ವಿಷಯಕ್ಕೆ ಹೋಗಿ

ಸಚಿವರೇ , ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗೆ ಸರಿಯಾದ ಚಿಕಿತ್ಸೆ ಕೊಡಿಸಿ : ಪೋಷಕರ ಅಳಲು - ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಆಟೋ ಸಿಲಿಂಡರ್ ಸ್ಪೋಟದಿಂದ ಗಂಭೀರ ಗಾಯಗೊಂಡಿದ್ದ ಮಕ್ಕಳ ಚಿಕಿತ್ಸೆಗೆ ಹಣ, ಸೂಕ್ತ ಚಿಕಿತ್ಸೆಗೆ ಸೂಚನೆ,ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅನುದಾನ ಹೀಗೆ ಹತ್ತುಹಲವಾರು ಸೂಚನೆಗಳನ್ನು ನೀಡಿ ಹೋಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಉಮಾಶ್ರೀ ಮಾತಿಗೆ ಕಿಂಚಿತ್ತು ಬೆಲೆ ಇಲ್ಲವೇ ಎನ್ನುವ ಪ್ರಶ್ನೆ ಕೇಳಿಬಂದಿದೆ.
ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲವೆಂದು ವಾಪಸ್ ಹುಳಿಯಾರಿಗೆ ಬಂದ ಪೋಷಕರು ತಮ್ಮ ಮಕ್ಕಳೊಂದಿಗೆ ಅಂಗನವಾಡಿ ಮುಂದೆ ಪ್ರತಿಭಟನೆ ನಡೆಸಿದರು.


