ವಿಷಯಕ್ಕೆ ಹೋಗಿ

ಬನಶಂಕರಿ ದೇವಾಲಯದಲ್ಲಿ ಸಂಭ್ರಮದ ಬನದ ಹುಣ್ಣಿಮೆ

ದೇವಾಂಗ ಮಂಡಳಿ, ಬನದ ಹುಣ್ಣಿಮೆ ದೇವಾಂಗ ಯುವಕ ಸಂಘ, ಬನಶಂಕರಿ ದೇವಸ್ಥಾನ ಸಮಿತಿವತಿಯಿಂದ ೪ ನೇ ವರ್ಷದ ಬನದ ಹುಣ್ಣಿಮೆ ಕಾರ್ಯಕ್ರಮವು ಬನಶಂಕರಿ ಅಮ್ಮನವರ ದೇವಾಲಯದಲ್ಲಿ ಅಪಾರ ಭಕ್ತರ ಸಮ್ಮುಖದಲ್ಲಿ ಅಮ್ಮನವರಿಗೆ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ನಡೆಯಿತು.
ಹುಳಿಯಾರಿನ ಬನಶಂಕರಿ ದೇವಾಲಯದಲ್ಲಿ ಬನದಹುಣ್ಣಿಮೆ ಅಂಗವಾಗಿ ದೇವಾಂಗ ಮಂಡಳಿವತಿಯಿಂದ ಹೋಮಕಾರ್ಯ ನಡೆಸಲಾಯಿತು.
ಪೌರಾಣಿಕೆ ಹಿನ್ನೆಲೆ: ಪುಷ್ಯಮಾಸದ ಹುಣ್ಣಿಮೆಯನ್ನು ಬನದ ಹುಣ್ಣಿಮೆ ಅಥವಾ ಬನಶಂಕರಿ ಹುಣ್ಣಿಮೆ ಎನ್ನುವರು. ಶಕ್ತಿ ದೇವಿಯಾದ ಬನಶಂಕರಿದೇವಿಯನ್ನು ಬನಸಿರಿದೇವಿ ಎನ್ನಲಾಗುವುದಿದ್ದು ಮಳೆ ಬೆಳೆಗಲ್ಲದೆ ನಾಡು ದುರ್ಭಿಕ್ಷೆಯಲಿದ್ದ ಸಂದರ್ಭದಲ್ಲಿ ಎಲ್ಲಾ ದೇವತೆಗಳ ಪ್ರಾರ್ಥನೆ ಫಲವಾಗಿ ಬನಶಂಕರಿ ದೇವಿ ತನ್ನ ಶರೀರದಿಂದ ಉತ್ಪತ್ತಿಯಾದ ಶಾಖದಿಂದ ಮೂರು ಲೋಕಗಳನ್ನು ರಕ್ಷಿಸಿದಳು. ಇದರಿಂದ ಭೂಮಿಯು ಜಲದಿಂದ ಸಮೃದ್ಧಿಗೊಂಡು ಸಕಲ ಜೀವರಾಶಿಗಳು ಸಂತುಷ್ಟವಾದವು ಎಂಬ ಪ್ರತೀತಿ ದೇವಿಯ ಬಗ್ಗೆ ಇದೆ.ಪೂರ್ಣಾನಂದ ಪ್ರದಾಯಕಳಾದ ಬನಶಂಕರಿ ದೇವಿಯು ನಾಡಿಗೆ ಸುಭೀಕ್ಷೆ ಹಾಗೂ ಜೀವರಾಶಿಗಳಿಗೆ ಸಮೃದ್ಧಿಯನ್ನು ಪಾಲಿಸಿದ ಪ್ರತೀಕವಾಗಿ ಬನದ ಹುಣ್ಣಿಮೆ ಆಚರಿಸಲಾಗುತ್ತಿದೆ.
ಹುಳಿಯಾರಿನ ಬನಶಂಕರಿ ದೇವಾಲಯದಲ್ಲಿ ಬನದಹುಣ್ಣಿಮೆ ಅಂಗವಾಗಿ ಕನ್ಯೆಯೊಬ್ಬಳನ್ನು ಮುತೈದೆಯರು ನಡೆಮುಡಿಯಲ್ಲಿ ದೇವಾಲಯಕ್ಕೆ ಕರೆದುಕೊಂಡು ಬರುತ್ತಿರುವುದು.
ಅಂತೆಯೇ ಬನಶಂಕರಿ ದೇವಾಲಯದಲ್ಲಿ ಭಾನುವಾರ ಸಂಜೆ ಅರ್ಚಕರಾದ ಶ್ರೀಧರ್ ಗುಪ್ತಾ,ಸತೀಶ್ ಹಾಗೂ ಗಣೇಶ್ ಪೂಜಾರಿ ಅವರ ನೇತೃತ್ವದಲ್ಲಿ ಗಣಪತಿ ಹೋಮ, ನವಗ್ರಹ,ಮೃತ್ಯುಂಜಯ ಹೋಮ ನಡೆಸಿದ್ದು, ಸೋಮವಾರ ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಪಂಚದ್ರವ್ಯಗಳಿಂದ ಅಮ್ಮನವರಿಗೆ ಅಭಿಷೇಕ ಹಾಗೂ ಅಲಂಕಾರವನ್ನು ಮಾಡಲಾಗಿತ್ತು. ಮುತ್ತೈದೆಯರಿಗೆ ಹಾಗೂ ಪುಟ್ಟ ಹೆಣ್ಣು ಮಗುವಿಗೆ ಬಾಗಿನ ಕೊಟ್ಟು, ಅಮ್ಮನವರಿಗೆ ಆರತಿ ಸೇವೆ, ಮಡಿಲಕ್ಕಿ ಸೇವೆ ಹಾಗೂ ಉಯ್ಯಾಲೋತ್ಸವವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಬನದಹುಣ್ಣಿಮೆ ಸಂಘದ ಅಧ್ಯಕ್ಷ ನವೀನ್ ಕುಮಾರ್, ಶಂಕರ್, ದೇವಾಂಗ ಮಂಡಳಿಯ ಅನಂತಕುಮಾರ್,ದಾಸಪ್ಪ, ಲೋಕೇಶ್, ಕೇಶವ ಮೂರ್ತಿ,ರಂಗನಾಥ್, ಕಲಾವಿದ ಗೌಡಿರಂಗನಾಥ್ ಸೇರಿದಂತೆ ದೇವಾಂಗ ಸಮುದಾಯದವರು ಹಾಗೂ ಭಕ್ತಾದಿಗಳು ಆಗಮಿಸಿದ್ದು ಅನ್ನಸಂತರ್ಪಣೆ ನಡೆಯಿತು.

ಬಸ್ ಏಜೆಂಟ್ ಲೋಕೇಶಣ್ಣನವರ ಮನೆಯಲ್ಲಿ ಬನಶಂಕರಿ ಅಮ್ಮನವರ ಅಷ್ಟಾವಧಾನ ಸೇವೆ,ಪಂಚಾಮೃತ ಸೇವೆ ನಡೆದು ಅನ್ನಸಂತರ್ಪಣೆ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...