ವಿಷಯಕ್ಕೆ ಹೋಗಿ

ಸೂಕ್ತ ಯೋಜನೆಗಳಿಲ್ಲದೆ ನೀರಿನ ಸದ್ಬಳಕೆ ವಿಫಲ : ಸಂಸದ

ನೀರು ಅತ್ಯಮೂಲ್ಯ ಜೀವ ಜಲವಾಗಿದ್ದು ನೀರಿನ ಸಂರಕ್ಷಣೆ ಮುಖ್ಯ. ಆ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿದ್ದರೂ ಸಹ ನೀರಿನ ಸದ್ಬಳಕೆ ಮಾಡುವವಲ್ಲಿ ನಾವು ವಿಫಲಾಗುತ್ತಿದ್ದೇವೆ ಎಂದು ಸಂಸದ ಎಸ್.ಪಿ.ಮುದ್ದಹನುಮೇಗೌಡರು ವಿಷಾಧಿಸಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಸಂಸದ ಎಸ್.ಪಿ.ಮುದ್ದಹನುಮೇಗೌಡರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಪ್ರಾಚಾರ್ಯ ಬಿಳಿಗೆರೆ ಕೃಷ್ಣಮೂರ್ತಿ ಇತರರಿದ್ದಾರೆ.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬೆಂಗಳೂರಿನ ಬಿ.ಕೃಷ್ಣಪ್ಪ ಟ್ರಸ್ಟ್, ರೈತಸಂಘದ ಸಹಯೋಗದಲ್ಲಿ " ನೀರು-ನೀರು-ನೀರು, ನೀರೆಲ್ಲವೂ ತೀರ್ಥ- ತೀರ್ಥವೆಲ್ಲವೂ ನೀರು " ವಿಷಯದಡಿ ಗುರುವಾರ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಭದ್ರತೆಗೆ ಹಣ ವಿನಿಯೋಗಿಸುವಂತೆ ನೀರಿನ ಸಂರಕ್ಷಣೆಯೂ ಮುಖ್ಯವಾಗಿದ್ದು ಅದಕ್ಕಾಗಿ ಸರ್ಕಾರ ಇಂತಿಷ್ಟು ಹಣವನ್ನು ಸರ್ಕಾರ ಮೀಸಲಿಡಬೇಕು ಎಂದರು. ತಾವು ಭೇಟಿ ನೀಡಿದ ಅನೇಕ ಹಳ್ಳಿಗಳಲ್ಲಿ ಮೊದಲ ಸಮಸ್ಯೆ ಎಂದರೆ ಅದು ನೀರಿನ ಸಮಸ್ಯೆಯೇ ಆಗಿರುತ್ತದೆ. ಪ್ರಸ್ತುತದಲ್ಲಿ ಉತ್ತಮ ಮಳೆಗಾಲವಿಲ್ಲದೆ ಅಂತರ್ಜಲ ಬತ್ತಿರುವುದು ನೀರಿನ ಸಮಸ್ಯೆಯನ್ನು ಉಲ್ಬಣಗೊಳ್ಳುವಂತೆ ಮಾಡಿದೆ ಎಂದರು. ಹೇಮಾವತಿ, ತುಂಗಭದ್ರಾ ನದಿ ನೀರನ್ನು ಹರಿಸುವ ನಿಟ್ಟಿನಲ್ಲಿ ಅನೇಕ ಹೋರಾಟಗಳೆ ನಡೆಯುತ್ತಿದ್ದು, ಹೇಮಾವತಿ ನದಿಯಿಂದ ತುಮಕೂರು ಜಿಲ್ಲೆಯ ನಾನಾ ಭಾಗಕ್ಕೆ ನೀರು ಹರಿಸುವಲ್ಲಿಯೂ ಸಹ ಅನೆಕ ಅಡೆತಡೆಗಳು ಎದುರಾಗುತ್ತಿವೆ ಎಂದರು. ನೀರಿನ ಸದ್ಬಳಕೆಯ ದೃಷ್ಠಿಯಿಂದ ಸರ್ಕಾರ ಸೂಕ್ತ ಕಾನೂನನ್ನು ಜಾರಿಗೆ ತರಬೇಕಿದೆ ಎಂದು ತಿಳಿಸಿದರು.
