ವಿಷಯಕ್ಕೆ ಹೋಗಿ

ರಾತ್ರಿಯಲ್ಲಾ ಶವ ಠಾಣೆಮುಂದಿಟ್ಟು ಪ್ರತಿಭಟನೆ - ಸಿಎಂ ನಿಧಿಯಿಂದ ಹೆಚ್ಚಿನ ಪರಿಹಾರ :ಶಾಸಕರ ಭರವಸೆಯೊಂದಿಗೆ ಅಂತ್ಯ

ಹುಳಿಯಾರು  ಪಟ್ಟಣ ಇಂದಿರಾನಗರದಲ್ಲಿ ಆಟೋಸಿಲಿಂಡರ್ ಸ್ಫೋಟದಿಂದ ತೀವ್ರಗಾಯಗೊಂಡು ಸಾವನಪ್ಪಿದ ಪುಟ್ಟಶಾಮಾಚಾರ್ ಸಾವಿನಿಂದಾಗಿ ಆತನ ಕುಟುಂಬ ಸಂಕಷ್ಟದಲ್ಲಿ ಸಿಲುಕಿದ್ದು ಆ ಕುಟುಂಬಕ್ಕೆ ಸೂಕ್ತಪರಿಹಾರ ನೀಡುವಂತೆ ಹಾಗೂ ಈ ಸ್ಫೋಟಕ್ಕೆ ಆಟೋ ಚಾಲಕನೇ ಕಾರಣವಾಗಿದ್ದು ತನಿಖೆಯಾಗಬೇಕೆಂದು ಒತ್ತಾಯಿಸಿ ಸೋಮವಾರ ರಾಟ್ರಿಯಿಂದ ಪ್ರಾರಂಭವಾಗಿದ್ದ ಪ್ರತಿಭಟನೆ ಮಂಗಳವಾರ ಶಾಸಕ ಸಿ.ಬಿ.ಸುರೇಶ್ ಬಾಬು ಅವರ ಮಧ್ಯಸ್ತಿಕೆಯಲ್ಲಿ ಕೊನೆಗೊಂಡಿತ್ತು.
 ಸೋಮವಾರ ರಾತ್ರಿ ಠಾಣೆ ಮುಂದೆ ಮೃತ ಪುಟ್ಟಶಾಮಾಚಾರ್ ಶವ ಇಟ್ಟು ಪ್ರತಿಭಟನೆಗೆ ಮುಂದಾದ ಸಾರ್ವಜನಿಕರು.
ಕಳೆದ ಗುರುವಾರದಂದು ಆಟೋ ಸಿಲಿಂಡರ್ ಸ್ಪೋಟಗೊಂಡು ಅಂಗನವಾಡಿ ಮಕ್ಕಳು ಸೇರಿದಂತೆ ಪುಟ್ಟಸ್ವಾಮಾಚಾರ ಹಾಗೂ ಆತನ ಪತ್ನಿ ಸುಲೋಚನ ಅವರಿಗೂ ತೀವ್ರ ಸುಟ್ಟಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚು ಗಾಯಗೊಂಡಿದ್ದ ಪುಟ್ಟಶಾಮಾಚಾರ್ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ಅಸುನೀಗಿ ಇವರ ಕುಟುಂಬ ಬೀದಿಗೆ ಬಿದ್ದಿದೆ.
ಮೃತ ಕುಟುಂಬದವರ ಸಮಸ್ಯೆ ಆಳಿಸಿ ಪರಿಹಾರ ಘೋಷಿಸಿದ ಶಾಸಕ ಸಿ.ಬಿ.ಸುರೇಶ್ ಬಾಬು.
ಇದುವರೆಗೂ ಸಿಲಿಂಡರ್ ಸ್ಪೋಟ ಆಕಸ್ಮಿಕವಾಗಿ ಆಗಿರಬಹುದೆಂದು ಜನ ನಂಬಿದ್ದರು.ಆದರೆ ಆಸ್ಪತ್ರೆಯಿಂದ ಚೇತರಿಸಿಕೊಂಡೂ ಬಂದ ಸುಲೋಚನ ಘಟನೆ ನಡೆದ ಸಂಪೂರ್ಣವಿವರವನ್ನು ತಿಳಿಸಿದ್ದು, ಆಟೋ ಸಿಲಿಂಡರ್ ಗೆ ಅಡುಗೆ ಅನಿಲದ ಸಿಲಿಂಡರ್ ನಿಂದ ಡಂಪಿಂಗ್ ಮಾಡುವ ವೇಳೆ ಆಟೋಚಾಲಕ ಶಬ್ಬಿರ್ ನ ಅಜಾಗರೂಕತೆಯಿಂದ ಸ್ಫೋಟವಾಗಿದ್ದು ಈ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.
