ವಿಷಯಕ್ಕೆ ಹೋಗಿ

ಸಚಿವರೇ , ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗೆ ಸರಿಯಾದ ಚಿಕಿತ್ಸೆ ಕೊಡಿಸಿ : ಪೋಷಕರ ಅಳಲು - ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಆಟೋ ಸಿಲಿಂಡರ್ ಸ್ಪೋಟದಿಂದ ಗಂಭೀರ ಗಾಯಗೊಂಡಿದ್ದ ಮಕ್ಕಳ ಚಿಕಿತ್ಸೆಗೆ ಹಣ, ಸೂಕ್ತ ಚಿಕಿತ್ಸೆಗೆ ಸೂಚನೆ,ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅನುದಾನ ಹೀಗೆ ಹತ್ತುಹಲವಾರು ಸೂಚನೆಗಳನ್ನು ನೀಡಿ ಹೋಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಉಮಾಶ್ರೀ ಮಾತಿಗೆ ಕಿಂಚಿತ್ತು ಬೆಲೆ ಇಲ್ಲವೇ ಎನ್ನುವ ಪ್ರಶ್ನೆ ಕೇಳಿಬಂದಿದೆ.
ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲವೆಂದು ವಾಪಸ್ ಹುಳಿಯಾರಿಗೆ ಬಂದ ಪೋಷಕರು ತಮ್ಮ ಮಕ್ಕಳೊಂದಿಗೆ ಅಂಗನವಾಡಿ ಮುಂದೆ ಪ್ರತಿಭಟನೆ ನಡೆಸಿದರು.


