ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಸಂಭ್ರಮದ ಸಂಕ್ರಾಂತಿ : ವಿವಿಧೆಡೆ ನಾಗರು ಆಚರಣೆ

ಹುಳಿಯಾರು  ಪಟ್ಟಣ ಸೇರಿದಂತೆ ಅಕ್ಕಪಕ್ಕದ ಹಳ್ಳಿಗಳಲ್ಲಿ ಸುಗ್ಗಿ ಹಬ್ಬ ಸಂಕ್ರಾಂತಿಯ ಆಚರಣೆ ಗರಿಗೆದರಿದ್ದು , ಬಗೆಬಗೆಯ ಅಡುಗೆಯ ಜೊತೆಗೆ ಎಳ್ಳು-ಸಕ್ಕರೆಅಚ್ಚು, ಎಳ್ಳು-ಬೆಲ್ಲದ ಕಂಪು ಹರಡಿದ್ದು ಕಂಡುಬಂತು.
ಸಂಕ್ರಾಂತಿಯ ಎಳ್ಳು-ಬೆಲ್ಲ ಬೀರಲು ಹೊರಟಿರುವ ಗೃಹಿಣಿ.
ಹಬ್ಬದ ಅಂಗವಾಗಿ ಕೆಲವರು ಮನೆಯಲ್ಲೇ ದೇವರಿಗೆ ಪೂಜೆ ಸಲ್ಲಿಸಿ, ಎಳ್ಳುಬೆಲ್ಲವನ್ನು ನೈವೇದ್ಯ ಮಾಡಿದರೆ, ಮತ್ತೆ ಕೆಲವರು ದೇವಸ್ಥಾನಗಳಿಗೆ ತೆರಳಿ ಎಳ್ಳುಬೆಲ್ಲವನ್ನು ಹಂಚಿ ಪೂಜೆ ಸಲ್ಲಿಸಿದರು. ಕೆಲ ರೈತರು ಕಣದ ಬದಿಯಲ್ಲಿನ ಬಣವೆಗೆ ಹುಳ್ಳಿತೊಕ್ಕ ಹಾಗೂ ಅವರೆಕಾಯಿಂದ ಮಾಡಿದ ಖಾದ್ಯವನ್ನು ಎಡೆಯಾಗಿ ಇಟ್ಟು ಪೂಜಿಸಿದರು. ಹೆಣ್ಣುಮಕ್ಕಳು ಬಗೆಬಗೆಯ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಎಳ್ಳು-ಬೆಲ್ಲ, ಕಬ್ಬನ್ನು ಅಕ್ಕಪಕ್ಕದ ಮನೆಯವರಿಗೆ, ಸ್ನೇಹಿತರಿಗೆ ಹಂಚುವ ಮೂಲಕ ಹಬ್ಬದ ಶುಭಾಷಯ ತಿಳಿಸುತ್ತಿದ್ದು ಸಾಮಾನ್ಯವಾಗಿತ್ತು.
ಬಣವೆಗೆ ಮುಳ್ಳು: ರೈತರ ಸುಗ್ಗಿಕಾಲದ ಆಚರಣೆ ವಿಶಿಷ್ಟವಾಗಿದ್ದು ಸಂಕ್ರಾಂತಿಯ ಮರುದಿನದಿಂದ ಕಣಗೆಲಸ ಮಾಡುವುದು ಹಿಂದಿನಿಂದ ಆಚರಣೆಯಲ್ಲಿದೆ. ಹಬ್ಬದ ಮುನ್ನಾ ದಿನ ರೈತರು ಕಣದ ಬದಿಯಲ್ಲಿನ ಹುಲ್ಲಿನ ಬಣವೆಗಳಿಗೆ ಎರದೆಮುಳ್ಳುಹಾಕಿಬಂದು ಹಬ್ಬದ ದಿನ ಪೂಜೆ ಸಲ್ಲಿಸಿಸುತ್ತಾರೆ. ಸಂಕ್ರಾಂತಿಯ ನಂತರ ಸೂರ್ಯ ತನ್ನ ಚಲನೆಯ ದಿಕ್ಕನ್ನು ಬದಲಾಯಿಸುವುದರಿಂದ ಬಿಸಿಲು ಹೆಚ್ಚಾಗಲಿದ್ದು, ಹಬ್ಬದ ನಂತರ ಕಣಗೆಲಸ ಮಾಡಲು ಸೂಕ್ತ ಸಮಯ ಎಂಬುದು ಈ ಆಚರಣೆ ಹಿಂದಿನ ನಂಬಿಕೆಯಾಗಿದೆ.
ಹಬ್ಬದ ಅಂಗವಾಗಿ ಪಟ್ಟಣದ ಈಶ್ವರನ ದೇವಾಲಯ,ಆಂಜನೇಯಸ್ವಮಿ ದೇವಾಲಯ, ಗ್ರಾಮದೇವತೆ ಹುಳಿಯಾರಮ್ಮ,ದುರ್ಗಮ್ಮ ,ಕೆಂಚಮ್ಮನ ದೇವಾಲಯ ಹಾಗೂ ಬನಶಂಕರಿ ಸನ್ನಿಧಿಗೆ ಹೆಚ್ಚು ಸಂಖ್ಯೆಯಲ್ಲಿ ಜನರು ಆಗಮಿಸಿ ಪೂಜೆ ಮಾಡಿಸುತ್ತಿದ್ದು ಕಂಡುಬಂತು.ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹಬ್ಬದ ಅಂಗವಾಗಿ ವಿಶೇಷ ಪೂಜೆ ನಡೆಯಿತು.
ಸಂಕ್ರಾಂತಿ ಹಬ್ಬದಲ್ಲಿ ಎಳ್ಳು-ಸಕ್ಕರೆಅಚ್ಚು,ಕಬ್ಬು ಹಂಚುವ ವಾಡಿಕೆಯಿದ್ದು ಹೊಸಬಟ್ಟೆ ತೊಟ್ಟ ಹೆಣ್ಣುಮಕ್ಕಳು ಮನೆಮನೆಗೂ ತೆರಳಿ ಎಳ್ಳು ಬೀರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಸಂಕ್ರಾಂತಿಯಂದು ನಾಗರಪಪೂಜೆಯಲ್ಲಿ ತೊಡಗಿಕೊಂಡಿರುವ ಕುಂಟುಂಬ.

