ವಿಷಯಕ್ಕೆ ಹೋಗಿ

ಚನ್ನಸವಣ್ಣನ ಕಡೇಕಾರ್ತೀಕದಲ್ಲಿ ಮುದ್ದೆಸಾರಿನ ಸವಿ ಸವಿದ ಸಾವಿರಾರು ಭಕ್ತರು

ಹುಳಿಯಾರು  ಹೋಬಳಿ ಕೆಂಕೆರೆ ಸಮೀಪದ ಪುರದಮಠದಲ್ಲಿ ಶನಿವಾರ ನಡೆದ ಶ್ರೀಚನ್ನಸವೇಶ್ವರಸ್ವಾಮಿಯ ಕಡೇಕಾರ್ತೀಕ ಮಹೋತ್ಸವಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರು ಸ್ವಾಮಿಯ ದರ್ಶನ ಪಡೆಯುವುದರ ಜೊತೆಗೆ ರಾಗಿಮುದ್ದೆ ಸಾರಿನ ಸವಿ ಸವಿದರು
ಹುಳಿಯಾರು ಹೋಬಳಿ ಕೆಂಕೆರೆ ಸಮೀಪದ ಪುರದಮಠದಲ್ಲಿ ಚನ್ನಸವೇಶ್ವರಸ್ವಾಮಿಯ ಕಡೇಕಾರ್ತೀಕದ ಅಂಗವಾಗಿ ಸ್ವಾಮಿಯ ಉತ್ಸವ ನಡೆಸಲಾಯಿತು.

ಹುಳಿಯಾರು ಹೋಬಳಿ ಕೆಂಕೆರೆ ಸಮೀಪದ ಪುರದಮಠದಲ್ಲಿ ಚನ್ನಬಸವೇಶ್ವರಸ್ವಾಮಿ ಕಡೇಕಾರ್ತೀಕದಲ್ಲಿ ಭಕ್ತರಿಗಾಗಿ ರಾಗಿಮುದ್ದೆ ಕಟ್ಟುತ್ತಿರುವ ಮಹಿಳೆಯರು.

ಕಾರ್ತೀಕದ ಅಂಗವಾಗಿ ಕೆಂಕೆರೆ ಗ್ರಾಮದಿಂದ ಚನ್ನಬಸವೇಶ್ವರ ಸ್ವಾಮಿಯ ಹಾಗೂ ಗ್ರಾಮದೇವತೆ ಕಾಳಿಕಾಂಭ ದೇವಿಯನ್ನು ಅಲಂಕರಿಸಿ ಸಕಲ ವಾದ್ಯದೊಂದಿಗೆ ಹೊರಡಿಸಿದರು. ನಂತರ ಧ್ವಜಕುಣಿತದೊಂದಿಗೆ ಊರಿನ ಬೀದಿಯಲ್ಲಿ ಸಾಗುತ್ತಾ ಸುಮಾರು ೩ ಕೀ.ಮೀ ದೂರದ ಸ್ವಾಮಿಯ ಮೂಲಸ್ಥಾನ ಪುರದಮಠಕ್ಕೆ ಕಾಲ್ನಡಿಗೆಯಲ್ಲಿ ಗ್ರಾಮದವರೆಲ್ಲಾ ಸೇರಿ ಕರೆದೊಯ್ದರು. ಅಲ್ಲಿ ಮೂಲ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬಸವನನ್ನು ವಿವಿಧ ಹೂಗಳಿಂದ ಅಲಂಕರಿಸಿ ಉತ್ಸವ ನಡೆಸಿದರಲ್ಲದೆ, ಭಕ್ತರು ಧ್ವಜಕುಣಿಯುವ ಮೂಲಕ ಉತ್ಸವಕ್ಕೆ ರಂಗು ತಂದಿದ್ದರು.

ರಾಗಿ ಮುದ್ದೆ ವಿಶೇಷ: ಪುರದಮಠದಲ್ಲಿ ನಡೆಯುವ ಪುರಾಣಪ್ರಸಿದ್ದ ಚನ್ನಸವಣ್ಣನ ಕಡೇ ಕಾರ್ತೀಕದಲ್ಲಿ ರಾಗಿ ಮುದ್ದೆ ಸಾರಿನ ಊಟ ವಿಶೇಷವಾಗಿದ್ದು ಇಲ್ಲಿಗೆ ಜಿಲ್ಲೆಯ ನಾನಾ ಭಾಗದಿಂದ ಭಕ್ತರು ಆಗಮಿಸುತ್ತಾರೆ . ಅಲ್ಲದೆ ಪುರದಮಠ ಜಿಲ್ಲೆಯ ಗಡಿಭಾಗವಾಗಿರುವುದರಿಂದ ಹೊಸದುರ್ಗ, ಹಿರಿಯೂರು ತಾಲ್ಲೂಕುಗಳ ಅಪಾರ ಸಂಖ್ಯೆಯ ಭಕ್ತರು ಸಹ ಆಗಮಿಸಿ ಸ್ವಾಮಿಯ ದರ್ಶನ ಪಡೆಯುವುದರ ಜೊತೆಗೆ ರಾಗಿಮುದ್ದೆ ಸವಿಯುತ್ತಾರೆ. ಈರೀತಿ ಮುದ್ದೆ ಊಟ ತಯಾರಿಸುವುದು ಕಳೆದ ಅನೇಕ ವರ್ಷದಿಂದ ನಡೆದುಕೊಂಡು ಬಂದಿದ್ದು ಭಕ್ತರು ತಾವು ಬೆಳೆದ ದವಸ ಧಾನ್ಯ, ತರಕಾರಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಮೀಸಲಾಗಿ ಹಾಕಿರುತ್ತಾರೆ. ಅಲ್ಲದೆ ಕೆಲವರು ಅಕ್ಕಿ, ಬೇಳೆಕಾಳು ಸೇರಿದಂತೆ ಸಾರು ತಯಾರಿಸಲು ಬೇಕಾದ ವಸ್ತುಗಳನ್ನು ಕೊಡಿಸಿರುತ್ತಾರೆ. ಇದನ್ನೆಲ್ಲಾ ಉಪಯೋಗಿಸಿ ಗ್ರಾಮದ ಜನರೇಲ್ಲಾ ಸೇರಿ ರಾಗಿಮುದ್ದೆ ಹಾಗೂ ಹುಳ್ಸೊಪ್ಪಿನ ಸಾರು ತಯಾರಿಸಿರುತ್ತಾರೆ. ಇದನ್ನೇ ಸ್ವಾಮಿಗೆ ನೈವೇದ್ಯವಾಗಿಟ್ಟು ನಂತರ ಭಕ್ತರಿಗೆ ಬಡಿಸುತ್ತಾರೆ. ಅಲ್ಲದೆ ಇಲ್ಲಿ ತಯಾರಿಸುವ ಸಾಂಬಾರನ್ನು ಭಕ್ತರು ತಮ್ಮ ಮನೆಗಳಿಗೆ ಕೊಂಡೈಯುವುದು ವಿಶೇಷ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...