ವಿಷಯಕ್ಕೆ ಹೋಗಿ

ಹುಳಿಯಾರು:ಕಂದಾಯ ಇಲಾಖೆಯಿಂದ ಸರ್ವೆ : ೨೪ ಗಂಟೆಯೊಳಗಾಗಿ ಅಂಗಡಿ ತೆಗೆಯುವಂತೆ ನೋಟಿಸ್

ಹುಳಿಯಾರು ಪಟ್ಟಣದ ಬಸ್ ನಿಲ್ದಾಣದ ಕೆರೆ ಅಂಗಳದಲ್ಲಿರುವ ಒತ್ತುವರಿ ಜಾಗದಲ್ಲಿರುವ ಅಂಗಡಿಗಳ ಸರ್ವೆ ಕಾರ್ಯ ಮಂಗಳವಾರ ಉಪತಹಸೀಲ್ದಾರ್ ಸತ್ಯನಾರಾಯಣ್ ಹಾಗೂ ಆರ್.ಐ ಹನುಮಂತನಾಯ್ಕ್ ಅವರ ಸಮಕ್ಷಮದಲ್ಲಿ ನಡೆಯಿತು. ಒತ್ತುವರಿ ಮಾಡಿಕೊಂಡವರಿಗೆ ತಹಸೀಲ್ದಾರ್ ಅವರ ಆದೇಶದಂತೆ ಇಪ್ಪತ್ನಾಲ್ಕು ಘಂಟೆಯೊಳಗೆ ಅಂದರೆ ಬುಧವಾರ ಮಧ್ಯಾಹ್ನದೊಳಗಾಗಿ ತಮ್ಮ ಅಂಗಡಿಗಳನ್ನು ತೆಗೆಯುವಂತೆ ನೋಟಿಸ್ ಜಾರಿ ಮಾಡಲಾಯಿತು.
ಸಚಿವರು ಸಣ್ಣ ನಿರಾವರಿ ಇಲಾಖೆಗೆ ನೀಡಿರುವ ಟಿಪ್ಪಣಿ ಪತ್ರ.

ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿರುವ ನೋಟಿಸ್ ಪತ್ರ.

