ವಿಷಯಕ್ಕೆ ಹೋಗಿ

ಜೈ ತುಳುನಾಡ್ ಚಿತ್ರಕ್ಕೆ ನಂದಿಹಳ್ಳಿಯಲ್ಲಿ ಚಾಲನೆ

ಸಮಾಜದಲ್ಲಿ ಅಂತ:ಕಲಹ , ಕ್ರೌರ್ಯ ತಾಂಡವವಾಡುತ್ತಿದ್ದು ನಾಡಿಗೆ ಭಾವೈಕ್ಯತೆ ಸಾರುವ ಚಿತ್ರದ ಅವಶ್ಯಕತೆಯಿದ್ದು ಉತ್ತಮ ಸಂದೇಶ ನೀಡುವಂತಹ ಚಿತ್ರ ನಿರ್ಮಾಣ ಮಾಡಲು ಮುಂದಾಗಿ ಎಂದು ಈಶ್ವರಾನಂದಪುರಿ ಸ್ವಾಮೀಜಿ ಅಶೀರ್ವಚನ ನೀಡಿದರು.
ಹುಳಿಯಾರು ಹೋಬಳಿ ನಂದಿಹಳ್ಳಿ ನಡೆದ ಜೈತುಳುನಾಡ್ ಚಿತ್ರದ ಮೂಹೂರ್ತ ಕಾರ್ಯದಲ್ಲಿ ಪುರುಷೋತ್ತಮಾನಂದಪುರಿ ಸ್ವಾಮಿಜಿ ಅಶೀರ್ವಚನ ನೀಡಿದರು.ಈಶ್ವರಾನಂದಪುರಿ ಸ್ವಾಮೀಜಿ , ಸಹನಿರ್ಮಾಪಕರಾದ ನಂದಿಹಳ್ಳಿಶಿವಣ್ಣ ,ಫ್ರಾಂಕ್ ಫರ್ನಾಂಡಿಸ್ ಹಾಗೂ ಇತರರು.
ಹುಳಿಯಾರು ಹೋಬಳಿ ನಂದಿಹಳ್ಳಿಯಲ್ಲಿ ಶುಕ್ರವಾರ ನಡೆದ ಜೈತುಳುನಾಡ್ ಚಿತ್ರದ ಮೂಹೂರ್ತ ಸಮಾರಂಭದಲ್ಲಿ ಸಾನಿಧ್ಯವಹಿಸಿ ಮಾತನಾಡಿದ ಅವರು, ಇದುವರೆಗೂ ಚಿತ್ರಗಳ ಮೂಹೂರ್ತಕ್ಕೆ ಸ್ವಾಮೀಜಿಗಳನ್ನು ಯಾರು ಕರೆದ ಉದಾಹರಣೆಗಳಿಲ್ಲ ನಮ್ಮ ಭಕ್ತರೊಬ್ಬರ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದರಿಂದ ಶುಭವಾಗಲಿ ಎಂದು ತಾವು ಆಗಮಿಸಿದ್ದು ಎಲ್ಲರೂ ನೋಡೂವಂತ ಸದಭಿರುಚಿ ಚಿತ್ರ ನಿರ್ಮಾಣ ಮಾಡಲಿ ಎಂದರು.
ಪುರುಷೋತ್ತಮಾನಂದಪುರಿ ಸ್ವಾಮಿಜಿ ಮಾತನಾಡಿ, ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಉತ್ತಮ ಸಂದೇಶ ಸಾರುವಂತಹ ಮಾಧ್ಯಮಗಳು ಅವಶ್ಯಕವಾಗಿದ್ದು ಸಂದೇಶ ಸಾರುವ ಜೊತೆಗೆ ಮನರಂಜನೆ ಹಾಗೂ ಸ್ಪೂರ್ತಿ ನೀಡುವಂತಹ ಚಿತ್ರ ನಿರ್ಮಾಣ ಮಾಡಿ ಎಂದರು. ಒಂದು ಸಿನಿಮಾ ನಿರ್ಮಿಸಲು ಸಾಕಷ್ಟು ಮಂದಿಯ ಪರಿಶ್ರಮವಿರುತ್ತದೆ. ಈ ತಂಡದಲ್ಲಿರುವ ನಿರ್ಮಾಪಕ, ನಿರ್ದೇಶಕರು ಉತ್ತಮ ಕಥೆಯೊಂದಿಗೆ ಉತ್ತಮ ಚಿತ್ರ ನಿರ್ಮಾಣ ಮಾಡಲಿ ಎಂದರು.
ಜಿ.ಪಂ.ಅಧ್ಯಕ್ಷ ಹುಚ್ಚಯ್ಯ ಮಾತನಾಡಿ ,ಕಲೆ ಹಾಗೂ ಸಂಸ್ಕೃತಿ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಚಲನಚಿತ್ರಗಳು ಮನುಷ್ಯನ ಬದುಕಿಗೆ ಪೂರಕ ವಾತಾವರ್ಣ ನಿರ್ಮಿಸಲಿ ಎಂದರು.
ನಿರ್ಮಾಪಕ ಫ್ರಾಂಕ್ ಫರ್ನಾಂಡಿಸ್ ಮಾತನಾಡಿ , ಇಲ್ಲಿ ಎಲ್ಲ ಧರ್ಮೀಯರು ಸೇರಿ ಚಿತ್ರ ನಿರ್ಮಾಣ ಮಾಡುತ್ತಿದ್ದು ಚಿತ್ರದ ಯಶಸ್ಸಿಗೆ ನಿಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದರು. ಸಹನಿರ್ಮಾಪಕ ನಂದಿಹಳ್ಳಿ ಶಿವಣ್ಣ ಉತ್ತಮ ಸಂಘಟಕನಾಗಿದ್ದು ಅವರನ್ನು ಶಾಸಕರನ್ನಾಗಿ ಮಾಡಲು ನೀವುಗಳು ಮುಂದಾಗಿ ಎಂದರು.

ಕಾರ್ಯಕ್ರಮದಲ್ಲಿ ಸಹನಿರ್ಮಾಪಕರಾದ ನಂದಿಹಳ್ಳಿಶಿವಣ್ಣ, ಆಲಿ ನಿಜಾನ್ ಅಹಮದ್, ಚಿತ್ರನಟಿ ಭವ್ಯ, ಜಿ.ಪಂ.ಸದಸ್ಯೆ ಮಂಜುಳಾಗವಿರಂಯ್ಯ, ತಾ.ಪಂ.ಸದಸ್ಯರಾದ ಜಯಣ್ಣ,ಬೀಬೀ ಫಾತೀಮಾ, ತಿಮ್ಲಾಪುರ ಗ್ರಾ.ಪಂ.ಅಧ್ಯಕ್ಷೆ ಭಾಗ್ಯಮ್ಮ, ಮುಖಂಡರಾದ ಜಬೀಉಲ್ಲಾ,ಜಲಾಲ್ ಸಾಬ್, ಸೀಮೆಣ್ಣೆ ಕೃಷ್ಣಯ್ಯ ಸೇರಿದಂತೆ ಚಿತ್ರತಂಡದವರು ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...