ವಿಷಯಕ್ಕೆ ಹೋಗಿ

ಅನಧಿಕೃತ ಅಂಗಡಿ ತೆರವು ಮುಂದುವರಿದ ಗೊಂದಲ : ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಮುಂದಾಗಿರುವ ಕೆಲ ಅಂಗಡಿದಾರರು

ಹುಳಿಯಾರು  ಪಟ್ಟಣದ ಬಸ್ ನಿಲ್ದಾಣದ ಕೆರೆಜಾಗ ಒತ್ತುವರಿ ಮಾಡಿ ಕಳೆದ ಎರಡು ದಶಕಗಳಿಂದ ಅನಧಿಕೃತವಾಗಿ ಕಟ್ಟಿಕೊಂಡಿದ್ದ ಅಂಗಡಿಮುಂಗಟ್ಟು ತೆರವಿಗೆ ಬುಧವಾರದವರೆಗೆ ನೀಡಿದ್ದ ಅಂತಿಮ ಗಡುವು ಮುಗಿದಿದ್ದು, ಗಡುವಿನ ಸಮಯದೊಳಗೆ ಕೆಲವರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ತೆರವು ಮಾಡಿಕೊಳ್ಳಲು ಮುಂದಾದರೆ ಮತ್ತೆ ಕೆಲವರು ಸಂಸದರ ಮೂಲಕ ಜಿಲ್ಲಾಧಿಕಾರಿಗಳಿಗೆ ಒತ್ತಡ ತಂದು ಆರು ತಿಂಗಳ ಕಾಲಾವಧಿ ಕೋರಿರುವುದು ಗುರುವಾರ ಕಾರ್ಯಾಚರಣೆ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಕ್ಕೆ ಆಸ್ಪದವಾಗಿದೆ.
ಹುಳಿಯಾರು ಬಸ್ ನಿಲ್ದಾಣದ ಕೆಲ ಅಂಗಡಿದಾರರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ತೆರವು ಮಾಡುತ್ತಿರುವುದು.
ಅಂಗಡಿ ತೆರವು ರಾಜಕೀಯಗೊಂಡು ಅಧಿಕಾರಿಗಳಿಗೆ ಜಟಿಲ ಸಮಸ್ಯೆಯಾಗಿ ಪರಿಗಣಿಸಿತ್ತು. ತೆರವಿಗೆ ಅನೇಕರ ಆಕ್ಷೇಪ ಸಹ ಕೇಳಿಬಂದಿತ್ತು. ಕಾರ್ಯಾಚರಣೆ ಬಗ್ಗೆ ಕಳೆದೆರಡು ತಿಂಗಳಿಂದ ಚರ್ಚೆ ನಡೆಯುತ್ತಲೇ ಇದ್ದು ಇದರ ತೆರವಿಗೆ ಖುದ್ದು ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳೇ ಬಂದು ನಿಲ್ಲಬೇಕು ಎಂಬ ಮಾತು ಸಹ ಕೇಳಿಬಂದಿದ್ದು ಕಾರ್ಯಾಚರಣೆ ಮುಂದೂಡುತ್ತಲೇ ಬರುತ್ತಿತ್ತು. ಇದೀಗ ಸುಪ್ರಿಂ ಕೋರ್ಟ್ ಆದೇಶ ಅಧಿಕಾರಿಗಳಿಗೆ ಆಸ್ತ್ರವಾಗಿ ಬಂದಿದ್ದು ಡಿಸೆಂಬರ್ ೨೪ಕ್ಕೆ ಗಡುವು ವಿಧಿಸಿ ಅಂಗಡಿದಾರರಿಗೆ ೨೪ ಗಂಟೆಯೊಳಗಾಗಿ ಅಂಗಡಿ ತೆರವು ಮಾಡುವಂತೆ,ಇಲ್ಲವಾದರೆ ತಾವೇ ತೆರವುಗೊಳಿಸುವುದಾಗಿ ತಿಳುವಳಿಕೆ ನೋಟೀಸ್ ನೀಡಲಾಗಿತ್ತು.
ತಲ್ಲಣ: ಬಸ್ ನಿಲ್ದಾಣದಲ್ಲಿ ಸುಮಾರು ನೂರಕ್ಕೂ ಮೀರಿ ಅಂಗಡಿಗಳಿದ್ದು ಸದ್ಯ ತೆರವಿನ ಬಗ್ಗೆ ಪಟ್ಟಣದಲ್ಲೆಡೆ ಚರ್ಚೆಯ ವಿಷಯವಾಗಿದೆ. ಅಂಗಡಿ ತೆರವು ಗೊಳಿಸಿದಲ್ಲಿ ಕುಟುಂಬದ ಭವಿಷ್ಯದ ಚಿಂತೆ ಏನೆಂದು ವ್ಯಾಪಾರಸ್ಥರನ್ನು ಹೈರಾಣಾಗಿ ಮಾಡಿದ್ದು, ಅಂಗಡಿಯ ವಸ್ತುಗಳನ್ನೇನು ಮಾಡುವುದೆಂಬ ಚಿಂತೆ ಸಹ ಕಾಡುತ್ತಿದೆ. ಈ ಬಗ್ಗೆ ಕೊನೆಯ ಅಸ್ತ್ರವಾಗಿ ರಾಜಕೀಯ ಒತ್ತಡ ತಂದು ಗಡುವು ವಿಸ್ತರಿಸುವುದಾಗಿ ಕೆಲವರು ಮುಂದಾದರೂ ಸಹ ಮತ್ತೆ ಕೆಲವರು ಇದರ ಉಸಾಬರಿಯೇ ಬೇಡವೆಂದು ಕೆಲವರು ರಾತ್ರೋರಾತ್ರಿ ಅಂಗಡಿ ಸಾಮಾನುಗಳನ್ನು , ಹೆಂಚು,ಶೀಟು ತೆಗೆಯಲು ಮುಂದಾಗಿದ್ದು ತೆರವು ಸನ್ನಿಹಿತ ಎಂಬ ವಾತಾವರಣ ಸೃಷ್ಠಿ ಮಾಡಿದೆ. ಈಗಾಗಲೇ ಬೇಕರಿ,ಗೊಬ್ಬರದ ಅಂಗಡಿ, ಬಾಳೆಕಾಯಿ ಮಂಡಿ ಸೇರಿದಂತೆ ದೊಡ್ಡ ಅಂಗಡಿಗಳೆಲ್ಲಾ ಖಾಲಿ ಮಾಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಳ್ಳುವತ್ತ ಚಿತ್ತಹರಿಸಿದ್ದು, ಸಣ್ಣಪುಟ್ಟ ಅಂಗಡಿಯವರು ಮಾತ್ರ ಅದೇ ಸ್ಥಳದಲ್ಲಿ ತಮ್ಮ ವ್ಯಾಪಾರ ಮುಂದುವರಿಸಿದ್ದಾರೆ.
ಗಾಳಿಸುದ್ದಿ : ತೆರವಿನ ಬಗ್ಗೆ ಗಂಟೆಗೊಂದು ಗಾಳಿಸುದ್ದಿ ಹಬ್ಬುತ್ತಿದ್ದು ಕೆಲವರು ಆರು ತಿಂಗಳ ಕಾಲಾವಾಕಾಶ ನೀಡಿದ್ದಾರೆಂದರೆ, ಮತ್ತೆ ಕೆಲವರು ಜನವರಿ ೩೦ರ ವರೆಗೆ ಅಂಗಡಿ ತೆರವು ಗೊಳಿಸದಂತೆ ಜಿಲ್ಲಾಧಿಕಾರಿಗಳು ಕಾಲಾವಾಕಾಶ ವಿಧಿಸಿದ್ದಾರೆಂದು ಪುಕಾರು ಹಬ್ಬಿಸುತ್ತಿದ್ದು ಗೊಂದಲಕ್ಕೆ ಕಾರಣವಾಗಿದೆ.
ಏನೇ ಆದರೂ ಸಹ ಗೂಡಂಗಡಿಗಳು ಹುಳಿಯಾರಿನ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದ್ದು ಅಂಗಡಿಗಳಿಲ್ಲವಾದಲ್ಲಿ ಪಟ್ಟಣಕ್ಕೆ ಬರುವವರ ಸಂಖ್ಯೆ ಸಹ ಇಳಿಮುಖವಾಗಲಿದೆ. ಕೇವಲ ತೆರವಿನ ಬಗ್ಗೆ ಮಾತ್ರ ಯೋಚಿಸುವ ಅಧಿಕಾರಿಗಳು ಇವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ವ್ಯಾಪಾರಸ್ಥರಿಗಾಗಿಯೇ ಮಾರುಕಟ್ಟೆಯಲ್ಲಿ ನಿರ್ಧಿಷ್ಟ ಜಾಗ ಒದಗಿಸಿದಲ್ಲಿ ವ್ಯಾಪಾರ ವಹಿವಾಟಿಗೂ ಅನುಕೂಲವಾಗುತ್ತಿದ್ದಲ್ಲದೆ ಇವರ ಜೀವನಕ್ಕೂ ದಾರಿಯಾಗುತ್ತಿತ್ತು. ಮಂತ್ರಿಮಹೋದಯರು,ಸಂಸದರು ಈ ನಿಟ್ಟಿನಲ್ಲಿ ಆಲೋಚಿಸಿ ಪಟ್ಟಣದಲ್ಲಿ ಸೂಕ್ತ ಜಾಗವೊಂದನ್ನು ಗುರ್ತಿಸಿ ಅನುಕೂಲಕಲ್ಪಿಸಿ ಕೊಡುವ ಇಚ್ಚಾಶಕ್ತಿ ಪ್ರದರ್ಶಿಸಬೇಕಿದೆ.
---------------------

ಕಾಲಾವಾಕಾಶ ನೀಡಿರುವ ಬಗ್ಗೆ ಸದ್ಯ ಜಿಲ್ಲಾಧಿಕಾರಿಗಳಿಂದ ಮಾಹಿತಿ ಬಂದಿಲ್ಲ . ಸಂಜೆ ಅಥವಾ ಬೆಳಿಗ್ಗೆಯೊಳಗೆ ಆದೇಶ ಬಾರದಿದ್ದಲ್ಲಿ ಗುರುವಾರ ಕಾರ್ಯಾಚರಣೆ ಮುಂದುವರಿಯುತ್ತದೆ : ತಹಸೀಲ್ದಾರ್ ಕಾಮಾಕ್ಷಮ್ಮ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.