ವಿಷಯಕ್ಕೆ ಹೋಗಿ

ಹುಳಿಯಾರು: ಅಂಗಡಿದಾರರ ಹಾಗೂ ನಿವಾಸಿಗಳಲ್ಲಿ ಹೆಚ್ಚಿದ ದುಗುಡ : ಮಂಗಳವಾರದಿಂದ ಕೆರೆ ಅಂಗಳದಲ್ಲಿನ ಮನೆ,ಅಂಗಡಿ ಸರ್ವೆಕಾರ್ಯ ಶುರು

ಈಗಾಗಲೇ ಹುಳಿಯಾರು ಕೆರೆ ಒತ್ತುವರಿ ತೆರವು ಕಾರ್ಯ ಪ್ರಾರಂಭವಾಗಿದ್ದು ತೆರವು ಕಾರ್ಯಾಚರಣೆ ಕ್ಷಿಪ್ರಗತಿಯಲ್ಲಿ ಸಾಗುತ್ತಿದ್ದು, ಕೇಶವಾಪುರ,ವಳಗೆರೆಹಳ್ಳಿ ಭಾಗದಲ್ಲಿ ತೆರವು ಮುಗಿಯುವ ಹಂತದಲ್ಲಿದ್ದು , ಮಂಗಳವಾರದಿಂದ ಶಂಕರಪುರ ಭಾಗದಲ್ಲಿರುವ ಕೆರೆಅಂಗಳದಲ್ಲಿರುವ ಮನೆಗಳು ಹಾಗೂ ಬಸ್ ನಿಲ್ದಾಣದಲ್ಲಿರುವ ಅಂಗಡಿಗಳ ಸರ್ವೆಕಾರ್ಯ ನಡೆಯಲಿದೆ.
ಹುಳಿಯಾರು ಬಸ್ ನಿಲ್ದಾಣದಲ್ಲಿ ಕೆರೆ ಒತ್ತುವರಿ ಜಾಗದಲ್ಲಿರುವ ಅಂಗಡಿಗಳು.
ಕಳೆದ ಎರಡು ತಿಂಗಳಿನಿಂದಲೂ ಕೆರೆ ಒತ್ತುವರಿ ಮಾಡಿ ಕಟ್ಟಿರುವ ಮನೆ ಹಾಗೂ ಅಂಗಡಿಗಳ ತೆರವಿನ ಬಗ್ಗೆ ದಿನಕ್ಕೊಂದು ವದಂತಿಗಳು ಕೇಳಿಬಂದು ಇದೀಗ ಅಂತಿಮ ತೆರೆ ಬೀಳುವ ಲಕ್ಷಣ ಕಂಡುಬರುತ್ತಿದ್ದು ಅಂಗಡಿದಾರರ ಹಾಗೂ ನಿವಾಸಿಗಳ ದುಗುಡ ಹೆಚ್ಚಾಗುವಂತೆ ಮಾಡಿದೆ.
ಹುಳಿಯಾರು ಸರ್ವೆ ನಂ.೧ರಲ್ಲಿ ಹುಳಿಯಾರು ಅಮಾನಿಕೆರೆ ಎಂದು ೪೮೦ ಎಕರೆ ೩೮ ಗುಂಟೆ ಕೆರೆ ಜಾಗ ಗುರ್ತಿಸಲಾಗಿದೆ. ಸಾಕಷ್ಟು ವಿಸ್ತೀರ್ಣವಾಗಿರುವ ಈ ಕೆರೆ ತುಂಬಿ ಹಲವು ದಶಕಗಳೇ ಕಳೆದಿದ್ದು, ನೀರಿನ ಹರಿವು ಇಲ್ಲದಂತಾಗಿ ಒತ್ತುವರಿಗೆ ಆಸ್ಪದವಾಗಿತ್ತು. ಕೇಶವಾಪುರ, ವಳಗೆರೆಹಳ್ಳಿ,ಶಂಕರಪುರ ಹಾಗೂ ಬಸ್ ನಿಲ್ದಾಣದ ಸೇರಿದಂತೆ ಒಟ್ಟು 45 ಎಕರೆ ಪ್ರದೇಶದಷ್ಟು ಜಾಗ ಒತುವರಿಯಾಗಿದ್ದು, ಜಮೀನು , ಇಟ್ಟಿಗೆ ಫ್ಯಾಕ್ಟರಿ,ಮನೆ ಹಾಗೂ ಅಂಗಡಿಗಳಿಗೆ ಬಳಕೆಯಾಗಿದೆ. ಈ ಹಿಂದೆ ನಡೆಸಿದ ಸಮೀಕ್ಷೆಯಂತೆ ಅಂಗಡಿ ಹಾಗೂ ಮನೆ ಸೇರಿ 199 ಮಂದಿಯ ಪಟ್ಟಿ ಮಾಡಲಾಗಿದೆ. ಸದ್ಯ ಸರ್ವೆ ಮಾಡುತ್ತಲೇ ಒತ್ತುವರಿಯನ್ನು ತೆರವು ಮಾಡುತ್ತಾ ಸಾಗುತ್ತಿದ್ದು, ಮೊದಲು ಕೆರೆ ಸುತ್ತಲಲ್ಲಿ ಒತ್ತುವರಿಯಾಗಿರುವ ತೋಟ,ಹೊಲಗಳನ್ನು ತೆರವು ಮಾಡಿ ಟ್ರಂಚ್ ಹೊಡೆದು ಗಡಿ ಗುರ್ತಿಸಲಾಗುತ್ತಿದೆ.
