ವಿಷಯಕ್ಕೆ ಹೋಗಿ

ಮಕ್ಕಳು ಗುಣಮುಖವಾಗದಿದ್ದರೂ ಡಿಸ್ಚಾರ್ಜ್ : ಪೋಷಕರ ಆರೋಪ ನಮ್ಮ ಹೆಣ್ಣು ಮಕ್ಕಳ ಮುಂದಿನ ಭವಿಷ್ಯಕ್ಕೆ ಪರಿಹಾರ ಕೊಡಿ

ಹುಳಿಯಾರು  ಪಟ್ಟಣದ ಇಂದಿರಾನಗರದಲ್ಲಿ ಕೆಲ ದಿನಗಳ ಹಿಂದೆ ಆಟೋ ಸಿಲಿಂಡರ್ ಸ್ಫೋಟದಿಂದ ತೀವ್ರ ಗಾಯಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ನೀಡುತ್ತಿದ್ದ ಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ಗುಣಮುಖವಾಗದಿದ್ದರೂ ಸಹ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆಂದು ಪೋಷಕರು ಆರೋಪಿಸಿದ್ದಾರೆ.
ಹುಳಿಯಾರಿನಲ್ಲಿ ನಡೆದ ಆಟೋ ಸಿಲಿಂಡರ್ ಸ್ಪೋಟದಿಂದ ಗಾಯಗೊಂಡ ಮಕ್ಕಳು ಸಂಪೂರ್ಣ ಗುಣಮುಖರಾಗದಿದ್ದರೂ ನಮ್ಮನ್ನು ಮನೆಗೆ ಕಳುಹಿಸಿದ್ದು ಸಾವಿರಾರೂ ನ ಅಯಿನ್ ಮೆಂಟ್ ಬರೆದಿರುವ ಚೀಟಿಯನ್ನು ತೋರಿಸುತ್ತಿರುವ ಪೋಷಕರು.


