ವಿಷಯಕ್ಕೆ ಹೋಗಿ

ಮುಂದುವರಿದ ಧರಣಿ : ತಹಸೀಲ್ದಾರ್ ರ ನಿರೀಕ್ಷೆ : ಸಂಜೆಯಾದರೂ ಧರಣಿ ಸ್ಥಳಕ್ಕೆ ಆಗಮಿಸದ ಅಧಿಕಾರಿಗಳು

ಹುಳಿಯಾರು  ಪಟ್ಟಣದ ಕೆಇಬಿ ಎದುರಿನ ವಸತಿ ಪ್ರದೇಶದಲ್ಲಿ ಕೋಳಿ ಅಂಗಡಿ ತೆರೆಯ ಕೂಡದೆಂದು ಪಟ್ಟು ಹಿಡಿದು ಸೋಮವಾರ ಪ್ರಾರಂಭವಾದ ಧರಣಿ ಮಂಗಳವಾರವೂ ಸಹ ಮುಂದುವರೆದಿದ್ದು,
ಸಂಜೆಯಾಗುತ್ತಾ ಬಂದರೂ ಸಹ ಜಾಗದ ಮಾಲೀಕರಾಗಲಿ, ಸಾರ್ವಜನಿಕ ಅಧಿಕಾರಿಗಳಾಗಲಿ ಧರಣಿ ಸ್ಥಳಕ್ಕೆ ಬಾರದೆ. ತಹಸೀಲ್ದಾರ್ ನಿರೀಕ್ಷೆಯಲ್ಲಿ ಧರಣಿ ಮುಂದುವರೆಯಿತು.
ಅಧಿಕಾರಿಗಳ ನಿರೀಕ್ಷೆಯಲ್ಲಿ ಮಂಗಳವಾರವೂ ಧರಣಿ ಮುಂದುವರಿಸಿದ ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ ಸಿದ್ದಪ್ಪನವರ ಕುಟುಂಬದವರು .
ವಸತಿ ಪ್ರದೇಶದಲ್ಲಿ ಕೋಳಿ ಅಂಗಡಿ ಇಡುವುದನ್ನು ವಿರೋದಿಸಿ ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ ಸಿದ್ದಪ್ಪನವರ ಕುಟುಂಬದವರು ಹಾಗೂ ಅಕ್ಕಪಕ್ಕದವ ಮನೆಯವರು ಸೇರಿ ಧರಣಿ ಪ್ರಾರಂಭಿಸಿದ್ದರು. ಧರಣಿ ವಿಷಯ ತಿಳಿದರೂ ಸಹ ಜಾಗದ ಮಾಲೀಕರಾಗಲಿ, ಸಾರ್ವಜನಿಕ ಅಧಿಕಾರಿಗಳಾಗಲಿ ಧರಣಿ ಸ್ಥಳಕ್ಕೆ ಬಾರದೆಯಿದ್ದು ಮಂಗಳವಾರ ಸಂಜೆಯಾಗುತ್ತಾ ಬಂದರೂ ಸಹ ಯಾರೂ ಇತ್ತ ಸುಳಿಯದ ಹಿನ್ನಲೆಯಲ್ಲಿ ಧರಣಿ ಮುಂದುವರೆದಿತ್ತು.
ಧರಣಿ ನಿರತರ ಮನವೋಲಿಸಲು ಕೋಳಿ ಅಂಗಡಿದಾರರು ಮುಂದಾಗಿ, ಸಭೆ ಕರೆದು ಧರಣಿ ನಿರತ ಕುಟುಂಬದ ರಘು ಅವರೊಂದಿಗೆ ಮಾತುಕತೆ ನಡೆಸಲು ಮುಂದಾದರು. ಬಸ್ ಅಂಗಡಿ ತೆರವಿನಿಂದಾಗಿ ಕೋಳಿ ಅಂಗಡಿಯವರಿಗೆ ಪಟ್ಟಣದಲ್ಲಿ ಎಲ್ಲೂ ಸೂಕ್ತ ಜಾಗ ಸಿಗದೆ ಪರದಾಡುತ್ತಿದ್ದೇವೆ. ಈಗ ಸದ್ಯ ಜಾಗ ಸಿಕ್ಕಿದೆ ಇದರಿಂದ ನಮ್ಮ ಜೀವನಕ್ಕೂ ಅನುಕೂಲವಾಗಲಿದೆ. ಯಾವುದೇ ಕಾರಣಕ್ಕೂ ಕೋಳಿ ಅಂಗಡಿಗಳ ಹತ್ತಿರ ಅಸ್ವಚ್ಚತೆಗೆ ಅನುವು ಮಾಡಿಕೊಡುವುದಿಲ್ಲ, ಅಂಗಡಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ನಾವುಗಳೆ ಒಂದು ಆಟೋ ಮಾಡಿಕೊಂಡು ಪಟ್ಟಣದ ಹೊರಗೆ ಸಾಸಿಗುತ್ತೇವೆ. ಅಂಗಡಿಯನ್ನು ಶುಚಿಯಾಗಿಟ್ಟುಕೊಳ್ಳುತ್ತೇವೆ ಇದರಿಂದ ಯಾವುದೇ ರೀತಿಯ ವಾಸನೆ ಬಾರದಂತೆ ಎಚ್ಚರವಹಿಸಿಕೊಂಡು ಅಂಗಡಿಯನ್ನು ನಡೆಸುತ್ತೇವೆಂದು ಧರಣಿನಿರತ ಮನವೋಲಿಸಲು ಮುಂದಾಗಿದ್ದರು.
ಧರಣಿನಿರತ ಕುಟುಂಬದ ರಘು ಪ್ರತಿಕ್ರಿಯಿಸಿ ಇಂದು ಅಂಗಡಿಯಿಡುವ ಮೊದಲೇ ಖಾಗದ ಮಾಲೀಕರು ನಮ್ಮ ಮೇಲೆ ಉದ್ಘಟತನದಿಂದ ಮಾತಾಡಿದ್ದಾರೆ. ಈಗ ನಯವಾಗಿ ಮಾತನಾಡಿ ನಂತರ ನಾವೇನಾದರೂ ಕೇಳಲು ಹೋದರೆ ನಮ್ಮೊಂದಿಗೆ ಯಾವರೀತಿ ನಡೆದುಕೊಳ್ಳುತ್ತಾರೆ ಎಂದರು. ಒಂದು ಅಂಗಡಿಯಾಗಿದ್ದರೆ ಪರವಾಗಿಲ್ಲ ಬಸ್ ನಿಲ್ದಾಣದಲ್ಲಿನ ಅನೇಕ ಕೋಳಿ ಅಂಗಡಿಯವರು ಇದೇ ಜಾಗಕ್ಕೆ ಬಂದರೆ ಅಕ್ಕಪಕ್ಕದ ಮನೆಯವರ ಗತಿ ಏನು ಎಂದ ಅವರು ತಹಸೀಲ್ದಾರ್ ಅವರೇ ಸ್ಥಳಕ್ಕೆ ಬಂದು ಈ ಸಮಸ್ಯೆಯನ್ನು ಬಗೆಹರಿಸಲಿ ಎಂದರು.

ಒಟ್ಟಾರೆ ಖಾಸಗಿ ಜಾಗದ ಮಾಲೀಕರಾಗಲಿ , ಸಾರ್ವಜನಿಕ ಅಧಿಕಾರಾಗಿಗಳಾಗಲಿ ಯಾರೊಬ್ಬರು ಸ್ಥಳಕ್ಕೆ ಬಂದು ವಿಷಯದ ಬಗ್ಗೆ ಮಾತನಾಡದೆ ಇರುವುದರಿಂದ ಪ್ರತಿಭಟನೆ ಮುಂದುವರೆಯುವಂತೆ ಮಾಡಿತ್ತು. ಪ್ರತಿಭಟನಾ ನಿರತ ಕುಟುಂಬದವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೆ ಧರಣಿ ಸ್ಥಳದಲ್ಲಿರಿಸಿ ಪ್ರತಿಭಟನೆ ನಡೆಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...