ವಿಷಯಕ್ಕೆ ಹೋಗಿ

ಕುವೆಂಪು ರಚನೆಗಳು ಯುವಪೀಳಿಗೆಗೆ ಆದರ್ಶ : ಚಿಂತಕ ಕೆ.ಪಿ.ನಟರಾಜ್

ಕನ್ನಡ ಸಾಹಿತ್ಯ ಮಹಾನ್ ಸಾಹಿತಿಗಳಲ್ಲಿ ತಮ್ಮದೇ ಆದ ಅದ್ವಿತೀಯ ಛಾಪು ಮೂಡಿಸಿದವರು ಕುವೆಂಪು ಅವರಾಗಿದ್ದು, ಅವರು ಅಂದು ರಚಿಸಿದ ಅನೇಕ ಕೃತಿ, ಕವನ,ನಾಟಕಗಳು ಇಂದಿನ ಯುವಪೀಳಿಗೆಗೆ ಆದರ್ಶವಾಗುವಲ್ಲಿ ಪ್ರಮುಖಪಾತ್ರವಹಿಸುತ್ತದೆ ಎಂದು ತುಮಕೂರಿನ ಕವಿ ಹಾಗೂ ಚಿಂತಕರಾದ ಕೆ.ಪಿ.ನಟರಾಜ್ ಅಭಿಮತವ್ಯಕ್ತಪಡಿಸಿದರು.
 ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ "ಕುವೆಂಪು ಓದಿನ ಕಮ್ಮಟ" ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿಗಳಿಗೆ "ಕುವೆಂಪು ಓದು" ಹೊತ್ತಿಗೆಯನ್ನು ವಿತರಿಸಲಾಯಿತು.

ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ "ಕುವೆಂಪು ಓದಿನ ಕಮ್ಮಟ" ಕಾರ್ಯಕ್ರಮದಲ್ಲಿ ಕವಿಗಳಾದ ಕೆ.ಪಿ.ನಟರಾಜ್ ಮಾತನಾಡಿದರು.

ಪದವಿ ವಿದ್ಯಾರ್ಥಿಗಳಿಗಾಗಿ ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಅವರ ಸಹಯೋಗದಲ್ಲಿ ಶುಕ್ರವಾರ ನಡೆದ "ಕುವೆಂಪು ಓದಿನ ಕಮ್ಮಟ" ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
         ಕುವೆಂಪು ಅವರು ಯಾವುದೇ ಒಬ್ಬ ವ್ಯಕ್ತಿಯ,ಜಾತಿಯ,ಸಮಾಜದ,ಧರ್ಮದ ಪರವಾಗಿ ಸಾಹಿತ್ಯ ರಚಿಸಿದವರಲ್ಲ, ಬದಲಾಗಿ ಸಮಾಜದ ಎಲ್ಲಾ ಸ್ಥರಗಳನ್ನು ಒಗ್ಗೂಡಿಸಿ ಎಲ್ಲರೂ ಒಂದೇ ಎಂಬ ವಿಶಾಲ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ರಚಿಸಿದ್ದಾರೆ ಎಂದರು. ಇವರ ಸಾಹಿತ್ಯವನ್ನು ಓದುವುದರ ಜೊತೆಗೆ ಅರ್ಥೈಸಿಕೊಂಡಾಗ ಅಂದಿನ ಸಮಾಜದ ವ್ಯವಸ್ಥೆಯೂ ಪ್ರಸ್ತುತದ ಸಮಾಜದ ವ್ಯವಸ್ಥೆಯ ಬಗ್ಗೆ ತಿಳಿಯುತ್ತದೆ ಎಂದರು. ಕುವೆಂಪು ಅವರ ಆತ್ಮಚರಿತ್ರೆ ನೆನಪಿನ ದೋಣಿಯಲಿ ಪುಸ್ತಕವನ್ನು ಓದುವುದರಿಂದ ಅವರು ತಮ್ಮ ಜೀವನವನ್ನು ಯಾವರೀತಿ ಕಟ್ಟಿಕೊಂಡರು ಎಂಬುದರ ಬಗ್ಗೆ ತಿಳಿಯುತ್ತದೆ ಹಾಗೂ ಆ ರೀತಿ ಇದ್ದರ ಎಂಬ ಅಶ್ವರ್ಯವೂ ಸಹ ಮೂಡುತ್ತದೆ ಎಂದು ತಿಳಿಸಿದರು.
ಪ್ರಾಂಶುಪಾಲ ಬಿಳಿಗೆರೆ ಕೃಷ್ಣಮೂರ್ತಿ ಅಶಯ ನುಡಿಗಳನ್ನಾಡುತ್ತಾ, ಪ್ರಸ್ತುತದಲ್ಲಿ ಹೆಚ್ಚು ಜನ ಓದಿನತ್ತ ಗಮನ ಕೊಡದ ಹಿನ್ನಲೆಯಲ್ಲಿ ಓದುವ ಹವ್ಯಾಸ ಕ್ಷೀಣಿಸುತ್ತಿದ್ದು, ಅನೇಕ ಮಹಾನ್ ವ್ಯಕ್ತಿಗಳ ನಿಲುವುಗಳು ನಮಗೆ ತಿಳಿಯದಂತಾಗಿವೆ ಎಂದು ವಿಷಾಧಿಸಿದರು. ಓದು ಎನ್ನುವುದು ನಿರಂತರವಾಗಿದ್ದು, ಸದಾ ಓದುವುದರಿಂದ ನಮ್ಮ ಜ್ಞಾನಭಂಡಾರ ವೃದ್ಧಿಯಾಗುತ್ತದೆ ಎಂದರು. ಕನ್ನಡ ಸಾಹಿತ್ಯದಲ್ಲಿನ ಕವಿಗಳ,ನಾಟಕರಾರ, ವಿಮರ್ಷಕರ ಸಂಪೂರ್ಣ ಪರಿಚಯ ಮಾಡುವ ನಿಟ್ಟಿನಲ್ಲಿ ಈ ಕಾರ್ಯ ನಡೆಯುತ್ತಿದ್ದು ಅದರ ಮೊದಲ ಹೆಜ್ಜೆ ಕುವೆಂಪು ಅವರ ಓದಿನ ಕಮ್ಮಟ ಎಂದರು.

ಕನ್ನಡ ಉಪನ್ಯಾಸಕ ಶಂಕರಲಿಂಗಯ್ಯ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದು, ಉಪನ್ಯಾಸಕರಾದ ಶ್ರೀನಿವಾಸಪ್ಪ,ಇಬ್ರಾಹಿಂ,ಶಿವಯ್ಯ,ಚಂದ್ರಮೌಳಿ,ಗ್ರಂಥಪಾಲಕ ಲೋಕೇಶ್ ನಾಯಕ್ ಉಪಸ್ಥಿತರಿದ್ದು, ತನಿಜಾ ಪ್ರಾರ್ಥಿಸಿ, ಕುಮಾರಸ್ವಾಮಿ ಸ್ವಾಗತಿಸಿ,ಬಸವರಾಜು ನಿರೂಪಿಸಿ,ವಂದಿಸಿದರು. ಇದೇ ವೇಳೆ ಕಮ್ಮಟದಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿಗಳಿಗೆ ಕುವೆಂಪು ಓದು ಪುಸ್ತಕವನ್ನು ವಿತರಿಸಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...