ವಿಷಯಕ್ಕೆ ಹೋಗಿ

ದೇವಾಲಯಗಳು ಧ್ಯಾನ ಹಾಗೂ ಜ್ಞಾನಕ್ಕೆ ವೇದಿಕೆಯಿದ್ದಂತೆ

ಮಾನವನ ತನ್ನ ಜೀವನದಲ್ಲಿ ಸಕಲ ಸಂಪತ್ತಿದ್ದದರೂ ಸಹ ಸುಖಸಂತೋಷವಿಲ್ಲದೆ ಬದುಕಿನ ಬಂಡಿ ಸಾಗಿಸುತ್ತಾ ಶಾಂತಿ,ನೆಮ್ಮದಿಯ ಹುಡಕಾಟದಲ್ಲಿದ್ದಾನೆ. ಇಂತಹವರಿಗೆ ನಮ್ಮ ಹಿಂದೂ ದೇವಾಲಯಗಳು ಧ್ಯಾನ ಹಾಗೂ ಜ್ಞಾನದ ಮೂಲಕ ಸುಖ ಶಾಂತಿಯನ್ನು ನೀಡುವ ವೇದಿಕೆಯಾಗಿವೆ ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವಮಹಾಸ್ವಾಮಿಗಳು ತಿಳಿಸಿದರು.
ಹುಳಿಯಾರು ಹೋಬಳಿ ಕೆಂಕೆರೆ ಸಮೀಪದ ಗ್ಯಾರಳ್ಳದಲ್ಲಿ ಮಲ್ಲಿಕಾರ್ಜುನಸ್ವಾಮಿಯ ದೇವಾಲಯದ ಲಿಂಗಪ್ರತಿಷ್ಠಾಪನಾ ಕಾರ್ಯದ ಧಾರ್ಮಿಕ ಸಭೆಯಲ್ಲಿ ಗುರುಬಸವಮಹಾಸ್ವಾಮಿಗಳು ಅಶೀರ್ವಚನ ನೀಡಿದರು.
ಹುಳಿಯಾರು ಹೋಬಳಿ ಕೆಂಕೆರೆ ಸಮೀಪದ ಗ್ಯಾರಳ್ಳದಲ್ಲಿ ನಿರ್ಮಿಸಿರುವ ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿಯ ದೇವಾಲಯದ ಲಿಂಗಪ್ರತಿಷ್ಠಾಪನಾ ಕಾರ್ಯದ ಅಂಗವಾಗಿ ಭಾನುವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಅಶೀರ್ವಚನ ನೀಡಿದರು.
ನಮ್ಮ ಪೂರ್ವಿಕರು ದೇವಾಲಯಗಳನ್ನು ಕಟ್ಟುವ ಮೂಲಕ ಸಮುದಾಯದ ಜನರು ಒಂದೆಡೆ ಸೇರಿಸಿ ಪುರಾಣ ಕಥೆಗಳ ಪಠಣ ಹಾಗೂ ಸಭೆಗಳನ್ನು ನಡೆಸಿ ಶಾಂತಿಯುತ ಜೀವನದ ಬಗ್ಗೆ ಮಾಹಿತಿ ನೀಡುವ ಸದುದ್ದೇಶದ ಹೊಂದಿದ್ದರು ಎಂದರು. ಹಳ್ಳಿಗಳಲ್ಲಿ ನಿರ್ಮಿಸುವ ದೇವಾಲಯಗಳಲ್ಲಿ ಇಂದಿಗೂ ಆಚಾರವಿಚಾರಗಳ ಪಾಲನೆಯಾಗುತ್ತಿದ್ದು, ಜನರು ಭಯಭಕ್ತಿಯಿಂದ ನಡೆಯುತ್ತಿದ್ದಾರೆ ಎಂದರು. ದೇವರಿಲ್ಲ ಎಂದು ಕೆಲವರು ಹೇಳಿದರೂ ಮಾನವರ ಮನಸಾಕ್ಷಿಯೇ ಒಂದು ದೇವರಿದ್ದಂತೆ ಅದಕ್ಕೆ ವಿದೇಯರಾಗಿ ನಡೆಯುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಶರಣ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಶ್ಯಾಮಸುಂದರ್ ದಿಬ್ಬದಹಳ್ಳಿ ಮಾತನಾಡಿ, ೧೨ನೇ ಶತಮಾನದ ಶಿವಶರಣರು ಜನ ಸಾಮಾನ್ಯರಿಗೆ ತಿಳಿಯುವಂತೆ ಆಡುಮಾತಿನಲ್ಲಿ ಸಾಹಿತ್ಯವನ್ನು ರಚಿಸಿ ಸಮಾಜದ ಅಂಕುಡೊಂಕನ್ನು ತಿದ್ದುವ ಕಾಯಕ ಮಾಡಿದ್ದಾರೆ. ಆದರೆ ಇಂದು ಅವರ ವಚನಗಳನ್ನು ಸಭೆ ಸಮಾರಂಭದಲ್ಲಿ ಕೇಳಿ ಮರೆಯುತ್ತೇವೆ ಹೊರತು ಅವುಗಳ ಪಾಲನೆಯಾಗುತ್ತಿಲ್ಲ ಎಂದರು. ವಚನಕಾರರು ಹೇಳುವಂತೆ ಎಷ್ಟೇ ಐಶ್ವರ್ಯದ್ದರೂ ಜೀವನದಲ್ಲಿ ಸುಖ ಸಂತೋಷವಿಲ್ಲದಿದ್ದರೆ ಎಲ್ಲವೂ ನಿರರ್ತಕ, ಸಂಪತ್ತಿಗಿಂತ ಸಂತೋಷವೇ ಲೇಸು ಎಂದರು. ಮಾನವರಲ್ಲಿ ಸಂಕುಚಿತ ಮನೋಭಾವ ದೂರಾಗಿ ವಿಶಾಲ ಮನೋಭಾವ ಮೂಡಬೇಕಿದೆ ಎಂದರು.

ಬ್ರಹ್ಮಕುಮಾರಿ ಈಶ್ವರೀ ವಿವಿಯ ಗೀತಕ್ಕ , ನಿವೃತ್ತ ಕೃಷಿ ಅಧಿಕಾರಿ ಚಂದ್ರಶೇಖರ್ ಅವರು ಶಿವ ಸಂದೇಶ ಕುರಿತು ಉಪನ್ಯಾಸ ನೀಡಿದರು. ಈವೇಳೆ ಕೆ.ವಿ.ರಮೇಶ್, ಕೆ.ಪಿ.ಚನ್ನಬಸವಯ್ಯ, ಕೋಟ್ರೇಶ್,ಚನ್ನಬಸವಯ್ಯ, ಡಿ.ರಮೇಶ್, ಮಲ್ಲೇಶ್,ಮಧು,ಪ್ರಭು,ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...