ಆಕ್ರಮವಾಗಿ ಅನಿಲ ರೀಫಿಲ್ಲಿಂಗ್ ಮಾಡಿದ ವ್ಯಕ್ತಿಗೆ ಪರಿಹಾರ ನೀಡಿದ್ದಲ್ಲದೆ ಆತನನ್ನು ರಕ್ಷಿಸುವ ಕಾರ್ಯಕ್ಕೆ ಎಲ್ಲರೂ ಮುಂದಾಗಿದ್ದು ಸಾವಿನಪ್ಪಿದ ಇವರ ಕುಟುಂಬಕ್ಕೆ ಕೇಳುವವರೇ ಗತಿಯಿಲ್ಲವೆಂದು
ಪಟ್ಟಣದ ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಹಾಗೂ ಈಗ ಸಾವನಪ್ಪಿರುವ ಪುಟ್ಟಶಾಮಾಚಾರ್ ಕುಟುಂಬಕ್ಕೆ ಸೂಕ್ತಪರಿಹಾರ ನೀಡುವಂತೆ ಒತ್ತಾಯಿಸಿ ಪೋಲೀಸ್ ಠಾಣೆಯ ಪಕ್ಕ ಮೃತದೇಹವನ್ನಿಟ್ಟು ಸೋಮವಾರ ರಾತ್ರಿಯಿಂದ ಪ್ರತಿಭಟನೆಗೆ ಮುಂದಾಗಿದ್ದರು.
ಹುಳಿಯಾರಿನಲ್ಲಿ ಸಂಭವಿಸಿದ ಸಿಲಿಂಡರ್ ಸ್ಪೋಟದಿಂದ ಸಾವನಪ್ಪಿದ ಪುಟ್ಟಶಾಮಾಚಾರ್ ಅವರ ಅಂತ್ಯಕ್ರಿಯೆಗೆ ತಹಸೀಲ್ದಾರ್ ಕಾಮಾಕ್ಷಮ್ಮ ಒಂದುಸಾವಿರ ರೂಪಾಯಿ ಚೆಕ್ಕನ್ನು ಮೃತನ ಪತ್ನಿಗೆ ನೀಡಿದರು. ಶಾಸಕ ಸಿ.ಬಿ.ಸುರೇಶ್ ಬಾಬು ಇತರರಿದ್ದಾರೆ.
ಮಂಗಳವಾರ ಬೆಳಿಗ್ಗೆ ಶಾಸಕ ಸಿ.ಬಿ.ಸುರೇಶ್ ಬಾಬು ತಮ್ಮೊಂದಿಗೆ ತಹಸೀಲ್ದಾರ್ ಕಾಮಾಕ್ಷಮ್ಮ ಹಾಗೂ ಇಓ ಕೃಷ್ಣಮೂರ್ತಿ ಅವರೊಂದಿಗೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತನಾಡಿದರು. ಈತ ಆಸ್ಪತ್ರೆಯಲ್ಲಿದ್ದಾಗ ತಾವು ಅವರ ಬಳಿ ಹೋಗಿ ಯೋಗ ಕ್ಷೇಮ ವಿಚಾರಿಸಿದ್ದಾಗಿ ತಿಳಿಸಿದರು. ಈತನ ಕುಟುಂಬಕ್ಕೆ ಜಿಲ್ಲಾಡಳಿತದದಿಂದ ಯಾವುದೇ ರೀತಿಯ ಪರಿಹಾರ ನೀಡಲು ಬರುವುದಿಲ್ಲ ಮುಖ್ಯಮಂತ್ರಿ ನಿಧಿಯಿಂದ ಈತನ ಕುಟುಂಬಕ್ಕೆ ಪರಿಹಾರ ಕೊಡಬಹುದಾಗಿದ್ದು ಶೀಘ್ರವೇ ಪರಿಹಾರವನ್ನು ತರಿಸಿಕೊಡುವ ಭರವಸೆ ನೀಡಿದರು. ಈತನ ಮಗನಿಗೆ ಸ್ವ ಉದ್ಯೋಗ ಕಲ್ಪಿಸಿಕೊಳ್ಳುವ ನಿಟ್ಟಿನಲ್ಲಿ ಬಿಸಿಎಂ ಲೋನ್ ಹಾಕಿಸಿ ಕೊಡುವುದಾಗಿ ತಿಳಿಸಿದ್ದಲ್ಲದೆ ಹತ್ತು ಸಾವಿರ ನಗದನ್ನು ಮೃತನ ಪತ್ನಿ ಸುಲೋಚನಮ್ಮನವರಿಗೆ ನೀಡುವ ಮೂಲಕ ಸಾಂತ್ವಾನ ಹೇಳಿದರು. ಮೃತರ ಕುಟುಂಬದವರಿಗೆ ಮನೆ ನಿರ್ಮಾಣಕ್ಕೆ ಅನುವು ಮಾಡಿಕೊಡುವಂತೆ ತಾ.ಪಂ.ಇಓ ಅವರಿಗೆ ತಿಳಿಸಿರುವುದಾಗಿ ಹಾಗೂ ಈ ಎಲ್ಲಾ ಕಾರ್ಯಗಳು ಶೀಘ್ರವೇ ನಡೆಯುವ ಭರವಸೆ ನೀಡಿದರು.
ತನಿಖೆ : ಸಿಲಿಂಡರ್ ಸ್ಫೋಟಕ್ಕೆ ಕಾರಣನಾದ ಆಟೋ ಚಾಲಕನ ಮೇಲೆ ಕೇಸು ದಾಖಲಿಸಿ, ಸೂಕ್ತ ಕಾರಣವೇನೆಂಬುದರ ಬಗ್ಗೆ ಸೂಕ್ತ ತನಿಖೆ ನಡೆಸಿ, ಆಟೋದಲ್ಲಿ ಸಿಲಿಂಡರ್ ಅಳವಡಿಸಲು ಪರವಾನಿಗೆ ಇತ್ತೆ,ಇಲ್ಲವೇ ಎಂಬುದನ್ನು ಪರಿಶೀಲಿಸಿ, ಒಂದು ವೇಳೆ ಲೈಸೆನ್ಸ್ ಇದ್ದರೆ ಸಿಲಿಂಡರ್ ಕಂಪನಿಯಿಂದ ಬರುವ ಮೊತ್ತವನ್ನು ಮೃತ ಕುಟುಂಬದವರಿಗೆ ಕೊಡಿಸುವ ವ್ಯವಸ್ಥೆ ಮಾಡುವಂತೆ ಪೊಲೀಸರಿಗೆ ತಿಳಿಸಿದರು.
ತಹಸೀಲ್ದಾರ್ ಕಾಮಾಕ್ಷಮ್ಮ ತಮ್ಮ ಇಲಾಖೆವತಿಯಿಂದ ಶವಸಂಸ್ಕಾರಕ್ಕೆಂದು ಒಂದು ಸಾವಿರ ರೂನ ಚೆಕ್ಕನ್ನು ಸ್ಥಳದಲ್ಲೇ ವಿತರಿಸಿದು ಹಾಗೂ ತಮ್ಮ ಇಲಾಖೆವತಿಯಿಂದ ಹೆಚ್ಚುವರಿಯಾಗಿ ಬರಬಹುದಾದ ಪರಿಹಾರವನ್ನು ನೀಡುವ ಭರವಸೆಯಿತ್ತರು.


ಪ್ರತಿಭಟನೆಯಲ್ಲಿ ಮೃತನ ಸಂಬಂಧಿಕರು ಸೇರಿದಂತೆ ವಿಶ್ವಕರ್ಮ ಸಮಾಜದವರು, ಹಿಂದೂ ಜಾಗರಣ ವೇದಿಕೆ ಪದಾಧಿಕಾರಿಗಳು, ರೈತಸಂಘದವರು, ಕರ್ನಾಟಕ ರಕ್ಷಣಾವೇದಿಕೆಯವರು, ದಲಿತ ಸಹಾಯವಾಣಿಯ ಸದಸ್ಯರು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...