ವಿಷಯಕ್ಕೆ ಹೋಗಿ

ವಸತಿ ಪ್ರದೇಶದಲ್ಲಿ ಕೋಳಿ ಅಂಗಡಿ ವಿರೋಧಿಸಿ ಧರಣಿ

ವಸತಿ ಪ್ರದೇಶದಲ್ಲಿ ಕೋಳಿ ಅಂಗಡಿ ತೆರೆಯುವುದರಿಂದ ಹತ್ತು ಹಲವಾರು ಸಮಸ್ಯೆಗಳಿಗೆ ದಾರಿಯಾಗುವುದಿದ್ದು ಯಾವುದೇ ಕಾರಣಕ್ಕೂ ತಮ್ಮ ಮನೆ ಮುಂದಿನ ಜಾಗದಲ್ಲಿ ಕೋಳಿ ಅಂಗಡಿ ತೆರೆಯಕೂಡದು ಎಂದು ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ ಸಿದ್ದಪ್ಪನವರ ಕುಟುಂಬ ವರ್ಗ ಪ್ರತಿಭಟನೆಗೆ ಮುಂದಾದ ಘಟನೆ ಸೋಮವಾರ ನಡೆದಿದೆ.
ಕೋಳಿ ಅಂಗಡಿ ತೆರಯದಂತೆ ಒತ್ತಾಯಿಸಿ ಖಾಲಿ ನಿವೇಶದ ಬಳಿ ಧರಣಿ ನಿರತ ಕುಟುಂಬದವರು.
ಇತ್ತೀಚೆಗೆ ಬಸ್ ನಿಲ್ದಾಣದ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ಜೀವನೋಪಾಯಕ್ಕಾಗಿ ಹೆದ್ದಾರಿ ಖಾಲಿ ಜಾಗಗಳಲ್ಲಿ ಅಂಗಡಿಗಳನ್ನು ತೆರೆಯಲು ಮುಂದಾಗಿರುವ ಅಂಗಡಿದಾರರು ಪಟ್ಟಣದ ಕೆಇಬಿ ಎದುರಿನ ಹೆದ್ದಾರಿ ಪಕ್ಕದಲ್ಲಿ ಕೋಳಿ ಅಂಗಡಿ ತೆರೆಯಲು ಮುಂದಾಗಿದ್ದು ಸಮಸ್ಯೆಗೆ ಕಾರಣವಾಗಿದೆ . ಮೆಡಿಕಲ್ ದೇವರಾಜ್ ಹಾಗೂ ಯೂಸೂಪ್ ಅವರಿಗೆ ಸೇರಿದ ಖಾಲಿ ನಿವೇಶನದಲ್ಲಿ ಕೋಳಿ ಅಂಗಡಿ ತೆರೆಯಲು ಅಂಗಡಿ ಸಿದ್ದಪಡಿಸುತ್ತಿದ್ದ ವೇಳೆ ಜಾಗದ ಅಕ್ಕಪಕ್ಕ ಇದ್ದ ಕುಟುಂಬದವರೆಲ್ಲಾ ಸೇರಿ ಈ ಜಾಗದಲ್ಲಿ ಕೋಳಿ ಅಂಗಡಿ ಇಡುವುದಕ್ಕೆ ತಮ್ಮ ಒಪ್ಪಿಗೆಯಿಲ್ಲ ಎಂದು ಅಂಗಡಿಯ ಮುಂದೆ ಧರಣಿ ನಡೆಸಲು ಮುಂದಾಗಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಕೋಳಿ ಮತ್ತಿತರರ ಮಾಂಸದ ಅಂಗಡಿ ತೆರೆಯಿರೆಂದು ಪಂಚಾಯ್ತಿಯ ಹಾಗೂ ಆರೋಗ್ಯ ಇಲಾಖೆ ಅನುಮತಿ ಬೇಕಿದ್ದು ಇದ್ಯಾವುದು ಇಲ್ಲದೆ ಕೋಳಿ ಅಂಗಡಿ ತೆರೆಯಲು ಮುಂದಾಗಿದ್ದಾರೆಂದು ಆರೋಪಿಸಿ, ಸಂಬಂಧಪಟ್ಟವರು ಸ್ಥಳಕ್ಕೆ ಬರುವವರೆಗೂ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಕೋಳಿ ಅಂಗಡಿ ಬಿಟ್ಟು ಬೇರೆ ಯಾವುದೇ ಅಂಗಡಿ ಮಾಡುವುದಕ್ಕೆ ತಮ್ಮ ಅಭ್ಯಂತರವಿಲ್ಲ ಕೋಳಿ ಅಂಗಡಿ ಮಾಡುವುದರಿಂದ ಬಿತ್ಯ ಹೆಚ್ಚಿನ ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಅಲ್ಲದೆ ನಾಯಿ,ಹಂದಿಗಳು ಬರುವ ಸಾಧ್ಯತೆ ಹೆಚ್ಚಾಗಿದ್ದು ಆ ವೇಳೆ ಮಕ್ಕಳು ಮರಿಗೆ ಕಚ್ಚಿದರೆ ಯಾರು ಹೊಣೆ. ಅಲ್ಲದೆ ಈಗಾಗಲೇ ಅನೇಕ ರೋಗಗಳು ಉಲ್ಬಣಿಸುತ್ತಿದ್ದು ಕೋಳಿ ಅಂಗಡಿಯ ಕೆಟ್ಟ ವಾಸನೆಯಿಂದ ಸುತ್ತಮುತ್ತಲ ಮನೆಯವರ ಆರೋಗ್ಯದ ಮೇಲೆಯೂ ಸಹ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ ಈ ಸ್ಥಳದಲ್ಲಿ ಕೋಳಿ ಅಂಗಡಿ ಬೇಡವೇ ಬೇಡ ಎನ್ನುತ್ತಾರೆ ಸ್ವಾತಂತ್ರ್ಯ ಹೋರಾಟಗಾರರಾದ ಸಿದ್ದಪ್ಪನವರ ಪತ್ನಿ ಲಕ್ಷ್ಮವ್ವ.
ಸಮಸ್ಯೆಯ ಬಗ್ಗೆ ಜಾಗದ ಮಾಲೀಕರಿಗೆ ತಿಳಿಸಿದರೆ ಇದು ನಮ್ಮ ಜಾಗ ಇಲ್ಲಿ ಏನೂ ಬೇಕಾದರೂ ಮಾಡಿಕೊಳ್ಳುತ್ತೇವೆ , ಅಂಗಡಿ ಇಡಲು ಉಆರ ಅಪ್ಪಣೆಯು ಬೇಕಿಲ್ಲವೆಂದು ಉದ್ಘಟತನದಿಂದ ಉತ್ತರಿಸಿದ್ದಾರೆಂದು ಧರಣಿ ನಿರತ ಕುಟುಂಬದ ರಘು ದೂರಿದ್ದಾರೆ.

ಸಮಸ್ಯೆ ಬಗೆ ಹರಿಯುವವರೆಗೂ ಆಹೋರಾತ್ರಿ ಧರಣಿ ನಡೆಸಿರುವುದಾಗಿ ತಿಳಿಸಿರುವ ಕುಟುಂಬದವರ ನೆರವಿಗೆ ರೈತಸಂಘದವರು ಸಹ ಒತ್ತಾಸೆಯಾಗಿ ನಿಂತಿದ್ದು. ಒಟ್ಟಾರೆ ಅಂಗಡಿ ತೆರೆಯುವುದರ ಬಗ್ಗೆ ಪರ ವಿರೋಧ ಹೇಳಿಕೆಗಳು ಕೇಳಿಬರುತ್ತಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.