ಪ್ರಕರಣ ನಡೆದು ಜಿಲ್ಲಾಸ್ಪತ್ರೆಗೆ ದಾಖಾಲಾಗಿದ್ದಾಗ ಆಗಮಿಸಿದ್ದ ಸಚಿವೆ ಉಮಾಶ್ರೀ ಹಾಗೂ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಮಕ್ಕಳಿಗೆ ಸಂಪೂರ್ಣ ಚಿಕಿತ್ಸೆ ಕೊಡಿಸುತ್ತೇವೆ ಎಂದು ಭರವಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಈಗ ನಮ್ಮ ಮಕ್ಕಳು ಸಂಪೂರ್ಣ ಗುಣಮುಖವಾಗದಿದ್ದರೂ ಸಹ ನಮಗೆ ತಿಳಿಯದ ಏನೋ ಸಬೂಬು ಹೇಳಿ ಮಕ್ಕಳನ್ನು ಡಿಸ್ಚಾರ್ಜ್ ಮಾಡಿದ್ದಾರೆ. ಈ ಬಗ್ಗೆ ಸಚಿವರು, ಶಾಸಕರು ಕ್ರಮಕೈಗೊಳ್ಳಬೇಕು ಎಂದು ಮಕ್ಕಳ ಪೋಷಕರು ಮನವಿ ಮಾಡಿದರು.
ತೀವ್ರಗಾಯದ ನೋವಿನಿಂದ ಬಳತ್ತಿರುವ ಮಕ್ಕಳೊಂದಿಗೆ ಪೋಷಕರು.
ಚೈತ್ರ, ಮುಸೀಫ್ ಪಾಷ, ಅಯಿಶ್ ಸಿಮ್ರಾನ್, ಮಹೀಮೂರ್,ಉಮೇರ್ ಷಿಫಾ, ತುಳಸಿ, ರೆಹಾನ್, ಹೇಮಾ, ಲಕ್ಷ್ಮಿ ಮಕ್ಕಳು ಸಂಪೂರ್ಣ ಗುಣಮುಖವಾಗದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆ ಬಂದಿದ್ದು, ನಿತ್ಯ ನೋವಿನಿಂದ ನರಳುತ್ತಿದ್ದಾರೆ. ಅಲ್ಲದೆ ಮಕ್ಕಳ ಗಾಯಗಳಿಗೆ ಹಚ್ಚಲು ಸುಮಾರು ೧೫೦೦ ರಿಂದ ೨೫೦೦ರೂ ವರೆಗಿನ ಆಯಿಂಟ್ ಮೆಂಟ್ ಬರೆದುಕೊಟ್ಟಿದ್ದು ನಮಗೆ ಕೊಳ್ಳಲು ದುಬಾರಿಯಾಗಿದೆ.ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಕ್ಕಳಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ್ದನ್ನು ಬಿಟ್ಟರೆ ಮಕ್ಕಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆಯೇ ಇಲ್ಲವೆ ಎಂಬುದರ ಬಗ್ಗೆ ಒಂದು ದಿನವೂ ಗಮನ ಮಾಡಿಲ್ಲ. ಅಲ್ಲದೆ ಆಸ್ಪತ್ರೆಯಲ್ಲಿ ಮಾತ್ರೆ, ಇಂಜಕ್ಷನ್ ಟ್ಯೂಬ್, ಅಯಿನ್ ಮೆಂಟ್ ತರುವಂತೆ ಚೀಟಿ ಬರೆದುಕೊಟ್ಟು ನಮ್ಮಿಂದಲ್ಲೇ ತರಿಸಿದ್ದಾರೆ ಎಂದು ಚೈತ್ರ ಮಗುವಿನ ತಂದೆ ರಘು ತಿಳಿಸಿದರು.
ಗಾಯಗೊಂಡಿರುವ ಪೋಷಕರು ದಿನನಿತ್ಯ ಕೂಲಿನಾಲಿ ಮಾಡಿ ಜೀವನ ನಡೆಸುತ್ತಿದ್ದೇವೆ .ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ಮೇಲೆ ಸಾಲ ಮಾಡಿ ಮಕ್ಕಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಇದುವರೆಗೂ ಒಬ್ಬೊಬ್ಬ ಮಗುವಿಗೂ ಕಡಿಮೆ ಎಂದರೆ ಹತ್ತು ಸಾವಿರದವರೆಗೆ ಖರ್ಚಾಗಿದೆ .ಅಲ್ಲದೆ ನಾವು ಹುಳಿಯಾರಿನಿಂದ ಬೆಂಗಳೂರಿನ ಆಸ್ಪತ್ರೆಹೋಗಿ ಬಂದಿದ್ದು ಸೇರಿದಂತೆ ಸಾವಿರಾರು ರೂಪಾಯಿ ಖರ್ಚಾಗಿದೆ ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸುವಂತೆ ಮಹೀನೂರ್ ಮಗುವಿನ ತಂದೆ ಮನ್ಸೂರ್ ಪಾಷ ತಿಳಿಸಿದರು.
ಮಕ್ಕಳನ್ನು ಡಿಸ್ಚಾರ್ಜ್ ಮಾಡಿದ್ದರ ಬಗ್ಗೆ ಆಸ್ಪತ್ರೆಯವರನ್ನು ಕೇಳಿದರೆ ಮಕ್ಕಳು ಗುಣಮುಖರಾಗಿದ್ದಾರೆ ದಿನಾಲೂ ಆಯಿಂಟ್ ಮೆಂಟ್ ಹಚ್ಚಿ ಸರಿಯೋಗುತ್ತದೆ ಹಾಗೂ ವಾರಕ್ಕೆ ಮೂರು ಬಾರಿ ಬಂದು ತೋರಿಸಿಕೊಂಡು ಹೋಗಿ ಎಂದು ಹೇಳಿ ನಮ್ಮ ಬಾಯಿ ಮುಚ್ಚಿಸಿ ಕಳುಹಿಸಿದ್ದಾರೆ. ಅಲ್ಲದೆ ಘಟನೆಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ಗುರಿಯಾಗಿ ಮೈಕೈ ಸುಟ್ಟುಕೊಂಡವರಲ್ಲಿ ಹೆಚ್ಚು ಹೆಣ್ಣು ಮಕ್ಕಳೇ ಇದ್ದು ಅವರ ಮುಖ, ಕೈಕಾಲು ,ಹೊಟ್ಟೆ ಭಾಗ ಸುಟ್ಟಿದ್ದು ಮಕ್ಕಳ ರೂಪವೇ ಬದಲಾಗಿದೆ ಹೀಗಿರುವಾಗ ಮಕ್ಕಳ ಮುಂದಿನ ಭವಿಷ್ಯವೇನು, ಸಮಾಜದಲ್ಲಿ ಅವರು ಬಾಳುವುದೇಗೆ ಎಂಬುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಗಾಯಗೊಂಡ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸೂಕ್ತಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ನಮ್ಮ ಮಕ್ಕಳ ಈ ನೋವಿಗೆ ಶೀಘ್ರದಲ್ಲೇ ಸ್ಪಂದಿಸುವಂತೆ ಸಚಿವರಿಗೆ, ಶಾಸಕರಿಗೆ ಹಾಗೂ ತಹಸೀಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸುತ್ತೇವೆ ಆ ಪತ್ರಕ್ಕೆ ಅವರು ಸಮ್ಮತಿ ನೀಡಿ ಸೂಕ್ತ ಕ್ರಮಕೈಗೊಳ್ಳದೆ ಹೋದರೆ ಮುಂದಿನ ದಿನದಲ್ಲಿ ಉಗ್ರಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...