ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಮೈಸೂರ್ ಬ್ಯಾಂಕಿನ ನೂತನ ಶಾಖೆ ಗ್ರಾಹಕರಿಗೆ ಉತ್ತಮ ಸೇವೆ ಕೊಡುವುದೇ ನಮ್ಮ ಗುರಿ :ಲಕ್ಷ್ಮೀಶ್

ಮೈಸೂರು ಅರಸರ ಕಾಲದಲ್ಲಿ ಸ್ಥಾಪನೆಯಾದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್ ಅಂದಿನಿಂದ ಇಂದಿನವರೆಗೂ ತನ್ನ ಗ್ರಾಹಕರಿಗೆ ಉತ್ತಮ ಸೇವೆ ಕೊಡುತ್ತಾ ಬಂದಿದ್ದು ಅದರಂತೆ ಹುಳಿಯಾರಿನಲ್ಲಿ ನೂತನವಾಗಿ ಪ್ರಾರಂಭವಾಗಿರುವ ನೂತನ ಶಾಖೆಯೂ ಸಹ ಗ್ರಾಹಕ ಸ್ನೇಹಿಯಾಗಿದ್ದು ಸಾರ್ವಜನಿಕರಿಗೆ ಉತ್ತಮ ಸೇವೆ ಕೊಡಲಿದೆ ಎಂದು ಜನರಲ್ ಮ್ಯಾನೇಜರ್ ಡಾ|| ಕೆ.ಲಕ್ಷ್ಮೀಶ್ ತಿಳಿಸಿದರು.
ಹುಳಿಯಾರಿನ ಮೈಸೂರ್ ಬ್ಯಾಂಕಿನ ನೂತನ ಶಾಖೆಗೆ ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ ಚಾಲನೆ ನೀಡಿದರು.

ಹುಳಿಯಾರಿನ ಮೈಸೂರ್ ಬ್ಯಾಂಕಿನ ನೂತನ ಶಾಖೆಯನ್ನು ಜನರಲ್ ಮ್ಯಾನೇಜರ್ ಡಾ|| ಕೆ.ಲಕ್ಷ್ಮೀಶ್ ಉದ್ಘಾಟಿಸಿದರು.