ತುಂಬಾ ಕುತೂಹಲ ಮೂಡಿಸಿದ್ದ ಸರ್ವೆ ಕಾರ್ಯ ಬೆಳಿಗ್ಗೆ ೧೦ ರಿಂದ ಪ್ರಾರಂಭವಾಗಿ ಮಧ್ಯಾಹ್ನದವರೆಗೂ ನಡೆಯಿತು. ಪಟ್ಟಣದ ಯೂಸೂಪ್ ಖಾನ್ ಪೆಟ್ರೋಲ್ ಬಂಕ್ ಹಾಗೂ ಒಣಕಾಲುವೆ ಕಡೆಯಿಂದ ಆಳತೆ ಪ್ರಾರಂಭಿಸಿ ಬಸ್ ನಿಲ್ದಾಣದ ಮೂಲಕ ಕೆರೆ ಏರಿಯ ತೂಬಿನವರೆಗೆ ಆಳತೆ ನಡೆಸಿ ಕೆರೆಯ ಗಡಿ ಗುರ್ತಿಸಲಾಯಿತು. ಅಲ್ಲದೆ ಶಂಕರಪುರ ಬಡಾವಣೆ ಭಾಗದಲ್ಲಿನ ಕೆರೆ ಅಂಗಳವನ್ನು ಸಹ ಸರ್ವೆ ಮಾಡಿ ಗಡಿ ಗುರ್ತಿಸಲಾಯಿತು. ಹುಳಿಯಾರು ಕೆರೆಯು ಸದ್ಯದ ಸರ್ವೆಯಂತೆ ಸರಿಸುಮಾರು ೩೮ ರಿಂದ ೪೦ ಎಕರೆಯಷ್ಟು ಒತ್ತುವರಿಯಾಗಿದ್ದು ಕೋಟ್ಯಾಂತರ ರೂಪಾಯಿ ಬೆಲೆ ಬಾಳಲಿದೆ ಎನ್ನಲಾಗಿದೆ.ಸಂಪೂರ್ಣ ಸರ್ವೆ ಹಾಗೂ ತೆರವು ಮುಗಿದ ಬಳಿಕವಷ್ಟೆ ನಿಖರ ಮಾಹಿತಿ ದೊರೆಯಲಿದೆ ಎಂದು ಸರ್ವೆಯರ್ ಬಸವರಾಜ್ ತಿಳಿಸಿದರು.
ಸಚಿವರ ಪತ್ರ: ಕೆರೆಅಂಗಳದ ಅಂಗಡಿಯವರು ಅಂಗಡಿ ತೆರವಿನ ವಿಚಾರವಾಗಿ ಕಾನೂನು ಸಚಿವರನ್ನು ಭೇಟಿ ಮಾಡಿ ಕಾಲಾವಕಾಶ ಕೋರಿದ್ದು, ಈ ಬಗ್ಗೆ ಸಚಿವರು ಸಣ್ಣ ನೀರಾವರಿ ಅಧಿಕಾರಿಯವರಿಗೆ ತೆರವಿನ ಬಗ್ಗೆ ತಮ್ಮೊಂದಿಗೆ ಚರ್ಚಿಸಿ ನಂತರವಷ್ಟೆ ಮುಂದುವರೆಯಿರಿ ಎಂದು ಸೂಚಿಸಿ ಪತ್ರ ನೀಡಿದ್ದು ಸದ್ಯ ಅಂಗಡಿದಾರರಿಗೆ ನೀರಾಳವಾಯಿತೆನ್ನುವಷ್ಟರಲ್ಲಿ ಕಂದಾಯ ಇಲಾಖೆಯಿಂದ ನೋಟೀಸ್ ನೀಡಿರುವುದು ಗೊಂದಲಕ್ಕೆಡೆ ಮಾಡಿದೆ.
ನೋಟಿಸ್ ವಿತರಣೆ: ಸರ್ವೆ ಮುಗಿದ ಬಳಿಕ ತಹಸೀಲ್ದಾರ್ ಅವರ ಆದೇಶದಂತೆ ೨೪ ಗಂಟೆಯೊಳಗಾಗಿ ಅಂಗಡಿಗಗಳನ್ನು ತೆರವುಗೊಳಿಸುವಂತೆ ತಿಳುವಳಿಕೆ ನೋಟಿಸ್ ನೀಡಲಾಗಿದೆ. ಕಾನೂನು ಸಚಿವರು ನೀಡಿರುವ ಪತ್ರವನ್ನು ತಹಸೀಲ್ದಾರಿಗೆ ನೀಡಲಾಗಿದ್ದರೂ ಸಹ ನೋಟೀಸ್ ನೀಡಿರುವುದು ಸರಿಯಲ್ಲ ಎಂದು ಕೆಲವರು ವಾದಿಸಿದರೆ ಮತ್ತೆ ಕೆಲವರು ೨೪ಗಂಟೆ ಒಳಗಾಗಿ ತೆರವು ಮಾಡಿ ಎಂದರೆ ನಾವು ಎಲ್ಲಿಗೆ ಹೋಗೋದು ಮೂರ್ನಾಲ್ಕು ದಿನಗಳ ಕಾಲಾವಾಶ ಕೊಟ್ಟರೆ ಅಂಗಡಿಗಳನ್ನು ತೆಗೆಯುತ್ತೇವೆ ಎಂದಿದ್ದಾರೆ. ಮತ್ತೆ ಕೆಲ ಅಂಗಡಿಯವರು ಕೆರೆಅಂಗಳದಲ್ಲಿರುವ ಮನೆಗಳನ್ನು ಸಹ ತೆರವು ಮಾಡಿಸಿದಲ್ಲಿ ಮಾತ್ರವೇ ಅಂಗಡಿ ತೆಗೆಯಲು ಮುಂದಾಗಿ ಎಂದು ತಗಾದೆ ತೆಗೆದಿದ್ದಾರೆ.
ಒಟ್ಟಾರೆ ನೋಟೀಸ್ ಪಡೆದವರೆಲ್ಲಾ ಪ್ರಮುಖರ ಮೂಲಕ ತಹಸೀಲ್ದಾರ್ ಅವರಿಗೆ ಒತ್ತಡ ತಂದು ಕಾಲಾವಕಾಶ ಕೋರಿದ್ದಲ್ಲದೆ ಮನವಿ ಸಹ ಸಲ್ಲಿಸಿದ್ದಾರೆ. ತಹಸೀಲ್ದಾರ್ ಅವರು ಮಾತ್ರ ಮೇಲಾಧಿಕಾರಿಗಳ ಆದೇಶದಂತೆ ತಾವು ಕಾರ್ಯಪ್ರವೃತ್ತರಾಗಿದ್ದು, ನಿಗಧಿತ ಅವಧಿಯೊಳಗೆ ತೆರವು ಮಾಡಲೇ ಬೇಕಾದ ಪರಿಸ್ಥಿತಿ ಇದೆ ಎಂದು ಪ್ರತಿಕ್ರಿಯಿಸಿದ್ದಾರೆ.ಒಟ್ಟಾರೆ ತೆರವು ಕಾರ್ಯಾಚರಣೆ ನಡೆಯುತ್ತದೆಯೀ ಇಲ್ಲವೋ ಎಂಬ ಆತಂಕ ಎಲ್ಲರಲ್ಲೂ ಮನೆ ಮಾಡಿದೆ.

ಸರ್ವೆ ವೇಳೆಯಲ್ಲಿ ಕಂದಾಯ ಇಲಾಖೆಯ ಗ್ರಾಮಲೆಖ್ಖಿಗರಾದ ಶ್ರೀನಿವಾಸ್, ಸುಬ್ಬರಾಯಪ್ಪ,ನೀಲಕಂಠಯ್ಯ,ಸುರೇಶ್,ಮಂಜುನಾಥ್ ಸಿಬ್ಬಂದಿವರ್ಗದ ರಘುನಂದನ್,ಮೂರ್ತಿ,ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...