ವಿಷಯಕ್ಕೆ ಹೋಗಿ

ಮಕ್ಕಳು ಗುಣಮುಖವಾಗದಿದ್ದರೂ ಡಿಸ್ಚಾರ್ಜ್ : ಪೋಷಕರ ಆರೋಪ ನಮ್ಮ ಹೆಣ್ಣು ಮಕ್ಕಳ ಮುಂದಿನ ಭವಿಷ್ಯಕ್ಕೆ ಪರಿಹಾರ ಕೊಡಿ

ಹುಳಿಯಾರು  ಪಟ್ಟಣದ ಇಂದಿರಾನಗರದಲ್ಲಿ ಕೆಲ ದಿನಗಳ ಹಿಂದೆ ಆಟೋ ಸಿಲಿಂಡರ್ ಸ್ಫೋಟದಿಂದ ತೀವ್ರ ಗಾಯಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ನೀಡುತ್ತಿದ್ದ ಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ಗುಣಮುಖವಾಗದಿದ್ದರೂ ಸಹ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆಂದು ಪೋಷಕರು ಆರೋಪಿಸಿದ್ದಾರೆ.
ಹುಳಿಯಾರಿನಲ್ಲಿ ನಡೆದ ಆಟೋ ಸಿಲಿಂಡರ್ ಸ್ಪೋಟದಿಂದ ಗಾಯಗೊಂಡ ಮಕ್ಕಳು ಸಂಪೂರ್ಣ ಗುಣಮುಖರಾಗದಿದ್ದರೂ ನಮ್ಮನ್ನು ಮನೆಗೆ ಕಳುಹಿಸಿದ್ದು ಸಾವಿರಾರೂ ನ ಅಯಿನ್ ಮೆಂಟ್ ಬರೆದಿರುವ ಚೀಟಿಯನ್ನು ತೋರಿಸುತ್ತಿರುವ ಪೋಷಕರು.


