ವಿಷಯಕ್ಕೆ ಹೋಗಿ

ಜೈ ತುಳುನಾಡ್ ಚಿತ್ರಕ್ಕೆ ನಂದಿಹಳ್ಳಿಯಲ್ಲಿ ಚಾಲನೆ

ಸಮಾಜದಲ್ಲಿ ಅಂತ:ಕಲಹ , ಕ್ರೌರ್ಯ ತಾಂಡವವಾಡುತ್ತಿದ್ದು ನಾಡಿಗೆ ಭಾವೈಕ್ಯತೆ ಸಾರುವ ಚಿತ್ರದ ಅವಶ್ಯಕತೆಯಿದ್ದು ಉತ್ತಮ ಸಂದೇಶ ನೀಡುವಂತಹ ಚಿತ್ರ ನಿರ್ಮಾಣ ಮಾಡಲು ಮುಂದಾಗಿ ಎಂದು ಈಶ್ವರಾನಂದಪುರಿ ಸ್ವಾಮೀಜಿ ಅಶೀರ್ವಚನ ನೀಡಿದರು.
ಹುಳಿಯಾರು ಹೋಬಳಿ ನಂದಿಹಳ್ಳಿ ನಡೆದ ಜೈತುಳುನಾಡ್ ಚಿತ್ರದ ಮೂಹೂರ್ತ ಕಾರ್ಯದಲ್ಲಿ ಪುರುಷೋತ್ತಮಾನಂದಪುರಿ ಸ್ವಾಮಿಜಿ ಅಶೀರ್ವಚನ ನೀಡಿದರು.ಈಶ್ವರಾನಂದಪುರಿ ಸ್ವಾಮೀಜಿ , ಸಹನಿರ್ಮಾಪಕರಾದ ನಂದಿಹಳ್ಳಿಶಿವಣ್ಣ ,ಫ್ರಾಂಕ್ ಫರ್ನಾಂಡಿಸ್ ಹಾಗೂ ಇತರರು.
ಹುಳಿಯಾರು ಹೋಬಳಿ ನಂದಿಹಳ್ಳಿಯಲ್ಲಿ ಶುಕ್ರವಾರ ನಡೆದ ಜೈತುಳುನಾಡ್ ಚಿತ್ರದ ಮೂಹೂರ್ತ ಸಮಾರಂಭದಲ್ಲಿ ಸಾನಿಧ್ಯವಹಿಸಿ ಮಾತನಾಡಿದ ಅವರು, ಇದುವರೆಗೂ ಚಿತ್ರಗಳ ಮೂಹೂರ್ತಕ್ಕೆ ಸ್ವಾಮೀಜಿಗಳನ್ನು ಯಾರು ಕರೆದ ಉದಾಹರಣೆಗಳಿಲ್ಲ ನಮ್ಮ ಭಕ್ತರೊಬ್ಬರ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದರಿಂದ ಶುಭವಾಗಲಿ ಎಂದು ತಾವು ಆಗಮಿಸಿದ್ದು ಎಲ್ಲರೂ ನೋಡೂವಂತ ಸದಭಿರುಚಿ ಚಿತ್ರ ನಿರ್ಮಾಣ ಮಾಡಲಿ ಎಂದರು.
ಪುರುಷೋತ್ತಮಾನಂದಪುರಿ ಸ್ವಾಮಿಜಿ ಮಾತನಾಡಿ, ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಉತ್ತಮ ಸಂದೇಶ ಸಾರುವಂತಹ ಮಾಧ್ಯಮಗಳು ಅವಶ್ಯಕವಾಗಿದ್ದು ಸಂದೇಶ ಸಾರುವ ಜೊತೆಗೆ ಮನರಂಜನೆ ಹಾಗೂ ಸ್ಪೂರ್ತಿ ನೀಡುವಂತಹ ಚಿತ್ರ ನಿರ್ಮಾಣ ಮಾಡಿ ಎಂದರು. ಒಂದು ಸಿನಿಮಾ ನಿರ್ಮಿಸಲು ಸಾಕಷ್ಟು ಮಂದಿಯ ಪರಿಶ್ರಮವಿರುತ್ತದೆ. ಈ ತಂಡದಲ್ಲಿರುವ ನಿರ್ಮಾಪಕ, ನಿರ್ದೇಶಕರು ಉತ್ತಮ ಕಥೆಯೊಂದಿಗೆ ಉತ್ತಮ ಚಿತ್ರ ನಿರ್ಮಾಣ ಮಾಡಲಿ ಎಂದರು.
ಜಿ.ಪಂ.ಅಧ್ಯಕ್ಷ ಹುಚ್ಚಯ್ಯ ಮಾತನಾಡಿ ,ಕಲೆ ಹಾಗೂ ಸಂಸ್ಕೃತಿ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಚಲನಚಿತ್ರಗಳು ಮನುಷ್ಯನ ಬದುಕಿಗೆ ಪೂರಕ ವಾತಾವರ್ಣ ನಿರ್ಮಿಸಲಿ ಎಂದರು.
ನಿರ್ಮಾಪಕ ಫ್ರಾಂಕ್ ಫರ್ನಾಂಡಿಸ್ ಮಾತನಾಡಿ , ಇಲ್ಲಿ ಎಲ್ಲ ಧರ್ಮೀಯರು ಸೇರಿ ಚಿತ್ರ ನಿರ್ಮಾಣ ಮಾಡುತ್ತಿದ್ದು ಚಿತ್ರದ ಯಶಸ್ಸಿಗೆ ನಿಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದರು. ಸಹನಿರ್ಮಾಪಕ ನಂದಿಹಳ್ಳಿ ಶಿವಣ್ಣ ಉತ್ತಮ ಸಂಘಟಕನಾಗಿದ್ದು ಅವರನ್ನು ಶಾಸಕರನ್ನಾಗಿ ಮಾಡಲು ನೀವುಗಳು ಮುಂದಾಗಿ ಎಂದರು.

ಕಾರ್ಯಕ್ರಮದಲ್ಲಿ ಸಹನಿರ್ಮಾಪಕರಾದ ನಂದಿಹಳ್ಳಿಶಿವಣ್ಣ, ಆಲಿ ನಿಜಾನ್ ಅಹಮದ್, ಚಿತ್ರನಟಿ ಭವ್ಯ, ಜಿ.ಪಂ.ಸದಸ್ಯೆ ಮಂಜುಳಾಗವಿರಂಯ್ಯ, ತಾ.ಪಂ.ಸದಸ್ಯರಾದ ಜಯಣ್ಣ,ಬೀಬೀ ಫಾತೀಮಾ, ತಿಮ್ಲಾಪುರ ಗ್ರಾ.ಪಂ.ಅಧ್ಯಕ್ಷೆ ಭಾಗ್ಯಮ್ಮ, ಮುಖಂಡರಾದ ಜಬೀಉಲ್ಲಾ,ಜಲಾಲ್ ಸಾಬ್, ಸೀಮೆಣ್ಣೆ ಕೃಷ್ಣಯ್ಯ ಸೇರಿದಂತೆ ಚಿತ್ರತಂಡದವರು ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.