ವಿಷಯಕ್ಕೆ ಹೋಗಿ

ವಸತಿ ಪ್ರದೇಶದಲ್ಲಿ ಕೋಳಿ ಅಂಗಡಿ ವಿರೋಧಿಸಿ ಧರಣಿ

ವಸತಿ ಪ್ರದೇಶದಲ್ಲಿ ಕೋಳಿ ಅಂಗಡಿ ತೆರೆಯುವುದರಿಂದ ಹತ್ತು ಹಲವಾರು ಸಮಸ್ಯೆಗಳಿಗೆ ದಾರಿಯಾಗುವುದಿದ್ದು ಯಾವುದೇ ಕಾರಣಕ್ಕೂ ತಮ್ಮ ಮನೆ ಮುಂದಿನ ಜಾಗದಲ್ಲಿ ಕೋಳಿ ಅಂಗಡಿ ತೆರೆಯಕೂಡದು ಎಂದು ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ ಸಿದ್ದಪ್ಪನವರ ಕುಟುಂಬ ವರ್ಗ ಪ್ರತಿಭಟನೆಗೆ ಮುಂದಾದ ಘಟನೆ ಸೋಮವಾರ ನಡೆದಿದೆ.
ಕೋಳಿ ಅಂಗಡಿ ತೆರಯದಂತೆ ಒತ್ತಾಯಿಸಿ ಖಾಲಿ ನಿವೇಶದ ಬಳಿ ಧರಣಿ ನಿರತ ಕುಟುಂಬದವರು.
ಇತ್ತೀಚೆಗೆ ಬಸ್ ನಿಲ್ದಾಣದ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ಜೀವನೋಪಾಯಕ್ಕಾಗಿ ಹೆದ್ದಾರಿ ಖಾಲಿ ಜಾಗಗಳಲ್ಲಿ ಅಂಗಡಿಗಳನ್ನು ತೆರೆಯಲು ಮುಂದಾಗಿರುವ ಅಂಗಡಿದಾರರು ಪಟ್ಟಣದ ಕೆಇಬಿ ಎದುರಿನ ಹೆದ್ದಾರಿ ಪಕ್ಕದಲ್ಲಿ ಕೋಳಿ ಅಂಗಡಿ ತೆರೆಯಲು ಮುಂದಾಗಿದ್ದು ಸಮಸ್ಯೆಗೆ ಕಾರಣವಾಗಿದೆ . ಮೆಡಿಕಲ್ ದೇವರಾಜ್ ಹಾಗೂ ಯೂಸೂಪ್ ಅವರಿಗೆ ಸೇರಿದ ಖಾಲಿ ನಿವೇಶನದಲ್ಲಿ ಕೋಳಿ ಅಂಗಡಿ ತೆರೆಯಲು ಅಂಗಡಿ ಸಿದ್ದಪಡಿಸುತ್ತಿದ್ದ ವೇಳೆ ಜಾಗದ ಅಕ್ಕಪಕ್ಕ ಇದ್ದ ಕುಟುಂಬದವರೆಲ್ಲಾ ಸೇರಿ ಈ ಜಾಗದಲ್ಲಿ ಕೋಳಿ ಅಂಗಡಿ ಇಡುವುದಕ್ಕೆ ತಮ್ಮ ಒಪ್ಪಿಗೆಯಿಲ್ಲ ಎಂದು ಅಂಗಡಿಯ ಮುಂದೆ ಧರಣಿ ನಡೆಸಲು ಮುಂದಾಗಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಕೋಳಿ ಮತ್ತಿತರರ ಮಾಂಸದ ಅಂಗಡಿ ತೆರೆಯಿರೆಂದು ಪಂಚಾಯ್ತಿಯ ಹಾಗೂ ಆರೋಗ್ಯ ಇಲಾಖೆ ಅನುಮತಿ ಬೇಕಿದ್ದು ಇದ್ಯಾವುದು ಇಲ್ಲದೆ ಕೋಳಿ ಅಂಗಡಿ ತೆರೆಯಲು ಮುಂದಾಗಿದ್ದಾರೆಂದು ಆರೋಪಿಸಿ, ಸಂಬಂಧಪಟ್ಟವರು ಸ್ಥಳಕ್ಕೆ ಬರುವವರೆಗೂ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಕೋಳಿ ಅಂಗಡಿ ಬಿಟ್ಟು ಬೇರೆ ಯಾವುದೇ ಅಂಗಡಿ ಮಾಡುವುದಕ್ಕೆ ತಮ್ಮ ಅಭ್ಯಂತರವಿಲ್ಲ ಕೋಳಿ ಅಂಗಡಿ ಮಾಡುವುದರಿಂದ ಬಿತ್ಯ ಹೆಚ್ಚಿನ ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಅಲ್ಲದೆ ನಾಯಿ,ಹಂದಿಗಳು ಬರುವ ಸಾಧ್ಯತೆ ಹೆಚ್ಚಾಗಿದ್ದು ಆ ವೇಳೆ ಮಕ್ಕಳು ಮರಿಗೆ ಕಚ್ಚಿದರೆ ಯಾರು ಹೊಣೆ. ಅಲ್ಲದೆ ಈಗಾಗಲೇ ಅನೇಕ ರೋಗಗಳು ಉಲ್ಬಣಿಸುತ್ತಿದ್ದು ಕೋಳಿ ಅಂಗಡಿಯ ಕೆಟ್ಟ ವಾಸನೆಯಿಂದ ಸುತ್ತಮುತ್ತಲ ಮನೆಯವರ ಆರೋಗ್ಯದ ಮೇಲೆಯೂ ಸಹ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ ಈ ಸ್ಥಳದಲ್ಲಿ ಕೋಳಿ ಅಂಗಡಿ ಬೇಡವೇ ಬೇಡ ಎನ್ನುತ್ತಾರೆ ಸ್ವಾತಂತ್ರ್ಯ ಹೋರಾಟಗಾರರಾದ ಸಿದ್ದಪ್ಪನವರ ಪತ್ನಿ ಲಕ್ಷ್ಮವ್ವ.
ಸಮಸ್ಯೆಯ ಬಗ್ಗೆ ಜಾಗದ ಮಾಲೀಕರಿಗೆ ತಿಳಿಸಿದರೆ ಇದು ನಮ್ಮ ಜಾಗ ಇಲ್ಲಿ ಏನೂ ಬೇಕಾದರೂ ಮಾಡಿಕೊಳ್ಳುತ್ತೇವೆ , ಅಂಗಡಿ ಇಡಲು ಉಆರ ಅಪ್ಪಣೆಯು ಬೇಕಿಲ್ಲವೆಂದು ಉದ್ಘಟತನದಿಂದ ಉತ್ತರಿಸಿದ್ದಾರೆಂದು ಧರಣಿ ನಿರತ ಕುಟುಂಬದ ರಘು ದೂರಿದ್ದಾರೆ.

ಸಮಸ್ಯೆ ಬಗೆ ಹರಿಯುವವರೆಗೂ ಆಹೋರಾತ್ರಿ ಧರಣಿ ನಡೆಸಿರುವುದಾಗಿ ತಿಳಿಸಿರುವ ಕುಟುಂಬದವರ ನೆರವಿಗೆ ರೈತಸಂಘದವರು ಸಹ ಒತ್ತಾಸೆಯಾಗಿ ನಿಂತಿದ್ದು. ಒಟ್ಟಾರೆ ಅಂಗಡಿ ತೆರೆಯುವುದರ ಬಗ್ಗೆ ಪರ ವಿರೋಧ ಹೇಳಿಕೆಗಳು ಕೇಳಿಬರುತ್ತಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...