ವಿಷಯಕ್ಕೆ ಹೋಗಿ

ಮುನ್ಸೂಚನೆಯಿಲ್ಲದೆ ನೀಡಿದ ನೋಟೀಸ್ ನಿಂದ ಗೊಂದಲ

ಹುಳಿಯಾರು : ಪಟ್ಟಣದ ಬಸ್ ನಿಲ್ದಾಣದ ಕೆರೆ ಅಂಗಳದಲ್ಲಿನ ಅಂಗಡಿದಾರರಿಗೆ ಅಂಗಡಿ ತೆರವುಗೊಳಿಸುವಂತೆ ನೋಟೀಸ್ ನೀಡಿದ್ದು ಒಂದೆಡೆಯಾದರೆ , ಬಸ್ ನಿಲ್ದಾಣಕ್ಕೆ ಹೊಂದಿಕೊಂಡಂತೆ ಇರುವ ಶ್ರೀಅನಂತಶಯನ ರಂಗನಾಥಸ್ವಾಮಿ ದೇವಾಲಯದ ಹತ್ತಿರದ ಅಂಗಡಿಗಳಿಗೂ ಸಹ ನೋಟೀಸ್ ನೀಡಿ ಫೆ.೧ರ ಒಳಗಾಗಿ ತೆರವುಗೊಳಿಸುವಂತೆ ತಿಳಿಸಿರುವುದು ಗೊಂದಲಕ್ಕೆಡೆ ಮಾಡಿದೆ.
ರಂಗನಾಥಸ್ವಾಮಿ ದೇವಾಲಯಕ್ಕೆ ಹೊಂದಿಕೊಂಡಂತೆ ಇರುವ ಅಂಗಡಿಗಳು.
ಕಳೆದೆರಡು ಮೂರು ತಿಂಗಳಿನಿಂದ ಕೆರೆ ಒತ್ತುವರಿ ಸಂಬಂಧಿಸಿದಂತೆ ಮನೆಗಳು ಹಾಗೂ ಅಂಗಡಿಗಳ ಪಟ್ಟಿ ಮಾಡಿ ತೆರವುಗೊಳಿಸಲು ಸೂಚಿಸಲಾಗಿತ್ತು. ನಿವಾಸಿಗಳು ಹಾಗೂ ಅಂಗಡಿದಾರರು ಸಂಸದರು ಹಾಗೂ ಸಚಿವರ ಮೂಲಕ ಒತ್ತಡ ತಂದ ಪರಿಣಾಮ ಜನವರಿ ೩೧ಕ್ಕೆ ಅಂತಿಮ ಗಡುವು ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಕೆರೆಗೆ ಹೊಂದಿಕೊಂಡಂತೆ ಇರುವ ಅಂಗಡಿದಾರರ ಪಟ್ಟಿ ಮಾಡಿದಂತೆ ಅವರುಗಳಿಗೆ ನೋಟೀಸ್ ನೀಡುವ ಕಾರ್ಯ ಗುರುವಾರ ಜರುಗಿತು.
ಕೆರೆ ಒತ್ತುವರಿ ಮಾಡಿರುವ ಅಂಗಡಿಯವರಿಗೆ ಮಾತ್ರ ನೋಟೀಸ್ ಜಾರಿ ಮಾಡಬೇಕಾಗಿದ್ದ ಅಧಿಕಾರಿಗಳು ಇದೀಗ ಹೊಸ ನೆಪವೊಡ್ಡಿ ಇದರೊಂದಿಗೆ ಪಟ್ಟಣದ ಮುಜುರಾಯಿ ಇಲಾಖೆಗೆ ಸೇರಿದ ರಂಗನಾಥಸ್ವಾಮಿ ದೇವಾಲಯಕ್ಕೆ ಹೊಂದಿಕೊಂಡಂತಿರುವ ಅಂಗಡಿದಾರರಿಗೂ ನೋಟೀಸ್ ಜಾರಿ ಮಾಡಿದ್ದಾರೆ. ದೇವಾಲಯದ ಬಳಿ ಇರುವ ಪೆಟ್ಟಿಗೆ ಅಂಗಡಿದಾರರಿಗೆ ಫೆ.೧ರ ಒಳಗಾಗಿ ತಮ್ಮ ಅಂಗಡಿಗಳನ್ನು ತೆರವುಗೊಳಿಸುವಂತೆ ನೋಟೀಸ್ ನೀಡಿದ್ದು ಈ ಅಂಗಡಿದಾರರಲ್ಲಿ ಆತಂಕ ಉಂಟುಮಾಡಿದೆಯಲ್ಲದೆ ಗೊಂದಲಕ್ಕೆ ಕಾರಣವಾಗಿದೆ.
ಸಮಸ್ಯೆ ಏನು: ಕೆರೆ ಅಂಗಳದ ಅಂಗಡಿಗಳನ್ನು ಸರ್ವೆ ಮಾಡಿ ನಂತರ ಪಟ್ಟಿಮಾಡಿರುವ ಇಲಾಖೆಯವರು ಈ ದೇವಾಲಯದ ಆವರಣದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲು ಯಾವುದೇ ರೀತಿಯ ಸರ್ವೆ ಮಾಡಿಲ್ಲ, ಅಂಗಡಿದಾರರ ಪಟ್ಟಿ ಸಿದ್ದಮಾಡಿಲ್ಲ ಹಾಗೂ ಯಾವ ಉದ್ದೇಶಕ್ಕಾಗಿ ಅಂಗಡಿಗಳನ್ನು ತೆರವುಗೊಳಿಸುತ್ತಿರುವುದಾಗಿ ಇಲ್ಲಿನ ಅಂಗಡಿದಾರರಿಗೆ ಮಾಹಿತಿ ನೀಡಿ ಕಾಲಾವಾಕಾಶ ಸಹ ನೀಡಿಲ್ಲ.