ಪ್ರಕರಣ ನಡೆದು ಜಿಲ್ಲಾಸ್ಪತ್ರೆಗೆ ದಾಖಾಲಾಗಿದ್ದಾಗ ಆಗಮಿಸಿದ್ದ ಸಚಿವೆ ಉಮಾಶ್ರೀ ಹಾಗೂ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಮಕ್ಕಳಿಗೆ ಸಂಪೂರ್ಣ ಚಿಕಿತ್ಸೆ ಕೊಡಿಸುತ್ತೇವೆ ಎಂದು ಭರವಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಈಗ ನಮ್ಮ ಮಕ್ಕಳು ಸಂಪೂರ್ಣ ಗುಣಮುಖವಾಗದಿದ್ದರೂ ಸಹ ನಮಗೆ ತಿಳಿಯದ ಏನೋ ಸಬೂಬು ಹೇಳಿ ಮಕ್ಕಳನ್ನು ಡಿಸ್ಚಾರ್ಜ್ ಮಾಡಿದ್ದಾರೆ. ಈ ಬಗ್ಗೆ ಸಚಿವರು, ಶಾಸಕರು ಕ್ರಮಕೈಗೊಳ್ಳಬೇಕು ಎಂದು ಮಕ್ಕಳ ಪೋಷಕರು ಮನವಿ ಮಾಡಿದರು.
ತೀವ್ರಗಾಯದ ನೋವಿನಿಂದ ಬಳತ್ತಿರುವ ಮಕ್ಕಳೊಂದಿಗೆ ಪೋಷಕರು.
ಚೈತ್ರ, ಮುಸೀಫ್ ಪಾಷ, ಅಯಿಶ್ ಸಿಮ್ರಾನ್, ಮಹೀಮೂರ್,ಉಮೇರ್ ಷಿಫಾ, ತುಳಸಿ, ರೆಹಾನ್, ಹೇಮಾ, ಲಕ್ಷ್ಮಿ ಮಕ್ಕಳು ಸಂಪೂರ್ಣ ಗುಣಮುಖವಾಗದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆ ಬಂದಿದ್ದು, ನಿತ್ಯ ನೋವಿನಿಂದ ನರಳುತ್ತಿದ್ದಾರೆ. ಅಲ್ಲದೆ ಮಕ್ಕಳ ಗಾಯಗಳಿಗೆ ಹಚ್ಚಲು ಸುಮಾರು ೧೫೦೦ ರಿಂದ ೨೫೦೦ರೂ ವರೆಗಿನ ಆಯಿಂಟ್ ಮೆಂಟ್ ಬರೆದುಕೊಟ್ಟಿದ್ದು ನಮಗೆ ಕೊಳ್ಳಲು ದುಬಾರಿಯಾಗಿದೆ.ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಕ್ಕಳಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ್ದನ್ನು ಬಿಟ್ಟರೆ ಮಕ್ಕಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆಯೇ ಇಲ್ಲವೆ ಎಂಬುದರ ಬಗ್ಗೆ ಒಂದು ದಿನವೂ ಗಮನ ಮಾಡಿಲ್ಲ. ಅಲ್ಲದೆ ಆಸ್ಪತ್ರೆಯಲ್ಲಿ ಮಾತ್ರೆ, ಇಂಜಕ್ಷನ್ ಟ್ಯೂಬ್, ಅಯಿನ್ ಮೆಂಟ್ ತರುವಂತೆ ಚೀಟಿ ಬರೆದುಕೊಟ್ಟು ನಮ್ಮಿಂದಲ್ಲೇ ತರಿಸಿದ್ದಾರೆ ಎಂದು ಚೈತ್ರ ಮಗುವಿನ ತಂದೆ ರಘು ತಿಳಿಸಿದರು.
ಗಾಯಗೊಂಡಿರುವ ಪೋಷಕರು ದಿನನಿತ್ಯ ಕೂಲಿನಾಲಿ ಮಾಡಿ ಜೀವನ ನಡೆಸುತ್ತಿದ್ದೇವೆ .ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ಮೇಲೆ ಸಾಲ ಮಾಡಿ ಮಕ್ಕಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಇದುವರೆಗೂ ಒಬ್ಬೊಬ್ಬ ಮಗುವಿಗೂ ಕಡಿಮೆ ಎಂದರೆ ಹತ್ತು ಸಾವಿರದವರೆಗೆ ಖರ್ಚಾಗಿದೆ .ಅಲ್ಲದೆ ನಾವು ಹುಳಿಯಾರಿನಿಂದ ಬೆಂಗಳೂರಿನ ಆಸ್ಪತ್ರೆಹೋಗಿ ಬಂದಿದ್ದು ಸೇರಿದಂತೆ ಸಾವಿರಾರು ರೂಪಾಯಿ ಖರ್ಚಾಗಿದೆ ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸುವಂತೆ ಮಹೀನೂರ್ ಮಗುವಿನ ತಂದೆ ಮನ್ಸೂರ್ ಪಾಷ ತಿಳಿಸಿದರು.
ಮಕ್ಕಳನ್ನು ಡಿಸ್ಚಾರ್ಜ್ ಮಾಡಿದ್ದರ ಬಗ್ಗೆ ಆಸ್ಪತ್ರೆಯವರನ್ನು ಕೇಳಿದರೆ ಮಕ್ಕಳು ಗುಣಮುಖರಾಗಿದ್ದಾರೆ ದಿನಾಲೂ ಆಯಿಂಟ್ ಮೆಂಟ್ ಹಚ್ಚಿ ಸರಿಯೋಗುತ್ತದೆ ಹಾಗೂ ವಾರಕ್ಕೆ ಮೂರು ಬಾರಿ ಬಂದು ತೋರಿಸಿಕೊಂಡು ಹೋಗಿ ಎಂದು ಹೇಳಿ ನಮ್ಮ ಬಾಯಿ ಮುಚ್ಚಿಸಿ ಕಳುಹಿಸಿದ್ದಾರೆ. ಅಲ್ಲದೆ ಘಟನೆಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ಗುರಿಯಾಗಿ ಮೈಕೈ ಸುಟ್ಟುಕೊಂಡವರಲ್ಲಿ ಹೆಚ್ಚು ಹೆಣ್ಣು ಮಕ್ಕಳೇ ಇದ್ದು ಅವರ ಮುಖ, ಕೈಕಾಲು ,ಹೊಟ್ಟೆ ಭಾಗ ಸುಟ್ಟಿದ್ದು ಮಕ್ಕಳ ರೂಪವೇ ಬದಲಾಗಿದೆ ಹೀಗಿರುವಾಗ ಮಕ್ಕಳ ಮುಂದಿನ ಭವಿಷ್ಯವೇನು, ಸಮಾಜದಲ್ಲಿ ಅವರು ಬಾಳುವುದೇಗೆ ಎಂಬುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಗಾಯಗೊಂಡ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸೂಕ್ತಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ನಮ್ಮ ಮಕ್ಕಳ ಈ ನೋವಿಗೆ ಶೀಘ್ರದಲ್ಲೇ ಸ್ಪಂದಿಸುವಂತೆ ಸಚಿವರಿಗೆ, ಶಾಸಕರಿಗೆ ಹಾಗೂ ತಹಸೀಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸುತ್ತೇವೆ ಆ ಪತ್ರಕ್ಕೆ ಅವರು ಸಮ್ಮತಿ ನೀಡಿ ಸೂಕ್ತ ಕ್ರಮಕೈಗೊಳ್ಳದೆ ಹೋದರೆ ಮುಂದಿನ ದಿನದಲ್ಲಿ ಉಗ್ರಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...