ವಿಷಯಕ್ಕೆ ಹೋಗಿ

ದಸೂಡಿ : ಅಹೋರಾತ್ರಿ ಧರಣಿ ಮುಕ್ತಾಯ : ಧರಣಿ ಸ್ಥಳಕ್ಕೆ ೮ ಪಿಡಿಓ, ೯ ಕಾರ್ಯದರ್ಶಿಗಳ ದೌಡು

ಹುಳಿಯಾರು  ಹೋಬಳಿ ದಸೂಡಿ ಗ್ರಾಮಪಂಚಾಯ್ತಿ ಮುಂದೆ ಕಾರ್ಯದರ್ಶಿ ವೈಖರಿ ಖಂಡಿಸಿ ಹಾಗೂ ವಿವಿಧ ಯೋಜನೆಗಳ ಕಾಮಗಾರಿಗಳ ಬಿಲ್ ಪಾವತಿ ಮಾಡುವಂತೆ ಒತ್ತಾಯಿಸಿ ಕಳೆದ ಸೋಮವಾರದಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಶುಕ್ರವಾರದಂದು ಮುಕ್ತಾಯವಾಯಿತು.
ಹುಳಿಯಾರು ಹೋಬಳಿ ದಸೂಡಿಯಲ್ಲಿನಧರಣಿ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಧರಣಿ ನಿರತರನ್ನು ಸಮಾಧಾನ ಪಡಿಸಿದರು.
ಗ್ರಾ.ಪಂ.ಸದಸ್ಯ ರವಿಕುಮಾರ್ ನೇತೃತ್ವದಲ್ಲಿ ಧರಣಿ ನಡೆದಿದ್ದು, ಸಮಸ್ಯೆಗೆ ಸ್ಪಂದಿಸಿದ ಇಓ ಸ್ಥಳಕ್ಕೆ ಆಗಮಿಸಿ ಹೆಚ್ಚುವರಿಯಾಗಿ ಬೇರೊಬ್ಬ ಪಿಡಿಓ ಅವರನ್ನು ನೇಮಿಸಿದ್ದರೂ ಸಹ ತೃಪ್ತರಾಗದ ಧರಣಿನಿರತರು ತಮ್ಮ ಧರಣಿಯನ್ನು ಮುಂದುವರಿಸಿದ್ದರು.ಪಿಡಿಓ ಅವರು ನಿತ್ಯ ಕಛೇರಿಗೆ ಬಂದು ಬಾಕಿ ಇದ್ದ ಕೆಲಸಗಳನ್ನು ಪೂರ್ತಿ ಮಾಡುತ್ತಿದ್ದರೂ ಸಹ ಅನೇಕ ಕೆಲಸಗಳು ಪೆಂಡಿಂಗ್ ಉಳಿಯುತ್ತಿದ್ದವು. ಇದನ್ನ ಗಮನಿಸಿದ ಧರಣಿನಿರತರು ಬಾಕಿ ಇರುವ ಎಲ್ಲಾ ಕೆಲಸಗಳನ್ನು ಸಂಪೂರ್ಣವಾಗಿ ಮಾಡಿ ಮುಗಿಸುವವರೆಗೆ ತಮ್ಮ ಧರಣಿ ನಡೆಯುವುದಾಗಿ ಪಟ್ಟು ಹಿಡಿದಿದ್ದರು.
೫ ದಿನಗಳು ಕಳೆಯುತ್ತಾ ಬಂದರೂ ಕೆಲಸ ಪೂರೈಸದ ಅಧಿಕಾರಿಗಳ ವಿರುದ್ದ ಪ್ರತಿಭಟನೆಯನ್ನು ಮತಷ್ಟು ಉಗ್ರರೂಪಕ್ಕೆ ಕೊಂಡೊಯ್ಯುವುದಾಗಿ ಧರಣಿ ನಿರತರು ನಿರ್ಧಾರ ಮಾಡಿದ್ದನ್ನು ಅರಿತ ಇಓ ಅವರು ಪಂಚಾಯ್ತಿಯಲ್ಲಿ ಬಾಕಿ ಇರುವ ಎಲ್ಲಾ ಸಂಪೂರ್ಣ ಕೆಲಸಗಳನ್ನು ಇಂದೇ ಮಾಡಿ ಮುಗಿಸುವ ನಿಟ್ಟಿನಲ್ಲಿ ೮ ಜನ ಪಿಡಿಓ ಹಾಗೂ ೯ ಮಂದಿ ಕಾರ್ಯದರ್ಶಿ ಅವರುಗಳನ್ನು ದಸೂಡಿಗೆ ಕಳುಹಿಸಿಕೊಟ್ಟರು.

ಶುಕ್ರವಾರ ಗ್ರಾ.ಪಂ.ಗೆ ಬಂದ ಪಿಡಿಓ ಹಾಗೂ ಕಾರ್ಯದರ್ಶಿಗಳು ಕಾರ್ಯಪ್ರವೃತ್ತರಾಗಿ ತಮ್ಮಲ್ಲೇ ತಂಡಗಳನ್ನು ಮಾಡಿಕೊಂಡು ಇದುವರೆಗೂ ಆಗಿರುವ ಕಾಮಗಾರಿಗಳ ಪರಿಶೀಲನೆಯಲ್ಲಿ ನಿರತರಾದರು. ಕೆಲವರು ಪಂಚಾಯ್ತಿಯಲ್ಲಿ ಕಡತಗಳನ್ನು ಪರಿಶೀಲಿಸಿ ಈ ಹಿಂದೆ ಮಂಜೂರಾಗಿರುವ ಕಾಮಗಾರಿಗಳು ಅರ್ಹಫಲಾನುಭವಿಗೆ ಆಗಿವೆ ಇಲ್ಲವೆ ಎಂಬುದನ್ನು ಪತ್ತೆ ಮಾಡುತ್ತಿದ್ದರು. ಒಟ್ಟಾರೆ ಧರಣಿ ನಿರತರ ಕೂಗಿನಿಂದಾಗಿ ದೌಡಾಯಿಸಿದ ಅಧಿಕಾರಿಗಳ ದಂಡು ಪಂಚಾಯ್ತಿಯಲ್ಲಿ ಬಾಕಿ ಇದ್ದ ಅನೇಕ ಕಾರ್ಯಗಳನ್ನು ಒಂದೇ ದಿನದಲ್ಲಿ ಬಹುಪಾಲು ಮುಗಿಸಿದ್ದು, ಪ್ರತಿಭಟನಾಕಾರರ ಸಮಾಧಾನಕ್ಕೆ ಕಾರಣಾವಾಯಿತು. ತಮ್ಮ ಬೇಡಿಕೆಗಳು ಈಡೇರಿದ ಹಿನ್ನಲೆಯಲ್ಲಿ ತಮ್ಮ ಧರಣಿಯನ್ನು ಹಿಂಪಡೆದು ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಎಚ್ಚರಿಸಿದರು. ದಸೂಡಿ ಗ್ರಾಮ ಪಂಚಾಯ್ತಿಗೆ ಉತ್ತಮ ಹಾಗೂ ದಕ್ಷ ಅಧಿಕಾರಿಯನ್ನು ಕಾಯಂ ಆಗಿ ನಿಯೋಜಿಸುವಂತೆ ಮನವಿ ಮಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...