ವಿಷಯಕ್ಕೆ ಹೋಗಿ

ಧರ್ಮಸ್ಥಳದ ಸ್ವಸಹಾಯ ಸಂಘಗಳಿಂದ ಸಮಾಜದ ಒಗ್ಗೂಡಿಕೆಯಾಗುತ್ತಿದೆ : ಯತೀಶ್ವರ ಸ್ವಾಮೀಜಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಡ್ಧಿಯೋಜನೆಯು ಯಾವುದೇ ಜಾತಿ,ಮತ ಬೇಧವಿಲ್ಲದೆ ಸಮಾಜದ ಎಲ್ಲರೂ ಸಮಾನರೆಂದು ಭಾವಿಸಿ ಸಂಘಗಳನ್ನು ಸ್ಥಾಪಿಸುತ್ತಾ ಎಲ್ಲಾ ಜನಾಂಗದವರನ್ನು ಒಂದೆಡೆ ಕ್ರೋಡೀಕರಿಸಿ ಸಮಾಜದ ಒಗ್ಗೂಡಿಕೆಯ ಕಾರ್ಯ ಮಾಡುವಲ್ಲಿ ಮುಂದಾಗಿದೆ ಎಂದು ಕುಪ್ಪೂರು ಗದ್ದಿಗೆಮಠದ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಅಭಿಮತವ್ಯಕ್ತಪಡಿಸಿದರು.
ಹುಳಿಯಾರಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಡ್ಧಿಯೋಜನೆಯಡಿ ನಡೆದ ಸಾಧನ ಸಮಾವೇಶವನ್ನು ಕುಪ್ಪೂರು ಗದ್ದಿಗೆಮಠದ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಜಿ ಉದ್ಘಾಟಿಸಿದರು.


ಹುಳಿಯಾರಿನ ಎಂಪಿಎಸ್ ಶಾಲಾವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಡ್ಧಿಯೋಜನೆಯಡಿ ಭಾನುವಾರ ನಡೆದ ಹುಳಿಯಾರು ವಲಯದಲ್ಲಿ ನೂತನ ೫೧ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಉದ್ಘಾಟನೆ ಹಾಗೂ ಸಾಧನ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹುಳಿಯಾರಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಡ್ಧಿಯೋಜನೆಯಡಿ ನಡೆದ ಸಾಧನ ಸಮಾವೇಶವದಲ್ಲಿ ಭಾಗವಹಿಸಿದ್ದ ಪ್ರಗತಿಬಂಧು ಸ್ವಸಹಾಯಸಂಘದ ಅಪಾರ ಸಂಖ್ಯೆಯ ಮಹಿಳೆಯರು.
ಶ್ರೀಕ್ಷೇತ್ರದ ಡಾ.ವೀರೇಂದ್ರ ಹೆಗ್ಗಡೆಯವರ ಈ ವಿನೂತ ಯೋಜನೆ ಅನೇಕ ಬಡವರಿಗೆ ದಾರಿದೀಪವಾಗಿದ್ದು , ಸಮಾಜದಲ್ಲಿ ಹಿಂದುಳಿದವರ ಅಭಿವೃಧ್ದಿಗೆ ಸಹಕಾರಿಗಾಗಿದೆ ಎಂದರು. ಈ ಯೋಜನೆಯಡಿ ಕೇವಲ ಸಾಲ ಕೊಟ್ಟು ವಸೂಲಿ ಮಾಡುವುದರ ಜೊತೆಗೆ ಜನರ ಶ್ರಯೋಭಿವೃದ್ಧಿಯಿಂದ ಅನೇಕ ಗುಡಿಕೈಗಾರಿಕೆಗಳಿಗೆ ಪ್ರೋತ್ಸಾಹ, ಮದ್ಯವರ್ಜನ ಶಿಬಿರಗಳು,ಮಹಿಳೆಯರ ಸಮಾವೇಶ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜದ ಜನರಲ್ಲಿ ಭಾವನಾತ್ಮಕ ಮನೋಭಾವವನ್ನು ಬೆಳೆಸುತ್ತಿದ್ದಾರೆ ಎಂದು ತಿಳಿಸಿದರು.
ಧರ್ಮಸ್ಥಳ ಸಂಘದ ತಾಲ್ಲೂಕು ಯೋಜನಾಧಿಕಾರಿ ರೋಹಿತಾಕ್ಷ ಮಾತನಾಡಿ, ಧರ್ಮಸ್ಥಳ ಸಂಘ ಕೋಟ್ಯಾಂತರ ರೂಪಾಯಿ ಸಾಲಸೌಲಭ್ಯ ನೀಡುತ್ತಾ ಜನಸಮುದಾಯದ ಆರ್ಥಿಕ ಪ್ರಗತಿಗೆ ನೆರವಾಗುತ್ತಿದೆ ಇದರ ಪ್ರೇರಣಶಕ್ತಿಯಾಗಿ ವೀರೇಂದ್ರ ಹೆಗ್ಗಡೆಯವರಿದ್ದಾರೆ ಎಂದರು. ಪ್ರತಿ ಗ್ರಾಮದಲ್ಲೂ ಸಹ ಹೆಚ್ಚು ಜನ ತಮ್ಮ ಸಂಘ ಸೇರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ ಅಧ್ಯಕ್ಷತೆವಹಿಸಿದ್ದು, ಬ್ರಹ್ಮಕುಮಾರಿ ಈಶ್ವರಿವಿದ್ಯಾಲಯದ ಗೀತಕ್ಕ,ರೋಟರಿ ಸಂಸ್ಥೆಯ ರವೀಶ್,ಮುಖ್ಯಶಿಕ್ಷಕ ನಂದವಾಡಗಿ, ತಾ.ಪಂ.ಸದಸ್ಯೆ ಬೀಬೀಫಾತೀಮಾ,ಮುಖಂಡರಾದ ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ಸಂಘಾದ ಮೇಲ್ವಿಚಾರಕ ಕಮಲಾಕರ್, ಕೆಂಕೆರೆ ಒಕ್ಕೂಟದ ಅಧ್ಯಕ್ಷ ದೊರೆಚನ್ನಬಸವಯ್ಯ,,ಗಿರಿಜಮ್ಮ,ಮಂಜುನಾಥ್ ಸೇರಿದಂತೆ ಸ್ವಸಹಾಯ ಸಂಘಗಳ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಸಮಾವೇಶಕ್ಕೆ ಆಗಮಿಸಿದ್ದವರಿಗೆ ಅಂಜನಾದ್ರಿ ಟ್ರೇಡರ್ಸ್ ನವರು ಮಜ್ಜಿಗೆ ವಿತರಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...