ವಿಷಯಕ್ಕೆ ಹೋಗಿ

ಗರಿಗೆದರಿದ ಹುಳಿಯಾರು ಸೊಸೈಟಿ ಚುನಾವಣೆ

ಹುಳಿಯಾರು  ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೧೫ರಿಂದ ೨೦೨೦ರ ಸಾಲಿನ ೫ ವರ್ಷಗಳ ಅವಧಿಯ ಆಡಳಿತ ಮಂಡಳಿಯ ಒಟ್ಟು ೧೦ ನಿರ್ದೇಶಕರ ಆಯ್ಕೆಗಾಗಿ ಭಾನುವಾರ ಚುನಾವಣೆ ನಡೆಯಲಿದೆ.
ಚುನಾವಣೆ ನಡೆಯಲಿರುವ ಹುಳಿಯಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
ಸಾಲಗಾರರ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ೪ ಸ್ಥಾನ, ಹಿಂದುಳಿದವರ್ಗದಿಂದ ೨ ಸ್ಥಾನ, ಪರಿಶಿಷ್ಟಜಾತಿ ಮತ್ತು ಪಂಗಡದಿಂದ ೧ ಸ್ಥಾನ ಹಾಗೂ ಮಹಿಳೆ ಮೀಸಲು ೨ ಸ್ಥಾನ ಸೇರಿ ೯ ನಿರ್ದೇಶಕರು ಆಯ್ಕೆಯಾಗಬೇಕಿದ್ದು ೨೧ ಮಂದಿ ಕಣದಲ್ಲಿದ್ದಾರೆ. ಸಾಲಪಡೆಯದವರ ಕ್ಷೇತ್ರದಿಂದ ಒಬ್ಬ ನಿರ್ದೇಶಕನ ಆಯ್ಕೆ ನಡೆಯಬೇಕಿದ್ದು ೫ ಮಂದಿ ಕಣದಲ್ಲಿದ್ದು ಒಟ್ಟು ೨೬ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಗೆಲುವಿಗಾಗಿ ಜಿದ್ದಾಜಿದ್ದಿ ನಡೆದಿದೆ.
ಸೊಸೈಟಿಯಲ್ಲಿ ಒಟ್ಟು ೧೨೬೦ ಷೇರುದಾರರಿದ್ದು ಆ ಪೈಕಿ ಸಾಲಪಡೆದವರ ಕ್ಷೇತ್ರಕ್ಕೆ ೫೪೦ ಮಂದಿ ಹಾಗೂ ಸಾಪಪಡೆಯದವರ ಕ್ಷೇತ್ರಕ್ಕೆ ೭೨೦ ಮಂದಿ ಮತ ಚಲಾಯಿಸಲಿದ್ದಾರೆ. ಒಟ್ಟು ೧೦ ಸ್ಥಾನಗಳ ಪೈಕಿ ಸಾಲಪಡೆದವರ ಕ್ಷೇತ್ರದಿಂದ ೯ ಅಭ್ಯರ್ಥಿಗಳು ಹಾಗೂ ಸಾಲಪಡೆಯದವರ ಕ್ಷೇತ್ರದದಿಂದ ಒಬ್ಬ ಅಭ್ಯರ್ಥಿಯ ಆಯ್ಕೆಯಾಗಬೇಕಿದೆ. ಈಗ ಸಾಲಪಡೆದವರ ೯ ಸ್ಥಾನಕ್ಕೆ ಸಾಮಾನ್ಯ ವರ್ಗದಿಂದ ಹುಳಿಯಾರಿನ ಅಶೋಕ್ ಬಾಬು, ಕಲ್ಲಳ್ಳಿ ಕರಿಯಪ್ಪ, ಟಿ.ಎಸ್.ಹಳ್ಳಿಯ ಜಗದೀಶ್,ಹೊಸಹಳ್ಳಿ ಜಯಣ್ಣ,ಕಲ್ಲಹಳ್ಳಿ ನಾಗರಾಜು,ನಂದಿಹಳ್ಳಿ ಬೋರಲಿಂಗಯ್ಯ,ಟಿ.ಎಸ್.ಹಳ್ಳಿ ಮಲ್ಲೇಶ್,ಲಿಂಗಪ್ಪನಪಾಳ್ಯದ ಮೋಹನ್ ಕುಮಾರ್, ಸೀಗೆಬಾಗಿ ಶಂಕರಯ್ಯ,ಹುಳಿಯಾರು ವಸಂತನಗರದ ಶಿವಕುಮಾರ್,ಹೊಸಹಳ್ಳಿ ಸುಗಂಧರಾಜ್, ಪರಿಶಿಷ್ಟ ಜಾತಿ ಹಾಗೂ ಪಂಗಡದಿಂದ ಅವಳಗೆರೆಯ ಗುರುವಯ್ಯ,ದೊಡ್ಡಬಿದರೆ ತಾಂಡ್ಯದ ಲಕ್ಷ್ಮನಾಯ್ಕ,ದುರ್ಗಮ್ಮನಗುಡಿ ಬೀದಿಯ ಹನುಮಂತಯ್ಯ, ಹಿಂದುಳಿದವರ್ಗದ ಅಭ್ಯರ್ಥಿಗಳಾಗಿ ಟಿ.ಎಸ್.ಹಳ್ಳಿಯ ರಮೇಶ್,ಹೊಸಹಳ್ಳಿ ರಾಜಣ್ಣ,ಬಳ್ಳೆಕಟ್ಟೆ ರಾಮಯ್ಯ, ವೈ.ಎಸ್.ಪಾಳ್ಯದ ಸೈಯ್ಯದ್ ಜಲಾಲ್ ,ಮಹಿಳಾ ಅಭ್ಯರ್ಥಿಯಾಗಿ ಹುಳಿಯಾರು ವಿಜಯನಗರದ ಕೆಂಚಮ್ಮ, ಸಿದ್ದಗಂಗಮ್ಮ,ಕಲ್ಲಳ್ಳಿಯ ಇಂದ್ರಮ್ಮ ಸೇರಿ ಒಟ್ಟು ೨೧ ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಸಾಮಪಡೆಯದವರ ಒಂದು ಸ್ಥಾನಕ್ಕೆ ಲಿಂಗಪ್ಪನಪಾಳ್ಯದ ಕುಮಾರ,ತಿಮ್ಲಾಪುರದ ತಿಮ್ಮಯ್ಯ,ಹುಳಿಯಾರಿನ ಧನುಷ್ ರಂಗನಾಥ್,ಬಳ್ಳೆಕಟ್ಟೆ ರಂಗಸ್ವಾಮಿ,ಸೀಗೆಬಾಗಿ ವರದಯ್ಯ ಸೇರಿ ಒಟ್ಟು ೫ ಮಂದಿ ಕಣದಲ್ಲಿದ್ದು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಸಹಕಾರಿ ಬ್ಯಾಂಕಿಗೆ ಇದೇ ಪ್ರಥಮಬಾರಿಗೆ ಹೆಚ್ಚು ಮಂದಿ ಸ್ಪರ್ಧಿಸಿದ್ದು ಚುನಾವಣೆ ಕಾವು ಹೆಚ್ಚಿದೆ. ಅಲ್ಲದೆ ಸಹಕಾರ ರಂಗ ರಾಜಕೀಯಗೊಂಡಿದ್ದು, ಜಾತಿ ಪಾತ್ರವೂ ಪ್ರಧಾನಪಾತ್ರವಹಿಸಿದೆ. ಸಾಲಗಾರರ ಕ್ಷೇತ್ರದಲ್ಲಿ ಸ್ಪರ್ಧಾಳುಗಳು ತಮ್ಮತಮ್ಮಲ್ಲೇ ಗುಂಪುಗಳನ್ನು ರಚಿಸಿಕೊಂಡು ಪ್ರತಿ ಷೇರುದಾರರ ಮನೆಮನೆಗೂ ತೆರಳಿ ಮತಯಾಚಿಸುತ್ತಿದ್ದಾರೆ.

