ವಿಷಯಕ್ಕೆ ಹೋಗಿ

ಖಾಯಂ ವೈದ್ಯರ ನೇಮಕಕ್ಕೆ ಒತ್ತಾಯಿಸಿ ರೈತ ಸಂಘದಿಂದ ಧರಣಿ

ಹುಳಿಯಾರು  ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರಿಲ್ಲದೆ ಸಾರ್ವಜನಿಕರು ನಿತ್ಯ ಪರಿತಪಿಸುತ್ತಿದ್ದು, ವೈದ್ಯರನ್ನು ಖಾಯಂ ಆಗಿ ನೇಮಿಸುವಂತೆ ಒತ್ತಾಯಿಸಿ ರೈತ ಸಂಘದವರು ಆಸ್ಪತ್ರೆ ಮುಂಭಾಗದಲ್ಲಿ ಬುಧವಾರದಂದು ಠಿಕಾಣಿ ಹಾಕಿ ಧರಣಿ ನಡೆಸಿದರು.
ಹುಳಿಯಾರು ಆಸ್ಪತ್ರೆ ಮುಂಭಾಗದಲ್ಲಿ ಧರಣಿ ನಿರತರಾಗಿರುವ ರೈತ ಸಂಘದವರು.
ಬುಧವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ಸುಮಾರು ೧೪ ಮಕ್ಕಳಿಗೆ ಪೆಟ್ಟಾಗಿ ಆಸ್ಪತ್ರೆಗೆ ಕರೆತಂದಾಗ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಗಾಯಾಳುಗಳು ಪರಿತಪಿಸುವಂತಾಗಿತ್ತು. ಈ ಸಮಸ್ಯೆ ಇಂದು ನೆನ್ನೆಯದಾಗಿರದೆ ಯಾವುದೇ ಅಪಘಾತಗಳು ಸಂಭವಿಸದರೂ ಸಹ ಇಲ್ಲಿ ಚಿಕಿತ್ಸೆ ನೀಡಲು ವೈದ್ಯರಾಗಲಿ, ನರ್ಸ್ ಗಳಾಗಲಿ ಇಲ್ಲದೆ , ಇಲ್ಲಿಗೆ ಬಂದ ಅನೇಕ ರೋಗಿಗಳು ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅಸುನೀಗಿದ ಘಟನೆಗಳು ನಡೆದಿವೆ. ಈ ಹಿನ್ನಲೆಯಲ್ಲಿ ಆಸ್ಪತೆಗೆ ಖಾಯಂ ವೈದ್ಯರನ್ನು ಶೀಘ್ರವೇ ನೇಮಿಸುವಂತೆ ಸರ್ಕಾವನ್ನು ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ.
ಈ ಆಸ್ಪತ್ರೆಯಲ್ಲಿ ಕಳೆದ ಕೆಲ ವರ್ಷದಿಂದ ಖಾಯಂ ವೈದ್ಯರಿಲ್ಲ ಎಂಬುದು ಇಲ್ಲಿನ ಜನಪ್ರತಿನಿಧಿಗಳಿಗೆ ಗೊತ್ತಿದ್ದರೂ ಸಹ ಅವರು ಯಾವುದೇ ಕ್ರಮಕೈಗೊಂಡಿಲ್ಲ ಹಾಗೂ ಹಾಲಿ ಜಿಲ್ಲಾ ಉಸ್ತುವಾರಿ ಸಚಿವರು ಸಹ ಈ ಕ್ಷೇತ್ರದಲ್ಲಿ ಶಾಸಕರಾಗಿದ್ದವರಾಗಿದ್ದು, ಕ್ಷೇತ್ರದಲ್ಲಿನ ಸಮಸ್ಯೆಯನ್ನು ಅರಿತವರಾಗಿದ್ದರೂ ಇದುವರೆಗೂ ಈ ಸಮಸ್ಯೆಗೆ ಸ್ಪಂದಿಸಿಲ್ಲವೆಂದು ಪ್ರತಿಭಟನಾ ನಿರತರು ದೂರಿದ್ದಾರೆ.
ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸಿ ಎಂದು ಹಲವಾರು ಬಾರಿ ಪ್ರತಿಭಟನೆ ಮಾಡಿ, ಟಿ.