ವಿಷಯಕ್ಕೆ ಹೋಗಿ

ಮುಂದುವರಿದ ಧರಣಿ : ತಹಸೀಲ್ದಾರ್ ರ ನಿರೀಕ್ಷೆ : ಸಂಜೆಯಾದರೂ ಧರಣಿ ಸ್ಥಳಕ್ಕೆ ಆಗಮಿಸದ ಅಧಿಕಾರಿಗಳು

ಹುಳಿಯಾರು  ಪಟ್ಟಣದ ಕೆಇಬಿ ಎದುರಿನ ವಸತಿ ಪ್ರದೇಶದಲ್ಲಿ ಕೋಳಿ ಅಂಗಡಿ ತೆರೆಯ ಕೂಡದೆಂದು ಪಟ್ಟು ಹಿಡಿದು ಸೋಮವಾರ ಪ್ರಾರಂಭವಾದ ಧರಣಿ ಮಂಗಳವಾರವೂ ಸಹ ಮುಂದುವರೆದಿದ್ದು,
ಸಂಜೆಯಾಗುತ್ತಾ ಬಂದರೂ ಸಹ ಜಾಗದ ಮಾಲೀಕರಾಗಲಿ, ಸಾರ್ವಜನಿಕ ಅಧಿಕಾರಿಗಳಾಗಲಿ ಧರಣಿ ಸ್ಥಳಕ್ಕೆ ಬಾರದೆ. ತಹಸೀಲ್ದಾರ್ ನಿರೀಕ್ಷೆಯಲ್ಲಿ ಧರಣಿ ಮುಂದುವರೆಯಿತು.
ಅಧಿಕಾರಿಗಳ ನಿರೀಕ್ಷೆಯಲ್ಲಿ ಮಂಗಳವಾರವೂ ಧರಣಿ ಮುಂದುವರಿಸಿದ ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ ಸಿದ್ದಪ್ಪನವರ ಕುಟುಂಬದವರು .
ವಸತಿ ಪ್ರದೇಶದಲ್ಲಿ ಕೋಳಿ ಅಂಗಡಿ ಇಡುವುದನ್ನು ವಿರೋದಿಸಿ ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ ಸಿದ್ದಪ್ಪನವರ ಕುಟುಂಬದವರು ಹಾಗೂ ಅಕ್ಕಪಕ್ಕದವ ಮನೆಯವರು ಸೇರಿ ಧರಣಿ ಪ್ರಾರಂಭಿಸಿದ್ದರು. ಧರಣಿ ವಿಷಯ ತಿಳಿದರೂ ಸಹ ಜಾಗದ ಮಾಲೀಕರಾಗಲಿ, ಸಾರ್ವಜನಿಕ ಅಧಿಕಾರಿಗಳಾಗಲಿ ಧರಣಿ ಸ್ಥಳಕ್ಕೆ ಬಾರದೆಯಿದ್ದು ಮಂಗಳವಾರ ಸಂಜೆಯಾಗುತ್ತಾ ಬಂದರೂ ಸಹ ಯಾರೂ ಇತ್ತ ಸುಳಿಯದ ಹಿನ್ನಲೆಯಲ್ಲಿ ಧರಣಿ ಮುಂದುವರೆದಿತ್ತು.
ಧರಣಿ ನಿರತರ ಮನವೋಲಿಸಲು ಕೋಳಿ ಅಂಗಡಿದಾರರು ಮುಂದಾಗಿ, ಸಭೆ ಕರೆದು ಧರಣಿ ನಿರತ ಕುಟುಂಬದ ರಘು ಅವರೊಂದಿಗೆ ಮಾತುಕತೆ ನಡೆಸಲು ಮುಂದಾದರು. ಬಸ್ ಅಂಗಡಿ ತೆರವಿನಿಂದಾಗಿ ಕೋಳಿ ಅಂಗಡಿಯವರಿಗೆ ಪಟ್ಟಣದಲ್ಲಿ ಎಲ್ಲೂ ಸೂಕ್ತ ಜಾಗ ಸಿಗದೆ ಪರದಾಡುತ್ತಿದ್ದೇವೆ. ಈಗ ಸದ್ಯ ಜಾಗ ಸಿಕ್ಕಿದೆ ಇದರಿಂದ ನಮ್ಮ ಜೀವನಕ್ಕೂ ಅನುಕೂಲವಾಗಲಿದೆ. ಯಾವುದೇ ಕಾರಣಕ್ಕೂ ಕೋಳಿ ಅಂಗಡಿಗಳ ಹತ್ತಿರ ಅಸ್ವಚ್ಚತೆಗೆ ಅನುವು ಮಾಡಿಕೊಡುವುದಿಲ್ಲ, ಅಂಗಡಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ನಾವುಗಳೆ ಒಂದು ಆಟೋ ಮಾಡಿಕೊಂಡು ಪಟ್ಟಣದ ಹೊರಗೆ ಸಾಸಿಗುತ್ತೇವೆ. ಅಂಗಡಿಯನ್ನು ಶುಚಿಯಾಗಿಟ್ಟುಕೊಳ್ಳುತ್ತೇವೆ ಇದರಿಂದ ಯಾವುದೇ ರೀತಿಯ ವಾಸನೆ ಬಾರದಂತೆ ಎಚ್ಚರವಹಿಸಿಕೊಂಡು ಅಂಗಡಿಯನ್ನು ನಡೆಸುತ್ತೇವೆಂದು ಧರಣಿನಿರತ ಮನವೋಲಿಸಲು ಮುಂದಾಗಿದ್ದರು.
ಧರಣಿನಿರತ ಕುಟುಂಬದ ರಘು ಪ್ರತಿಕ್ರಿಯಿಸಿ ಇಂದು ಅಂಗಡಿಯಿಡುವ ಮೊದಲೇ ಖಾಗದ ಮಾಲೀಕರು ನಮ್ಮ ಮೇಲೆ ಉದ್ಘಟತನದಿಂದ ಮಾತಾಡಿದ್ದಾರೆ. ಈಗ ನಯವಾಗಿ ಮಾತನಾಡಿ ನಂತರ ನಾವೇನಾದರೂ ಕೇಳಲು ಹೋದರೆ ನಮ್ಮೊಂದಿಗೆ ಯಾವರೀತಿ ನಡೆದುಕೊಳ್ಳುತ್ತಾರೆ ಎಂದರು. ಒಂದು ಅಂಗಡಿಯಾಗಿದ್ದರೆ ಪರವಾಗಿಲ್ಲ ಬಸ್ ನಿಲ್ದಾಣದಲ್ಲಿನ ಅನೇಕ ಕೋಳಿ ಅಂಗಡಿಯವರು ಇದೇ ಜಾಗಕ್ಕೆ ಬಂದರೆ ಅಕ್ಕಪಕ್ಕದ ಮನೆಯವರ ಗತಿ ಏನು ಎಂದ ಅವರು ತಹಸೀಲ್ದಾರ್ ಅವರೇ ಸ್ಥಳಕ್ಕೆ ಬಂದು ಈ ಸಮಸ್ಯೆಯನ್ನು ಬಗೆಹರಿಸಲಿ ಎಂದರು.

ಒಟ್ಟಾರೆ ಖಾಸಗಿ ಜಾಗದ ಮಾಲೀಕರಾಗಲಿ , ಸಾರ್ವಜನಿಕ ಅಧಿಕಾರಾಗಿಗಳಾಗಲಿ ಯಾರೊಬ್ಬರು ಸ್ಥಳಕ್ಕೆ ಬಂದು ವಿಷಯದ ಬಗ್ಗೆ ಮಾತನಾಡದೆ ಇರುವುದರಿಂದ ಪ್ರತಿಭಟನೆ ಮುಂದುವರೆಯುವಂತೆ ಮಾಡಿತ್ತು. ಪ್ರತಿಭಟನಾ ನಿರತ ಕುಟುಂಬದವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೆ ಧರಣಿ ಸ್ಥಳದಲ್ಲಿರಿಸಿ ಪ್ರತಿಭಟನೆ ನಡೆಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.