದಂತೆ ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.