ಸಾಲಗಾರರಲ್ಲದ ಕ್ಷೇತ್ರದಲ್ಲಿ ರಾಜಕೀಯ ಅಶೀರ್ವಾದವೂ ಸೇರಿಕೊಂಡು ಎಲ್ಲಾ ೫ ಅಭ್ಯರ್ಥಿಗಳು ಸೇರಿಕೊಂಡು ಟಿಬಿಜೆ ಕಾಂಗ್ರೆಸ್ ಬೆಂಬಲವಿದೆ ಎಂದು ಧನುಷ್ ರಂಗನಾಥ್, ಮುದ್ದಹನುಮೇಗೌಡ ಹಾಗೂ ಸಾಸಲು ಸತೀಶ್ ಬೆಂಬಲವಿದೆ ಎಂದು ಸೀಗೆಬಾಗಿ ವರದಯ್ಯ , ಬಿಜೆಪಿಯ ಕಿರಣ್ ಕುಮಾರ್ ಬೆಂಬಲದಲ್ಲಿ ಲಿಂಗಪ್ಪನಪಾಳ್ಯದ ಕಾಯಿಕುಮಾರ್, ಜೆಡಿಎಸ್ ಬೆಂಬಲದಲ್ಲಿ ತಿಮ್ಲಾಪುರದ ತಿಮ್ಮಯ್ಯ ತುರುಸಿನಪ್ರಚಾರದಲ್ಲಿ ತೊಡಗಿದ್ದಾರೆ. ಇವರೊಂದಿಗೆ ಸ್ನೇಹಿತರು ಹಾಗೂ ಸಮಾಜದ ಮುಖಂಡರು ಸೇರಿ ಚುನಾವಣಾ ಪ್ರಚಾರ ಕಾವೇರಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...