ವಿಷಯಕ್ಕೆ ಹೋಗಿ

ದಸೂಡಿ : ಅಹೋರಾತ್ರಿ ಧರಣಿ ಮುಕ್ತಾಯ : ಧರಣಿ ಸ್ಥಳಕ್ಕೆ ೮ ಪಿಡಿಓ, ೯ ಕಾರ್ಯದರ್ಶಿಗಳ ದೌಡು

ಹುಳಿಯಾರು  ಹೋಬಳಿ ದಸೂಡಿ ಗ್ರಾಮಪಂಚಾಯ್ತಿ ಮುಂದೆ ಕಾರ್ಯದರ್ಶಿ ವೈಖರಿ ಖಂಡಿಸಿ ಹಾಗೂ ವಿವಿಧ ಯೋಜನೆಗಳ ಕಾಮಗಾರಿಗಳ ಬಿಲ್ ಪಾವತಿ ಮಾಡುವಂತೆ ಒತ್ತಾಯಿಸಿ ಕಳೆದ ಸೋಮವಾರದಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಶುಕ್ರವಾರದಂದು ಮುಕ್ತಾಯವಾಯಿತು.
ಹುಳಿಯಾರು ಹೋಬಳಿ ದಸೂಡಿಯಲ್ಲಿನಧರಣಿ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಧರಣಿ ನಿರತರನ್ನು ಸಮಾಧಾನ ಪಡಿಸಿದರು.
ಗ್ರಾ.ಪಂ.ಸದಸ್ಯ ರವಿಕುಮಾರ್ ನೇತೃತ್ವದಲ್ಲಿ ಧರಣಿ ನಡೆದಿದ್ದು, ಸಮಸ್ಯೆಗೆ ಸ್ಪಂದಿಸಿದ ಇಓ ಸ್ಥಳಕ್ಕೆ ಆಗಮಿಸಿ ಹೆಚ್ಚುವರಿಯಾಗಿ ಬೇರೊಬ್ಬ ಪಿಡಿಓ ಅವರನ್ನು ನೇಮಿಸಿದ್ದರೂ ಸಹ ತೃಪ್ತರಾಗದ ಧರಣಿನಿರತರು ತಮ್ಮ ಧರಣಿಯನ್ನು ಮುಂದುವರಿಸಿದ್ದರು.ಪಿಡಿಓ ಅವರು ನಿತ್ಯ ಕಛೇರಿಗೆ ಬಂದು ಬಾಕಿ ಇದ್ದ ಕೆಲಸಗಳನ್ನು ಪೂರ್ತಿ ಮಾಡುತ್ತಿದ್ದರೂ ಸಹ ಅನೇಕ ಕೆಲಸಗಳು ಪೆಂಡಿಂಗ್ ಉಳಿಯುತ್ತಿದ್ದವು. ಇದನ್ನ ಗಮನಿಸಿದ ಧರಣಿನಿರತರು ಬಾಕಿ ಇರುವ ಎಲ್ಲಾ ಕೆಲಸಗಳನ್ನು ಸಂಪೂರ್ಣವಾಗಿ ಮಾಡಿ ಮುಗಿಸುವವರೆಗೆ ತಮ್ಮ ಧರಣಿ ನಡೆಯುವುದಾಗಿ ಪಟ್ಟು ಹಿಡಿದಿದ್ದರು.
೫ ದಿನಗಳು ಕಳೆಯುತ್ತಾ ಬಂದರೂ ಕೆಲಸ ಪೂರೈಸದ ಅಧಿಕಾರಿಗಳ ವಿರುದ್ದ ಪ್ರತಿಭಟನೆಯನ್ನು ಮತಷ್ಟು ಉಗ್ರರೂಪಕ್ಕೆ ಕೊಂಡೊಯ್ಯುವುದಾಗಿ ಧರಣಿ ನಿರತರು ನಿರ್ಧಾರ ಮಾಡಿದ್ದನ್ನು ಅರಿತ ಇಓ ಅವರು ಪಂಚಾಯ್ತಿಯಲ್ಲಿ ಬಾಕಿ ಇರುವ ಎಲ್ಲಾ ಸಂಪೂರ್ಣ ಕೆಲಸಗಳನ್ನು ಇಂದೇ ಮಾಡಿ ಮುಗಿಸುವ ನಿಟ್ಟಿನಲ್ಲಿ ೮ ಜನ ಪಿಡಿಓ ಹಾಗೂ ೯ ಮಂದಿ ಕಾರ್ಯದರ್ಶಿ ಅವರುಗಳನ್ನು ದಸೂಡಿಗೆ ಕಳುಹಿಸಿಕೊಟ್ಟರು.

ಶುಕ್ರವಾರ ಗ್ರಾ.ಪಂ.ಗೆ ಬಂದ ಪಿಡಿಓ ಹಾಗೂ ಕಾರ್ಯದರ್ಶಿಗಳು ಕಾರ್ಯಪ್ರವೃತ್ತರಾಗಿ ತಮ್ಮಲ್ಲೇ ತಂಡಗಳನ್ನು ಮಾಡಿಕೊಂಡು ಇದುವರೆಗೂ ಆಗಿರುವ ಕಾಮಗಾರಿಗಳ ಪರಿಶೀಲನೆಯಲ್ಲಿ ನಿರತರಾದರು. ಕೆಲವರು ಪಂಚಾಯ್ತಿಯಲ್ಲಿ ಕಡತಗಳನ್ನು ಪರಿಶೀಲಿಸಿ ಈ ಹಿಂದೆ ಮಂಜೂರಾಗಿರುವ ಕಾಮಗಾರಿಗಳು ಅರ್ಹಫಲಾನುಭವಿಗೆ ಆಗಿವೆ ಇಲ್ಲವೆ ಎಂಬುದನ್ನು ಪತ್ತೆ ಮಾಡುತ್ತಿದ್ದರು. ಒಟ್ಟಾರೆ ಧರಣಿ ನಿರತರ ಕೂಗಿನಿಂದಾಗಿ ದೌಡಾಯಿಸಿದ ಅಧಿಕಾರಿಗಳ ದಂಡು ಪಂಚಾಯ್ತಿಯಲ್ಲಿ ಬಾಕಿ ಇದ್ದ ಅನೇಕ ಕಾರ್ಯಗಳನ್ನು ಒಂದೇ ದಿನದಲ್ಲಿ ಬಹುಪಾಲು ಮುಗಿಸಿದ್ದು, ಪ್ರತಿಭಟನಾಕಾರರ ಸಮಾಧಾನಕ್ಕೆ ಕಾರಣಾವಾಯಿತು. ತಮ್ಮ ಬೇಡಿಕೆಗಳು ಈಡೇರಿದ ಹಿನ್ನಲೆಯಲ್ಲಿ ತಮ್ಮ ಧರಣಿಯನ್ನು ಹಿಂಪಡೆದು ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಎಚ್ಚರಿಸಿದರು. ದಸೂಡಿ ಗ್ರಾಮ ಪಂಚಾಯ್ತಿಗೆ ಉತ್ತಮ ಹಾಗೂ ದಕ್ಷ ಅಧಿಕಾರಿಯನ್ನು ಕಾಯಂ ಆಗಿ ನಿಯೋಜಿಸುವಂತೆ ಮನವಿ ಮಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.