ವಿಷಯಕ್ಕೆ ಹೋಗಿ

ದಸೂಡಿ ಗ್ರಾ.ಪಂ.ಕಾರ್ಯದರ್ಶಿ ವಿರುದ್ದ ಪ್ರತಿಭಟನೆ

 ಗ್ರಾ.ಪಂ. ಕಾರ್ಯದರ್ಶಿಯ ಕಾರ್ಯವೈಖರಿ ಹಾಗೂ ಭ್ರಷ್ಟಾಚಾರ ವಿರೋಧಿಸಿ ಹೋಬಳಿಯ ದಸೂಡಿ ಗ್ರಾಮ ಪಂಚಾಯ್ತಿ ಮುಂದೆ ಸೋಮವಾರ ಪ್ರತಿಭಟನೆ ನಡೆಯಿತು.
ಹುಳಿಯಾರು ಹೋಬಳಿ ದಸೂಡಿ ಗ್ರಾ.ಪಂ.ಕಛೇರಿಮುಂದೆ ಕಾರ್ಯದರ್ಶಿ ವಿರುದ್ದ ಪ್ರತಿಭಟನೆ ನಡೆಸಿದ ಸಾರ್ವಜನಿಕರು.
ನೂರಕ್ಕೂ ಹೆಚ್ಚು ಮಂದಿ ಪ್ರತಿಭಟನಾಕಾರರು ಗ್ರಾ.ಪಂ.ಸದಸ್ಯ ರವಿಕುಮಾರ್ ನೇತೃತ್ವದಲ್ಲಿ ಗ್ರಾ.ಪಂ.ಕಚೇರಿ ಮುಂದೆ ಧರಣಿ ನಡೆಸಿದರು.ಗ್ರಾಮ ಪಂಚಾಯ್ತಿಯಲ್ಲಿ ಅವ್ಯವಹಾರ ಮಿತಿಮೀರಿದ್ದು ಇದಕ್ಕೆ ಕಾರ್ಯದರ್ಶಿಯೇ ನೇರಹೊಣೆಗಾರರಾಗಿದ್ದಾರೆ. ಹಂಗಾಮಿ ಗ್ರಾ.ಪಂ.ನೌಕರರನ್ನು ಖಾಯಂಗೊಳಿಸುವುದಾಗಿ ನೌಕರರಿಂದ ೫ ಸಾವಿರದಿಂದ ೫೦ ಸಾವಿರದವರೆಗೆ ಲಂಚದ ಬೇಡಿಕೆಯಿಟ್ಟಿದ್ದಾರೆ, ಎನ್.ಆರ್.ಇ.ಜಿ ಯಿಂದ ಶೌಚಾಲಯಗಳಿಗೆ ಹಣ ಬಿಡುಗಡೆ ಮಾಡಲು ಲಂಚ ಕೇಳುತ್ತಿದ್ದಾರೆ. ಈ -ಸ್ವತ್ತುವಿನಲ್ಲಿ ದಾಖಲೆ ನೀಡಲು ೩ ಸಾವಿರದವಗೆಗೂ ಬೇಡಿಕೆಯಿಟ್ಟಿರುತ್ತಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಮಸ್ಯೆ ಬಗ್ಗೆ ಸಿಇಓ ಅವರನ್ನು ಭೇಟಿ ಮಾಡಿ ಕಾರ್ಯದರ್ಶಿಯ ವಿರುದ್ದ ದೂರು ಸಲ್ಲಿಸಲಾಗಿದ್ದರೂ ಗಮನಕೊಡದ ಇಓ ಬಗ್ಗೆ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವಂತೆ ಪಟ್ಟುಹಿಡಿದರು. ಸ್ಥಳಕ್ಕಾಗಮಿಸಿದ ಇಓ ಕೃಷ್ಣಮೂರ್ತಿಗೆ ಪ್ರತಿಭಟನೆಯ ಬಗ್ಗೆ ಮುಂಚಿತವಾಗಿ ಮಾಹಿತಿ ಇದ್ದಿದ್ದರಿಂದ ಬೇರೊಂದು ಪಂಚಾಯ್ತಿಯ ಪಿಡಿಓ ಹಾಗೂ ಇತರ ಸಿಬ್ಬಂದಿಯನ್ನು ಜೊತೆಯಲ್ಲೇ ಕರೆತಂದು ಕಾರ್ಯದರ್ಶಿಯಿಂದ ಬಾಕಿಯಿದ್ದ ಕೆಲಸವನ್ನು ಮಾಡಿಸಲು ಮುಂದಾದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ವಿರುದ್ದ ಸಾಕಷ್ಟು ದೂರು ಕೇಳಿಬಂತು. ಎಲ್ಲರ ಸಮಸ್ಯೆಯನ್ನು ಸಾವದಾನವಾಗಿ ಆಲಿಸಿದ ಇಓ ಬಾಕಿ ಇರುವ ಎಲ್ಲಾ ಕಡತಗಳನ್ನು ನಾಳೆಯೊಳಗಾಗಿ ವಿಲೆವಾರಿ ಮಾಡುವಂತೆಯೂ , ಬಾಕಿ ಇರುವ ಶೌಚಾಲಯಗಳ ಹಾಗೂ ಮನೆ ಗ್ರ್ಯಾಂಟ್ ಬಿಲನ್ನು ಕೂಡಲೇ ಬಿಡುಗಡೆ ಮಾಡುವಂತೆ ಪಿಡಿಓಗೆ ತಾಕೀತು ಮಾಡಿದರು. ಈ ಹಿಂದೆ ಎನ್.ಆರ್.ಇ.ಜಿ ಯೋಜನೆಯಡಿ ಮಾಡಿರುವ ಕಾಮಗಾರಿಗಳ ತಪಾಸಣೆ ನಡೆಸಿ ಹೊಸದಾಗಿ ಎನ್.ಎಂ.ಆರ್ ತೆಗೆಯುವಂತೆಯೂ ಆದೇಶಿಸಿದರು.
ಇಷ್ಟೆಲ್ಲ ಆದರೂ ಕಾರ್ಯನಿರ್ವಹಣಾಧಿಕಾರಿಗಳು ಕಾರ್ಯದರ್ಶಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಾರೆ ಹೊರತು ಕ್ರಮತೆಗೆದುಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸಂಜೆವರೆಗೂ ಕಾದು ಈಗ ಬಂದಿರುವ ಅಧಿಕಾರಿಗಳು ತಮ್ಮ ಸಮಸ್ಯೆ ಬಗೆಹರಿಸಿದಲ್ಲಿ ಮಾತ್ರವೇ ಪ್ರತಿಭಟನೆ ಹಿಂಪಡಿಯುವುದಾಗಿ ತಿಳಿಸಿದರು .

ಪ್ರತಿಭಟನೆಯಲ್ಲಿ ಮುಖಂಡರಾದ ಸುಂದರಮೂರ್ತಿ, ಜಯಣ್ಣ,ಕುಮಾರ್,ಗೋವಿಂದಪ್ಪ,ಕಾಂತರಾಜ್,ಆನಂದ್ ಸೇರಿದಂತೆ ಸ್ತ್ರೀಶಕ್ತಿಸಂಘ ,ಸ್ವಸಹಾಯ ಸಂಘದ ಸದಸ್ಯರುಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...