ವಿಷಯಕ್ಕೆ ಹೋಗಿ

ಗರಿಗೆದರಿದ ಹುಳಿಯಾರು ಸೊಸೈಟಿ ಚುನಾವಣೆ

ಹುಳಿಯಾರು  ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೧೫ರಿಂದ ೨೦೨೦ರ ಸಾಲಿನ ೫ ವರ್ಷಗಳ ಅವಧಿಯ ಆಡಳಿತ ಮಂಡಳಿಯ ಒಟ್ಟು ೧೦ ನಿರ್ದೇಶಕರ ಆಯ್ಕೆಗಾಗಿ ಭಾನುವಾರ ಚುನಾವಣೆ ನಡೆಯಲಿದೆ.
ಚುನಾವಣೆ ನಡೆಯಲಿರುವ ಹುಳಿಯಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
ಸಾಲಗಾರರ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ೪ ಸ್ಥಾನ, ಹಿಂದುಳಿದವರ್ಗದಿಂದ ೨ ಸ್ಥಾನ, ಪರಿಶಿಷ್ಟಜಾತಿ ಮತ್ತು ಪಂಗಡದಿಂದ ೧ ಸ್ಥಾನ ಹಾಗೂ ಮಹಿಳೆ ಮೀಸಲು ೨ ಸ್ಥಾನ ಸೇರಿ ೯ ನಿರ್ದೇಶಕರು ಆಯ್ಕೆಯಾಗಬೇಕಿದ್ದು ೨೧ ಮಂದಿ ಕಣದಲ್ಲಿದ್ದಾರೆ. ಸಾಲಪಡೆಯದವರ ಕ್ಷೇತ್ರದಿಂದ ಒಬ್ಬ ನಿರ್ದೇಶಕನ ಆಯ್ಕೆ ನಡೆಯಬೇಕಿದ್ದು ೫ ಮಂದಿ ಕಣದಲ್ಲಿದ್ದು ಒಟ್ಟು ೨೬ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಗೆಲುವಿಗಾಗಿ ಜಿದ್ದಾಜಿದ್ದಿ ನಡೆದಿದೆ.
ಸೊಸೈಟಿಯಲ್ಲಿ ಒಟ್ಟು ೧೨೬೦ ಷೇರುದಾರರಿದ್ದು ಆ ಪೈಕಿ ಸಾಲಪಡೆದವರ ಕ್ಷೇತ್ರಕ್ಕೆ ೫೪೦ ಮಂದಿ ಹಾಗೂ ಸಾಪಪಡೆಯದವರ ಕ್ಷೇತ್ರಕ್ಕೆ ೭೨೦ ಮಂದಿ ಮತ ಚಲಾಯಿಸಲಿದ್ದಾರೆ. ಒಟ್ಟು ೧೦ ಸ್ಥಾನಗಳ ಪೈಕಿ ಸಾಲಪಡೆದವರ ಕ್ಷೇತ್ರದಿಂದ ೯ ಅಭ್ಯರ್ಥಿಗಳು ಹಾಗೂ ಸಾಲಪಡೆಯದವರ ಕ್ಷೇತ್ರದದಿಂದ ಒಬ್ಬ ಅಭ್ಯರ್ಥಿಯ ಆಯ್ಕೆಯಾಗಬೇಕಿದೆ. ಈಗ ಸಾಲಪಡೆದವರ ೯ ಸ್ಥಾನಕ್ಕೆ ಸಾಮಾನ್ಯ ವರ್ಗದಿಂದ ಹುಳಿಯಾರಿನ ಅಶೋಕ್ ಬಾಬು, ಕಲ್ಲಳ್ಳಿ ಕರಿಯಪ್ಪ, ಟಿ.ಎಸ್.ಹಳ್ಳಿಯ ಜಗದೀಶ್,ಹೊಸಹಳ್ಳಿ ಜಯಣ್ಣ,ಕಲ್ಲಹಳ್ಳಿ ನಾಗರಾಜು,ನಂದಿಹಳ್ಳಿ ಬೋರಲಿಂಗಯ್ಯ,ಟಿ.ಎಸ್.ಹಳ್ಳಿ ಮಲ್ಲೇಶ್,ಲಿಂಗಪ್ಪನಪಾಳ್ಯದ ಮೋಹನ್ ಕುಮಾರ್, ಸೀಗೆಬಾಗಿ ಶಂಕರಯ್ಯ,ಹುಳಿಯಾರು ವಸಂತನಗರದ ಶಿವಕುಮಾರ್,ಹೊಸಹಳ್ಳಿ ಸುಗಂಧರಾಜ್, ಪರಿಶಿಷ್ಟ ಜಾತಿ ಹಾಗೂ ಪಂಗಡದಿಂದ ಅವಳಗೆರೆಯ ಗುರುವಯ್ಯ,ದೊಡ್ಡಬಿದರೆ ತಾಂಡ್ಯದ ಲಕ್ಷ್ಮನಾಯ್ಕ,ದುರ್ಗಮ್ಮನಗುಡಿ ಬೀದಿಯ ಹನುಮಂತಯ್ಯ, ಹಿಂದುಳಿದವರ್ಗದ ಅಭ್ಯರ್ಥಿಗಳಾಗಿ ಟಿ.ಎಸ್.ಹಳ್ಳಿಯ ರಮೇಶ್,ಹೊಸಹಳ್ಳಿ ರಾಜಣ್ಣ,ಬಳ್ಳೆಕಟ್ಟೆ ರಾಮಯ್ಯ, ವೈ.ಎಸ್.ಪಾಳ್ಯದ ಸೈಯ್ಯದ್ ಜಲಾಲ್ ,ಮಹಿಳಾ ಅಭ್ಯರ್ಥಿಯಾಗಿ ಹುಳಿಯಾರು ವಿಜಯನಗರದ ಕೆಂಚಮ್ಮ, ಸಿದ್ದಗಂಗಮ್ಮ,ಕಲ್ಲಳ್ಳಿಯ ಇಂದ್ರಮ್ಮ ಸೇರಿ ಒಟ್ಟು ೨೧ ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಸಾಮಪಡೆಯದವರ ಒಂದು ಸ್ಥಾನಕ್ಕೆ ಲಿಂಗಪ್ಪನಪಾಳ್ಯದ ಕುಮಾರ,ತಿಮ್ಲಾಪುರದ ತಿಮ್ಮಯ್ಯ,ಹುಳಿಯಾರಿನ ಧನುಷ್ ರಂಗನಾಥ್,ಬಳ್ಳೆಕಟ್ಟೆ ರಂಗಸ್ವಾಮಿ,ಸೀಗೆಬಾಗಿ ವರದಯ್ಯ ಸೇರಿ ಒಟ್ಟು ೫ ಮಂದಿ ಕಣದಲ್ಲಿದ್ದು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಸಹಕಾರಿ ಬ್ಯಾಂಕಿಗೆ ಇದೇ ಪ್ರಥಮಬಾರಿಗೆ ಹೆಚ್ಚು ಮಂದಿ ಸ್ಪರ್ಧಿಸಿದ್ದು ಚುನಾವಣೆ ಕಾವು ಹೆಚ್ಚಿದೆ. ಅಲ್ಲದೆ ಸಹಕಾರ ರಂಗ ರಾಜಕೀಯಗೊಂಡಿದ್ದು, ಜಾತಿ ಪಾತ್ರವೂ ಪ್ರಧಾನಪಾತ್ರವಹಿಸಿದೆ. ಸಾಲಗಾರರ ಕ್ಷೇತ್ರದಲ್ಲಿ ಸ್ಪರ್ಧಾಳುಗಳು ತಮ್ಮತಮ್ಮಲ್ಲೇ ಗುಂಪುಗಳನ್ನು ರಚಿಸಿಕೊಂಡು ಪ್ರತಿ ಷೇರುದಾರರ ಮನೆಮನೆಗೂ ತೆರಳಿ ಮತಯಾಚಿಸುತ್ತಿದ್ದಾರೆ.