ಗುರುವಾರದಂದು ಹುಳಿಯಾರಿನ ಇಂದಿರಾನಗರದ ಅಂಗನವಾಡಿ ಮುಂದೆ ಆಟೋ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಂಗನವಾಡಿಯ ಸಹಾಯಕಿ ಸೇರಿದಂತೆ ೧೨ಮಕ್ಕಳಿಗೆ ತೀವ್ರಗಾಯಗಳಾಗಿ ಚಿಕಿತ್ಸೆಗೆ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದ್ದು ಘಟನಾ ವಿವರ ತಿಳಿದ ಸಚಿವೆ ಉಮಾಶ್ರೀ ಗಾಯಗೊಂಡ ಮಕ್ಕಳನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಲ್ಲದೆ , ಮಕ್ಕಳ ಆಕ್ರಂದನಕ್ಕೆ ಕಣ್ಣೀರಿಟ್ಟು ಸಾಧ್ಯವಾದಷ್ಟು ಬೇಗಗುಣಮುಖವಾಗುವಂತೆ ಸಮರ್ಪಕ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ತಾಕೀತು ಮಾಡಿದ್ದರು.
ಅರ್ಧಂಬರ್ಧ ಗುಣಮುಖವಾಗಿ ವಾಪಸ್ಸ್ ಹುಳಿಯಾರಿಗೆ ಬಂದಿರುವ ಮಗು.
ಸಚಿವರು , ಜಿಲ್ಲಾಧಿಕಾರಿಗಳು ಭೇಟಿ ನೀಡಿದಾಗ ಸೂಕ್ತ ಚಿಕಿತ್ಸೆ ನೀಡಲು ಮುಂದಾಗಿದ್ದ ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರು ಇದೀಗ ಕಣ್ಣೆತ್ತಿಯೂ ನೋಡದಿದ್ದರಿಂದ ಸುಟ್ಟಗಾಯಗಳಿಂದ ಬೊಬ್ಬಿಡುತ್ತಿದ್ದ ಮಕ್ಕಳಿಗೆ ಸೂಕ್ತ ಚಿಕಿತ್ಸೆ ದೊರೆಯದೆ ಕಂಗಾಲಾದ ಪೋಷಕರು ಸದ್ಯ ಮಕ್ಕಳ ಜೀವ ಉಳಿದರೆ ಸಾಕೆಂದು ಧಾವಂತದಲ್ಲಿ ವಾಪಸ್ಸ್ ತಮ್ಮ ಊರಿಗೆ ಕರೆತಂದು ಸ್ಥಳೀಯವಾಗಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ.
ಶನಿವಾರದಂದು ಮಧ್ಯಾಹ್ನ ವಿಚಾರಣೆಗೆ ಪೋಲೀಸರು ಆಗಮಿಸಿದಾಗ ಆಕ್ರೋಶಗೊಂಡಿದ್ದ ಪೋಷಕರು ಅಂಗನವಾಡಿ ಮುಂದೆ ಪ್ರತಿಭಟನೆ ಸಹ ನಡೆಸಿದ್ದಾರೆ.
ದೂರೇನು: ಜಿಲ್ಲಾಸ್ಪತ್ರೆಯಲ್ಲಿ ಒಂದು ದಿನದ ಚಿಕಿತ್ಸೆ ಪರಿಯನ್ನು ನೋಡಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲವೆಂದು ಶುಕ್ರವಾರದಂದೇ ವಾಪಸ್ಸು ಹುಳಿಯಾರಿಗೆ ಬಂದಿದ್ದ ಮಕ್ಕಳು ಹಾಗೂ ಪೋಷಕರನ್ನು ಪುನ: ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಆದರೆ ಅಲ್ಲಿ ಮತ್ತೆ ಅಡ್ಮಿಟ್ ಮಾಡಿಕೊಳ್ಳುವಾಗಲೂ ಸಹ ಕಿರಿಕಿರಿ ಮಾಡಿದರು. ಸಿಲಿಂಡರ್ ಸ್ಫೋಟದಿಂದ ಗಾಯಗೊಂಡ ಮಕ್ಕಳು ಎಂದು ಹೇಳಿದರೂ ಸಹ ನಮ್ಮನ್ನು ಕೆಲ ಕಾಲ ಕಾಯಿಸಿ ನಂತರ ಆಡ್ಮಿಟ್ ಮಾಡಿಕೊಂಡರು. ಅಲ್ಲದೆ ವಾರ್ಡ್ ಗಳಿಗೆ ಬರುವ ವೈದ್ಯರು ಸಹ ಬೇಕೋ ಬೇಡವೋ ಎಂಬಂತೆ ಮಕ್ಕಳನ್ನು ನೋಡುತ್ತಿದ್ದಾರೆ. ಜೌಷಧಿ, ಮಾತ್ರೆಗಳನ್ನು ಮೆಡಿಕಲ್ ಸ್ಟೋರ್ ನಲ್ಲಿ ತರುವಂತೆ ಚೀಟಿ ಬರೆದುಕೊಡುತ್ತಿದ್ದಾರೆ. ನಮ್ಮ ಹತ್ತಿರ ಹಣವಿಲ್ಲ ಆಸ್ಪತ್ರೆಯಲ್ಲಿನ ಮೆಡಿಕಲ್ ಸ್ಟೋರ್ ನಲ್ಲೇ ಕೊಡಿ ಎಂದರೆ ನಮ್ಮ ಮೇಳೆ ದಬಾಯಿಸುತ್ತಿದ್ದರು ಎಂದು ಮಕ್ಕಳ ಪೋಷಕರು ತಮ್ಮ ಅಳಲನ್ನು ತೋಡಿಕೊಂಡರು.
ಹುಳಿಯಾರಿನಲ್ಲೇ ಚಿಕಿತ್ಸೆ ಕೊಡಿಸಿ : ನಮ್ಮ ಮಕ್ಕಳಿಗೆ ದೊಡ್ಡಆಸ್ಪತ್ರೆಯ ಚಿಕಿತ್ಸೆ ಬೇಡ ಹುಳಿಯಾರಿನಲ್ಲೇ ಇರುವ ಆಸ್ಪತ್ರೆಗಳಲ್ಲಿ ಉತ್ತಮಚಿಕಿತ್ಸೆ ಕೊಡಿಸಿ , ನಾವು ಒಬ್ಬಂಟಿಗರು ಗಂಡಹೆಂಡತಿ ಇಬ್ಬರೂ ತುಮಕೂರಿನ ಆಸ್ಪತ್ರೆಗೆ ಹೋದರೆ ಊಟ,ಬಟ್ಟೆಗೆ ಏನು ಮಾಡುವುದು ನಮ್ಮ ಮಕ್ಕಳಿಗೆ ಇಲ್ಲಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿಕೊಡಲಿ ಎಂಬುದು ಎಲ್ಲರ ಬೇಡಿಕೆಯಾಗಿತ್ತು.
---------------------
ಸಚಿವರು,ಶಾಸಕರು,ಜಿಲ್ಲಾಧಿಕಾರಿಗಳು ಬಂದಾಗ ಮಾತ್ರ ಡಾಕ್ಟರ್, ನರ್ಸ್ ಎಲ್ಲರೂ ಮಕ್ಕಳ ಬಳಿ ಹಾಜರಿದ್ದು ನೋಡಿಕೊಳ್ಳುತ್ತಾರೆ ಆದರೆ ಅವರು ಆಸ್ಪತ್ರೆಯಿಂದ ಹೋದ ಬಳಿಕ ಇತ್ತ ಬರುವುದೆ ಕಡಿಮೆ. ನಾವೇ ಹೋಗಿ ಕರೆದು ಬರಬೇಕು ಆಗಲೂ ಸಹ ಅವರಿಗಿಷ್ಟವಾದಾಗ ಬಂದು ಸ್ವಲ್ಪ ಸಮಯ ನೋಡಿ ಹೋಗುತ್ತಾರೆ . ಸಚಿವರ ಮೊಬೈಲ್ ನಂ ಕೊಡಿ. ನಾವೇ ಖುದ್ದಾಗಿ ಸಚಿವರೊಂದಿಗೆ ಮಾತನಾಡಿ ಸಮಸ್ಯೆಯ ಬಗ್ಗೆ ಹೇಳಿಕೊಳ್ಳುತ್ತೇವೆ
----------------
ವಿಷಯ ತಿಳಿದು ಟಿ.ಎಚ್.ಓ ಶಿವಕುಮಾರ್ ಹಾಗೂ ಸಿಡಿಪಿಓ ಅನಿಲ್ ಕೈಸರ್ ಅವರನ್ನು ಕರೆತಂದ ತಹಸೀಲ್ದಾರ್ ಕಾಮಾಕ್ಷಮ್ಮ ಪ್ರತಿಭಟನಾ ಪೋಷಕರೊಂದಿಗೆ ಮಾತನಾಡಿ ಚಿ.ನಾ.ಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ತಿಳಿಸಿ, ಅಂಬುಲೆನ್ಸ್ ತರಿಸಿ ಮಕ್ಕಳನ್ನು ಚಿ.ನಾ.ಹಳ್ಳಿ ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಿದ್ದಾರೆ.

ಒಟ್ಟಾರೆ ಸುಟ್ಟಗಾಯಗಳಿಂದ ನರಳುತ್ತಿರುವ ಮಕ್ಕಳಿಗೆ ತತ್ ಕ್ಷಣದ ಚಿಕಿತ್ಸೆ ಅಗತ್ಯವಿದ್ದು ಈ ಬಗ್ಗೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಅಗತ್ಯ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಬೇಕಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...