ವಿಷಯಕ್ಕೆ ಹೋಗಿ

ರಾಗಿ ಖರೀದಿ ಕೇಂದ್ರ ತೆರೆಯಲು ಗುರುವಾರದವರೆಗೆ ಗಡುವು : ಸರ್ಕಾರದ ಬೆಲೆ ೨೦೦೦ ಮಾರಾಟವಾಗುತ್ತಿರುವ ಬೆಲೆ ೧೪೦೦

ವರದಿ:ಡಿ.ಆರ್.ನರೇಂದ್ರಬಾಬು
--------
ಹುಳಿಯಾರು : ಈ ಬಾರಿ ರಾಗಿ ಬಂಪರ್ ಬೆಳೆಬಂದಿದ್ದು ರೈತರಿಗೆ ಮಾತ್ರ ರಾಗಿಗೆ ಕನಿಷ್ಠ ಬೆಲೆಯೂ ದೊರೆಯದೆ ಬೆಂಬಲ ಬೆಲೆಗೆ ಎದುರು ನೋಡುವಂತೆ ಮಾಡಿದೆ. ಸರ್ಕಾರವೇನೋ ಬೆಂಬಲಬೆಲೆ ಘೋಷಣೆ ಮಾಡಿ ರಾಗಿಕೊಳ್ಳಲು ತಿಳಿಸಿದಾಗ್ಯೂ ರಾಗಿ ಖರೀದಿ ಕೇಂದ್ರ ತೆರಯುವಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮಿನಾಮೇಷ ಎಣಿಸುತ್ತಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಹುಳಿಯಾರು ಎಪಿಎಂಸಿಗೆ ಎಡೆತಾಕುತ್ತಿರುವ ರೈತರು.
ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ವರ್ಷಒಂಬ್ಬತ್ತು ಕಾಲವೂ ಬೆಲೆಯಿಲ್ಲದೆ ಕೃಷಿಯ ಸಹವಾಸವೇ ಬೇಡವೆನ್ನುವ ರೈತರು ಹಾಗೂ ಪ್ರತಿಯೊಂದಕ್ಕೂ ಹೋರಾಟದ ಮೂಲಕವೇ ಸರ್ಕಾರವನ್ನು ಎಚ್ಚರಿಸುವ ರೈತಸಂಘದವರು ಇದೀಗ ಜಿಲ್ಲಾಧಿಕಾರಿ ವಿರುದ್ಧ ಗರಂ ಆಗಿದ್ದು ಗುರುವಾರದ ಒಳಗಾಗಿ ಪಟ್ಟಣದ ಎಪಿಎಂಸಿಯಲ್ಲಿ ರಾಗಿ ಖರೀದಿ ಕೇಂದ್ರ ತೆರೆಯದೇ ಹೋದರೆ ಗುರುವಾರದಿಂದ ಕೇಂದ್ರ ತೆರಯುವ ತನಕ ಅಹೋರಾತ್ರಿ ಧರಣಿ ಜೊತೆಗೆ ಎಪಿಎಂಸಿ ಮುಂದೆ ರಸ್ತೆಯಲ್ಲಿ ರಾಗಿ ಸುರಿಯುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಲಿದ್ದಾರೆ.
ಡಿಸಿ ಅವರ ಆದೇಶದಂತೆ ಡಿಸೆಂಬರ್ ೧೫ ರಂದೇ ಪ್ರಾರಂಭವಾಗಬೇಕಿದ್ದ ರಾಗಿ ಖರೀದಿ ಕೇಂದ್ರ ಅಧಿಕಾರಿಗಳ ನಿರ್ಲಕ್ಷಕ್ಕೋ ಅಥವಾ ಮತ್ಯಾವೋದೋ ಕಾರಣದಿಂದಾಗಿ ತಿಂಗಳು ಕಳೆಯುತ್ತಾ ಬಂದರೂ ಇದುವರೆಗೂ ಪ್ರಾರಂಭವಾಗಿಲ್ಲ. ಎಪಿಎಂಸಿ ಕಛೇರಿಯಲ್ಲಿ ರಾಗಿ ಖರೀದಿ ಬಗ್ಗೆ ಒಂದು ಬ್ಯಾನರ್ ಹಾಕಿರುವುದನ್ನು ಬಿಟ್ಟರೆ ಇದಕ್ಕೆ ಸಂಬಂಧಿಸಿದ ಯಾವೊಬ್ಬ ಅಧಿಕಾರಿಯ ಸುಳಿವಿಲ್ಲ ಇದರಿಂದ ಈ ಭಾಗದ ರೈತರಿಗೆ ಹೆಚ್ಚಿನ ತೊಂದರೆಯಾಗಿ ನಿತ್ಯ ರೈತರು ಅಲೆಯುವಂತಾಗಿ, ಕೇಂದ್ರದ ಬಾಗಿಲು ಯಾವಾಗ ತೆರೆಯುತ್ತದೆ ಎಂದು ಕಣ್ ಕಣ್ ಬಿಡುವಂತ ಸ್ಥಿತಿ ನಿರ್ಮಾಣವಾಗಿದೆ.
