ವಿಷಯಕ್ಕೆ ಹೋಗಿ

ಬನಶಂಕರಿ ದೇವಾಲಯದಲ್ಲಿ ಸಂಭ್ರಮದ ಬನದ ಹುಣ್ಣಿಮೆ

ದೇವಾಂಗ ಮಂಡಳಿ, ಬನದ ಹುಣ್ಣಿಮೆ ದೇವಾಂಗ ಯುವಕ ಸಂಘ, ಬನಶಂಕರಿ ದೇವಸ್ಥಾನ ಸಮಿತಿವತಿಯಿಂದ ೪ ನೇ ವರ್ಷದ ಬನದ ಹುಣ್ಣಿಮೆ ಕಾರ್ಯಕ್ರಮವು ಬನಶಂಕರಿ ಅಮ್ಮನವರ ದೇವಾಲಯದಲ್ಲಿ ಅಪಾರ ಭಕ್ತರ ಸಮ್ಮುಖದಲ್ಲಿ ಅಮ್ಮನವರಿಗೆ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ನಡೆಯಿತು.
ಹುಳಿಯಾರಿನ ಬನಶಂಕರಿ ದೇವಾಲಯದಲ್ಲಿ ಬನದಹುಣ್ಣಿಮೆ ಅಂಗವಾಗಿ ದೇವಾಂಗ ಮಂಡಳಿವತಿಯಿಂದ ಹೋಮಕಾರ್ಯ ನಡೆಸಲಾಯಿತು.
ಪೌರಾಣಿಕೆ ಹಿನ್ನೆಲೆ: ಪುಷ್ಯಮಾಸದ ಹುಣ್ಣಿಮೆಯನ್ನು ಬನದ ಹುಣ್ಣಿಮೆ ಅಥವಾ ಬನಶಂಕರಿ ಹುಣ್ಣಿಮೆ ಎನ್ನುವರು. ಶಕ್ತಿ ದೇವಿಯಾದ ಬನಶಂಕರಿದೇವಿಯನ್ನು ಬನಸಿರಿದೇವಿ ಎನ್ನಲಾಗುವುದಿದ್ದು ಮಳೆ ಬೆಳೆಗಲ್ಲದೆ ನಾಡು ದುರ್ಭಿಕ್ಷೆಯಲಿದ್ದ ಸಂದರ್ಭದಲ್ಲಿ ಎಲ್ಲಾ ದೇವತೆಗಳ ಪ್ರಾರ್ಥನೆ ಫಲವಾಗಿ ಬನಶಂಕರಿ ದೇವಿ ತನ್ನ ಶರೀರದಿಂದ ಉತ್ಪತ್ತಿಯಾದ ಶಾಖದಿಂದ ಮೂರು ಲೋಕಗಳನ್ನು ರಕ್ಷಿಸಿದಳು. ಇದರಿಂದ ಭೂಮಿಯು ಜಲದಿಂದ ಸಮೃದ್ಧಿಗೊಂಡು ಸಕಲ ಜೀವರಾಶಿಗಳು ಸಂತುಷ್ಟವಾದವು ಎಂಬ ಪ್ರತೀತಿ ದೇವಿಯ ಬಗ್ಗೆ ಇದೆ.ಪೂರ್ಣಾನಂದ ಪ್ರದಾಯಕಳಾದ ಬನಶಂಕರಿ ದೇವಿಯು ನಾಡಿಗೆ ಸುಭೀಕ್ಷೆ ಹಾಗೂ ಜೀವರಾಶಿಗಳಿಗೆ ಸಮೃದ್ಧಿಯನ್ನು ಪಾಲಿಸಿದ ಪ್ರತೀಕವಾಗಿ ಬನದ ಹುಣ್ಣಿಮೆ ಆಚರಿಸಲಾಗುತ್ತಿದೆ.
ಹುಳಿಯಾರಿನ ಬನಶಂಕರಿ ದೇವಾಲಯದಲ್ಲಿ ಬನದಹುಣ್ಣಿಮೆ ಅಂಗವಾಗಿ ಕನ್ಯೆಯೊಬ್ಬಳನ್ನು ಮುತೈದೆಯರು ನಡೆಮುಡಿಯಲ್ಲಿ ದೇವಾಲಯಕ್ಕೆ ಕರೆದುಕೊಂಡು ಬರುತ್ತಿರುವುದು.
ಅಂತೆಯೇ ಬನಶಂಕರಿ ದೇವಾಲಯದಲ್ಲಿ ಭಾನುವಾರ ಸಂಜೆ ಅರ್ಚಕರಾದ ಶ್ರೀಧರ್ ಗುಪ್ತಾ,ಸತೀಶ್ ಹಾಗೂ ಗಣೇಶ್ ಪೂಜಾರಿ ಅವರ ನೇತೃತ್ವದಲ್ಲಿ ಗಣಪತಿ ಹೋಮ, ನವಗ್ರಹ,ಮೃತ್ಯುಂಜಯ ಹೋಮ ನಡೆಸಿದ್ದು, ಸೋಮವಾರ ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಪಂಚದ್ರವ್ಯಗಳಿಂದ ಅಮ್ಮನವರಿಗೆ ಅಭಿಷೇಕ ಹಾಗೂ ಅಲಂಕಾರವನ್ನು ಮಾಡಲಾಗಿತ್ತು. ಮುತ್ತೈದೆಯರಿಗೆ ಹಾಗೂ ಪುಟ್ಟ ಹೆಣ್ಣು ಮಗುವಿಗೆ ಬಾಗಿನ ಕೊಟ್ಟು, ಅಮ್ಮನವರಿಗೆ ಆರತಿ ಸೇವೆ, ಮಡಿಲಕ್ಕಿ ಸೇವೆ ಹಾಗೂ ಉಯ್ಯಾಲೋತ್ಸವವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಬನದಹುಣ್ಣಿಮೆ ಸಂಘದ ಅಧ್ಯಕ್ಷ ನವೀನ್ ಕುಮಾರ್, ಶಂಕರ್, ದೇವಾಂಗ ಮಂಡಳಿಯ ಅನಂತಕುಮಾರ್,ದಾಸಪ್ಪ, ಲೋಕೇಶ್, ಕೇಶವ ಮೂರ್ತಿ,ರಂಗನಾಥ್, ಕಲಾವಿದ ಗೌಡಿರಂಗನಾಥ್ ಸೇರಿದಂತೆ ದೇವಾಂಗ ಸಮುದಾಯದವರು ಹಾಗೂ ಭಕ್ತಾದಿಗಳು ಆಗಮಿಸಿದ್ದು ಅನ್ನಸಂತರ್ಪಣೆ ನಡೆಯಿತು.

ಬಸ್ ಏಜೆಂಟ್ ಲೋಕೇಶಣ್ಣನವರ ಮನೆಯಲ್ಲಿ ಬನಶಂಕರಿ ಅಮ್ಮನವರ ಅಷ್ಟಾವಧಾನ ಸೇವೆ,ಪಂಚಾಮೃತ ಸೇವೆ ನಡೆದು ಅನ್ನಸಂತರ್ಪಣೆ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...