ಸಾಲಗಾರರಲ್ಲದ ಕ್ಷೇತ್ರದಲ್ಲಿ ರಾಜಕೀಯ ಅಶೀರ್ವಾದವೂ ಸೇರಿಕೊಂಡು ಎಲ್ಲಾ ೫ ಅಭ್ಯರ್ಥಿಗಳು ಸೇರಿಕೊಂಡು ಟಿಬಿಜೆ ಕಾಂಗ್ರೆಸ್ ಬೆಂಬಲವಿದೆ ಎಂದು ಧನುಷ್ ರಂಗನಾಥ್, ಮುದ್ದಹನುಮೇಗೌಡ ಹಾಗೂ ಸಾಸಲು ಸತೀಶ್ ಬೆಂಬಲವಿದೆ ಎಂದು ಸೀಗೆಬಾಗಿ ವರದಯ್ಯ , ಬಿಜೆಪಿಯ ಕಿರಣ್ ಕುಮಾರ್ ಬೆಂಬಲದಲ್ಲಿ ಲಿಂಗಪ್ಪನಪಾಳ್ಯದ ಕಾಯಿಕುಮಾರ್, ಜೆಡಿಎಸ್ ಬೆಂಬಲದಲ್ಲಿ ತಿಮ್ಲಾಪುರದ ತಿಮ್ಮಯ್ಯ ತುರುಸಿನಪ್ರಚಾರದಲ್ಲಿ ತೊಡಗಿದ್ದಾರೆ. ಇವರೊಂದಿಗೆ ಸ್ನೇಹಿತರು ಹಾಗೂ ಸಮಾಜದ ಮುಖಂಡರು ಸೇರಿ ಚುನಾವಣಾ ಪ್ರಚಾರ ಕಾವೇರಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...