ಪಟ್ಟಣದ ರಾಮ್ ಗೋಪಾಲ್ ಸರ್ಕಲ್ ನಲ್ಲಿ ಶುಕ್ರವಾರ ಪ್ರಾರಂಭವಾದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್-ಹುಳಿಯಾರು ಶಾಖೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಎಸ್.ಬಿ.ಎಂ ತನ್ನ ಗ್ರಾಹಕರಿಗಾಗಿ ಅನೇಕ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಾ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಹಾಗೂ ಇನ್ನಿತರ ವ್ಯವಹಾರಗಳಿಗೆ,ಕೈಗಾರಿಕೆಗಳಿಗೆ ಇತರೆ ಬ್ಯಾಂಕ್ ಗಳು ವಿಧಿಸುವ ಬಡ್ಡಿಗಿಂತ ಕಡಿಮೆಬಡ್ಡಿ ಹಾಗೂ ಸುಲಭ ರೀತಿಯಲ್ಲಿ ಸಾಲ ನೀಡುತ್ತಾ ಬಂದಿದೆ ಎಂದರು. ಚಿನ್ನಾಭರಣಗಳ ಮೇಲೆ ಶೇ.೪ ರಿಂದ ೧೦.೫ರವರೆಗೆ ವಾರ್ಷಿಕ ಬಡ್ಡಿದರವಿದೆ ಹಾಗೂ ವಾರದ ಎಲ್ಲಾ ದಿನವೂ ಲಭ್ಯವಿರುವುದಾಗಿ ತಿಳಿಸಿದರು.
ಹುಳಿಯಾರು ಪಟ್ಟಣದಲ್ಲಿ ನಡೆಯುವ ವ್ಯವಹಾರ ಹಾಗೂ ಇಲ್ಲಿನ ಪರಿಸರ ಹಾಗೂ ಇಲ್ಲಿನ ಅಭಿವೃದ್ದಿಯನ್ನು ನೋಡಿದರೆ ಇದು ಯಾವುದೇ ತಾಲ್ಲೂಕು ಕೇಂದ್ರಕ್ಕಿಂತ ಕಡಿಮೆಯಿಲ್ಲ ಇಂತಹ ಸ್ಥಳದಲ್ಲಿ ಎಸ್.ಬಿ.ಎಂ. ಶಾಖೆ ಕಳೆದ ಕೆಲ ವರ್ಷದ ಹಿಂದೆಯೇ ಸ್ಥಾಪನೆಯಾಗಬೇಕಿತ್ತು ತಡವಾಗಿಯಾದರೂ ಇದೀಗ ಪ್ರಾರಂಭವಾಗಿದ್ದು ಇದನ್ನು ನಿಮ್ಮೂರಿನ ಬ್ಯಾಂಕ್ ಎಂದೇ ತಿಳಿದು ಶಾಖೆಯಲ್ಲಿ ವ್ಯವಹರಿಸುವಂತೆ ತಿಳಿಸಿದರು.
ಬೆಂಗಳೂರು ನೆಟ್ ವರ್ಕ್ -೧ ಜನರಲ್ ಮ್ಯಾನೇಜರ್ ನಾಗೇಶ್ವರ ರಾವ್ ಮಾತನಾಡಿ , ಈ ಶಾಖೆ ಇದೀಗ ಜನಿಸಿದ ಮಗುವಿದ್ದಂತೆ ಇದನ್ನು ಬೆಳೆಸಿ ಉಳಿಸುವುದು ಗ್ರಾಹಕರಾದ ತಮ್ಮ ಕೈಲಿದೆ ಎಂದರು. ತಮ್ಮ ಬ್ಯಾಂಕ್ ವತಿಯಿಂದ ಗ್ರಾಹಕರಿಗೆ ಪಾಸ್ ಕಾರ್ಡ್ ಸೌಲಭ್ಯ, ಎಟಿಎಂ, ನೆಟ್ ಬ್ಯಾಂಕಿಂಕ್,ಮೊಬೈಲ್ ಬ್ಯಾಂಕಿಗೆ ಸೇರಿದಂತೆ ಇನ್ನಿತರ ಹೆಚ್ಚು ಸೌಲಭ್ಯಗಳನ್ನು ನೀಡುತ್ತಿದ್ದೇವೆ. ಅದನ್ನು ಬಳಸಿಕೊಳ್ಳಿ ಹಾಗೂ ಯಾವುದೇ ರೀತಿಯ ಸಹಾಯಕ್ಕಾಗಿ ತಮ್ಮ ದೂರವಾಣಿ ಸಂಖ್ಯೆಗಳನ್ನು ಶಾಖೆಯ ಸೂಚನಫಲಕದಲ್ಲಿ ಹಾಕಲಾಗುತ್ತಿದ್ದು ಕರೆ ಮಾಡುವ ಮೂಲಕ ತಮ್ಮ ಸಮಸ್ಯೆ ತಿಳಿಸಿದಲ್ಲಿ , ಆ ಬಗ್ಗೆ ನಾವು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಗ್ರಾಹಕರ ಪರವಾಗಿ ಎಲ್.ಆರ್.ಚಂದ್ರಶೇಖರ್ ಮಾತನಾಡಿ, ಹುಳಿಯಾರು ಭಾಗದಲ್ಲಿ ಹೆಚ್ಚು ರೈತರಿದ್ದಾರೆ ಹಾಗೂ ಹೆಚ್ಚು ಮಹಿಳಾ ಸ್ವಹಾಯ ಸಂಘಗಳಿವೆ ಅವುಗಳಿಗೆ ಸಾಲ ಸೌಲಭ್ಯ ನೀಡಿ ಸಹಕರಿಸುವಂತೆ ಕೇಳಿಕೊಂಡರು.ಅಲ್ಲದೆ ಬ್ಯಾಂಕ್ ಸಿಬ್ಬಂದಿ ಗ್ರಾಹಕರೊಂದಿಗೆ ಉತ್ತಮವಾಗಿ ವರ್ತಿಸಿದಲ್ಲಿ ಮಾತ್ರವೇ ಬ್ಯಾಂಕ್ ಅಭಿವೃದ್ಧಿ ಸಾಧ್ಯ ಎಂದರು.

ಈ ವೇಳೆ ಎಪಿಎಂಸಿ ಅಧ್ಯಕ್ಷ ಸಣ್ಣಯ್ಯ, ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ,, ಸಹಾಯಕ ಪ್ರಧಾನ ವ್ಯವಸ್ಥಾಪಕ ಪಿ.ಶಂಕರ್ ರಾವ್ , ಹುಳಿಯಾರು ಶಾಖೆಯ ಮ್ಯಾನೇಜರ್ ಸಯ್ಯದ್ ಅಹಮದ್, ಕ್ಯಾಷಿಯರ್ ಮಾರುತಿ, ಹಂದನಕೆರೆ ಶಾಖೆಯ ಉಡುಪಿಕೃಷ್ಣ ಸೇರಿದಂತೆ ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...