ರೈತರಿಗೆ ನೆರವಾಗುವ ದೃಷ್ಠಿಯಿಂದ ಸರ್ಕಾರ ಉತ್ತಮ ಗುಣಮಟ್ಟದ ರಾಗಿಗೆ ಪ್ರತಿ ಕ್ವಿಂಟಾಲ್ ಗೆ ೧೫೫೦ ಹಾಗೂ ಪ್ರೋತ್ಸಾಹ ಧನ ೪೫೦ರೂ ನೀಡಿ ಒಟ್ಟು ಪ್ರತಿಕ್ವಿಂಟಾಲ್ ಗೆ ೨೦೦೦ರೂಗೆ ಕೊಳ್ಳಲು ಮುಂದಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದವರು ರಾಗಿ ಖರೀದಿಸುವ ಜವಬ್ದಾರಿ ಹೊತ್ತಿದ್ದರು. ಆದರೆ ಈ ಇಲಾಖೆಯ ಅಧಿಕಾರಿಗಳ ನಿರ್ಲಕ್ಷಧೋರಣೆಯಿಂದ ಇದುವರೆಗೂ ಕೇಂದ್ರಗಳು ಪ್ರಾರಂಭವಾಗಿಲ್ಲ. ಈಗಾಗಲೇ ಕಣಗೆಲಸ ನಡೆಯುತ್ತಿದ್ದು ರೈತರು ರಾಗಿ ಒಕ್ಕಣೆಯಲ್ಲಿ ತೊಡಗಿದ್ದಾರೆ. ಕಣದ ತುಂಬೆಲ್ಲಾ ರಾಗಿಯ ಭರಪೂರ ಸಂಗ್ರಹವೇ ಕಂಡುಬರುತ್ತಿದೆ.
ರಾಗಿ ಬೆಲೆ ಮಾತ್ರ ೧೨೦೦ರೂ ಅಸುಪಾಸಿನಲ್ಲಿದ್ದು ಹೆಚ್ಚಿನ ಬೆಳೆ ಬೆಳೆದರೂ ರೈತರಿಗೆ ಬೇಸಾಯ,ಕೂಲಿ ಖರ್ಚಿಗೆ ಸಮನಾಗುತ್ತಿದ್ದು ೨೦೦೦ದರದಂತೆ ಕೊಂಡಲ್ಲಿ ಅಲ್ಪಸ್ವಲ್ಪ ಹಣ ಉಳಿಯುತ್ತಿತ್ತು. ರೈತರು ಖರೀದಿ ಕೇಂದ್ರ ತೆರೆಯಲು ಕೇಳದಿದ್ದರೂ ಸಹ ಸರ್ಕಾರವೇ ಮುಂದಾಗಿ ತರಾತುರಿಯಲ್ಲಿ ಖರೀದಿ ಕೇಂದ್ರ ತೆರೆಯುವುದಾಗಿ ಘೋಷಿಸಿದ್ದೆ ಸಮಸ್ಯೆಗೆ ಕಾರಣವಾಗಿದೆ. ರಾಗಿಯನ್ನು ಖರೀದಿ ಕೇಂದ್ರಕ್ಕೆ ಮಾರಲು ಅಗತ್ಯ ದಾಖಲೆಗಳನ್ನು ಸಿದ್ದ ಮಾಡಿಕೊಂಡಿರುವ ರೈತರಿಗೆ ನಿತ್ಯ ಕಛೇರಿಯಲ್ಲಿಗೆ ಅಲೆಯುವುದೆ ಕೆಲಸಲಾಗಿದ್ದು, ರಾಗಿ ಖರೀದಿ ಕೇಂದ್ರದ ಬಾಗಿಲು ಯಾವಾಗ ತೆರೆಯುತ್ತದೋ, ಯಾವಾಗ ರಾಗಿ ಮಾರುವುದು ಎಂಬ ಚಿಂತೆ ಮೂಡುವಂತೆ ಮಾಡಿದೆ.
