ವಿಷಯಕ್ಕೆ ಹೋಗಿ

ಅನಧಿಕೃತ ಅಂಗಡಿ ತೆರವು ಮುಂದುವರಿದ ಗೊಂದಲ : ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಮುಂದಾಗಿರುವ ಕೆಲ ಅಂಗಡಿದಾರರು

ಹುಳಿಯಾರು  ಪಟ್ಟಣದ ಬಸ್ ನಿಲ್ದಾಣದ ಕೆರೆಜಾಗ ಒತ್ತುವರಿ ಮಾಡಿ ಕಳೆದ ಎರಡು ದಶಕಗಳಿಂದ ಅನಧಿಕೃತವಾಗಿ ಕಟ್ಟಿಕೊಂಡಿದ್ದ ಅಂಗಡಿಮುಂಗಟ್ಟು ತೆರವಿಗೆ ಬುಧವಾರದವರೆಗೆ ನೀಡಿದ್ದ ಅಂತಿಮ ಗಡುವು ಮುಗಿದಿದ್ದು, ಗಡುವಿನ ಸಮಯದೊಳಗೆ ಕೆಲವರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ತೆರವು ಮಾಡಿಕೊಳ್ಳಲು ಮುಂದಾದರೆ ಮತ್ತೆ ಕೆಲವರು ಸಂಸದರ ಮೂಲಕ ಜಿಲ್ಲಾಧಿಕಾರಿಗಳಿಗೆ ಒತ್ತಡ ತಂದು ಆರು ತಿಂಗಳ ಕಾಲಾವಧಿ ಕೋರಿರುವುದು ಗುರುವಾರ ಕಾರ್ಯಾಚರಣೆ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಕ್ಕೆ ಆಸ್ಪದವಾಗಿದೆ.
ಹುಳಿಯಾರು ಬಸ್ ನಿಲ್ದಾಣದ ಕೆಲ ಅಂಗಡಿದಾರರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ತೆರವು ಮಾಡುತ್ತಿರುವುದು.
ಅಂಗಡಿ ತೆರವು ರಾಜಕೀಯಗೊಂಡು ಅಧಿಕಾರಿಗಳಿಗೆ ಜಟಿಲ ಸಮಸ್ಯೆಯಾಗಿ ಪರಿಗಣಿಸಿತ್ತು. ತೆರವಿಗೆ ಅನೇಕರ ಆಕ್ಷೇಪ ಸಹ ಕೇಳಿಬಂದಿತ್ತು. ಕಾರ್ಯಾಚರಣೆ ಬಗ್ಗೆ ಕಳೆದೆರಡು ತಿಂಗಳಿಂದ ಚರ್ಚೆ ನಡೆಯುತ್ತಲೇ ಇದ್ದು ಇದರ ತೆರವಿಗೆ ಖುದ್ದು ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳೇ ಬಂದು ನಿಲ್ಲಬೇಕು ಎಂಬ ಮಾತು ಸಹ ಕೇಳಿಬಂದಿದ್ದು ಕಾರ್ಯಾಚರಣೆ ಮುಂದೂಡುತ್ತಲೇ ಬರುತ್ತಿತ್ತು. ಇದೀಗ ಸುಪ್ರಿಂ ಕೋರ್ಟ್ ಆದೇಶ ಅಧಿಕಾರಿಗಳಿಗೆ ಆಸ್ತ್ರವಾಗಿ ಬಂದಿದ್ದು ಡಿಸೆಂಬರ್ ೨೪ಕ್ಕೆ ಗಡುವು ವಿಧಿಸಿ ಅಂಗಡಿದಾರರಿಗೆ ೨೪ ಗಂಟೆಯೊಳಗಾಗಿ ಅಂಗಡಿ ತೆರವು ಮಾಡುವಂತೆ,ಇಲ್ಲವಾದರೆ ತಾವೇ ತೆರವುಗೊಳಿಸುವುದಾಗಿ ತಿಳುವಳಿಕೆ ನೋಟೀಸ್ ನೀಡಲಾಗಿತ್ತು.
ತಲ್ಲಣ: ಬಸ್ ನಿಲ್ದಾಣದಲ್ಲಿ ಸುಮಾರು ನೂರಕ್ಕೂ ಮೀರಿ ಅಂಗಡಿಗಳಿದ್ದು ಸದ್ಯ ತೆರವಿನ ಬಗ್ಗೆ ಪಟ್ಟಣದಲ್ಲೆಡೆ ಚರ್ಚೆಯ ವಿಷಯವಾಗಿದೆ. ಅಂಗಡಿ ತೆರವು ಗೊಳಿಸಿದಲ್ಲಿ ಕುಟುಂಬದ ಭವಿಷ್ಯದ ಚಿಂತೆ ಏನೆಂದು ವ್ಯಾಪಾರಸ್ಥರನ್ನು ಹೈರಾಣಾಗಿ ಮಾಡಿದ್ದು, ಅಂಗಡಿಯ ವಸ್ತುಗಳನ್ನೇನು ಮಾಡುವುದೆಂಬ ಚಿಂತೆ ಸಹ ಕಾಡುತ್ತಿದೆ. ಈ ಬಗ್ಗೆ ಕೊನೆಯ ಅಸ್ತ್ರವಾಗಿ ರಾಜಕೀಯ ಒತ್ತಡ ತಂದು ಗಡುವು ವಿಸ್ತರಿಸುವುದಾಗಿ ಕೆಲವರು ಮುಂದಾದರೂ ಸಹ ಮತ್ತೆ ಕೆಲವರು ಇದರ ಉಸಾಬರಿಯೇ ಬೇಡವೆಂದು ಕೆಲವರು ರಾತ್ರೋರಾತ್ರಿ ಅಂಗಡಿ ಸಾಮಾನುಗಳನ್ನು , ಹೆಂಚು,ಶೀಟು ತೆಗೆಯಲು ಮುಂದಾಗಿದ್ದು ತೆರವು ಸನ್ನಿಹಿತ ಎಂಬ ವಾತಾವರಣ ಸೃಷ್ಠಿ ಮಾಡಿದೆ. ಈಗಾಗಲೇ ಬೇಕರಿ,ಗೊಬ್ಬರದ ಅಂಗಡಿ, ಬಾಳೆಕಾಯಿ ಮಂಡಿ ಸೇರಿದಂತೆ ದೊಡ್ಡ ಅಂಗಡಿಗಳೆಲ್ಲಾ ಖಾಲಿ ಮಾಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಳ್ಳುವತ್ತ ಚಿತ್ತಹರಿಸಿದ್ದು, ಸಣ್ಣಪುಟ್ಟ ಅಂಗಡಿಯವರು ಮಾತ್ರ ಅದೇ ಸ್ಥಳದಲ್ಲಿ ತಮ್ಮ ವ್ಯಾಪಾರ ಮುಂದುವರಿಸಿದ್ದಾರೆ.
ಗಾಳಿಸುದ್ದಿ : ತೆರವಿನ ಬಗ್ಗೆ ಗಂಟೆಗೊಂದು ಗಾಳಿಸುದ್ದಿ ಹಬ್ಬುತ್ತಿದ್ದು ಕೆಲವರು ಆರು ತಿಂಗಳ ಕಾಲಾವಾಕಾಶ ನೀಡಿದ್ದಾರೆಂದರೆ, ಮತ್ತೆ ಕೆಲವರು ಜನವರಿ ೩೦ರ ವರೆಗೆ ಅಂಗಡಿ ತೆರವು ಗೊಳಿಸದಂತೆ ಜಿಲ್ಲಾಧಿಕಾರಿಗಳು ಕಾಲಾವಾಕಾಶ ವಿಧಿಸಿದ್ದಾರೆಂದು ಪುಕಾರು ಹಬ್ಬಿಸುತ್ತಿದ್ದು ಗೊಂದಲಕ್ಕೆ ಕಾರಣವಾಗಿದೆ.
ಏನೇ ಆದರೂ ಸಹ ಗೂಡಂಗಡಿಗಳು ಹುಳಿಯಾರಿನ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದ್ದು ಅಂಗಡಿಗಳಿಲ್ಲವಾದಲ್ಲಿ ಪಟ್ಟಣಕ್ಕೆ ಬರುವವರ ಸಂಖ್ಯೆ ಸಹ ಇಳಿಮುಖವಾಗಲಿದೆ. ಕೇವಲ ತೆರವಿನ ಬಗ್ಗೆ ಮಾತ್ರ ಯೋಚಿಸುವ ಅಧಿಕಾರಿಗಳು ಇವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ವ್ಯಾಪಾರಸ್ಥರಿಗಾಗಿಯೇ ಮಾರುಕಟ್ಟೆಯಲ್ಲಿ ನಿರ್ಧಿಷ್ಟ ಜಾಗ ಒದಗಿಸಿದಲ್ಲಿ ವ್ಯಾಪಾರ ವಹಿವಾಟಿಗೂ ಅನುಕೂಲವಾಗುತ್ತಿದ್ದಲ್ಲದೆ ಇವರ ಜೀವನಕ್ಕೂ ದಾರಿಯಾಗುತ್ತಿತ್ತು. ಮಂತ್ರಿಮಹೋದಯರು,ಸಂಸದರು ಈ ನಿಟ್ಟಿನಲ್ಲಿ ಆಲೋಚಿಸಿ ಪಟ್ಟಣದಲ್ಲಿ ಸೂಕ್ತ ಜಾಗವೊಂದನ್ನು ಗುರ್ತಿಸಿ ಅನುಕೂಲಕಲ್ಪಿಸಿ ಕೊಡುವ ಇಚ್ಚಾಶಕ್ತಿ ಪ್ರದರ್ಶಿಸಬೇಕಿದೆ.
---------------------

ಕಾಲಾವಾಕಾಶ ನೀಡಿರುವ ಬಗ್ಗೆ ಸದ್ಯ ಜಿಲ್ಲಾಧಿಕಾರಿಗಳಿಂದ ಮಾಹಿತಿ ಬಂದಿಲ್ಲ . ಸಂಜೆ ಅಥವಾ ಬೆಳಿಗ್ಗೆಯೊಳಗೆ ಆದೇಶ ಬಾರದಿದ್ದಲ್ಲಿ ಗುರುವಾರ ಕಾರ್ಯಾಚರಣೆ ಮುಂದುವರಿಯುತ್ತದೆ : ತಹಸೀಲ್ದಾರ್ ಕಾಮಾಕ್ಷಮ್ಮ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...