ಹುಳಿಯಾರು ಪಟ್ಟಣದ ಶ್ರೀಮಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ರಾತ್ರಿ ಮಹಾಶಿವರಾತ್ರಿ ಜಾಗರಣೆ ಅಂಗವಾಗಿ ಸ್ವಾಮಿಗೆ ಮಹಾರುದ್ರಾಭಿಷೇಕ ಕಾರ್ಯ , ಭಜನೆ ಮತ್ತು ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
![]() |
ಹುಳಿಯಾರಿನ ಮಲ್ಲೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಜಾಗರಣೆ ಅಂಗವಾಗಿ ಅಯೋಜಿಸಿದ್ದ ಆಟೋಟಗಳಲ್ಲಿ ವಿಜೇತರಾದವರಿಗೆ ಸಂಘದವತಿಯಿಂದ ನೆನಪಿನಕಾಣಿಕೆ ನೀಡಲಾಯಿತು. |
ಮ್ಯೂಸಿಕಲ್ ಛೇರ್, ಮಡಿಕೆ ಹೊಡೆಯುವುದು, ಲೋಟಗಳನ್ನು ಒಂದರ ಮೇಲೊಂದರಂತೆ ಜೋಡಿಸುವುದು,ಕೆರೆದಡ ಸೇರಿದಂತೆ ಇನ್ನಿತರ ವಿನೋದಮಯ ಆಟಗಳನ್ನು ಅಯೋಜಿಸಿದ್ದು ಸುಮಾರು ೬೦ ರಿಂದ ೭೦ ಮಂದಿ ಆಟೋಟದಲ್ಲಿ ಪಾಲ್ಗೊಂಡಿದ್ದರು. ವಿಜೇತರಾದವರಿಗೆ ಟ್ರಸ್ಟ್ ವತಿಯಿಂದ ನೆನಪಿನಕಾಣಿಕೆ ವಿತರಿಸಲಾಯಿತು.
![]() |
ಹುಳಿಯಾರಿನ ಮಲ್ಲೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಜಾಗರಣೆ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಆಟಗಳನ್ನು ನಡೆಸಲಾಯಿತು. |
ಅಕ್ಕಮಹಾದೇವಿ ಮಹಿಳಾ ಭಜನಾ ತಂಡದವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಸಂಜೆಯಿಂದ ಪ್ರಾರಂಭವಾದ ದರ್ಶನದಲ್ಲಿ ಅಲಂಕೃತ ಸ್ವಾಮಿಯನ್ನು ನೋಡಲು ಅಪಾರ ಸಂಖ್ಯೆಯ ಭಕ್ತಾಧಿಗಳು ಆಗಮಿಸಿದ್ದು , ಸರದಿ ಸಾಲಿನಲ್ಲಿ ಸಾಗುವ ಮೂಲಕ ಸ್ವಾಮಿಯ ದರ್ಶನ ಪಡೆದು ಹಣ್ಣುಕಾಯಿ ಮಾಡಿಸಿದರು. ಸಂಜೆ ೬ ರಿಂದ ರಾತ್ರಿ ೧೧ ರ ವರೆಗೂ ತಂಡೋಪತಂಡವಾಗಿ ಜನ ಆಗಮಿಸುತ್ತಿದ್ದು ಕಂಡುಬಂತು. ಬೆಳಗಿನಜಾವ ೩ ರಿಂದ ೭ ಗಂಟೆವರೆಗೆ ಮಲ್ಲಿಕಾರ್ಜುನಯ್ಯ ಹಾಗೂ ವಿರೇಶ್ ಅವರ ಪೌರೋಹಿತ್ಯದಲ್ಲಿ ಸ್ವಾಮಿಗೆ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆದವು. ಆಗಮಿಸಿದ್ದ ಭಕ್ತಾಧಿಗಳಿಗೆ ಪ್ರಸಾದವಾಗಿ ಕಡ್ಲೆಕಾಳು ಹುಸ್ಲಿ ವಿತರಿಸಿದರು. ಈ ವೇಳೆ ಮಲ್ಲೇಶ್ವರಸ್ವಾಮಿ ದೇವಾಲಯ ಸಮಿತಿ ಹಾಗೂ ಟ್ರಸ್ಟ್ ನ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದು ಶಿವರಾತ್ರಿಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