ವಿಷಯಕ್ಕೆ ಹೋಗಿ

ರಾಗಿ ಖರೀದಿ ಕೇಂದ್ರ ತೆರೆಯಲು ಗುರುವಾರದವರೆಗೆ ಗಡುವು : ಸರ್ಕಾರದ ಬೆಲೆ ೨೦೦೦ ಮಾರಾಟವಾಗುತ್ತಿರುವ ಬೆಲೆ ೧೪೦೦

ವರದಿ:ಡಿ.ಆರ್.ನರೇಂದ್ರಬಾಬು
--------
ಹುಳಿಯಾರು : ಈ ಬಾರಿ ರಾಗಿ ಬಂಪರ್ ಬೆಳೆಬಂದಿದ್ದು ರೈತರಿಗೆ ಮಾತ್ರ ರಾಗಿಗೆ ಕನಿಷ್ಠ ಬೆಲೆಯೂ ದೊರೆಯದೆ ಬೆಂಬಲ ಬೆಲೆಗೆ ಎದುರು ನೋಡುವಂತೆ ಮಾಡಿದೆ. ಸರ್ಕಾರವೇನೋ ಬೆಂಬಲಬೆಲೆ ಘೋಷಣೆ ಮಾಡಿ ರಾಗಿಕೊಳ್ಳಲು ತಿಳಿಸಿದಾಗ್ಯೂ ರಾಗಿ ಖರೀದಿ ಕೇಂದ್ರ ತೆರಯುವಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮಿನಾಮೇಷ ಎಣಿಸುತ್ತಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಹುಳಿಯಾರು ಎಪಿಎಂಸಿಗೆ ಎಡೆತಾಕುತ್ತಿರುವ ರೈತರು.
ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ವರ್ಷಒಂಬ್ಬತ್ತು ಕಾಲವೂ ಬೆಲೆಯಿಲ್ಲದೆ ಕೃಷಿಯ ಸಹವಾಸವೇ ಬೇಡವೆನ್ನುವ ರೈತರು ಹಾಗೂ ಪ್ರತಿಯೊಂದಕ್ಕೂ ಹೋರಾಟದ ಮೂಲಕವೇ ಸರ್ಕಾರವನ್ನು ಎಚ್ಚರಿಸುವ ರೈತಸಂಘದವರು ಇದೀಗ ಜಿಲ್ಲಾಧಿಕಾರಿ ವಿರುದ್ಧ ಗರಂ ಆಗಿದ್ದು ಗುರುವಾರದ ಒಳಗಾಗಿ ಪಟ್ಟಣದ ಎಪಿಎಂಸಿಯಲ್ಲಿ ರಾಗಿ ಖರೀದಿ ಕೇಂದ್ರ ತೆರೆಯದೇ ಹೋದರೆ ಗುರುವಾರದಿಂದ ಕೇಂದ್ರ ತೆರಯುವ ತನಕ ಅಹೋರಾತ್ರಿ ಧರಣಿ ಜೊತೆಗೆ ಎಪಿಎಂಸಿ ಮುಂದೆ ರಸ್ತೆಯಲ್ಲಿ ರಾಗಿ ಸುರಿಯುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಲಿದ್ದಾರೆ.
ಡಿಸಿ ಅವರ ಆದೇಶದಂತೆ ಡಿಸೆಂಬರ್ ೧೫ ರಂದೇ ಪ್ರಾರಂಭವಾಗಬೇಕಿದ್ದ ರಾಗಿ ಖರೀದಿ ಕೇಂದ್ರ ಅಧಿಕಾರಿಗಳ ನಿರ್ಲಕ್ಷಕ್ಕೋ ಅಥವಾ ಮತ್ಯಾವೋದೋ ಕಾರಣದಿಂದಾಗಿ ತಿಂಗಳು ಕಳೆಯುತ್ತಾ ಬಂದರೂ ಇದುವರೆಗೂ ಪ್ರಾರಂಭವಾಗಿಲ್ಲ. ಎಪಿಎಂಸಿ ಕಛೇರಿಯಲ್ಲಿ ರಾಗಿ ಖರೀದಿ ಬಗ್ಗೆ ಒಂದು ಬ್ಯಾನರ್ ಹಾಕಿರುವುದನ್ನು ಬಿಟ್ಟರೆ ಇದಕ್ಕೆ ಸಂಬಂಧಿಸಿದ ಯಾವೊಬ್ಬ ಅಧಿಕಾರಿಯ ಸುಳಿವಿಲ್ಲ ಇದರಿಂದ ಈ ಭಾಗದ ರೈತರಿಗೆ ಹೆಚ್ಚಿನ ತೊಂದರೆಯಾಗಿ ನಿತ್ಯ ರೈತರು ಅಲೆಯುವಂತಾಗಿ, ಕೇಂದ್ರದ ಬಾಗಿಲು ಯಾವಾಗ ತೆರೆಯುತ್ತದೆ ಎಂದು ಕಣ್ ಕಣ್ ಬಿಡುವಂತ ಸ್ಥಿತಿ ನಿರ್ಮಾಣವಾಗಿದೆ.
