ವಿಷಯಕ್ಕೆ ಹೋಗಿ

ಹುಳಿಯಾರಿಗೆ ಹೆಚ್ಚುವರಿ ನ್ಯಾಯಾಲಯ ಕಲ್ಪಿಸಿಕೊಡಿ

ಹುಳಿಯಾರು  ಹೋಬಳಿಯ ಗಡಿಭಾಗದಲ್ಲಿನ ಅನೇಕ ಹಳ್ಳಿಯ ಕಕ್ಷಿದಾರರು ತಾಲ್ಲೂಕು ಕೇಂದ್ರವಾದ ಚಿ.ನಾ.ಹಳ್ಳಿಯ ನ್ಯಾಯಾಲಯಕ್ಕೆ ಹೋಗಿ ನ್ಯಾಯ ಪಡೆಯುವುದು ತ್ರಾಸದಾಯಕವಾಗಿದ್ದು ಹೋಬಳಿ ಕೇಂದ್ರವಾಗಿರುವ ಹುಳಿಯಾರಿನಲ್ಲಿ ಹೆಚ್ಚುವರಿ ನ್ಯಾಯಾಲಯವನ್ನು ಪ್ರಾರಂಭಿಸುವಂತೆ ಹುಳಿಯಾರು ಹೋಬಳಿ ವ್ಯಾಪ್ತಿಯ ವಕೀಲರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹುಳಿಯಾರಿನಲ್ಲಿ ಹೆಚ್ಚುವರಿ ನ್ಯಾಯಾಲಯ ಪ್ರಾರಂಭಿಸುವಂತೆ ಹೋಬಳಿಯ ವಕೀಲರೆಲ್ಲಾ ಸೇರಿ ಪತ್ರಿಕಾಗೋಷ್ಠಿ ನಡೆಸಿದರು.
ಹುಳಿಯಾರಿನ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆಗುಹೋಗುಗಳು ಹಾಗೂ ರೂಪುರೇಷೆ ಬಗ್ಗೆ ಹೋಬಳಿಯ ವಕೀಲರೆಲ್ಲಾ ಸೇರಿ ಚರ್ಚೆ ನಡೆಸಿದರು.
ಹುಳಿಯಾರು ಹೋಬಳಿ ೬೦ ರಿಂದ ೭೦ ಸಾವಿರ ಜನಸಂಖ್ಯೆಯಿಂದ ಕೂಡಿದ್ದು ನಿತ್ಯ ಹತ್ತುಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯದ ಮೆಟ್ಟಿಲೇರುವವರ ಸಂಖ್ಯೆ ಸಾಕಷ್ಟಿದೆ. ಸದ್ಯ ಚಿ.ನಾ.ಹಳ್ಳಿಗೆ ಪ್ರಧಾನ (ಕಿರಿಯ) ಸಿವಿಲ್ ನ್ಯಾಯಾಲಯಕ್ಕೆ ಈ ಭಾಗದಿಂದ ನ್ಯಾಯ ಕೋರಿ ಹೋಗುವವರ ಪ್ರಕರಣ ಹೆಚ್ಚಿವೆ.
ಹುಳಿಯಾರು ಹೋಬಳಿಯ ಗಡಿಭಾಗದ ದಸೂಡಿ,ದಬ್ಬಗುಂಟೆ,ಮರೆನಡುಪಾಳ್ಯ ಮುಂತಾದ ಗ್ರಾಮಗಳಿಂದ ಜನ ಚಿ.ನಾ.ಹಳ್ಳಿಯ ಕೊರ್ಟ್ ಗೆ ಬರಬೇಕೆಂದರೆ ಸುಮಾರು ೪೦ ರಿಂದ ೫೦ ಕಿಮೀ ದೂರವಿದ್ದು ಬೆಳಿಗ್ಗೆ ಬಂದರೆ ವಾಪಸ್ಸ್ ಹೋಗುವುದಕ್ಕೆ ಸಂಜೆಯಾಗುತ್ತದೆ.