ವಿಷಯಕ್ಕೆ ಹೋಗಿ

ಹುಳಿಯಾರಿಗೆ ಹೆಚ್ಚುವರಿ ನ್ಯಾಯಾಲಯ ಕಲ್ಪಿಸಿಕೊಡಿ

ಹುಳಿಯಾರು  ಹೋಬಳಿಯ ಗಡಿಭಾಗದಲ್ಲಿನ ಅನೇಕ ಹಳ್ಳಿಯ ಕಕ್ಷಿದಾರರು ತಾಲ್ಲೂಕು ಕೇಂದ್ರವಾದ ಚಿ.ನಾ.ಹಳ್ಳಿಯ ನ್ಯಾಯಾಲಯಕ್ಕೆ ಹೋಗಿ ನ್ಯಾಯ ಪಡೆಯುವುದು ತ್ರಾಸದಾಯಕವಾಗಿದ್ದು ಹೋಬಳಿ ಕೇಂದ್ರವಾಗಿರುವ ಹುಳಿಯಾರಿನಲ್ಲಿ ಹೆಚ್ಚುವರಿ ನ್ಯಾಯಾಲಯವನ್ನು ಪ್ರಾರಂಭಿಸುವಂತೆ ಹುಳಿಯಾರು ಹೋಬಳಿ ವ್ಯಾಪ್ತಿಯ ವಕೀಲರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹುಳಿಯಾರಿನಲ್ಲಿ ಹೆಚ್ಚುವರಿ ನ್ಯಾಯಾಲಯ ಪ್ರಾರಂಭಿಸುವಂತೆ ಹೋಬಳಿಯ ವಕೀಲರೆಲ್ಲಾ ಸೇರಿ ಪತ್ರಿಕಾಗೋಷ್ಠಿ ನಡೆಸಿದರು.
ಹುಳಿಯಾರಿನ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆಗುಹೋಗುಗಳು ಹಾಗೂ ರೂಪುರೇಷೆ ಬಗ್ಗೆ ಹೋಬಳಿಯ ವಕೀಲರೆಲ್ಲಾ ಸೇರಿ ಚರ್ಚೆ ನಡೆಸಿದರು.
ಹುಳಿಯಾರು ಹೋಬಳಿ ೬೦ ರಿಂದ ೭೦ ಸಾವಿರ ಜನಸಂಖ್ಯೆಯಿಂದ ಕೂಡಿದ್ದು ನಿತ್ಯ ಹತ್ತುಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯದ ಮೆಟ್ಟಿಲೇರುವವರ ಸಂಖ್ಯೆ ಸಾಕಷ್ಟಿದೆ. ಸದ್ಯ ಚಿ.ನಾ.ಹಳ್ಳಿಗೆ ಪ್ರಧಾನ (ಕಿರಿಯ) ಸಿವಿಲ್ ನ್ಯಾಯಾಲಯಕ್ಕೆ ಈ ಭಾಗದಿಂದ ನ್ಯಾಯ ಕೋರಿ ಹೋಗುವವರ ಪ್ರಕರಣ ಹೆಚ್ಚಿವೆ.
ಹುಳಿಯಾರು ಹೋಬಳಿಯ ಗಡಿಭಾಗದ ದಸೂಡಿ,ದಬ್ಬಗುಂಟೆ,ಮರೆನಡುಪಾಳ್ಯ ಮುಂತಾದ ಗ್ರಾಮಗಳಿಂದ ಜನ ಚಿ.ನಾ.ಹಳ್ಳಿಯ ಕೊರ್ಟ್ ಗೆ ಬರಬೇಕೆಂದರೆ ಸುಮಾರು ೪೦ ರಿಂದ ೫೦ ಕಿಮೀ ದೂರವಿದ್ದು ಬೆಳಿಗ್ಗೆ ಬಂದರೆ ವಾಪಸ್ಸ್ ಹೋಗುವುದಕ್ಕೆ ಸಂಜೆಯಾಗುತ್ತದೆ.