ವಿಷಯಕ್ಕೆ ಹೋಗಿ

ಕೆಇಬಿ, ಹಾಸ್ಟೆಲ್ , ಐಬಿ ಕಾಂಪೌಂಡ್ ಮುಂದೆ ಅಂಗಡಿಯಿಡಲು ಸಜ್ಜು ತಹಸೀಲ್ದಾರ್ ರಿಂದ ಮತ್ತೊಮ್ಮೆ ತೆರವು : ಅನಧಿಕೃತ ಅಂಗಡಿಯಿಟ್ಟರೆ ಕಾನೂನುಕ್ರಮ

ಕೆರೆ ಒತ್ತುವರಿ ಕಾರ್ಯಾಚರಣೆಯಲ್ಲಿ ಪಟ್ಟಣದ ಬಸ್ ನಿಲ್ದಾಣದ ಬಳಿ ಅಂಗಡಿಗಳನ್ನು ಕಳೆದುಕೊಂಡ ಅಂಗಡಿದಾರರು ರಸ್ತೆಬದಿಯ ಸರ್ಕಾರಿ ಹಾಗೂ ಸಾರ್ವಜನಿಕ ಜಾಗಗಳಲ್ಲಿ ತರಾತುರಿಯಿಂದ ಅಂಗಡಿಗಳನ್ನಿಡಲು ಜಾಗಗುರುತು ಮಾಡಿಕೊಳ್ಳಲು ಮುಂದಾಗಿದ್ದು ವಿವಾದಕ್ಕೆ ಕಾರಣವಾಗಿ, ತಹಸೀಲ್ದಾರ್ ಕಾಮಾಕ್ಷಮ್ಮ ಸ್ಥಳಕ್ಕಾಗಮಿಸಿ ಅಂಗಡಿದಾರರು ಗುರುತಿಗಾಗಿ ನೆಟ್ಟಿದ್ದ ಸರ್ವೆಗಳನ್ನು ತೆರವು ಮಾಡಿದ್ದಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಕಾರಣಕ್ಕೂ ಅಂಗಡಿಗಳನ್ನು ಇಡದಂತೆ ಎಚ್ಚರಿಸಿದ್ದಾರೆ.
ಸರ್ಕಾರಿ ಜಾಗದಲ್ಲಿ ಅಂಗಡಿಗಳನ್ನಿಡದಂತೆ ಪಿಡಿಓ ಗಮನಹರಿಸುವಂತೆ ತಾಕೀತು ಮಾಡಿದ ತಹಸೀಲ್ದಾರ್ ಕಾಮಾಕ್ಷಮ್ಮ.
. ಹುಳಿಯಾರಿನ ಕೆರೆಅಂಗಳದಲ್ಲಿ ಹೆದ್ದಾರಿಗೆ ಲಗತ್ತಾಗಿ ಸುಮಾರು ೮೦ಕ್ಕೂ ಅಧಿಕ ಅಂಗಡಿಗಳನ್ನು ಕಳೆದ ಎರಡು ದಿನಗಳಿಂದಷ್ಟೆ ತೆರವುಗೊಳಿದ್ದರಿಂದ ಬೀದಿಗೆ ಬಿದ್ದ ಅಂಗಡಿದಾರರು ಕೆರೆ ಪ್ರದೇಶ ಹೊರತುಪಡಿಸಿ ಇತರೆ ಸರ್ಕಾರಿ ಜಾಗಗಳಾದ ಬೆಸ್ಕಾಂ ಕಛೇರಿ, ಬಾಲಕರ ಹಾಸ್ಟೆಲ್ ಹಾಗೂ ಪರಿವೀಕ್ಷಣಾ ಮಂದಿರದ ಕಾಂಪೌಡ್ ಮುಂದಿನ ಜಾಗದಲ್ಲಿ ಅಂಗಡಿಗಳನ್ನಿಡಲು ಮುಂದಾದರು. ಹುಳಿಯಾರು-ಹಿರಿಯೂರು ಎಸ್.ಎಚ್-೧೯ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಅಂಗಡಿಗಳನ್ನಿಡಲು ತಮಗೆ ಬೇಕಾದ ಜಾಗವನ್ನು ತಾವೇ ಗುರ್ತಿಸಿಕೊಂಡ ಕೆಲ ಅಂಗಡಿದಾರರು ಗಿಡಗಂಟೆಗಳನ್ನು ಕಡಿದು ಸರ್ವೆಮರಗಳನ್ನು ನೆಟ್ಟರೆ,ಮತ್ತೆಕೆಲವರು ತಾವೇ ಆ ಜಾಗದಲ್ಲಿ ನಿಂತು ಇಷ್ಟು ಜಾಗ ನನ್ನದು ಎಂದು ಹೇಳುತ್ತಿದ್ದರು.