ಅಲ್ಲದೆ ಗಡಿಭಾಗದ ಅನೇಕ ಹಳ್ಳಿಗಳಿಗೆ ಸಂಜೆಯ ನಂತರ ಬಸ್ ಸೌಕರ್ಯವಿಲ್ಲದೆ ಜನ ನಿತ್ಯ ಪರದಾಡುವಂತಾಗಿದೆ. ತಾಲ್ಲೂಕಿನ ನ್ಯಾಯಾಲಯದಲ್ಲಿರುವ ಒಟ್ಟು ೧೫೦೦ ಕೇಸ್ ಗಳಲ್ಲಿ ಹುಳಿಯಾರು ಹೋಬಳಿಗೆ ಸೇರಿದ ೭೫೦ಕ್ಕೂ ಹೆಚ್ಚು ಕೇಸ್ ಗಳಿವೆ ಹಾಗೂ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಕೀಲರಲ್ಲಿ ೩೦ಕ್ಕೂ ಹೆಚ್ಚು ಮಂದಿ ಹುಳಿಯಾರು ಭಾಗದವರೆ ಆಗಿದ್ದು ನಿತ್ಯ ಇಲ್ಲಿಂದಲ್ಲೆ ಹೋಗಿ ಬರುತ್ತಿದ್ದಾರೆ.
ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ನ್ಯಾಯದೊರೆಯುವಂತಾಗಬೇಕು. ಹುಳಿಯಾರು ಹಾಗೂ ಪಕ್ಕದ ಹಂದನಕೆರೆ ಎರಡು ಹೋಬಳಿಗೂ ಸೇರಿಕೊಂಡಂತೆ ಹುಳಿಯಾರಿನಲ್ಲಿ ಹೆಚ್ಚುವರಿ ನ್ಯಾಯಾಲಯವನ್ನು ಪ್ರಾರಂಭಿಸುವುದರಿಂದ ಈಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈನಿಟ್ಟಿನಲ್ಲಿ ಇದೇ ಭಾಗದವರೆ ಆದ ಕಾನೂನುಮಂತ್ರಿಗಳು ಗಮನಹರಿಸಿ ಶೀಘ್ರದಲ್ಲೇ ಹೆಚ್ಚುವರಿ ಕೋರ್ಟ್ ಪ್ರಾರಂಭಿಸಲು ಅನುಮೋದನೆ ನೀಡುವಂತೆ ಹಿರಿಯ ವಕೀಲ ಜಿ.ಎಸ್.ಚನ್ನಬಸಪ್ಪ ಮನವಿ ಮಾಡಿದರು.
ಹಳಿಯಾಲ ತಾಲ್ಲೂಕು ಕೇಂದ್ರವಾಗಿದ್ದರೂ ಸಹ ಹೋಬಳಿ ಕೇಂದ್ರವಾದ ದಾಂಡೇಲಿಯಲ್ಲಿ ಹೆಚ್ಚುವರಿ ನ್ಯಾಯಾಲಯವಿದೆ .ಅದೇ ರೀತಿ ಎಲ್ಲಾ ಸೌಲಭ್ಯಗಳಿರುವ ಹಾಗೂ ಯಾವುದೇ ತಾಲ್ಲೂಕು ಕೇಂದ್ರಕ್ಕೆ ಕಡಿಮೆ ಇಲ್ಲದಂತಿರುವ ಹುಳಿಯಾರಿನಲ್ಲಿ ಹೆಚ್ಚುವರಿ ಕೋರ್ಟ್ ಪ್ರಾರಂಭಿಸುವುದರಿಂದ ಕಕ್ಷಿದಾರರಿಗೆ ಸಾಕಷ್ಟು ಅನುಕೂಲವಾಗಲಿದೆ. ಕೋರ್ಟ್ ಪ್ರಾರಂಭಿಸಲು ಬೇಕಾದ ಕಟ್ಟಡದ ವ್ಯವಸ್ಥೆಯನ್ನು ಹೋಬಳಿಯ ವಕೀಲರೆಲ್ಲ ಸೇರಿ ಮಾಡಿಕೊಡುವುದಾಗಿ ವಕೀಲ ಹೆಚ್.ಆರ್.ರಮೇಶ್ ಬಾಬು ತಿಳಿಸಿದರು.

ಈ ವೇಳೆ ವಕೀಲರಾದ ಬಿ.ಕೆ.ಸದಾಶಿವು,ಕೆ.ಆರ್.ಚನ್ನಬಸವಯ್ಯ,ಕೆ.ಎಂ.ರಾಜಶೇಖರ್,ಕೆ.ಸಿ.ವಿಶ್ವನಾಥ್,ಗುರುಮೂರ್ತಿ,ಹೆಚ್.ಟಿ.ಹನುಮಂತಪ್ಪ,ಸತೀಶಪ್ಪ,ಷಡಕ್ಷರಿ,ಮಧುಸೂದನ್,ಮೋಹನ್ ಮೂರ್ತಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.