ಸಮಸ್ಯೆ ಏನು: ಬಸ್ ನಿಲ್ದಾಣ ಹಾಗೂ ಶಂಕರಪುರ ಬಡಾವಣೆಯಲ್ಲಿ ಅನೇಕ ವರ್ಷಗಳಿಂದ ಮನೆ ಹಾಗೂ ಅಂಗಡಿಗಳು ನಿರ್ಮಾಣ ಮಾಡಿಕೊಂಡಿದ್ದು ಇದೀಗ ಅದಕ್ಕೆ ಸಂಚಕಾರ ಬರಲಿದೆ ಎಂಬುದು ಆತಂಕದ ವಿಚಾರವಾಗಿದೆ. ಕಳೆದ ಸುಮಾರು ವರ್ಷಗಳಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಪೆಟ್ಟಿಗೆ ಅಂಗಡಿಗಳನ್ನು ಹಾಕಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವ ಅನೇಕರಿಗೆ ಈ ಅಂಗಡಿಗಳೆ ಜೀವನಾಧಾರವಾಗಿವೆ. ಈಗ ಅಂಗಡಿಗಳು ತೆರವಾದರೆ ಇವರೆಲ್ಲಾ ಬೀದಿಗೆ ಬರಬೇಕಾಗುತ್ತದೆ.
ಅಂತೆಯೇ ಶಂಕರಪುರ ಬಡಾವಣೆಯಲ್ಲಿರುವ ಅನೇಕ ಮನೆಗಳು ಸಹ ಕೆರೆ ಅಂಗಳದಲ್ಲಿದ್ದು ಈಗಾಗಲೇ ಪಂಚಾಯ್ತಿಯಿಂದ ರಸ್ತೆ,ಕುಡಿಯುವ ನೀರಿನ ಸೌಲಭ್ಯ,ವಿದ್ಯುತ್ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳನ್ನು ಪಡೆದಿದ್ದಾರಲ್ಲದೆ, ಮತಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿತರಾಗಿ ಗುರುತಿನ ಕಾರ್ಡ್ ಹಾಗೂ ಪಡಿತರ ಕಾರ್ಡ್ ಗಳನ್ನು ಸಹ ಹೊಂದಿದ್ದಾರೆ. ಇಲ್ಲಿನ ಅನೇಕ ಮನೆಗಳೀಗೆ ಪಂಚಾಯ್ತಿಯಿಂದ ಮ್ಯುಟೇಷನ್ ಸಹ ನೀಡಿ ಕಂದಾಯ ಕಟ್ಟಿಸಿಕೊಂಡಿದ್ದಾರೆ. ಇಲ್ಲಿರುವವರಲ್ಲಿ ಬಹುಪಾಲು ಮಂದಿ ಕಡುಬಡವರಾಗಿದ್ದು ಇವರಿಗೆ ಈಗಿರುವ ಜಾಗ ಬಿಟ್ಟರೆ ಬೇರೆಲ್ಲೂ ತುಂಡು ಜಾಗವೂ ಸಹ ಇಲ್ಲ. ನಿತ್ಯ ಕೂಲಿ ಮಾಡಿ ಬಂದ ಅಲ್ಪಸ್ವಲ್ಪ ಹಣದಿಂದ ನಿತ್ಯ ತುತ್ತಿನ ಚೀಲ ತುಂಬಿಸಿಕೊಂಡು ಜೀವನಬಂಡಿ ನಡೆಸುತ್ತಿದ್ದಾರೆ. ಇಂತಹದರ ನಡುವೆ ಅಂಗಡಿ ಹಾಗೂ ಮನೆಗಳು ತೆರವಾಗುತ್ತವೆಯೋ ಇಲ್ಲವೋ ಎಂಬ ಮಾತುಗಳು ಕೇಳಿಬರುತ್ತಿವೆ.
