ವಿಷಯಕ್ಕೆ ಹೋಗಿ

ಹೊಸ ವರ್ಷಕ್ಕೆ ತರಹೇವಾರಿ ಕೇಕ್ ರೆಡಿ

ಹೊಸ ವರ್ಷದ ಆಗಮನದ ಹಿನ್ನಲೆಯಲ್ಲಿ ಪಟ್ಟಣದ ವಿವಿಧ ಬೇಕರಿಗಳಲ್ಲಿ ಬಗೆಬಗೆಯ ಕೇಕ್ ಗಳ ತಯಾರಿ ಹಾಗೂ ಮಾರಾಟ ಭರದಿಂದ ಸಾಗಿದ್ದು ಗ್ರಾಹಕರ ಗಮನ ಸೆಳೆಯುತ್ತಿವೆ.
ಹುಳಿಯಾರಿನ್ ಬಸ್ ನಿಲ್ದಾಣದ ನಂಜುಂಡೇಶ್ವರ ಬೇಕರಿಯಲ್ಲಿ ಹೊಸವರ್ಷದ ಅಂಗವಾಗಿ ತಹರೇವಾರಿ ಕೇಕ್ ಗಳನ್ನು ಪ್ರದರ್ಶಿಸಿರುವುದು.
ನೂತನ ವರ್ಷದ ಸಂಭ್ರಮಾಚರಣೆಯನ್ನು ಕೇಕ್ ಕತ್ತರಿಸಿ ಸಿಹಿ ಹಂಚಿ ಆಚರಿಸುವ ಪರಿಪಾಟವಿದ್ದು ಆ ನಿಟ್ಟಿನಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಜನರನ್ನು ತೃಪ್ತಿಪಡಿಸುವಲ್ಲಿ ಪಟ್ಟಣದ ಬಸ್ ನಿಲ್ದಾಣದ ನಂಜುಂಡೇಶ್ವರ ಬೇಕರಿ, ಎಸ್.ಎಲ್.ಆರ್.ಬೇಕರಿ, ಬೆಂಗಳೂರು ಬೇಕರಿ,ಲಕ್ಷ್ಮಿಬೇಕರಿ, ವೆಂಕಟೇಶ್ವರ ಬೇಕರಿ, ಲಕ್ಷ್ಮಿನರಸಿಂಹಸ್ವಾಮಿ ಬೇಕರಿ,ಸಿದ್ದಲಿಂಗೇಶ್ವರ ಬೇಕರಿ,ಗಣೇಶ್ ಬೇಕರಿಗಳಲ್ಲಿ ಮಂಗಳವಾರದಿಂದ ವಿವಿಧ ಕೇಕ್ ಗಳ ತಯಾರಿ,ಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ.
ಕಳೆದ ಹತ್ತದೈನಿದು ವರ್ಷದಿಂದ ಬೇಕರಿ ನಡೆಸುತ್ತಿದ್ದು ಮಾಮೂಲಿ ದಿನಕ್ಕಿಂತ ಹೊಸವರ್ಷದ ಆಚರಣೆಯ ವೇಳೆ ಹೆಚ್ಚಿನ ಕೇಕ್ ಬಿಕರಿಯಾಗುತ್ತದೆ. ಅದಕ್ಕಾಗಿ ಗ್ರಾಹಕರ ಬಯಕೆಗೆ ತಕ್ಕಂತೆ ಕೇಕ್ ಗಳನ್ನು ಸಿದ್ದಪಡಿಸಿ ಮಾರುತ್ತಿದ್ದೇವೆ. ಗ್ರಾಹಕರಿಂದ ಅರ್ಡರ್ ತೆಗೆದುಕೊಂಡು ಕೆಲ ಕೇಕ್ ತಯಾರಿಸಿದರೆ , ಮತ್ತೆ ಕೆಲ ಕೇಕ್ ಗಳನ್ನು ವಿವಿಧ ಮಾದರಿಗಳಲ್ಲಿ ತಾವೇ ತಯಾರಿಸುತ್ತೇವೆ ಎನ್ನುತ್ತಾರೆ ನಂಜುಂಡೇಶ್ವರ ಬೇಕರಿಯ ರವಿ ತಿಳಿಸುತ್ತಾರೆ.
ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಕೇಕ್ ಗೆ ೧೬೦ ರಿಂದ ೨೦೦ ರೂ ಇದೆ. ಕೆಲ ಡಿಸೈನ್ ನ ಕೇಕ್ ಬೇರೇಬೇರೇ ಬೆಲೆಯಲ್ಲಿ ಮಾರಾಟವಾಗುತ್ತಿವೆ. ತಮ್ಮ ಅಂಗಡಿಯಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಅಂದರೆ ೫೦ ರೂ ನಿಂದ ೫೦೦ ರೂವರೆಗೆ ಕೇಕ್ ಗಳನ್ನು ಸಿದ್ದ ಮಾಡಿದ್ದು ಕೊಳ್ಳುವವರು ತಮಗಿಷ್ಟವಾದ ಕೇಕ್ ಕೊಂಡೊಯ್ಯಬಹುದಾಗಿದೆ. ಅಲ್ಲದೆ ಹೊಸವರ್ಷದ ಅಫರ್ ಆಗಿ ೪ ಕೆಜಿ ಮೇಲ್ಪಟ್ಟು ಕೇಕ್ ಕೊಂಡರ್ ಅದರ ಜೊತೆಯಲ್ಲಿ ಉಚಿತವಾಗಿ ತಂಪುಪಾನಿಯ ಕೊಡುತ್ತಿರುವುದಾಗಿ ಅವರು ತಿಳಿಸುತ್ತಾರೆ.


