ವಿಷಯಕ್ಕೆ ಹೋಗಿ

ಮುನ್ಸೂಚನೆಯಿಲ್ಲದೆ ನೀಡಿದ ನೋಟೀಸ್ ನಿಂದ ಗೊಂದಲ

ಹುಳಿಯಾರು : ಪಟ್ಟಣದ ಬಸ್ ನಿಲ್ದಾಣದ ಕೆರೆ ಅಂಗಳದಲ್ಲಿನ ಅಂಗಡಿದಾರರಿಗೆ ಅಂಗಡಿ ತೆರವುಗೊಳಿಸುವಂತೆ ನೋಟೀಸ್ ನೀಡಿದ್ದು ಒಂದೆಡೆಯಾದರೆ , ಬಸ್ ನಿಲ್ದಾಣಕ್ಕೆ ಹೊಂದಿಕೊಂಡಂತೆ ಇರುವ ಶ್ರೀಅನಂತಶಯನ ರಂಗನಾಥಸ್ವಾಮಿ ದೇವಾಲಯದ ಹತ್ತಿರದ ಅಂಗಡಿಗಳಿಗೂ ಸಹ ನೋಟೀಸ್ ನೀಡಿ ಫೆ.೧ರ ಒಳಗಾಗಿ ತೆರವುಗೊಳಿಸುವಂತೆ ತಿಳಿಸಿರುವುದು ಗೊಂದಲಕ್ಕೆಡೆ ಮಾಡಿದೆ.
ರಂಗನಾಥಸ್ವಾಮಿ ದೇವಾಲಯಕ್ಕೆ ಹೊಂದಿಕೊಂಡಂತೆ ಇರುವ ಅಂಗಡಿಗಳು.
ಕಳೆದೆರಡು ಮೂರು ತಿಂಗಳಿನಿಂದ ಕೆರೆ ಒತ್ತುವರಿ ಸಂಬಂಧಿಸಿದಂತೆ ಮನೆಗಳು ಹಾಗೂ ಅಂಗಡಿಗಳ ಪಟ್ಟಿ ಮಾಡಿ ತೆರವುಗೊಳಿಸಲು ಸೂಚಿಸಲಾಗಿತ್ತು. ನಿವಾಸಿಗಳು ಹಾಗೂ ಅಂಗಡಿದಾರರು ಸಂಸದರು ಹಾಗೂ ಸಚಿವರ ಮೂಲಕ ಒತ್ತಡ ತಂದ ಪರಿಣಾಮ ಜನವರಿ ೩೧ಕ್ಕೆ ಅಂತಿಮ ಗಡುವು ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಕೆರೆಗೆ ಹೊಂದಿಕೊಂಡಂತೆ ಇರುವ ಅಂಗಡಿದಾರರ ಪಟ್ಟಿ ಮಾಡಿದಂತೆ ಅವರುಗಳಿಗೆ ನೋಟೀಸ್ ನೀಡುವ ಕಾರ್ಯ ಗುರುವಾರ ಜರುಗಿತು.
ಕೆರೆ ಒತ್ತುವರಿ ಮಾಡಿರುವ ಅಂಗಡಿಯವರಿಗೆ ಮಾತ್ರ ನೋಟೀಸ್ ಜಾರಿ ಮಾಡಬೇಕಾಗಿದ್ದ ಅಧಿಕಾರಿಗಳು ಇದೀಗ ಹೊಸ ನೆಪವೊಡ್ಡಿ ಇದರೊಂದಿಗೆ ಪಟ್ಟಣದ ಮುಜುರಾಯಿ ಇಲಾಖೆಗೆ ಸೇರಿದ ರಂಗನಾಥಸ್ವಾಮಿ ದೇವಾಲಯಕ್ಕೆ ಹೊಂದಿಕೊಂಡಂತಿರುವ ಅಂಗಡಿದಾರರಿಗೂ ನೋಟೀಸ್ ಜಾರಿ ಮಾಡಿದ್ದಾರೆ. ದೇವಾಲಯದ ಬಳಿ ಇರುವ ಪೆಟ್ಟಿಗೆ ಅಂಗಡಿದಾರರಿಗೆ ಫೆ.೧ರ ಒಳಗಾಗಿ ತಮ್ಮ ಅಂಗಡಿಗಳನ್ನು ತೆರವುಗೊಳಿಸುವಂತೆ ನೋಟೀಸ್ ನೀಡಿದ್ದು ಈ ಅಂಗಡಿದಾರರಲ್ಲಿ ಆತಂಕ ಉಂಟುಮಾಡಿದೆಯಲ್ಲದೆ ಗೊಂದಲಕ್ಕೆ ಕಾರಣವಾಗಿದೆ.
ಸಮಸ್ಯೆ ಏನು: ಕೆರೆ ಅಂಗಳದ ಅಂಗಡಿಗಳನ್ನು ಸರ್ವೆ ಮಾಡಿ ನಂತರ ಪಟ್ಟಿಮಾಡಿರುವ ಇಲಾಖೆಯವರು ಈ ದೇವಾಲಯದ ಆವರಣದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲು ಯಾವುದೇ ರೀತಿಯ ಸರ್ವೆ ಮಾಡಿಲ್ಲ, ಅಂಗಡಿದಾರರ ಪಟ್ಟಿ ಸಿದ್ದಮಾಡಿಲ್ಲ ಹಾಗೂ ಯಾವ ಉದ್ದೇಶಕ್ಕಾಗಿ ಅಂಗಡಿಗಳನ್ನು ತೆರವುಗೊಳಿಸುತ್ತಿರುವುದಾಗಿ ಇಲ್ಲಿನ ಅಂಗಡಿದಾರರಿಗೆ ಮಾಹಿತಿ ನೀಡಿ ಕಾಲಾವಾಕಾಶ ಸಹ ನೀಡಿಲ್ಲ.

