ವಿಷಯಕ್ಕೆ ಹೋಗಿ

ಖಾಯಂ ವೈದ್ಯರ ನೇಮಕಕ್ಕೆ ಒತ್ತಾಯಿಸಿ ರೈತ ಸಂಘದಿಂದ ಧರಣಿ

ಹುಳಿಯಾರು  ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರಿಲ್ಲದೆ ಸಾರ್ವಜನಿಕರು ನಿತ್ಯ ಪರಿತಪಿಸುತ್ತಿದ್ದು, ವೈದ್ಯರನ್ನು ಖಾಯಂ ಆಗಿ ನೇಮಿಸುವಂತೆ ಒತ್ತಾಯಿಸಿ ರೈತ ಸಂಘದವರು ಆಸ್ಪತ್ರೆ ಮುಂಭಾಗದಲ್ಲಿ ಬುಧವಾರದಂದು ಠಿಕಾಣಿ ಹಾಕಿ ಧರಣಿ ನಡೆಸಿದರು.
ಹುಳಿಯಾರು ಆಸ್ಪತ್ರೆ ಮುಂಭಾಗದಲ್ಲಿ ಧರಣಿ ನಿರತರಾಗಿರುವ ರೈತ ಸಂಘದವರು.
ಬುಧವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ಸುಮಾರು ೧೪ ಮಕ್ಕಳಿಗೆ ಪೆಟ್ಟಾಗಿ ಆಸ್ಪತ್ರೆಗೆ ಕರೆತಂದಾಗ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಗಾಯಾಳುಗಳು ಪರಿತಪಿಸುವಂತಾಗಿತ್ತು. ಈ ಸಮಸ್ಯೆ ಇಂದು ನೆನ್ನೆಯದಾಗಿರದೆ ಯಾವುದೇ ಅಪಘಾತಗಳು ಸಂಭವಿಸದರೂ ಸಹ ಇಲ್ಲಿ ಚಿಕಿತ್ಸೆ ನೀಡಲು ವೈದ್ಯರಾಗಲಿ, ನರ್ಸ್ ಗಳಾಗಲಿ ಇಲ್ಲದೆ , ಇಲ್ಲಿಗೆ ಬಂದ ಅನೇಕ ರೋಗಿಗಳು ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅಸುನೀಗಿದ ಘಟನೆಗಳು ನಡೆದಿವೆ. ಈ ಹಿನ್ನಲೆಯಲ್ಲಿ ಆಸ್ಪತೆಗೆ ಖಾಯಂ ವೈದ್ಯರನ್ನು ಶೀಘ್ರವೇ ನೇಮಿಸುವಂತೆ ಸರ್ಕಾವನ್ನು ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ.
ಈ ಆಸ್ಪತ್ರೆಯಲ್ಲಿ ಕಳೆದ ಕೆಲ ವರ್ಷದಿಂದ ಖಾಯಂ ವೈದ್ಯರಿಲ್ಲ ಎಂಬುದು ಇಲ್ಲಿನ ಜನಪ್ರತಿನಿಧಿಗಳಿಗೆ ಗೊತ್ತಿದ್ದರೂ ಸಹ ಅವರು ಯಾವುದೇ ಕ್ರಮಕೈಗೊಂಡಿಲ್ಲ ಹಾಗೂ ಹಾಲಿ ಜಿಲ್ಲಾ ಉಸ್ತುವಾರಿ ಸಚಿವರು ಸಹ ಈ ಕ್ಷೇತ್ರದಲ್ಲಿ ಶಾಸಕರಾಗಿದ್ದವರಾಗಿದ್ದು, ಕ್ಷೇತ್ರದಲ್ಲಿನ ಸಮಸ್ಯೆಯನ್ನು ಅರಿತವರಾಗಿದ್ದರೂ ಇದುವರೆಗೂ ಈ ಸಮಸ್ಯೆಗೆ ಸ್ಪಂದಿಸಿಲ್ಲವೆಂದು ಪ್ರತಿಭಟನಾ ನಿರತರು ದೂರಿದ್ದಾರೆ.
ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸಿ ಎಂದು ಹಲವಾರು ಬಾರಿ ಪ್ರತಿಭಟನೆ ಮಾಡಿ, ಟಿ.ಎಚ್,ಓ , ಡಿ,ಎಚ್,ಓ ಹಾಗೂ ಆರೋಗ್ಯ ಸಚಿವರಿಗೂ, ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಿದ್ದರೂ ಯಾರೊಬ್ಬರೂ ಇದುವರೆಗೂ ಖಾಯಂ ವೈದ್ಯರನ್ನು ನೇಮಿಸಿಲ್ಲ. ಇದರಿಂದ ಆಸ್ಪತ್ರೆಗೆ ನಿತ್ಯ ಬರುವ ರೋಗಿಗಳಿಗೆ ಹೆಚ್ಚಿನ ತೊಂದರೆಯಾಗಿದೆ. ಈಗ ಸದ್ಯ ಗುತ್ತಿಗೆ ಆಧಾರದ ಮೇಲೆ ವೈದ್ಯರಿದ್ದು ಅವರನ್ನು ಸಹ ಮತ್ತೊಂದು ಆಸ್ಪತ್ರೆಗೆ ಹಾಕಿದ್ದು ಎರಡು ದಿನ ಇಲ್ಲಿ ಮತ್ತೆರಡು ದಿನ ಬೇರೊಂದು ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾತ್ರಿ ವೇಳೆ ಯಾವುದಾದರೂ ಅಪಘಾತ ಸಂಭವಿಸಿ ಆಸ್ಪತ್ರೆಗೆ ಬಂದರೆ ಪ್ರಥಮ ಚಿಕಿತ್ಸೆ ನೀಡಲು ಯಾರೂ ಇಲ್ಲದೆ ನರಕಯಾತನೆ ಅನುಭವಿಸುವಂತಾಗಿದೆ.
ಬೆಳಗಿನನಿಂದ ಧರಣಿ ಕೂತು ಸಂಜೆಯಾಗುತ್ತಾ ಬಂದರೂ ಸಹ ಆರೋಗ್ಯ ಇಲಾಖೆಯ ಯಾರೊಬ್ಬ ಅಧಿಕಾರಿಯೂ ಸಹ ಬಂದು ಈ ಬಗ್ಗೆ ವಿಚಾರಿಸಿಲ್ಲ , ಟಿ.ಎಚ್.ಓ ಹಾಗೂ ಡಿ.ಎಚ್.ಓ ಅವರುಗಳು ಬಂದು ಏನೇ ಸಬೂಬು ಹೇಳಿದರು ತಾವು ಕೇಳುವುದಿಲ್ಲ, ಅವರು ಇದುವರೆಗೂ ಹೇಳಿರುವುದನ್ನು ಕೇಳಿದ್ದು ಸಾಕಾಗಿದೆ. ಆರೋಗ್ಯ ಸಚಿವರೇ ಖುದ್ದು ಇಲ್ಲಿಗೆ ಬಂದು ಖಾಯಂ ವೈದ್ಯರನ್ನು ಹಾಕುವುದಾಗಿ ಹೇಳಲಿ ಅಥವಾ ತಮ್ಮಿಂದ ಆಗುವುದಿಲ್ಲ ತಮ್ಮ ಸರ್ಕಾರ ಸತ್ತು ಹೋಗಿದೆ ಎಂದು ಹೇಳಲ್ಲಿ ಆಗ ತಮ್ಮ ಧರಣಿಯನ್ನು ಹಿಂಪಡೆಯುವುದಾಗಿ ರೈತ ಸಂಘದ ಕೆಂಕೆರೆ ಸತೀಶ್ ತಿಳಿಸಿದ್ದಾರೆ.
ಟಿ.ಎಚ್.ಒ ಭೇಟಿ: ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಟಿ.ಎಚ್.ಓ ಅವರು ಧರಣಿ ನಿರತರ ಮನವೊಲಿಸಲು ಮುಂದಾದರು. ಆದರೆ ಧರಣಿನಿರತರು ಆಸ್ಪತ್ರೆಯಲ್ಲಿನ ಸಂಪೂರ್ಣ ಸಮಸ್ಯೆಗಳನ್ನು ಅವರ ಮುಂದೆ ಬಿಚ್ಚಿಟ್ಟು ಈ ಎಲ್ಲಾ ಸಮಸ್ಯೆಗಳನ್ನು ನಿಮ್ಮಿಂದ ಪರಿಹರಿಸಲು ಸಾಧ್ಯವೇ ಎಂದು ಪಟ್ಟು ಹಿಡಿದರು.

ಒಟ್ಟಾರೆ ಪಟ್ಟಣದ ಆಸ್ಪತೆಗೆ ಖಾಯಾಂ ವೈದ್ಯರನ್ನು ನೇಮಿಸುವವರೆಗೂ ಈ ಧರಣಿ ಮುಂದುವರೆಯಲಿದ್ದು , ಅದೆಷ್ಟು ದಿನಗಳಾದರೂ ಆಗಲಿ ಎಂಬ ಬಿಗಿಪಟ್ಟು ಹಿಡಿದಿರುವ ರೈತಸಂಘದವರು ಆರೋಗ್ಯ ಸಚಿವರೇ ಸ್ಥಳಕ್ಕಾಗಮಿಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಮಲ್ಲಿಕಣ್ಣ,ಕೆ.ಪಿ.ಮಲ್ಲೇಶ್,ಪಾತ್ರೆ ಸತೀಶ್, ಹೂವಿನ ರಘು,ಇಮ್ರಾಜ್, ಶಿವಕುಮಾರ್, ಡಿ.ಕೆ.ರಮೇಶ್ ಸೇರಿ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...