ಜಾಗೃತರಾಗಿ : ನೀರಿನ ಸಂರಕ್ಷಣೆ ಮಾಡುವಲ್ಲಿ ನಗರ ಹಾಗೂ ಹಳ್ಳಿಗಳ ನಾವುಗಳು ಅರಿವನ್ನು ಮೂಡಿಸಿಕೊಳ್ಳಬೇಕಿದ್ದು , ಅನಗತ್ಯವಾಗಿ ನೀರಿನ ಬಳಕೆ ಮಾಡದೆ, ಇಂಗುಗುಂಡಿ, ಹೊಲಗಳಲ್ಲಿ ಬದುಗಳನ್ನು ಹಾಕುವ ಮೂಲಕ ಮಳೆ ನೀರನ್ನು ಭೂಮಿಗೆ ಇಂಗುವಂತೆ ಮಾಡಬೇಕು. ಸರ್ಕಾರ ಜನರಲ್ಲಿ ನೀರಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಅಯೋಜಿಸಬೇಕಿದೆ ಎಂದು ತಿಳಿಸಿದರು.
ಪ್ರಾಚಾರ್ಯ ಬಿಳಿಗಿರಿ ಕೃಷ್ಣಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ನೀರು ಅಮೃತದಷ್ಟೇ ಶೇಷ್ಠವಾಗಿದ್ದು ಆ ನೀರನ್ನು ಅನಿಯಮಿತವಾಗಿ ಬಳಕೆ ಮಾಡುವ ಬದಲು ಹಿತಮಿತವಾಗಿ ಅಗತ್ಯಕ್ಕೆ ತಕ್ಕಂತೆ ಬಳಸಬೇಕು ಎಂದರು. ವಿದ್ಯಾರ್ಥಿಗಳು ನೀರಿನ ಬಳಕೆ ಹಾಗೂ ಸಂರಕ್ಷಣೆಯ ಬಗ್ಗೆ ಪೋಷಕರು ಹಾಗೂ ಗ್ರಾಮದ ಜನಗಳಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ಭೂಗರ್ಭ ಶಾಸ್ತ್ರಜ್ಞರಾದ ದೇವರಾಜರೆಡ್ಡಿ ಅವರು ಮಳೆನೀರು ಕೊಯ್ಲು-ಕೃತಕ ಬರಕ್ಕೆ ಶಾಶ್ವತ ಪರಿಹಾರ" ವಿಷಯ ಕುರಿತ ಉಪನ್ಯಾಸ ನೀಡಿದರು. ತಾ.ಪಂ.ಸದಸ್ಯ ನವೀನ್, ಜಿ.ಪಂ.ಸದಸ್ಯೆ ಮಂಜುಳಾ, ಸಿಡಿಸಿಯ ಅಶೋಕ್, ನಂದಿಹಳ್ಳಿಶಿವಣ್ಣ, ಜಲಾಲ್ ಸಾಬ್,ಫರಾನಾ, ರೈತಸಂಘದ ಕೆಂಕೆರೆ ಸತೀಶ್, ಮಲ್ಲೇಶ್, ಮುಖಂಡರಾದ ಸಿದ್ರಾಮಣ್ಣ, ಶಿವಕುಮಾರ್, ಉಪನ್ಯಾಸಕರಾದ ಶಂಕರಲಿಂಗಯ್ಯ, ಅಶೋಕ್, ಇಬ್ರಾಹಿಂ, ಶ್ರೀನಿವಾಸಪ್ಪ,ಹನುಮಂತಪ್ಪ, ಶಿವಯ್ಯ ಹಾಗೂ ಅಕ್ಕಪಕ್ಕದ ಹಳ್ಳಿಯ ರೈತರುಗಳು ಸಹ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.