ಗುರುವಾರದಂದು ಹುಳಿಯಾರಿನ ಇಂದಿರಾನಗರದ ಅಂಗನವಾಡಿ ಮುಂದೆ ಆಟೋ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಂಗನವಾಡಿಯ ಸಹಾಯಕಿ ಸೇರಿದಂತೆ ೧೨ಮಕ್ಕಳಿಗೆ ತೀವ್ರಗಾಯಗಳಾಗಿ ಚಿಕಿತ್ಸೆಗೆ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದ್ದು ಘಟನಾ ವಿವರ ತಿಳಿದ ಸಚಿವೆ ಉಮಾಶ್ರೀ ಗಾಯಗೊಂಡ ಮಕ್ಕಳನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಲ್ಲದೆ , ಮಕ್ಕಳ ಆಕ್ರಂದನಕ್ಕೆ ಕಣ್ಣೀರಿಟ್ಟು ಸಾಧ್ಯವಾದಷ್ಟು ಬೇಗಗುಣಮುಖವಾಗುವಂತೆ ಸಮರ್ಪಕ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ತಾಕೀತು ಮಾಡಿದ್ದರು.
ಅರ್ಧಂಬರ್ಧ ಗುಣಮುಖವಾಗಿ ವಾಪಸ್ಸ್ ಹುಳಿಯಾರಿಗೆ ಬಂದಿರುವ ಮಗು.
ಸಚಿವರು , ಜಿಲ್ಲಾಧಿಕಾರಿಗಳು ಭೇಟಿ ನೀಡಿದಾಗ ಸೂಕ್ತ ಚಿಕಿತ್ಸೆ ನೀಡಲು ಮುಂದಾಗಿದ್ದ ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರು ಇದೀಗ ಕಣ್ಣೆತ್ತಿಯೂ ನೋಡದಿದ್ದರಿಂದ ಸುಟ್ಟಗಾಯಗಳಿಂದ ಬೊಬ್ಬಿಡುತ್ತಿದ್ದ ಮಕ್ಕಳಿಗೆ ಸೂಕ್ತ ಚಿಕಿತ್ಸೆ ದೊರೆಯದೆ ಕಂಗಾಲಾದ ಪೋಷಕರು ಸದ್ಯ ಮಕ್ಕಳ ಜೀವ ಉಳಿದರೆ ಸಾಕೆಂದು ಧಾವಂತದಲ್ಲಿ ವಾಪಸ್ಸ್ ತಮ್ಮ ಊರಿಗೆ ಕರೆತಂದು ಸ್ಥಳೀಯವಾಗಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ.
ಶನಿವಾರದಂದು ಮಧ್ಯಾಹ್ನ ವಿಚಾರಣೆಗೆ ಪೋಲೀಸರು ಆಗಮಿಸಿದಾಗ ಆಕ್ರೋಶಗೊಂಡಿದ್ದ ಪೋಷಕರು ಅಂಗನವಾಡಿ ಮುಂದೆ ಪ್ರತಿಭಟನೆ ಸಹ ನಡೆಸಿದ್ದಾರೆ.
ದೂರೇನು: ಜಿಲ್ಲಾಸ್ಪತ್ರೆಯಲ್ಲಿ ಒಂದು ದಿನದ ಚಿಕಿತ್ಸೆ ಪರಿಯನ್ನು ನೋಡಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲವೆಂದು ಶುಕ್ರವಾರದಂದೇ ವಾಪಸ್ಸು ಹುಳಿಯಾರಿಗೆ ಬಂದಿದ್ದ ಮಕ್ಕಳು ಹಾಗೂ ಪೋಷಕರನ್ನು ಪುನ: ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಆದರೆ ಅಲ್ಲಿ ಮತ್ತೆ ಅಡ್ಮಿಟ್ ಮಾಡಿಕೊಳ್ಳುವಾಗಲೂ ಸಹ ಕಿರಿಕಿರಿ ಮಾಡಿದರು. ಸಿಲಿಂಡರ್ ಸ್ಫೋಟದಿಂದ ಗಾಯಗೊಂಡ ಮಕ್ಕಳು ಎಂದು ಹೇಳಿದರೂ ಸಹ ನಮ್ಮನ್ನು ಕೆಲ ಕಾಲ ಕಾಯಿಸಿ ನಂತರ ಆಡ್ಮಿಟ್ ಮಾಡಿಕೊಂಡರು. ಅಲ್ಲದೆ ವಾರ್ಡ್ ಗಳಿಗೆ ಬರುವ ವೈದ್ಯರು ಸಹ ಬೇಕೋ ಬೇಡವೋ ಎಂಬಂತೆ ಮಕ್ಕಳನ್ನು ನೋಡುತ್ತಿದ್ದಾರೆ. ಜೌಷಧಿ, ಮಾತ್ರೆಗಳನ್ನು ಮೆಡಿಕಲ್ ಸ್ಟೋರ್ ನಲ್ಲಿ ತರುವಂತೆ ಚೀಟಿ ಬರೆದುಕೊಡುತ್ತಿದ್ದಾರೆ. ನಮ್ಮ ಹತ್ತಿರ ಹಣವಿಲ್ಲ ಆಸ್ಪತ್ರೆಯಲ್ಲಿನ ಮೆಡಿಕಲ್ ಸ್ಟೋರ್ ನಲ್ಲೇ ಕೊಡಿ ಎಂದರೆ ನಮ್ಮ ಮೇಳೆ ದಬಾಯಿಸುತ್ತಿದ್ದರು ಎಂದು ಮಕ್ಕಳ ಪೋಷಕರು ತಮ್ಮ ಅಳಲನ್ನು ತೋಡಿಕೊಂಡರು.
ಹುಳಿಯಾರಿನಲ್ಲೇ ಚಿಕಿತ್ಸೆ ಕೊಡಿಸಿ : ನಮ್ಮ ಮಕ್ಕಳಿಗೆ ದೊಡ್ಡಆಸ್ಪತ್ರೆಯ ಚಿಕಿತ್ಸೆ ಬೇಡ ಹುಳಿಯಾರಿನಲ್ಲೇ ಇರುವ ಆಸ್ಪತ್ರೆಗಳಲ್ಲಿ ಉತ್ತಮಚಿಕಿತ್ಸೆ ಕೊಡಿಸಿ , ನಾವು ಒಬ್ಬಂಟಿಗರು ಗಂಡಹೆಂಡತಿ ಇಬ್ಬರೂ ತುಮಕೂರಿನ ಆಸ್ಪತ್ರೆಗೆ ಹೋದರೆ ಊಟ,ಬಟ್ಟೆಗೆ ಏನು ಮಾಡುವುದು ನಮ್ಮ ಮಕ್ಕಳಿಗೆ ಇಲ್ಲಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿಕೊಡಲಿ ಎಂಬುದು ಎಲ್ಲರ ಬೇಡಿಕೆಯಾಗಿತ್ತು.
---------------------
ಸಚಿವರು,ಶಾಸಕರು,ಜಿಲ್ಲಾಧಿಕಾರಿಗಳು ಬಂದಾಗ ಮಾತ್ರ ಡಾಕ್ಟರ್, ನರ್ಸ್ ಎಲ್ಲರೂ ಮಕ್ಕಳ ಬಳಿ ಹಾಜರಿದ್ದು ನೋಡಿಕೊಳ್ಳುತ್ತಾರೆ ಆದರೆ ಅವರು ಆಸ್ಪತ್ರೆಯಿಂದ ಹೋದ ಬಳಿಕ ಇತ್ತ ಬರುವುದೆ ಕಡಿಮೆ. ನಾವೇ ಹೋಗಿ ಕರೆದು ಬರಬೇಕು ಆಗಲೂ ಸಹ ಅವರಿಗಿಷ್ಟವಾದಾಗ ಬಂದು ಸ್ವಲ್ಪ ಸಮಯ ನೋಡಿ ಹೋಗುತ್ತಾರೆ . ಸಚಿವರ ಮೊಬೈಲ್ ನಂ ಕೊಡಿ. ನಾವೇ ಖುದ್ದಾಗಿ ಸಚಿವರೊಂದಿಗೆ ಮಾತನಾಡಿ ಸಮಸ್ಯೆಯ ಬಗ್ಗೆ ಹೇಳಿಕೊಳ್ಳುತ್ತೇವೆ
----------------
ವಿಷಯ ತಿಳಿದು ಟಿ.ಎಚ್.ಓ ಶಿವಕುಮಾರ್ ಹಾಗೂ ಸಿಡಿಪಿಓ ಅನಿಲ್ ಕೈಸರ್ ಅವರನ್ನು ಕರೆತಂದ ತಹಸೀಲ್ದಾರ್ ಕಾಮಾಕ್ಷಮ್ಮ ಪ್ರತಿಭಟನಾ ಪೋಷಕರೊಂದಿಗೆ ಮಾತನಾಡಿ ಚಿ.ನಾ.ಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ತಿಳಿಸಿ, ಅಂಬುಲೆನ್ಸ್ ತರಿಸಿ ಮಕ್ಕಳನ್ನು ಚಿ.ನಾ.ಹಳ್ಳಿ ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಿದ್ದಾರೆ.

ಒಟ್ಟಾರೆ ಸುಟ್ಟಗಾಯಗಳಿಂದ ನರಳುತ್ತಿರುವ ಮಕ್ಕಳಿಗೆ ತತ್ ಕ್ಷಣದ ಚಿಕಿತ್ಸೆ ಅಗತ್ಯವಿದ್ದು ಈ ಬಗ್ಗೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಅಗತ್ಯ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಬೇಕಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.