ರೈತರಿಗೆ ನೆರವಾಗುವ ದೃಷ್ಠಿಯಿಂದ ಸರ್ಕಾರ ಉತ್ತಮ ಗುಣಮಟ್ಟದ ರಾಗಿಗೆ ಪ್ರತಿ ಕ್ವಿಂಟಾಲ್ ಗೆ ೧೫೫೦ ಹಾಗೂ ಪ್ರೋತ್ಸಾಹ ಧನ ೪೫೦ರೂ ನೀಡಿ ಒಟ್ಟು ಪ್ರತಿಕ್ವಿಂಟಾಲ್ ಗೆ ೨೦೦೦ರೂಗೆ ಕೊಳ್ಳಲು ಮುಂದಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದವರು ರಾಗಿ ಖರೀದಿಸುವ ಜವಬ್ದಾರಿ ಹೊತ್ತಿದ್ದರು. ಆದರೆ ಈ ಇಲಾಖೆಯ ಅಧಿಕಾರಿಗಳ ನಿರ್ಲಕ್ಷಧೋರಣೆಯಿಂದ ಇದುವರೆಗೂ ಕೇಂದ್ರಗಳು ಪ್ರಾರಂಭವಾಗಿಲ್ಲ. ಈಗಾಗಲೇ ಕಣಗೆಲಸ ನಡೆಯುತ್ತಿದ್ದು ರೈತರು ರಾಗಿ ಒಕ್ಕಣೆಯಲ್ಲಿ ತೊಡಗಿದ್ದಾರೆ. ಕಣದ ತುಂಬೆಲ್ಲಾ ರಾಗಿಯ ಭರಪೂರ ಸಂಗ್ರಹವೇ ಕಂಡುಬರುತ್ತಿದೆ.
ರಾಗಿ ಬೆಲೆ ಮಾತ್ರ ೧೨೦೦ರೂ ಅಸುಪಾಸಿನಲ್ಲಿದ್ದು ಹೆಚ್ಚಿನ ಬೆಳೆ ಬೆಳೆದರೂ ರೈತರಿಗೆ ಬೇಸಾಯ,ಕೂಲಿ ಖರ್ಚಿಗೆ ಸಮನಾಗುತ್ತಿದ್ದು ೨೦೦೦ದರದಂತೆ ಕೊಂಡಲ್ಲಿ ಅಲ್ಪಸ್ವಲ್ಪ ಹಣ ಉಳಿಯುತ್ತಿತ್ತು. ರೈತರು ಖರೀದಿ ಕೇಂದ್ರ ತೆರೆಯಲು ಕೇಳದಿದ್ದರೂ ಸಹ ಸರ್ಕಾರವೇ ಮುಂದಾಗಿ ತರಾತುರಿಯಲ್ಲಿ ಖರೀದಿ ಕೇಂದ್ರ ತೆರೆಯುವುದಾಗಿ ಘೋಷಿಸಿದ್ದೆ ಸಮಸ್ಯೆಗೆ ಕಾರಣವಾಗಿದೆ. ರಾಗಿಯನ್ನು ಖರೀದಿ ಕೇಂದ್ರಕ್ಕೆ ಮಾರಲು ಅಗತ್ಯ ದಾಖಲೆಗಳನ್ನು ಸಿದ್ದ ಮಾಡಿಕೊಂಡಿರುವ ರೈತರಿಗೆ ನಿತ್ಯ ಕಛೇರಿಯಲ್ಲಿಗೆ ಅಲೆಯುವುದೆ ಕೆಲಸಲಾಗಿದ್ದು, ರಾಗಿ ಖರೀದಿ ಕೇಂದ್ರದ ಬಾಗಿಲು ಯಾವಾಗ ತೆರೆಯುತ್ತದೋ, ಯಾವಾಗ ರಾಗಿ ಮಾರುವುದು ಎಂಬ ಚಿಂತೆ ಮೂಡುವಂತೆ ಮಾಡಿದೆ.