ಕಂದಾಯ ಇಲಾಖೆಯ ಮೂಲಗಳ ಪ್ರಕಾರ ಜಿಲ್ಲಾಧಿಕಾರಿಗಳ ಆದೇಶದನ್ವಯ ಕೆರೆಗಳ ಒತ್ತುವರಿ ತೆರವು ಕಡ್ಡಾಯವಾಗಿದ್ದು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎನ್ನಲಾಗುತ್ತಿದೆ.ತೆರವು ಕಾರ್ಯಾಚರಣೆ ವೇಳೆ ಯಾರಾದರೂ ಅಡ್ಡಿಪಡಿಸಿದರೆ ಅಥವಾ ತಕರಾರು ತೆಗೆದರೆ ಅವರ ಮೇಲೆ ಕಾನೂನುರೀತ್ಯಾ ಕ್ರಮ ಕೈಗೊಳ್ಳುವುದಾಗಿದ್ದು, ಪೊಲೀಸ್ ಬಂದೋಬಸ್ತ್ ನಲ್ಲಿ ತೆರವುಕಾರ್ಯ ನಡೆಯುವ ಸಾಧ್ಯತೆಯಿದ್ದು,ತೆರವಾದರೆ ಮುಂದೆ ಗತಿಯೇನು ನಾವೆಲ್ಲಿಗೆ ಹೋಗೋದು ಸರ್ಕಾರದಿಂದ ಪುನರ್ವಸತಿ ಕಲ್ಪಿಸುತ್ತಾರೆಯೇ ಇಲ್ಲವೋ ಎಂಬ ಯಕ್ಷಪ್ರಶ್ನೆಗಳು ಮೂಡಿವೆ.
ಆತಂಕ ಬೇಡ: ಶಂಕರಪುರ ಬಡಾವಣೆಯಲ್ಲಿರುವ ವಸತಿದಾರರಿಗೆ ಕೆರೆಸೂರಗೊಂಡನಹಳ್ಳಿ ಸರ್ವೆ ನಂ.೩೨ ರಲ್ಲಿ ನೀವೇಶನ ಗುರ್ತಿಸಲಾಗಿದ್ದು ಜಮೀನು ವಿಚಾರವಾಗಿ ಕೆಲವರು ಕಾನೂನು ಮೊರೆ ಹೋಗಿದ್ದು ಪರ್ಯಾಯ ವ್ಯವಸ್ಥೆ ಕಲ್ಪಿಸಲು ತಡವಾಗುತ್ತಿದೆ. ಸಮಸ್ಯೆ ಬಗೆಹರಿದ ಕೂಡಲೇ ನೀವೇಶನ ಹಂಚಿಕೆ ಮಾಡಿ ಆನಂತರವಷ್ಟೇ ತೆರವು ಕಾರ್ಯ ಕೈಗೊಳ್ಳಲಾಗುವುದು ಎಂದು ಕಂದಾಯ ತನಿಖಾಧಿಕಾರಿ ಹನುಮಂತನಾಯ್ಕ್ ಸ್ಪಷ್ಠ ಪಡಿಸಿದ್ದು ಸದ್ಯ ಅಂಗಡಿ ತೆರವುಕಾರ್ಯ ತಹಸೀಲ್ದಾರ್ ಅವರ ಸಮಕ್ಷಮ ನಡೆಯುವುದು ಖಚಿತ ಎಂದಿದ್ದಾರೆ.
ಅಪಸ್ವರ : ಬಸ್ ನಿಲ್ದಾಣದ ಅಂಗಡಿಗಳ ತೆರವು ಸದ್ಯಕ್ಕಿಲ್ಲ ಎಂಬ ಮಾತು ಕೇಳಿಬರುತ್ತಿದ್ದು, ಹುಳಿಯಾರು ಅಮಾನಿಕೆರೆಯ ಸಂಪೂರ್ಣ ಒತ್ತುವರಿ ತೆರವು ಮಾಡಲೇಬೇಕು, ಒತ್ತಡಕ್ಕೆ ಮಣಿದು ತೆರವು ಮುಂದೂಡಿದಲ್ಲಿ ಪ್ರತಿಭಟಿಸುವುದಾಗಿ ಈಗಾಗಲೇ ಕಾರ್ಯಾಚರಣೆಯಲ್ಲಿ ತೋಟತುಡಿಕೆ ಕಳೆದುಕೊಂಡವರು ಎಚ್ಚರಿಸಿದ್ದಾರೆ
----------

ಬಸ್ ನಿಲ್ದಾಣದ ಕೆರೆ ಅಂಗಳದಲ್ಲಿರುವ ಅಂಗಡಿಗಳಿಂದಲೇ ನಮ್ಮ ಜೀವನ ಸಾಗುತ್ತಿದೆ,ಈಗ ಅವನ್ನು ತೆರವುಗೊಳಿಸಿದರೆ ನಮ್ಮಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಮುಂದೆ ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯಲಿದ್ದು ಹೆಚ್ಚುವರಿ ಜಾಗದ ಅವಶ್ಯಕವಿದ್ದರೆ ಆಗ ತೆರವುಗೊಳಿಸಲಿ : ಕೋಳಿಅಂಗಡಿ ಶ್ರೀನಿವಾಸ್ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...