ಎಚ್,ಓ , ಡಿ,ಎಚ್,ಓ ಹಾಗೂ ಆರೋಗ್ಯ ಸಚಿವರಿಗೂ, ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಿದ್ದರೂ ಯಾರೊಬ್ಬರೂ ಇದುವರೆಗೂ ಖಾಯಂ ವೈದ್ಯರನ್ನು ನೇಮಿಸಿಲ್ಲ. ಇದರಿಂದ ಆಸ್ಪತ್ರೆಗೆ ನಿತ್ಯ ಬರುವ ರೋಗಿಗಳಿಗೆ ಹೆಚ್ಚಿನ ತೊಂದರೆಯಾಗಿದೆ. ಈಗ ಸದ್ಯ ಗುತ್ತಿಗೆ ಆಧಾರದ ಮೇಲೆ ವೈದ್ಯರಿದ್ದು ಅವರನ್ನು ಸಹ ಮತ್ತೊಂದು ಆಸ್ಪತ್ರೆಗೆ ಹಾಕಿದ್ದು ಎರಡು ದಿನ ಇಲ್ಲಿ ಮತ್ತೆರಡು ದಿನ ಬೇರೊಂದು ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾತ್ರಿ ವೇಳೆ ಯಾವುದಾದರೂ ಅಪಘಾತ ಸಂಭವಿಸಿ ಆಸ್ಪತ್ರೆಗೆ ಬಂದರೆ ಪ್ರಥಮ ಚಿಕಿತ್ಸೆ ನೀಡಲು ಯಾರೂ ಇಲ್ಲದೆ ನರಕಯಾತನೆ ಅನುಭವಿಸುವಂತಾಗಿದೆ.
ಬೆಳಗಿನನಿಂದ ಧರಣಿ ಕೂತು ಸಂಜೆಯಾಗುತ್ತಾ ಬಂದರೂ ಸಹ ಆರೋಗ್ಯ ಇಲಾಖೆಯ ಯಾರೊಬ್ಬ ಅಧಿಕಾರಿಯೂ ಸಹ ಬಂದು ಈ ಬಗ್ಗೆ ವಿಚಾರಿಸಿಲ್ಲ , ಟಿ.ಎಚ್.ಓ ಹಾಗೂ ಡಿ.ಎಚ್.ಓ ಅವರುಗಳು ಬಂದು ಏನೇ ಸಬೂಬು ಹೇಳಿದರು ತಾವು ಕೇಳುವುದಿಲ್ಲ, ಅವರು ಇದುವರೆಗೂ ಹೇಳಿರುವುದನ್ನು ಕೇಳಿದ್ದು ಸಾಕಾಗಿದೆ. ಆರೋಗ್ಯ ಸಚಿವರೇ ಖುದ್ದು ಇಲ್ಲಿಗೆ ಬಂದು ಖಾಯಂ ವೈದ್ಯರನ್ನು ಹಾಕುವುದಾಗಿ ಹೇಳಲಿ ಅಥವಾ ತಮ್ಮಿಂದ ಆಗುವುದಿಲ್ಲ ತಮ್ಮ ಸರ್ಕಾರ ಸತ್ತು ಹೋಗಿದೆ ಎಂದು ಹೇಳಲ್ಲಿ ಆಗ ತಮ್ಮ ಧರಣಿಯನ್ನು ಹಿಂಪಡೆಯುವುದಾಗಿ ರೈತ ಸಂಘದ ಕೆಂಕೆರೆ ಸತೀಶ್ ತಿಳಿಸಿದ್ದಾರೆ.
ಟಿ.ಎಚ್.ಒ ಭೇಟಿ: ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಟಿ.ಎಚ್.ಓ ಅವರು ಧರಣಿ ನಿರತರ ಮನವೊಲಿಸಲು ಮುಂದಾದರು. ಆದರೆ ಧರಣಿನಿರತರು ಆಸ್ಪತ್ರೆಯಲ್ಲಿನ ಸಂಪೂರ್ಣ ಸಮಸ್ಯೆಗಳನ್ನು ಅವರ ಮುಂದೆ ಬಿಚ್ಚಿಟ್ಟು ಈ ಎಲ್ಲಾ ಸಮಸ್ಯೆಗಳನ್ನು ನಿಮ್ಮಿಂದ ಪರಿಹರಿಸಲು ಸಾಧ್ಯವೇ ಎಂದು ಪಟ್ಟು ಹಿಡಿದರು.

ಒಟ್ಟಾರೆ ಪಟ್ಟಣದ ಆಸ್ಪತೆಗೆ ಖಾಯಾಂ ವೈದ್ಯರನ್ನು ನೇಮಿಸುವವರೆಗೂ ಈ ಧರಣಿ ಮುಂದುವರೆಯಲಿದ್ದು , ಅದೆಷ್ಟು ದಿನಗಳಾದರೂ ಆಗಲಿ ಎಂಬ ಬಿಗಿಪಟ್ಟು ಹಿಡಿದಿರುವ ರೈತಸಂಘದವರು ಆರೋಗ್ಯ ಸಚಿವರೇ ಸ್ಥಳಕ್ಕಾಗಮಿಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಮಲ್ಲಿಕಣ್ಣ,ಕೆ.ಪಿ.ಮಲ್ಲೇಶ್,ಪಾತ್ರೆ ಸತೀಶ್, ಹೂವಿನ ರಘು,ಇಮ್ರಾಜ್, ಶಿವಕುಮಾರ್, ಡಿ.ಕೆ.ರಮೇಶ್ ಸೇರಿ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...