ವಿಚಾರ ಕ್ಷಣಾರ್ಧದಲ್ಲೆ ಹರಡಿ ಹೆದ್ದಾರಿಯಲ್ಲಿ ಒಂದಿಚು ಜಾಗಬಿಡದಂತೆ ಆಕ್ರಮಿಸಿಕೊಂಡರು. ಜಾಗ ಸಿಗದ ಕೆಲವರು ಹತಾಶರಾಗಿ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ಅವರಿಗೆ ಮಿಂಚಿನಂತೆ ಸುದ್ದಿ ಮುಟ್ಟಿಸಿದರೆ ಕೆಇಬಿ ಅಧಿಕಾರಿಗಳು ಸಹ ಕಛೇರಿ ಮುಂದೆ ತೆರವು ಮಾಡಲು ಸೂಚಿಸಿದ್ದಾರೆ .
ಸ್ಥಳಕ್ಕಾಗಮಿಸಿದ ಪಿಎಸೈ ಪ್ರವೀಣ್ ಕುಮಾರ್ ಅವರು ಅಂಗಡಿದಾರರೊಂದಿಗೆ ಚರ್ಚಿಸಿ ಇಲ್ಲಿ ಅಂಗಡಿಯಿಡಲು ಯಾರು ಒಪ್ಪಿಗೆ ಕೊಟ್ಟಿದ್ದಾರೆ ಈರೀತಿ ಏಕಾಏಕಿ ಸಾರ್ವಜನಿಕ ಸ್ಥಳದಲ್ಲಿ ಅಂಗಡಿಯನ್ನಿಡಲು ಮುಂದಾಗುವುದು ಕಾನೂನುಬಾಹಿರ ಎಂದು ಅಂಗಡಿದಾರರನ್ನು ತಡೆಯುವಲ್ಲಿ ಮುಂದಾದರು.
ತಹಸೀಲ್ದಾರ್ ಕಾಮಾಕ್ಷಮ್ಮ ,ತಾಲ್ಲೂಕ್ ಪಂಚಾಯ್ತಿಯ ಇಓ ಕೃಷ್ಣಮೂರ್ತಿ ಸ್ಥಳಕ್ಕಾಗಮಿಸಿ ಪಿಡಿಓ ಅಡವೀಶ್ ಅವರನ್ನು ಕರೆಸಿ ಈ ಜಾಗದ ಬಗ್ಗೆ ಮಾಹಿತಿ ಪಡೆದು ನಂತರ ಸಾರ್ವಜನಿಕ ಸ್ಥಳದಲ್ಲಿ ಅಂಗಡಿಯಿಡಲು ಯಾವುದೇ ಕಾರಣಕ್ಕೂ ಅವಕಾಶವಿಲ್ಲ, ಸರ್ಕಾರಿ ಕಛೇರಿಯ ಮುಂದಿನ ಜಾಗಕ್ಕೆ ಪೆನ್ಸಿಂಗ್ ಮಾಡಿ ಇದು ಸರ್ಕಾರಿ ಜಾಗ ಅತಿಕ್ರಮಣ ನಿಷಿದ್ಧ ಎಂದು ಬೋರ್ಡ್ ಹಾಕಿ . ಒಂದು ವೇಳೆ ಯಾರಾದರೂ ಅನಧಿಕೃತವಾಗಿ ಅಂಗಡಿಗಳನ್ನಿಟ್ಟರೆ ಅವರೆ ಮೇಲೆ ಕಾನೂನುಕ್ರಮ ಕೈಗೊಳ್ಳುವಂತೆ ತಿಳಿಸಿದರು. ಅಂಗಡಿದಾರರು ಗುರ್ತಿಗಾಗಿ ನೆಟ್ಟಿದ್ದ ಸರ್ವೆಮರಗಳನ್ನು ಪಂಚಾಯ್ತಿಯ ವಶಕ್ಕೆ ಪಡೆಯುವಂತೆ ಸೂಚಿಸಿದರು.