ಬಸ್ ನಿಲ್ದಾಣದ ಅಂಗಡಿಗಳು ಕೆರೆಯ ಜಾಗದಲ್ಲಿದ್ದು ಅವುಗಳನ್ನು ತೆಗೆಯುವಂತೆ ನೋಟೀಸ್ ನೀಡಿದ್ದಲ್ಲದೆ ಸಾಕಷ್ಟು ತಿಂಗಳಗಳ ಕಾಲಾವಾಕಾಶ ನೀಡಿದ್ದಾರೆ ಆದರೆ ನಮ್ಮ ಅಂಗಡಿಗಳು ಯಾವುದೇ ಒತ್ತುವರಿ ಜಾಗದಲ್ಲಿಲ್ಲ ಪಂಚಾಯ್ತಿಗೆ ಸೇರಿದ ಜಾಗದಲ್ಲಿವೆ ಅದರೂ ಸಹ ಈರೀತಿ ನೋಟೀಸ್ ನೀಡಿದ್ದಾರೆ ನಮಗೆ ಅನ್ಯಾಯವಾಗುತ್ತಿದೆ. ಅವರಿಗೊಂದು ನ್ಯಾಯವಾದರೆ ನಮಗೊಂದುನ್ಯಾಯವೇ ಎಂಬುದು ಅಂಗಡಿದಾರರ ಅಳಲಾಗಿದೆ.
ನಾವು ಹಲವಾರು ವರ್ಷಗಳಿಂದ ಅಂಗಡಿ ನಡೆಸುತ್ತಿದ್ದು ಇದರಲ್ಲೇ ಜೀವನ ಸಾಗಿಸುತ್ತಿದ್ದೇವೆ ಅಂಗಡಿ ತೆರವು ಮಾಡುವಂತೆ ನೀಡಿದ ನೋಟೀಸ್ ಬಗ್ಗೆ ಉಪತಹಸೀಲ್ದಾರ್ ಅವರನ್ನು ಪ್ರಶ್ನಿಸಿದರೆ ನಮಗೆ ಈ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಾರೆ. ಇದೀಗ ಯಾರದ್ದೋ ಒತ್ತಡಕ್ಕೆ ಮಣಿದು ಯಾರ ಗಮನಕ್ಕೂ ಭಾರದಂತೆ ನಮಗೆ ನೋಟೀಸ್ ನೀಡಿರುವುದು ಸರಿಯೇ: ಕಟಿಂಗ್ ಷಾಪ್ ಮಾಲೀಕ ನಟರಾಜ್ .

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...