ಬಂಪರ್ ಬೆಳೆಯ ಜೊತೆಗೆ ಹಳೆಯ ಬೆಳೆಯೂ ಸೇರಿ ಹೆಚ್ಚಾಗಿರುವ ರಾಗಿಯನ್ನು ಮಾರಲು ಮುಂದಾಗಿದ್ದು ಬೆಂಬಲಬೆಲೆಗೆ ಹೋಲಿಸಿದಲ್ಲಿ ಕ್ವಿಂಟಾಲ್ ಗೆ ೬೦೦ ರಿಂದ ೮೦೦ರೂ ವರೆಗೆ ಲುಕ್ಸಾನಾಗುತ್ತಿದ್ದು, ವರ್ತಕರಿಗೆ ಮಾತ್ರ ಲಾಭಾದಾಯಕವಾಗಿದೆ. ಕೇಂದ್ರ ತೆರೆಯಲು ಹಿಂದೇಟಾಕುತ್ತಿರುವ ಬಗ್ಗೆ ರೈತರು ಒಗ್ಗಟ್ಟಾಗಿ ಪ್ರತಿಭಟನೆಗೆ ಮುಂದಾಗಿದ್ದು ಪ್ರತಿಭಟನೆ ತೀವ್ರಕಾವು ಪಡೆಯುವ ಮುಂಚೆಯೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ.
----------
       ರಾಗಿ ಖರೀದಿ ಕೇಂದ್ರಗಳನ್ನು ಶೀಘ್ರವೇ ತೆರೆಯುವಂತೆ ಪ್ರತಿ ತಾಲ್ಲೂಕುಗಳ ರೈತರು ಆಗ್ರಹಿಸುತ್ತಿರುವ ಬಗ್ಗೆ ನಿತ್ಯ ಪತ್ರಿಕೆಗಳಲ್ಲಿ ವರದಿ ಬರುತ್ತಿದ್ದರೂ ಸಹ ಅಧಿಕಾರಿಗಳು ಎಚ್ಚರಗೊಳ್ಳದಿರುವುದು ಜಿಲ್ಲಾಡಳಿತ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಾರ್ಯವೈಖರಿ ಎಷ್ಟು ಚುರುಕಾಗಿದೆ ಎಂಬುದು ತಿಳಿಯುತ್ತದೆ : ಕೆ.ಪಿ.ಮಲ್ಲೇಶ್ ರೈತ ಸಂಘದ ತಾಲ್ಲೂಕ್ ಅಧ್ಯಕ್ಷ
---------

     ರಾಗಿಗೆ ೨೦೦೦ರೂಗೆ ಕೊಳ್ಳುವುದಾಗಿ ತಿಳಿಸಿದ್ದ ಸರ್ಕಾರ ಅದೆಕೋ ರಾಗಿ ಕೊಳ್ಳಲು ಮಾತ್ರ ಮಿನಾಮೇಷ ಎಣಿಸುತ್ತಿದೆ ಹಾಗಾಗಿ ೧೨೦೦ , ೧೪೦೦ರೂಗೆ ರಾಗಿ ಮಾರುವ ಸ್ಥಿತಿ ಬಂದಿದೆ. ಕೂಡಲೇ ಖರೀದಿ ಕೇಂದ್ರತೆಗೆದು ರಾಗಿಕೊಂಡರೆ ನಮಗೂ ನಾಕ್ ಕಾಸು ಸಿಗುತ್ತದೆ : ದುರ್ಗಪ್ಪ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...