ಅಂಗಡಿದಾರರ ಮನವಿ ಆಲಿಸುತ್ತಿರುವ ತಹಸೀಲ್ದಾರ್ ಹಾಗೂ ಇಓ ಕೃಷ್ಣಮೂರ್ತಿ.
ಮಾತಿನಚಕಮುಕಿ: ಸಾರ್ವಜನಿಕ ಸ್ಥಳದಲ್ಲಿ ಅಂಗಡಿಯಿಡುವುದು ತಪ್ಪಾದರೆ ಹುಳಿಯಾರಿನ ತುಂಬಾ ಸರ್ಕಾರಿ ಜಾಗ ಅತಿಕ್ರಮಿಸಿ ಅಂಗಡಿಗಳನ್ನಿಟ್ಟಿರುವುದನ್ನು ತೆರವುಗೊಳಿಸಿ ಅಲ್ಲದೆ ಹೆದ್ದಾರಿ ಜಾಗ ಕಂದಾಯ ಇಲಾಖೆಯವರಿಗೆ ಸೇರದಿರುವುದರಿಂದ ನಮ್ಮನ್ನು ತೆರವುಗೊಳಿಸಲು ತಮಗೆ ಅಧಿಕಾರವೇಯಿಲ್ಲ ಎಂದು ಗ್ರಾ.ಪಂ.ಮಾಜಿ ಅಧ್ಯಕ್ಷ್ಯ ಕೃಷ್ಣಪ್ಪ ಮಾತಿನಚಕಮುಕಿ ನಡೆಸಿದರು.
ಅಂಗಡಿದಾರು ಇಲ್ಲಿಯೂ ಜಾಗದ ಸಿಗದ ಹಿನ್ನಲೆಯಲ್ಲಿ ಆಕ್ರೋಶಗೊಂಡು ನಮ್ಮ ಅಂಗಡಿಗಳನ್ನು ಸ್ವಲ್ಪವೂ ಕರುಣೆಯಿಲ್ಲದೆ ತೆರವು ಮಾಡಿದ್ದೀರಿ. ಈಗ ನಾವು ಬೀದಿಗೆ ಬಿದ್ದಿದ್ದು ಜೀವನಕ್ಕಾಗಿ ಅಂಗಡಿಯಿಡಲು ಸೂಕ್ತ ಜಾಗ ಕೊಡಿಸಿ ಎಂದು ಅಂಗಲಾಚಿದರು.
ಈವೇಳೆ ಡಿಟಿ ಸತ್ಯನಾರಾಯಣ್,ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ,ಸದಸ್ಯರುಗಳಾದ ರಾಘವೇಂದ್ರ, ವೆಂಕಟಮ್ಮ, ಬಾಲರಾಜ್,ಪ್ರದೀಪ, ಏಜೆಂಟ್ ಕುಮಾರ್ ,ಕರವೇ ಶ್ರೀನಿವಾಸ್, ಬಸವರಾಜು,ಇನ್ನಿತರರಿದ್ದರು.
----------------

ಪಟ್ಟಣದಲ್ಲಿ ಅತಿಕ್ರಮವಾಗಿರುವ ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳನ್ನು ಗುರ್ತಿಸಿ ಸರ್ವೆ ಮಾಡಿ ಅತಿಕ್ರಮಣದಾರರ ಪಟ್ಟಿ ಮಾಡಿ. ಸೂಕ್ತ ನೋಟೀಸ್ ನೀಡಿದ ನಂತರ ತೆರವುಗೊಳಿಸಿ : ಇಓ ಕೃಷ್ಣಮೂರ್ತಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...