ಅಲ್ಲದೆ ಗಡಿಭಾಗದ ಅನೇಕ ಹಳ್ಳಿಗಳಿಗೆ ಸಂಜೆಯ ನಂತರ ಬಸ್ ಸೌಕರ್ಯವಿಲ್ಲದೆ ಜನ ನಿತ್ಯ ಪರದಾಡುವಂತಾಗಿದೆ. ತಾಲ್ಲೂಕಿನ ನ್ಯಾಯಾಲಯದಲ್ಲಿರುವ ಒಟ್ಟು ೧೫೦೦ ಕೇಸ್ ಗಳಲ್ಲಿ ಹುಳಿಯಾರು ಹೋಬಳಿಗೆ ಸೇರಿದ ೭೫೦ಕ್ಕೂ ಹೆಚ್ಚು ಕೇಸ್ ಗಳಿವೆ ಹಾಗೂ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಕೀಲರಲ್ಲಿ ೩೦ಕ್ಕೂ ಹೆಚ್ಚು ಮಂದಿ ಹುಳಿಯಾರು ಭಾಗದವರೆ ಆಗಿದ್ದು ನಿತ್ಯ ಇಲ್ಲಿಂದಲ್ಲೆ ಹೋಗಿ ಬರುತ್ತಿದ್ದಾರೆ.
ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ನ್ಯಾಯದೊರೆಯುವಂತಾಗಬೇಕು. ಹುಳಿಯಾರು ಹಾಗೂ ಪಕ್ಕದ ಹಂದನಕೆರೆ ಎರಡು ಹೋಬಳಿಗೂ ಸೇರಿಕೊಂಡಂತೆ ಹುಳಿಯಾರಿನಲ್ಲಿ ಹೆಚ್ಚುವರಿ ನ್ಯಾಯಾಲಯವನ್ನು ಪ್ರಾರಂಭಿಸುವುದರಿಂದ ಈಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈನಿಟ್ಟಿನಲ್ಲಿ ಇದೇ ಭಾಗದವರೆ ಆದ ಕಾನೂನುಮಂತ್ರಿಗಳು ಗಮನಹರಿಸಿ ಶೀಘ್ರದಲ್ಲೇ ಹೆಚ್ಚುವರಿ ಕೋರ್ಟ್ ಪ್ರಾರಂಭಿಸಲು ಅನುಮೋದನೆ ನೀಡುವಂತೆ ಹಿರಿಯ ವಕೀಲ ಜಿ.ಎಸ್.ಚನ್ನಬಸಪ್ಪ ಮನವಿ ಮಾಡಿದರು.
ಹಳಿಯಾಲ ತಾಲ್ಲೂಕು ಕೇಂದ್ರವಾಗಿದ್ದರೂ ಸಹ ಹೋಬಳಿ ಕೇಂದ್ರವಾದ ದಾಂಡೇಲಿಯಲ್ಲಿ ಹೆಚ್ಚುವರಿ ನ್ಯಾಯಾಲಯವಿದೆ .ಅದೇ ರೀತಿ ಎಲ್ಲಾ ಸೌಲಭ್ಯಗಳಿರುವ ಹಾಗೂ ಯಾವುದೇ ತಾಲ್ಲೂಕು ಕೇಂದ್ರಕ್ಕೆ ಕಡಿಮೆ ಇಲ್ಲದಂತಿರುವ ಹುಳಿಯಾರಿನಲ್ಲಿ ಹೆಚ್ಚುವರಿ ಕೋರ್ಟ್ ಪ್ರಾರಂಭಿಸುವುದರಿಂದ ಕಕ್ಷಿದಾರರಿಗೆ ಸಾಕಷ್ಟು ಅನುಕೂಲವಾಗಲಿದೆ. ಕೋರ್ಟ್ ಪ್ರಾರಂಭಿಸಲು ಬೇಕಾದ ಕಟ್ಟಡದ ವ್ಯವಸ್ಥೆಯನ್ನು ಹೋಬಳಿಯ ವಕೀಲರೆಲ್ಲ ಸೇರಿ ಮಾಡಿಕೊಡುವುದಾಗಿ ವಕೀಲ ಹೆಚ್.ಆರ್.ರಮೇಶ್ ಬಾಬು ತಿಳಿಸಿದರು.

ಈ ವೇಳೆ ವಕೀಲರಾದ ಬಿ.ಕೆ.ಸದಾಶಿವು,ಕೆ.ಆರ್.ಚನ್ನಬಸವಯ್ಯ,ಕೆ.ಎಂ.ರಾಜಶೇಖರ್,ಕೆ.ಸಿ.ವಿಶ್ವನಾಥ್,ಗುರುಮೂರ್ತಿ,ಹೆಚ್.ಟಿ.ಹನುಮಂತಪ್ಪ,ಸತೀಶಪ್ಪ,ಷಡಕ್ಷರಿ,ಮಧುಸೂದನ್,ಮೋಹನ್ ಮೂರ್ತಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...