ವಿಷಯಕ್ಕೆ ಹೋಗಿ

ಚನ್ನಸವಣ್ಣನ ಕಡೇಕಾರ್ತೀಕದಲ್ಲಿ ಮುದ್ದೆಸಾರಿನ ಸವಿ ಸವಿದ ಸಾವಿರಾರು ಭಕ್ತರು

ಹುಳಿಯಾರು  ಹೋಬಳಿ ಕೆಂಕೆರೆ ಸಮೀಪದ ಪುರದಮಠದಲ್ಲಿ ಶನಿವಾರ ನಡೆದ ಶ್ರೀಚನ್ನಸವೇಶ್ವರಸ್ವಾಮಿಯ ಕಡೇಕಾರ್ತೀಕ ಮಹೋತ್ಸವಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರು ಸ್ವಾಮಿಯ ದರ್ಶನ ಪಡೆಯುವುದರ ಜೊತೆಗೆ ರಾಗಿಮುದ್ದೆ ಸಾರಿನ ಸವಿ ಸವಿದರು
ಹುಳಿಯಾರು ಹೋಬಳಿ ಕೆಂಕೆರೆ ಸಮೀಪದ ಪುರದಮಠದಲ್ಲಿ ಚನ್ನಸವೇಶ್ವರಸ್ವಾಮಿಯ ಕಡೇಕಾರ್ತೀಕದ ಅಂಗವಾಗಿ ಸ್ವಾಮಿಯ ಉತ್ಸವ ನಡೆಸಲಾಯಿತು.

ಹುಳಿಯಾರು ಹೋಬಳಿ ಕೆಂಕೆರೆ ಸಮೀಪದ ಪುರದಮಠದಲ್ಲಿ ಚನ್ನಬಸವೇಶ್ವರಸ್ವಾಮಿ ಕಡೇಕಾರ್ತೀಕದಲ್ಲಿ ಭಕ್ತರಿಗಾಗಿ ರಾಗಿಮುದ್ದೆ ಕಟ್ಟುತ್ತಿರುವ ಮಹಿಳೆಯರು.

ಕಾರ್ತೀಕದ ಅಂಗವಾಗಿ ಕೆಂಕೆರೆ ಗ್ರಾಮದಿಂದ ಚನ್ನಬಸವೇಶ್ವರ ಸ್ವಾಮಿಯ ಹಾಗೂ ಗ್ರಾಮದೇವತೆ ಕಾಳಿಕಾಂಭ ದೇವಿಯನ್ನು ಅಲಂಕರಿಸಿ ಸಕಲ ವಾದ್ಯದೊಂದಿಗೆ ಹೊರಡಿಸಿದರು. ನಂತರ ಧ್ವಜಕುಣಿತದೊಂದಿಗೆ ಊರಿನ ಬೀದಿಯಲ್ಲಿ ಸಾಗುತ್ತಾ ಸುಮಾರು ೩ ಕೀ.ಮೀ ದೂರದ ಸ್ವಾಮಿಯ ಮೂಲಸ್ಥಾನ ಪುರದಮಠಕ್ಕೆ ಕಾಲ್ನಡಿಗೆಯಲ್ಲಿ ಗ್ರಾಮದವರೆಲ್ಲಾ ಸೇರಿ ಕರೆದೊಯ್ದರು. ಅಲ್ಲಿ ಮೂಲ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬಸವನನ್ನು ವಿವಿಧ ಹೂಗಳಿಂದ ಅಲಂಕರಿಸಿ ಉತ್ಸವ ನಡೆಸಿದರಲ್ಲದೆ, ಭಕ್ತರು ಧ್ವಜಕುಣಿಯುವ ಮೂಲಕ ಉತ್ಸವಕ್ಕೆ ರಂಗು ತಂದಿದ್ದರು.

ರಾಗಿ ಮುದ್ದೆ ವಿಶೇಷ: ಪುರದಮಠದಲ್ಲಿ ನಡೆಯುವ ಪುರಾಣಪ್ರಸಿದ್ದ ಚನ್ನಸವಣ್ಣನ ಕಡೇ ಕಾರ್ತೀಕದಲ್ಲಿ ರಾಗಿ ಮುದ್ದೆ ಸಾರಿನ ಊಟ ವಿಶೇಷವಾಗಿದ್ದು ಇಲ್ಲಿಗೆ ಜಿಲ್ಲೆಯ ನಾನಾ ಭಾಗದಿಂದ ಭಕ್ತರು ಆಗಮಿಸುತ್ತಾರೆ . ಅಲ್ಲದೆ ಪುರದಮಠ ಜಿಲ್ಲೆಯ ಗಡಿಭಾಗವಾಗಿರುವುದರಿಂದ ಹೊಸದುರ್ಗ, ಹಿರಿಯೂರು ತಾಲ್ಲೂಕುಗಳ ಅಪಾರ ಸಂಖ್ಯೆಯ ಭಕ್ತರು ಸಹ ಆಗಮಿಸಿ ಸ್ವಾಮಿಯ ದರ್ಶನ ಪಡೆಯುವುದರ ಜೊತೆಗೆ ರಾಗಿಮುದ್ದೆ ಸವಿಯುತ್ತಾರೆ. ಈರೀತಿ ಮುದ್ದೆ ಊಟ ತಯಾರಿಸುವುದು ಕಳೆದ ಅನೇಕ ವರ್ಷದಿಂದ ನಡೆದುಕೊಂಡು ಬಂದಿದ್ದು ಭಕ್ತರು ತಾವು ಬೆಳೆದ ದವಸ ಧಾನ್ಯ, ತರಕಾರಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಮೀಸಲಾಗಿ ಹಾಕಿರುತ್ತಾರೆ. ಅಲ್ಲದೆ ಕೆಲವರು ಅಕ್ಕಿ, ಬೇಳೆಕಾಳು ಸೇರಿದಂತೆ ಸಾರು ತಯಾರಿಸಲು ಬೇಕಾದ ವಸ್ತುಗಳನ್ನು ಕೊಡಿಸಿರುತ್ತಾರೆ. ಇದನ್ನೆಲ್ಲಾ ಉಪಯೋಗಿಸಿ ಗ್ರಾಮದ ಜನರೇಲ್ಲಾ ಸೇರಿ ರಾಗಿಮುದ್ದೆ ಹಾಗೂ ಹುಳ್ಸೊಪ್ಪಿನ ಸಾರು ತಯಾರಿಸಿರುತ್ತಾರೆ. ಇದನ್ನೇ ಸ್ವಾಮಿಗೆ ನೈವೇದ್ಯವಾಗಿಟ್ಟು ನಂತರ ಭಕ್ತರಿಗೆ ಬಡಿಸುತ್ತಾರೆ. ಅಲ್ಲದೆ ಇಲ್ಲಿ ತಯಾರಿಸುವ ಸಾಂಬಾರನ್ನು ಭಕ್ತರು ತಮ್ಮ ಮನೆಗಳಿಗೆ ಕೊಂಡೈಯುವುದು ವಿಶೇಷ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.