ವಿಷಯಕ್ಕೆ ಹೋಗಿ

ಗಾಣಧಾಳು ಗ್ರಾ.ಪಂ. ಬೀಗ : ಹಣ ಬಿಡುಗಡೆಗೆ ಒತ್ತಾಯ

ಹುಳಿಯಾರು  ಹೋಬಳಿ ಗಾಣಧಾಳು ಗಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಯೋಜನೆಯಡಿ ಕೈಗೊಂಡಿದ್ದ ಕಾಮಗಾರಿಗಳ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಸೇರಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟಿಸಿದ ಘಟನೆ ಶುಕ್ರವಾರ ಘಟಿಸಿದೆ.
ಹುಳಿಯಾರು ಹೋಬಳಿ ಗಾಣಧಾಳು ಗ್ರಾಮದಲ್ಲಿ ಖಾತ್ರಿಹಣ ಬಿಡುಗಡೆಗೆ ಒತ್ತಾಯಿಸಿ ಸಾರ್ವಜನಿಕರು ಗ್ರಾ.ಪಂ ಕಛೇರಿಗೆ ದಿಢೀರ್ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಈ ಭಾಗದ ಅನೇಕ ರೈತರು ಖಾತ್ರಿ ಯೋಜನೆಯಡಿ ಶೌಚಾಲಯ, ಹಿಂಗುಗುಂಡಿ, ದನದಕೊಟ್ಟಿಗೆ, ಕೃಷಿ ಹೊಂಡ,ಚೆಕ್ ಡ್ಯಾಂ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಗಿಸಿದ್ದು ಸೂಕ್ತ ದಾಖಲೆಗಳನ್ನು ನೀಡಿದ್ದರೂ ಸಹ ಹಣ ಬಿಡುಗಡೆ ಮಾಡುವಲ್ಲಿ ಅಧಿಕಾರಿಗಳು ಹಿಂದೇಟಾಕುತ್ತಿದ್ದಾರೆ. ಈ ಸಂಬಂಧ ಈಗಾಗಲೇ ತಾಲ್ಲೂಕು ಪಂಚಾಯ್ತಿ ಇಓ ಅವರು ಗ್ರಾ.ಪಂ. ಅಧಿಕಾರಿಗಳಿಗೆ ಎನ್.ಎಂ.ಆರ್. ತೆಗೆಯಲು ಆದೇಶ ನೀಡಿ, ಅದರಂತೆ ಕೆಲವು ರೈತರು ಈಗಾಗಲೇ ಎನ್.ಎಂ.ಆರ್ ತೆಗೆದು ತಿಂಗಳು ಕಳೆಯುತ್ತಾ ಬಂದರೂ ಸಹ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಾಮಗಾರಿಗಳ ಅನುಷ್ಠಾನಗೊಳಿಸಿಲ್ಲ. ಈ ಬಗ್ಗೆ .ಪಂಚಾಯ್ತಿ ಪಿಡಿಓ ಅವರನ್ನು ಕೇಳಿದರೆ ಅನುಷ್ಠಾನಾಧಿಕಾರಿ ಥಮ್ ಇಂಪ್ರೆಷನ್ ಕೊಡಬೇಕು ಅದುವರೆಗೂ ಹಣ ಬಿಡುಗಡೆಯಾಗುವುದಿಲ್ಲ ಎಂದು ಸಬೂಬು ಹೇಳುತ್ತಾರೆ. ಸಾಲಸೂಲ ಮಾಡಿ ಕಾಮಗಾರಿಗಳನ್ನು ಮುಗಿಸಿದ ತಾಳ್ಮೆಗೆಟ್ಟ ರೈತರು ಹಾಗೂ ಸಾರ್ವಜನಿಕರು ರೋಷಗೊಂಡು ಕಚೇರಿಗೆ ಆಗಮಿಸಿ ದಿಢೀರ್ ಬೀಗಹಾಕಿ ಪ್ರತಿಭಟಿಸಿದರು. ಈ ವೇಳೆ ಕಚೇರಿಯಲ್ಲಿದ್ದ ಅಧ್ಯಕ್ಷರೂ ರೈತರ ಸಮಸ್ಯೆಯನ್ನು ಕೇಳಿ ಅವರೂ ಸಹ ಪ್ರತಿಭನೆಯಲ್ಲಿ ಸೇರಿಕೊಂಡು ಖಾತ್ರಿ ಹಣ ಬಿಡುಗಡೆಗೆ ಒತ್ತಾಯಿಸಿದರಲ್ಲದೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕಾಗಮಿಸುವಂತೆ ಪಟ್ಟು ಹಿಡಿದರು.
ವಿಷಯ ತಿಳಿದ ಇಓ ಅವರು ಸಂಬಂಧಪಟ್ಟ ಕೃಷಿ ಇಲಾಖೆಯ ಅನುಷ್ಠಾನಾಧಿಕಾರಿ ನೂರುಲ್ಲಾ ಅವರನ್ನು ಪ್ರತಿಭಟನಾ ಸ್ಥಳಕ್ಕೆ ಕಳುಹಿಸಿದರು. ಸಂಪೂರ್ಣ ಕಾಮಗಾರಿ ಆದವುಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕಾರಿಗಳು ಆದೇಶ ನೀಡಿದ್ದಾರೆ. ಆದರೆ ಕೆಲವು ತಾಂತ್ರಿಕ ತೊಂದರೆಗಳಿಂದ ಪ್ರಕ್ರಿಯೆ ಸ್ವಲ್ಪ ತಡವಾಗುತ್ತಿದೆ ಶೀಘ್ರವೇ ಕೆಲಸ ಮಾಡುವುದಾಗಿ ತಿಳಿಸಿದರೂ ಸಹ ಪ್ರತಿಭಟನಾ ನಿರತರು ಇದ್ಯಾವುದನ್ನು ಲೆಕ್ಕಿಸದೆ ಪ್ರತಿಭಟನೆ ಮುಂದುವರಿಸಿದರು. ನಂತರ ಕೃಷಿ ಇಲಾಖೆಯ ಹಿರಿಯ ಅಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿದ ನೂರುಲ್ಲಾ ಅವರು ಈಗಲೇ ಥಮ್ ಇಂಪ್ರೆಷನ್ ನೀಡಿ ನಾಳೆಯಿಂದಲೇ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಹೇಳಿ ಪ್ರತಿಭಟನಾ ನಿರತರ ಮನವೋಲಿಸಿದ ಬಳಿಕ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆಯಲ್ಲಿ ತಾ.ಪಂ.ಸದಸ್ಯ ಜಿ.ಆರ್.ಸೀತಾರಾಮಯ್ಯ, ಗ್ರಾ.ಪಂ.ಅಧ್ಯಕ್ಷ ಕೆ.ವೈ.ಶಿವಮೂರ್ತಿ, ಮುಖಂಡರಾದ ಆಟೋಮೋಹನ್, ಏಕಾಂತಯ್ಯ, ಎಂ.ಎಲ್.ರಾಮಯ್ಯ, ಜಿ.ಬಿ.ಪ್ರಕಾಶ್, ಜಿ.ಎಂ.ರವಿಶಂಕರ್, ವೆಂಕಟೇಶ್, ಚಿದಾನಂದ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...