ಬಂಪರ್ ಬೆಳೆಯ ಜೊತೆಗೆ ಹಳೆಯ ಬೆಳೆಯೂ ಸೇರಿ ಹೆಚ್ಚಾಗಿರುವ ರಾಗಿಯನ್ನು ಮಾರಲು ಮುಂದಾಗಿದ್ದು ಬೆಂಬಲಬೆಲೆಗೆ ಹೋಲಿಸಿದಲ್ಲಿ ಕ್ವಿಂಟಾಲ್ ಗೆ ೬೦೦ ರಿಂದ ೮೦೦ರೂ ವರೆಗೆ ಲುಕ್ಸಾನಾಗುತ್ತಿದ್ದು, ವರ್ತಕರಿಗೆ ಮಾತ್ರ ಲಾಭಾದಾಯಕವಾಗಿದೆ. ಕೇಂದ್ರ ತೆರೆಯಲು ಹಿಂದೇಟಾಕುತ್ತಿರುವ ಬಗ್ಗೆ ರೈತರು ಒಗ್ಗಟ್ಟಾಗಿ ಪ್ರತಿಭಟನೆಗೆ ಮುಂದಾಗಿದ್ದು ಪ್ರತಿಭಟನೆ ತೀವ್ರಕಾವು ಪಡೆಯುವ ಮುಂಚೆಯೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ.
----------
       ರಾಗಿ ಖರೀದಿ ಕೇಂದ್ರಗಳನ್ನು ಶೀಘ್ರವೇ ತೆರೆಯುವಂತೆ ಪ್ರತಿ ತಾಲ್ಲೂಕುಗಳ ರೈತರು ಆಗ್ರಹಿಸುತ್ತಿರುವ ಬಗ್ಗೆ ನಿತ್ಯ ಪತ್ರಿಕೆಗಳಲ್ಲಿ ವರದಿ ಬರುತ್ತಿದ್ದರೂ ಸಹ ಅಧಿಕಾರಿಗಳು ಎಚ್ಚರಗೊಳ್ಳದಿರುವುದು ಜಿಲ್ಲಾಡಳಿತ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಾರ್ಯವೈಖರಿ ಎಷ್ಟು ಚುರುಕಾಗಿದೆ ಎಂಬುದು ತಿಳಿಯುತ್ತದೆ : ಕೆ.ಪಿ.ಮಲ್ಲೇಶ್ ರೈತ ಸಂಘದ ತಾಲ್ಲೂಕ್ ಅಧ್ಯಕ್ಷ
---------

     ರಾಗಿಗೆ ೨೦೦೦ರೂಗೆ ಕೊಳ್ಳುವುದಾಗಿ ತಿಳಿಸಿದ್ದ ಸರ್ಕಾರ ಅದೆಕೋ ರಾಗಿ ಕೊಳ್ಳಲು ಮಾತ್ರ ಮಿನಾಮೇಷ ಎಣಿಸುತ್ತಿದೆ ಹಾಗಾಗಿ ೧೨೦೦ , ೧೪೦೦ರೂಗೆ ರಾಗಿ ಮಾರುವ ಸ್ಥಿತಿ ಬಂದಿದೆ. ಕೂಡಲೇ ಖರೀದಿ ಕೇಂದ್ರತೆಗೆದು ರಾಗಿಕೊಂಡರೆ ನಮಗೂ ನಾಕ್ ಕಾಸು ಸಿಗುತ್ತದೆ : ದುರ್ಗಪ್ಪ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...