ಫೈನಾಫಲ್, ಅರೇಂಜ್, ಐಸ್ ಕ್ರೀಂ ಕೇಕ್, ಮಿಲ್ಕ್ ಲೇಟ್, ಚಾಕ್ ಲೇಟ್ ಕೇಕ್,ಅನಿಕೇಕ್ ಸೇರಿದಂತೆ ಏಳೆಂಟು ಮಾದರಿ ಕೇಕ್ ಗಳನ್ನು ಸಿದ್ದಪಡಿಸಿದ್ದು, ಹೃದಯ, ಸರ್ಕಲ್, ಗಿಟಾರ್,ಫ್ಲವರ್, ಸೇರಿದಂತೆ ವಿವಿಧ ಆಕೃತಿ ಹಾಗೂ ಬಣ್ಣದಲ್ಲಿ ಜನರು ಹೇಳುವ ಆಕೃತಿಯಲ್ಲಿ ತಾವು ಕೇಕ್ ಸಿದ್ದಪಡಿಸಿಕೊಡುತ್ತಿರುವುದಾಗಿ ತಿಳಿಸುತ್ತಾರೆ.
ಬೆಂಗಳೂರು ಬೇಕರಿಯ ಧರ್ಮರಾಜ್ ಅವರು ಕಳದ ಹತ್ತಾರು ವರ್ಷದಿಂದ ಹೊಸವರ್ಷದ ಆಚರಣೆ ಅಂಗವಾಗಿ ಆಕರ್ಷಕ ಕೇಕ್ ಗಳ ತಯಾರಿ ಮಾಡುತ್ತಿದ್ದಾರೆ. ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಉತ್ಕೃಷ್ಟ ಕೇಕ್ ತಯಾರಿಸುವ ಇವರಿಗೆ ಹೆಚ್ಚಿನ ಬೇಡಿಕೆಯಿದೆ.

ಒಟ್ಟಾರೆ ಹೊಸವರ್ಷ ಆಚರಣೆಯಲ್ಲಿ ಕೇಕ್ ವ್ಯಾಪಾರ ಭರಾಟೆಯಿಂದ ಕೂಡಿದ್ದು ಪಟ್ಟಣದ ಪ್ರತಿ ಬೇಕರಿಗಳಲ್ಲಿ ಗ್ರಾಹಕರಿಗಾಗಿ ಕೇಕ್ ಗಳು ಸಿದ್ದಗೊಂಡು ಕಾಯುತ್ತಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.