ನಾಗಪ್ಪನ ಪೂಜೆ : ಗ್ರಾಮೀಣ ಭಾಗದಲ್ಲಿ ಇದೇ ದಿನ ನಾಗರು ಆಚರಿಸುವ ಸಂಪ್ರದಾಯವಿದ್ದು, ಕಿಚುಡಿನಾಗರು, ಚಿಗಣಿತಮಟದ ನಾಗರು,ಮುದ್ದೆನಾಗರು ಆಚರಣೆಯಲ್ಲಿದೆ. ಹೋಬಳಿಯ ಲಿಂಗಪ್ಪನಪಾಳ್ಯ,ಕೋಡಿಪಾಳ್ಯ,ಕೆಂಕೆರೆ ಸುತ್ತಮುತ್ತಲಲ್ಲಿ ಸಂಕ್ರಾತಿ ಹಬ್ಬದ ದಿನ ಕೂಳೆ ನಾಗರು ಆಚರಣೆ ನಡೆದು ಕೊಂಡು ಬಂದಿದ್ದು ಮನೆಮಂದಿಯಲ್ಲಾ ಒಟ್ಟಾಗಿ ಸೇರಿ ನಾಗರಕಲ್ಲಿಗೆ ಹಾಲನ್ನೆರೆಯುವ ಮೂಲಕ ಹಬ್ಬದ ಆಚರಣೆ ಮಾಡಿದರು.       

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...