ಬಸ್ ನಿಲ್ದಾಣದ ಅಂಗಡಿಗಳು ಕೆರೆಯ ಜಾಗದಲ್ಲಿದ್ದು ಅವುಗಳನ್ನು ತೆಗೆಯುವಂತೆ ನೋಟೀಸ್ ನೀಡಿದ್ದಲ್ಲದೆ ಸಾಕಷ್ಟು ತಿಂಗಳಗಳ ಕಾಲಾವಾಕಾಶ ನೀಡಿದ್ದಾರೆ ಆದರೆ ನಮ್ಮ ಅಂಗಡಿಗಳು ಯಾವುದೇ ಒತ್ತುವರಿ ಜಾಗದಲ್ಲಿಲ್ಲ ಪಂಚಾಯ್ತಿಗೆ ಸೇರಿದ ಜಾಗದಲ್ಲಿವೆ ಅದರೂ ಸಹ ಈರೀತಿ ನೋಟೀಸ್ ನೀಡಿದ್ದಾರೆ ನಮಗೆ ಅನ್ಯಾಯವಾಗುತ್ತಿದೆ. ಅವರಿಗೊಂದು ನ್ಯಾಯವಾದರೆ ನಮಗೊಂದುನ್ಯಾಯವೇ ಎಂಬುದು ಅಂಗಡಿದಾರರ ಅಳಲಾಗಿದೆ.
ನಾವು ಹಲವಾರು ವರ್ಷಗಳಿಂದ ಅಂಗಡಿ ನಡೆಸುತ್ತಿದ್ದು ಇದರಲ್ಲೇ ಜೀವನ ಸಾಗಿಸುತ್ತಿದ್ದೇವೆ ಅಂಗಡಿ ತೆರವು ಮಾಡುವಂತೆ ನೀಡಿದ ನೋಟೀಸ್ ಬಗ್ಗೆ ಉಪತಹಸೀಲ್ದಾರ್ ಅವರನ್ನು ಪ್ರಶ್ನಿಸಿದರೆ ನಮಗೆ ಈ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಾರೆ. ಇದೀಗ ಯಾರದ್ದೋ ಒತ್ತಡಕ್ಕೆ ಮಣಿದು ಯಾರ ಗಮನಕ್ಕೂ ಭಾರದಂತೆ ನಮಗೆ ನೋಟೀಸ್ ನೀಡಿರುವುದು ಸರಿಯೇ: ಕಟಿಂಗ್ ಷಾಪ್ ಮಾಲೀಕ ನಟರಾಜ್ .

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...