ವಿಷಯಕ್ಕೆ ಹೋಗಿ

ನೂನತ ಎಸ್.ಬಿ.ಎಂ ನಲ್ಲಿ ಖಾತೆ ತೆರೆಯಲು ಅರ್ಜಿಯೇ ಇಲ್ಲ

ಹುಳಿಯಾರು ಪಟ್ಟಣದ ರಾಂಗೋಪಾಲ್ ಸರ್ಕಲ್ ನಲ್ಲಿ ಕಳೆದ ಶುಕ್ರವಾರಷ್ಟೇ ಪ್ರಾರಂಭವಾದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯಲ್ಲಿ ಗ್ರಾಹಕರು ಖಾತೆ ತೆರೆಯಲು ಅರ್ಜಿ ದೊರೆಯದೆ ವಾಪಸ್ಸಾಗುವಂತಾಗಿದೆ.
ಹುಳಿಯಾರಿನಲ್ಲಿರುವ ನೂತನ ಎಸ್.ಬಿ.ಎಂ ಶಾಖೆ .
ನೂತನ ಬ್ಯಾಂಕ್ ಪ್ರಾರಂಭವಾದ ಮೊದಲ ದಿನವೇ ತಂದಿದ್ದ ಅರ್ಜಿಯಲ್ಲಾ ಖಾಲಿಯಾದ್ದರಿಂದ ಗ್ರಾಹಕರು ಅರ್ಜಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಪಟ್ಟಣದಲ್ಲಿ ಈಗಾಗಲೇ ಮೂರ್ನಾಲ್ಕು ಬ್ಯಾಂಕ್ ಗಳಿದ್ದರೂ ಸಹ ಅಲ್ಲಿನ ಅನೇಕ ಸಮಸ್ಯೆಗಳಿಂದಾಗಿ ಗ್ರಾಹಕರು ನೂತನ ಬ್ಯಾಂಕಿನತ್ತ ಮುಖಮಾಡಿದ್ದರು. ಜನಧನ್ ಖಾತೆ ಸೇರಿದಂತೆ ಹತ್ತು ಹಲವಾರು ಸೌಲಭ್ಯವನ್ನು ಪಡೆಯಲು ಮೈಸೂರು ಬ್ಯಾಂಕ್ ಸೂಕ್ತವೆಂದು ಪಟ್ಟಣ ಸೇರಿದಂತೆ ಸುತ್ತಮುತ್ತಲ ಹಳ್ಳಿಯವರು ಬಂದಿದ್ದು ಉದ್ಘಾಟನೆ ಕ್ಷಣವೇ ಅರ್ಜಿಗೆ ನೂಕು ನುಗ್ಗಲು ಉಂಟಾಗಿ ಅಂದೇ ಅರ್ಜಿ ದೊರೆಯದಂತಾಯಿತು.
ಅಲ್ಲದೆ ಈ ಶಾಖೆಯಲ್ಲಿ ಈಗ ಸದ್ಯ ಮ್ಯಾನೇಜರ್ ಸೇರಿದಂತೆ ಒಟ್ಟು ಮೂರು ಜನ ಮಾತ್ರ ಸಿಬ್ಬಂದಿಯಿದ್ದು ವಹಿವಾಟು ನಡೆಸಲು ಬರುವರಿಗೆ ತೊಂದರೆಯಾಗುತ್ತದೆ ಎಂಬ ಮಾತು ಪಟ್ಟಣದ ಗ್ರಾಹಕರಲ್ಲಿ ಕೇಳಿಬರುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಶಾಖೆಯ ವ್ಯವಸ್ಥಾಪಕ ಸಯ್ಯದ್ ಅಹಮದ್ ಶಾಖೆಯ ಪ್ರಾರಂಭದದಿನ ಸಾಕಷ್ಟು ಪಾರಂಗಳನ್ನು ನೀಡಿದ್ದೇವೆ, ಅದರಲ್ಲಿ ಕೆಲವರು ಮಾತ್ರವೇ ಖಾತೆ ತೆರೆದಿದ್ದು, ಇನ್ನುಳಿದವರು ಮತ್ತೆ ಬಂದಿಲ್ಲ. ಈಗ ಹೊಸಬರರು ಬಂದು ಕೇಳಿದಾಗ ಕೊಡಲು ತಮ್ಮಲ್ಲಿ ಫಾರಂ ಇಲ್ಲ. ನಮ್ಮ ಮೇಲಾಧಿಕಾರಿಗಳಿಗೆ ಅಕೌಂಟ್ ಓಪನಿಂಗ್ ಫಾರಂ ಕಳುಹಿಸುವಂತೆ ಈಗಾಗಲೇ ತಿಳಿಸಿದ್ದು ಅಲ್ಲೂ ಫಾರಂ ಇಲ್ಲದ ಕಾರಣ ತೊಂದರೆ ಉಂಟಾಗಿದೆ ಅಲ್ಲದೆ ಇಲ್ಲಿನ ಗ್ರಾಹಕರಿಗೆ ಸ್ಪಂದಿಸಲು ಇನ್ನೂ ಹೆಚ್ಚಿನ ಹೆಚ್ಚಿನ ಸಿಬ್ಬಂದಿ ಅವಶ್ಯಕತೆಯಿದೆ ಎನ್ನುತ್ತಾರೆ.

ಒಟ್ಟಾರೆ ನೂತನ ಬ್ಯಾಂಕಿನಲ್ಲಿ ಸುಲಭವಾಗಿ ಖಾತೆ ತೆರೆಯಬಹುದೆಂದು ಶಾಖೆಗೆ ಆಗಮಿಸಿದ ಗ್ರಾಹಕರು ಖಾತೆತೆರೆಯಲು ಬೇಕಾದ ಅಕೌಂಟ್ ಫಾರಂ ಸಿಗದೆ ಹಿಂತಿರುಗುವಂತಾಗಿದೆ. ತಲೆನೋವಿಲ್ಲದೆ ಖಾತೆ ತೆರೆಬಹುದೆಂದು ಹೋಗುತ್ತಿದ್ದ ಗ್ರಾಹಕರಿಗೆ ಫಾರಂ ಸಿಗದಿರುವುದೆ ತಲೆನೋವಾಗಿದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...